ಅಕ್ಕಿ ಆಲೂರಿಗೆ ಸದ್ಭಾವನಾ ಪಾದಯಾತ್ರೆ


Team Udayavani, Dec 5, 2018, 3:37 PM IST

5-december-17.gif

ಅಕ್ಕಿಆಲೂರು: ಲಿಂ| ಚನ್ನವೀರ ಸ್ವಾಮಿಗಳವರ ಜನ್ಮಶತಮಾನೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ಹಾನಗಲ್ಲ ವಿರಕ್ತಮಠದಿಂದ ಅಕ್ಕಿಆಲೂರ ವಿರಕ್ತಮಠಕ್ಕೆ ಭಕ್ತರ ಸದ್ಭಾವನಾ ಪಾದಯಾತ್ರೆ ಆಗಮಿಸಿತು. ಹಾನಗಲ್ಲ ವಿರಕ್ತಮಠದ ಕುಮಾರ ಶ್ರೀಗಳವರ ಸಂಕಲ್ಪದಂತೆ ಹಾವೇರಿ ಹುಕ್ಕೇರಿಮಠದ ಸದಾಶಿವ ಶ್ರೀಗಳು ಸೇರಿದಂತೆ ನಾಡಿನ ವಿವಿಧ ಮಠಾಧೀಶರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಈ ಪಾದಯಾತ್ರೆಯಲ್ಲಿ ಜಾತಿ-ಮತ-ಪಂಥಗಳನ್ನು ಲೆಕ್ಕಿಸದೇ ಭಕ್ತರು ಸಾಗರೋಪಾದಿಯಲ್ಲಿ ಪಾಲ್ಗೊಂಡಿದ್ದರು.

ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಹಾನಗಲ್ಲ ವಿರಕ್ತಮಠದಿಂದ ಹೊರಟ ಪಾದಯಾತ್ರೆಯಲ್ಲಿ ಹಾನಗಲ್ಲ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ 1000ಕ್ಕೂ ಹೆಚ್ಚು ಯಾತ್ರಿಗಳು ಪಾಲ್ಗೊಂಡಿದ್ದರು. ಪಾದಯಾತ್ರೆ ಸುರಳೇಶ್ವರ ಮಾರ್ಗವಾಗಿ ಸುಮಾರು 8 ಕಿ.ಮೀ. ಅಂತರವನ್ನು 1.30 ಗಂಟೆ ಅವಧಿಯಲ್ಲಿ ತಲುಪಿತು. ದಾರಿಯುದ್ದಕ್ಕೂ ಮಹಿಳೆಯರ ಆರತಿ ಬೆಳಗಿ ಸ್ವಾಗತ ಕೋರಿದರೆ, ಮಂಗಳವಾದ್ಯಗಳು ಮೊಳಗಿ ಶುಭ ಕೋರಿದವು.

ಪಾದಯಾತ್ರೆಯುದ್ದಕ್ಕೂ ಭಕ್ತರು ಬಸವನಾಮ ಸ್ಮರಣೆ, ಕುಮಾರೇಶ್ವರ ಮತ್ತು ಚನ್ನವೀರೇಶ್ವರರ ಸ್ಮರಣೆ ಮಾಡುತ್ತ ಸಾಗಿದರೆ, ಕೆಲವು ಭಕ್ತರು ಜಯಘೋಷ ಹಾಕಿ ಪಾದಯಾತ್ರೆಗೆ ಮೆರಗು ತಂದರು. ಪಾದಯಾತ್ರೆ ಸಂಚರಿಸುವ ಮಾರ್ಗಗಳನ್ನು ಹೂವುಗಳಿಂದ ಶೃಂಗರಿಸಲಾಗಿತ್ತು. ಪಾದಯಾತ್ರೆ ಅಕ್ಕಿಆಲೂರು ತಲುಪಿದ ನಂತರ ಅಕ್ಕಿಆಲೂರಿನ ಭಕ್ತರು ಪಾದಯಾತ್ರೆಯನ್ನು ಅತ್ಯಂತ ಭಕ್ತಿಭಾವದಿಂದ ಬರಮಾಡಿಕೊಂಡರು. ನಂತರ ಹಾನಗಲ್ಲ ಪ್ರದಕ್ಷಿಣೆ ಹಾಕಿ ಕುಮಾರೇಶ್ವರ ಮಠಕ್ಕೆ ತಲುಪಿ ಸಂಪನ್ನಗೊಂಡಿತು. ನಂತರ ಧರ್ಮಸಭೆ ನಡೆಯಿತು. ಈ ಸಂದರ್ಭದಲ್ಲಿ ಬಾಳೂರಿನ ಕುಮಾರ ಶ್ರೀಗಳು, ವಿರಕ್ತಮಠದ ಶಿವಬಸವ ಶ್ರೀಗಳು, ಕೂಡಲದ ಗುರುಮಹೇಶ್ವರ ಶ್ರೀಗಳು, ಮುತ್ತಿನಕಂತಿಮಠದ ಚಂದ್ರಶೇಖರ ಶ್ರೀಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.