ರೈತ ಸಂಘಟನೆ ಒಗ್ಗಟ್ಟು ಪ್ರದರ್ಶಿಸಲಿ


Team Udayavani, Oct 30, 2018, 5:00 PM IST

30-october-16.gif

ಹಿರೇಕೆರೂರ: ರೈತರ ಕಸುಬಿನ ಸಂಕೇತ ಹಸಿರು ಶಾಲು. ರೈತರು ಹಸಿರು ಶಾಲನ್ನು ಧರಿಸಲು ಹಿಂದೇಟು ಹಾಕಬಾರದು. ರೈತ ಸಂಘದಲ್ಲಿ ಯುವಕರು ಹೆಚ್ಚು ಸಕ್ರಿಯರಾಗಬೇಕು ಎಂದು ರಾಜ್ಯ ಹಸಿರು ಸೇನೆಯ ಅಧ್ಯಕ್ಷ ಕೆ.ಟಿ.ಗಂಗಾಧರ ಹೇಳಿದರು.

ಪಟ್ಟಣದ ಗುರುಭವನದಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಹಿರೇಕೆರೂರ ಮತ್ತು ರಟ್ಟೀಹಳ್ಳಿ ತಾಲೂಕಿನ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಪದಾ ಧಿಕಾರಿಗಳ ಪ್ರಮಾಣ ವಚನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವೈಜ್ಞಾನಿಕವಾಗಿ, ತರ್ಕಬದ್ಧವಾಗಿ ಹೋರಾಟ ಮಾಡಲು ಯುವಜನಾಂಗ ರೈತ ಸಂಘಕ್ಕೆ ಪಾದಾರ್ಪಣೆ ಮಾಡಬೇಕು. ರೈತರು ಒಗ್ಗಟ್ಟು ಮತ್ತು ರೈತ ಸಂಘ ಎಂದರೆ ರಾಜಕೀಯ ಪಕ್ಷದವರಿಗೆ ಭಯವಾಗುತ್ತದೆ. ಹೀಗಾಗಿ ಇಂದು ರೈತರ ಉದ್ಧಾರ ಮಾಡುತ್ತೇವೆ ಎಂದು ಎಲ್ಲ ರಾಜಕೀಯ ಪಕ್ಷಗಳು ಬೊಬ್ಬೆ ಹೊಡೆದು, ಪ್ರಣಾಳಿಕೆಯಲ್ಲಿ ರೈತರ ಬಗ್ಗೆ ಹೆಚ್ಚು ಮಾತನಾಡುತ್ತಾರೆ ಎಂದರು.

ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ ರೂ.1730 ಬೆಂಬಲ ಘೋಷಿಸಿದೆ. ಆದರೆ ರಾಜ್ಯದಲ್ಲಿ ಮುಖ್ಯಮಂತ್ರಿಗಳು ಮೆಕ್ಕೆಜೋಳವನ್ನು ಕೆಎಂಎಫ್‌ನವರು ರೂ.1300 ಖರೀದಿ ಮಾಡಿ ಎಂದು ಹೇಳಿದ್ದಾರೆ. ಸರ್ಕಾರಗಳ ಮಾತಿಗೆ ಕಿಮ್ಮತ್ತು ಇಲ್ಲದಂತಾಗಿದೆ ಎಂದರು. ಡಾ|ಸ್ವಾಮಿನಾಥನ್‌ ವರದಿ ಯಥಾವತ್ತಾಗಿ ಜಾರಿಗೊಳಿಸುವುದಾಗಿ ಹೇಳಿದ್ದ ಬಿಜೆಪಿ ಇಂದು ಜಾರಿ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದೆ ಎಂದು ದೂರಿದರು.

ದೇಶದಲ್ಲಿ ವ್ಯವಸಾಯ ರೈತರ ಕೈಯಲ್ಲಿದೆ. ಬಿತ್ತನೆ ಬೀಜ, ಜ್ಞಾನ ಮತ್ತು ಭೂಮಿಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ರೈತರ ಮೇಲಿದೆ. ಭೂಮಿಯನ್ನು ಬಿಡುವುದಿಲ್ಲ ಎಂಬ ಘೋಷಣೆ ರೈತರದ್ದಾಗಬೇಕು ಎಂದರು. ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ರೈತ ಸಂಘ ಪಾರದರ್ಶಕತೆಯಿಂದ ನೇರವಾಗಿ ಹೋರಾಟ ಮಾಡಿ ಜನರ ಧ್ವನಿಯಾಗಿ ರೈತರ ಏಳ್ಗೆಗೆ ಶ್ರಮಿಸುತ್ತಿದೆ. ಅನ್ಯಾಯಕ್ಕೊಳಗಾದ ರೈತರಿಗೆ ನ್ಯಾಯ ಕೊಡಿಸುವ ಶಕ್ತಿ ರೈತ ಸಂಘಕ್ಕಿದೆ. ರೈತ ಸಂಘ ಹೋರಾಟಗಳ ಫಲವಾಗಿ ಅನೇಕ ರೈತರಿಗೆ ಮತ್ತು ರೈತ ನ್ಯಾಯ ಒದಗಿಸುವ ಕಾರ್ಯ ಮಾಡಿದೆ. ಇಂದು ರೈತ ಸಂಘಕ್ಕೆ ಯುವ ಘಟಕ, ಮಹಿಳಾ ಘಟಕಕ್ಕೆ ಪದಾ ಧಿಕಾರಿಗಳನ್ನು ಆಯ್ಕೆ ಮಾಡಿ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗಿದೆ. ಎಲ್ಲ ಪದಾಧಿಕಾರಿಗಳು ಹೋರಾಟ ಮಾಡಿ ರೈತರಿಗೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕು ಎಂದರು. 

ಸಹಾಯಕ ಕೃಷಿ ನಿರ್ದೇಶಕ ಶಿವಕುಮಾರ ಮಲ್ಲಾಡದ, ಹೆಸ್ಕಾಂ ಎಇಇ ರಾಜೀವ ಮರಿಗೌಡ್ರ ಉಪತಹಶೀಲ್ದಾರ್‌ ಮಂಜುಳಾ ಹೆಗಡಾಳ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಎಸ್‌.ಎಚ್‌.ಗಿಡ್ಡಪ್ಪನವರ, ದಯಾನಂದ ಡಿ., ಪ್ರಗತಿಪರ ರೈತ ಪ್ರಕಾಶಗೌಡ ಗೌಡರ ಅವರನ್ನು ಸನ್ಮಾನಿಸಲಾಯಿತು.

ತಿಪ್ಪಾಯಿಕೊಪ್ಪದ ಮೂಕಪ್ಪ ಶಿವಯೋಗಿಗಳ ಮಠದ ಉತ್ತರಾ ಧಿಕಾರಿ ಮಹಾಂತ ದೇವರು ಸಾನ್ನಿಧ್ಯ ವಹಿಸಿದ್ದರು. ರೈತ ಮುಖಂಡ ವೀರನಗೌಡ ಬಾಳಂಬೀಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಮಹಮ್ಮದಗೌಸ್‌ ಪಾಟೀಲ, ಮಂಜುಳಾ ಅಕ್ಕಿ, ಮರಿಗೌಡ ಪಾಟೀಲ, ದಿಳ್ಳೆಪ್ಪ ಮಣ್ಣೂರ, ಕರಿಬಸಪ್ಪ ಅಗಸಿಬಾಗಿಲ, ಎಸ್‌.ವಿ.ಚಪ್ಪರದಳ್ಳಿ, ಬಸನಗೌಡ ಗಂಗಪ್ಪಳವರ, ಪ್ರಭುಗೌಡ ಪ್ಯಾಟಿ, ಶಂಕ್ರಗೌಡ ಶಿರಗಂಬಿ, ಗಂಗನಗೌಡ ಮುದಿಗೌಡರ, ಶಂಕರಗೌಡ ಮಕ್ಕಳ್ಳಿ, ರತ್ನಾ ನರೇಂದ್ರ, ಪ್ರೇಮಾ ಮಾಳಗಿ, ನಾಗರತ್ನಾ ನೀರಲಗಿ, ಪೂರ್ಣಿಮಾ ಪಾಟೀಲ, ಚಿಕ್ಕಪ್ಪ ಚತ್ರದ, ಸುರೇಶ ಚಲವಾದಿ ಸೇರಿದಂತೆ ಹಿರೇಕೆರೂರ ಮತ್ತು ರಟ್ಟೀಹಳ್ಳಿ ತಾಲೂಕಿನ ರೈತ ಸಂಘದ ಪದಾಧಿಕಾರಿಗಳು ವಿವಿಧ ಗ್ರಾಮಗಳ ರೈತರು ಹಾಜರಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.