ಬೇಜವಾಬ್ದಾರಿ ಶಿಕ್ಷಕರ ವರ್ಗಾವಣೆಗೆ ಒತ್ತಾಯ


Team Udayavani, Dec 10, 2018, 3:56 PM IST

10-december-16.gif

ರಾಣಿಬೆನ್ನೂರ: ಶಿಕ್ಷಕರು ಮಕ್ಕಳಿಗೆ ಸರಿಯಾಗಿ ಪಾಠ ಬೋಧಿಸುತ್ತಿಲ್ಲ. ಪರಿಣಾಮ ಮಕ್ಕಳಿಗೆ ಸರಿಯಾಗಿ ಓದಲು, ಬರೆಯಲು ಬರುವುದಿಲ್ಲ. ಶಾಲೆಯಲ್ಲಿಯೇ ಶಿಕ್ಷಕರು ಜಗಳವಾಡುತ್ತಾರೆ ಎಂಬ ಇತ್ಯಾದಿ ಆರೋಪದ ಸುದ್ದಿ ಕೇಳಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರ ಮತ್ತು ಕ್ಷೇತ್ರ ಶಿಕ್ಷಣಾಧಿ ಕಾರಿ ಎನ್‌.ಶ್ರೀಧರ ಶನಿವಾರ ಶಾಲೆಗೆ ದಿಢೀರ್‌ ಭೇಟಿ ನೀಡಿ, ಶಿಕ್ಷಕರನ್ನು ತರಾಟೆ ತೆಗೆದುಕೊಂಡ ಘಟನೆ ತಾಲೂಕಿನ ನೂಕಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ನಮ್ಮ ಮಕ್ಕಳಿಗೆ ಸರಿಯಾಗಿ ಓದಲು ಬರೆಯಲು ಬರುವುದಿಲ್ಲ. 1ರಿಂದ 8ನೇ ತರಗತಿ ವರೆಗೆ ಒಟ್ಟು 212 ಮಕ್ಕಳಿದ್ದು, ಶಾಲಾ ಶಿಕ್ಷಕರು 9 ಜನರಿದ್ದರೂ ಅವರಲ್ಲಿಯೇ 3 ಪಂಗಡಗಳಾಗಿವೆ. ಇದರಿಂದ ನಮ್ಮ ಶಾಲೆ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಪಾಲಕರು ದೂರಿದರು.

ವಿದ್ಯಾರ್ಥಿಗಳ ಬುದ್ದಿಮಟ್ಟ ಪರೀಕ್ಷಿಸುವುದರ ಜತೆಗೆ ಪ್ರತಿ ತರಗತಿಯಲ್ಲಿ ಕ್ಲಾಸ್‌ ತೆಗೆದುಕೊಂಡು ಪಾಠ ಮಾಡಿದರು. ಒಂದು ಕೊಠಡಿಯಲ್ಲಿ ಡಿಡಿಪಿಐ ಇನ್ನೊಂದು ಕೊಠಡಿಯಲ್ಲಿ ಬಿಇಒ ಮಕ್ಕಳಿಗೆ ಮನ ಮುಟ್ಟುವಂತೆ ಬೆಳಗ್ಗೆ 8:30ರಿಂದ ಮಧ್ಯಾಹ್ನ 12:30ರ ವರೆಗೆ ಪಾಠ ಬೋಧನೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾತನಾಡಿ, ಮಕ್ಕಳೆದುರಿಗೆ ಶಿಕ್ಷಕರು ಕಿತ್ತಾಡುತ್ತಾರೆ. ಸಮಯಕ್ಕೆ ಸರಿಯಾಗಿ ಬರುವುದಿಲ್ಲ, ಮುಖ್ಯೋಪಾಧ್ಯಾಯರ ಮಾತಿಗೆ ಯಾವ ಶಿಕ್ಷಕಕರೂ ಬೆಲೆ ಕೊಡುವುದಿಲ್ಲ. ಹೀಗಾಗಿ ಮೊದಲು ಮುಖ್ಯೋಪಾಧ್ಯಾಯ ಸೇರಿದಂತೆ ಬೇಜವಾಬ್ದಾರಿ ಶಿಕ್ಷಕರನ್ನು ಕೂಡಲೇ ಬೇರೆಡೆ ವರ್ಗಾಯಿಸಿರಿ ಎಂದು ಪಟ್ಟು ಹಿಡಿದರು. ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರೂ ಶಾಲಾ ವ್ಯವಸ್ಥೆ ಸಂಪುರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಎಲ್ಲವನ್ನೂ ಆಲಿಸಿದ ಡಿಡಿಪಿಐ ಶಿಕ್ಷಕರ ಸಭೆ ಕರೆದು, ಇನ್ನು ಮುಂದೆ ಇಂತಹ ಆರೋಪಗಳು ಕೇಳಿಬರದಂತೆ ಎಚ್ಚರವಹಿಸಿ. ಶಾಲೆಯಲ್ಲಿ ಶಿಸ್ತು, ಶ್ರದ್ಧೆಯಿಂದ ಇರಬೇಕು. ಶಿಕ್ಷಕರ ಮೇಲೆ ಆರೋಪ ಪುನರಾವರ್ತನೆಯಾದರೆ ಮುಲಾಜಿಲ್ಲದೆ ಅಮಾನತುಗೊಳಿಸುವ ಎಚ್ಚರಿಕೆ ನೀಡಿದರು.

ತಿಂಗಳೊಳಗೆ ಶಾಲಾ ಮಕ್ಕಳು ಸುಧಾರಣೆಯಾಗಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆಯಿಸಬೇಕು. ಶಾಲೆ ಉನ್ನತೀಕರಣ ಮತ್ತು ಸೌಂದರ್ಯಿಕರಣದಿಂದ ಕೂಡಿರಬೇಕು. ಇಷ್ಟೆಲ್ಲದರ ಮಧ್ಯೆ ತಮ್ಮೊಳಗೆ ಕಿತ್ತಾಟ ಕಂಡುಬಂದರೆ ಬೇರೆ ಜಿಲ್ಲೆಗೆ ವರ್ಗಾಯಿಸಲಾಗುವುದು ಅಥವಾ ಅಮಾನತುಗೊಳಿಸಲಾಗುವುದು. ಸಮಯಕ್ಕೆ ಸರಿಯಾಗಿ ಶಾಲೆಗೆ ಆಗಮಿಸಬೇಕೆಂದು ಎಚ್ಚರಿಸಿದರು.

ಜಿಪಂ ಸದಸ್ಯ ಏಕನಾಥ ಬಾನುವಳ್ಳಿ, ಸಿಆರ್‌ಪಿ ನಟರಾಜ, ಇಸ್ಮಾಯಿಲ್‌ ಐರಣಿ, ಮಂಜಪ್ಪ ವಡ್ಡರ, ವೆಂಕಟೇಶ ದೊಡ್ಡಮನಿ, ಇಕ್ಬಾಲ್‌ಸಾಬ್‌ ರಾಣೇಬೆನ್ನೂರ, ಶಿವಾನಂದ ಹೊಸಮನಿ, ಕೃಷ್ಣಪ್ಪ ವಡ್ಡರ, ಸುರೇಶ ಮಡಿವಾಳರ, ಕುಮಾರ ಗಂಟಿ, ಕಿರಣ ಚಿಂದಿ, ಆನಂದ ದೊಡ್ಡಮನಿ ಸೇರಿದಂತೆ ಪಾಲಕರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.