ಭಾರತೀಯ ಸಂಸ್ಕೃತಿ ವಿನಾಶ ಅಸಾಧ್ಯ: ಸ್ವಾಮೀಜಿ


Team Udayavani, Nov 21, 2018, 4:28 PM IST

21-november-19.gif

ಬ್ಯಾಡಗಿ: ಹರಪ್ಪ ಮತ್ತು ಮೆಹೆಂಜೋದಾರ ಸಂಸ್ಕೃತಿಯಲ್ಲಿ ಸಿಕ್ಕ ಶಿವನ ದೇವಾಲಯ ಹಾಗೂ ಶಿಲಾಮೂರ್ತಿಗಳು ನಮ್ಮ ಸಂಸ್ಕೃತಿ ಕುರಿತ ಇತಿಹಾಸ ಪರಿಚಯಿಸುತ್ತಿದೆ. ಅಂದೂ ಸಹ ಶಿವನನ್ನು ಆರಾಧಿ ಸುತ್ತಿದ್ದ ಕುರುಹುಗಳಿವೆ. ಹೀಗಾಗಿ ದೇವಾಲಯಗಳು ಸಂಸ್ಕೃತಿ ಮತ್ತು ಪರಂಪರೆಗಳಾಗಿವೆ ಎಂದು ನೆಗಳೂರು ಹಿರೇಮಠದ ಷ.ಬ್ರ. ಗುರುಶಾಂತೇಶ್ವರ ಶಿವಾಚಾರ್ಯಶ್ರೀ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಆಂಜನೇಯ ದೇವಸ್ಥಾನ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿ ಬಹಳ ವಿಭಿನ್ನ ಹಾಗೂ ವಿಶಿಷ್ಟವಾಗಿದ್ದು. ಇದನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ. ಎಲ್ಲ ಸಂಸ್ಕೃತಿಗಳಲ್ಲಿ ಬಹಳಷ್ಟು ವರ್ಷಗಳಿಂದ ಇಬ್ಭಾಗವಾಗಿವೆ. ಆದರೆ, ಭಾರತೀಯ ಸಂಸ್ಕೃತಿ ಮಾತ್ರ ಎಂದಿಗೂ ಬದಲಾಗಿಲ್ಲ. ಈ ಎಲ್ಲ ಕಾರಣಗಳಿಂದ ನಮ್ಮ ಪರಂಪರೆ ವಿಶ್ವದಲ್ಲಿಯೇ ಶ್ರೇಷ್ಠವಾಗಿದೆ ಎಂದರು.

ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಎಸ್‌.ಆರ್‌.ಪಾಟೀಲ ಮಾತನಾಡಿ, ನಾಸ್ತಿಕ ಮನೋಭಾವನೆ ಮತ್ತು ಧರ್ಮರಹಿತ ಬದುಕು ಎಂದೆಂದಿಗೂ ಅರ್ಥಹೀನ. ನಶ್ವರ ಮನೋಭಾವನೆಯುಳ್ಳ ವ್ಯಕ್ತಿಗಳಿಗೆ ಹುಟ್ಟು ಸಾವುಗಳಿಗೂ ಒಂದೇ ಅರ್ಥ ಎಂಬ ಮನೋಭಾವನೆ ತೋರುತ್ತಾರೆ. ಈ ಹಿನ್ನೆಲೆಯಲ್ಲಿ ದೇವಾಲಯಗಳನ್ನು ನಿರ್ಮಿಸುವ ಮೂಲಕ ಜನರಲ್ಲಿ ಆಸ್ತಿಕ ಮನೋಭಾವನೆ ಮೂಡಿಸುವ ಕಾರ್ಯವಾಗಬೇಕಾಗಿದೆ ಎಂದರು.

ಸನಾತನ ಸಂಸ್ಕೃತಿಯನ್ನು ಮರೆತು ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗುವ ಮೂಲಕ ಭಾರತೀಯ ಸಂಸ್ಕೃತಿ ಮರೆಯುತ್ತಿರುವ ಯುವಕರು ಕತ್ತಲೆ ಜಗತ್ತಿನ ಅಪರಾಧಗಳಿಗೆ ಸಾಕ್ಷಿಯಾಗುತ್ತಿದ್ದಾರೆ. ಆದರೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ನಿಂತಿರುವ ಸ್ಥಳೀಯ ಆಂಜನೇಯ ಸಂಸ್ಥೆಯ ಯುವಕರು, ಯುವ ಜನತೆಗೆ ಮಾದರಿಯಾಗಿದ್ದಾರೆ. ಇವರಂತೆ ನಮ್ಮ ಸನಾತನ ಸಂಸ್ಕೃತಿ, ಪರಂಪರೆ ಕಾಪಾಡಲು ಸಮಾಜದ ಪ್ರತಿಯೊಬ್ಬ ಯುವಕರು ಶ್ರಮಿಸಬೇಕಾಗಿದೆ ಎಂದರು.

ಶಂಕ್ರಪ್ಪ ಮಾತನವರ, ತಾಪಂ ಉಪಾಧ್ಯಕ್ಷೆ ಶಾಂತವ್ವ ದೇಸಾಯಿ, ಎಪಿಎಂಸಿ ಸದಸ್ಯರಾದ ಉಳಿವೆಪ್ಪ ಕುರುವತ್ತಿ, ವನಿತಾ ಗುತ್ತಲ, ಗ್ರಾಪಂ ಅಧ್ಯಕ್ಷೆ ಅಕ್ಕಮ್ಮ ಓಲೇಕಾರ, ಸದಸ್ಯರಾದ ಬಸಪ್ಪ ಬನ್ನಿಹಟ್ಟಿ, ಶಿವಪ್ಪ ಕುಮ್ಮೂರ, ಶಿವಮೂರ್ತೇಪ್ಪ ಬನ್ನಿಹಟ್ಟಿ, ನಿಂಗಪ್ಪ ಹೆಗ್ಗಣ್ಣನವರ, ಮಲ್ಲಪ್ಪ ದೇಸಾಯಿ, ಮಲಕಪ್ಪ ಮುಳಗುಂದ, ಚಂದ್ರಪ್ಪ ಬಿ.ಬಾರ್ಕಿ, ಮೃತ್ಯುಂಜಯಪ್ಪ ಮುಳಗುಂದ, ವಕೀಲರಾದ ಮಹದೇವಪ್ಪ ಬನ್ನಿಹಟ್ಟಿ, ಪ್ರಕಾಶ ಬನ್ನಿಹಟ್ಟಿ, ಬಸಪ್ಪ ವೀರನಗೌಡ್ರ, ಬಸವರಾಜ ಸಂಕಣ್ಣನವರ, ವೀರಯ್ಯ ಮಾನಿಹಳ್ಳಿಮಠ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.