ಐಟಿ ಉದ್ಯೋಗಿಗಳ ರಂಗಾಸಕ್ತಿಗೆ ದಂಗಾದ ಸಂದರ್ಶಕರು!


Team Udayavani, Oct 27, 2018, 5:03 PM IST

27-october-17.gif

ಹಾವೇರಿ: ಮಹಾತ್ಮಾ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯಾದ್ಯಂತ ನ. 21ರಿಂದ ಮಾರ್ಚ್‌ 31ರ ವರೆಗೆ ಹಮ್ಮಿಕೊಂಡಿರುವ ಮಹಾತ್ಮಾಗಾಂಧೀಜಿ ಅವರ ಕುರಿತ ರಂಗ ರೂಪಕದಲ್ಲಿ ಅಭಿನಯಿಸಲು ರಾಜ್ಯದ ವಿವಿಧ ಭಾಗಗಳಿಂದ ನೂರಕ್ಕೂ ಅಧಿಕ ಕಲಾವಿದರು ಸಂದರ್ಶನಕ್ಕೆ ಹಾಜರಾದರು.

ಕಲಾವಿದರ ಆಯ್ಕೆ ಪ್ರಕ್ರಿಯೆ ಶುಕ್ರವಾರ ವಾರ್ತಾ ಭವನದಲ್ಲಿ ನಡೆಯಿತು. ‘ಗಾಂಧಿ 150’ರಂಗ ಪಯಣದ ನಿರ್ದೇಶಕ ಶ್ರೀಪಾದ್‌ ಭಟ್‌ ನೇತೃತ್ವದ ಕಲಾವಿದರ ಆಯ್ಕೆ ತಂಡದ ಎದುರು ರಂಗ ಭೂಮಿಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ ಕಲಾವಿದರು ರಂಗಾಯಣ ಹಾಗೂ ಸಮುದಾಯ ಸೇರಿದಂತೆ ವಿವಿಧ ರಂಗ ಸಂಘಟನೆಯ ಕಲಾವಿದರು, ರಂಗ ಶಿಕ್ಷಣ ಪಡೆದ ಪದವೀಧರರು ಸೇರಿದಂತೆ ನೂರಕ್ಕೂ ಹೆಚ್ಚು ಕಲಾವಿದರು ಸಂದರ್ಶನದಲ್ಲಿ ಭಾಗವಹಿಸಿದ್ದರು.

ವಿಶೇಷವಾಗಿ ಹರಿಯಾಣ ಮೂಲದ ದೆಹಲಿ ಜವಾಹರಲಾಲ್‌ ನೆಹರು ರಾಷ್ಟ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ಗುಲ್‌ಷನ್‌, ಬೆಂಗಳೂರು, ಮೈಸೂರು ಹಾಗೂ ದೆಹಲಿಯಲ್ಲಿ ಪ್ರತಿಷ್ಠಿತ ವಿಪ್ರೋ, ಇನ್ಫೋಸಿಸ್  ಸೇರಿದಂತೆ ವಿವಿಧ ಐಟಿ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳು ಅಭಿನಯಿಸಲು ಆಸಕ್ತಿ ತೋರಿ ಸಂದರ್ಶನಕ್ಕೆ ಹಾಜರಾಗಿ ಎಲ್ಲರ ಗಮನ ಸೆಳೆದರು. 

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್‌.ಆರ್‌. ವಿಶುಕುಮಾರ್‌ ಅವರ ಪರಿಕಲ್ಪನೆಯಲ್ಲಿ ಗಾಂಧಿ ರೂಪಕ ಸಿದ್ಧವಾಗಿದೆ. ಈ ರೂಪಕ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಗಾಂಧೀಜಿಯವರ ಜೀವನ ಸಂದೇಶಗಳನ್ನು ತಲುಪಿಸುವ ನಿಟ್ಟಿನಲ್ಲಿ ಬೋಳೂವಾರು ಮಹಮದ್‌ ಕುಂಞ ಅವರ ಬಾಪು ಗಾಂಧಿ , ಗಾಂಧಿ ಬಾಪು ಆದ ಕಥೆ, ಕಿರು ಕಾದಂಬರಿಯನ್ನು ರಂಗ ಕರ್ಮಿ ಡಾ| ಶ್ರೀಪಾದ್‌ ಭಟ್‌ ಅವರು ರಂಗರೂಪಕ್ಕಿಳಿಸಿ ನಿರ್ದೇಶನ ಮಾಡುತ್ತಿದ್ದಾರೆ. ನವೆಂಬರ್‌ 1 ರಿಂದ 20ರ ವರೆಗೆ ಹಾವೇರಿಯಲ್ಲಿ ತರಬೇತಿ ಜರುಗಲಿದೆ. 21ರಿಂದ ಗಾಂಧಿ ಪಯಣದ ತಿರುಗಾಟ ಆರಂಭಗೊಳ್ಳಲಿದೆ. 32 ಜನ ಕಲಾವಿದರನ್ನು ಶುಕ್ರವಾರ ಆಯ್ಕೆ ಮಾಡಲಾಯಿತು.

ಐಟಿಗಿಂತ ಕಲೆ ಮುಖ್ಯ
ನಮಗೆ ಬದಲಾವಣೆ ಬೇಕಾಗಿದೆ. ತರಬೇತಿಗೆ ಆಯ್ಕೆಯಾದರೆ ಕೆಲಸ ತೊರೆಯಲು ಸಿದ್ಧ ಹಾಗೂ ರಂಗ ಕ್ಷೇತ್ರದಲ್ಲಿ ನಾವು ಮುಂದುವರೆಯಲು ಬದ್ಧ ಎಂದು ಐಟಿ ಉದ್ಯೋಗಿಗಳು ಹೇಳಿದ್ದು ಸಂದರ್ಶನ ವೇಳೆ ಎಲ್ಲರ ಗಮನ ಸೆಳೆಯಿತು.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.