ಸಾಹಿತ್ಯಕ್ಕೆ ‘ಪಂಚ ರತ್ನ’ ನೀಡಿದ ವಿದ್ಯಾರಣ್ಯ ಶಾಲೆ


Team Udayavani, Jan 4, 2019, 11:20 AM IST

4-january-18.jpg

ಧಾರವಾಡ: ವಿದ್ಯಾಕಾಶಿ ಧಾರವಾಡದ ವಿದ್ಯಾರಣ್ಯ ಮಾಧ್ಯಮಿಕ ಶಾಲೆಗೂ ಸಾಹಿತ್ಯ ಸಮ್ಮೇಳನಕ್ಕೂ ಅವಿನಾಭಾವ ನಂಟಿದೆ. ಇದೇ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಐವರು ಸಾಹಿತಿಗಳು ಹಿಂದೆ ನಡೆದ ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷರಾಗಿದ್ದಾರೆ ಎಂಬುದು ವಿಶೇಷ.

ಬಿ.ಎಂ.ಶ್ರೀಕಂಠಯ್ಯ, ಶಂ.ಬಾ.ಜೋಶಿ, ರಂಗನಾಥ ದಿವಾಕರ ಇಲ್ಲಿನ ಹೆಬ್ಬಳ್ಳಿ ಅಗಸಿ ಸಮೀಪದ ವಿದ್ಯಾರಣ್ಯ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದರೆ, ದ.ರಾ.ಬೇಂದ್ರೆ ಇದೇ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದರಲ್ಲದೇ ಮುಂದೆ ಪದವಿ ಪಡೆದುಕೊಂಡು ಬಂದು ಇಲ್ಲಿಯೇ ಶಿಕ್ಷಕರಾಗಿ ಕಾರ್ಯನಿರ್ವಹಿಸಿದರು. ಕೆ.ಜಿ. ಕುಂದಣಗಾರ ಇದೇ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದರು.

ಕನ್ನಡದ ಕಣ್ವಮುನಿ ಬಿ.ಎಂ.ಶ್ರೀಕಂಠಯ್ಯ 1928ರಲ್ಲಿ ಕಲಬುರ್ಗಿಯಲ್ಲಿ ನಡೆದ ಅಖೀಲ ಭಾರತೀಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರೆ, ರಂಗನಾಥ ದಿವಾಕರ 1938ರಲ್ಲಿ ಬಳ್ಳಾರಿಯಲ್ಲಿ ನಡೆದ 23ನೇ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಅಂಬಿಕಾತನಯದತ್ತ ಕಾವ್ಯನಾಮದಿಂದ ಖ್ಯಾತರಾದ ದ.ರಾ.ಬೇಂದ್ರೆ 1943ರಲ್ಲಿ ಶಿವಮೊಗ್ಗದಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಕೆ.ಜಿ.ಕುಂದಣಗಾರ ಗದಗನಲ್ಲಿ 1961ರಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ದಿವಾಕರ ರಂಗನಾಥ ಅವರು 1916ರಲ್ಲಿ ವಿದ್ಯಾರಣ್ಯ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ದ.ರಾ.ಬೇಂದ್ರೆ 1918ರಲ್ಲಿ ಇದೇ ಶಾಲೆಯಲ್ಲಿ ಕಲಿತು ಮುಂದೆ ಪದವಿ ಪಡೆದ ನಂತರ 1925ರಿಂದ 1932ರವರೆಗೆ ವಿದ್ಯಾರಣ್ಯ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿದರು. ಶಂ.ಬಾ.ಜೋಶಿ 1928ರಿಂದ 1946ರವರೆಗೆ ಈ ಶಾಲೆಯಲ್ಲಿ ಬೋಧನೆ ಮಾಡಿದರು.

1882ರಲ್ಲಿ ಬಡವರಿಗೆ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ವಿಷ್ಣು ಲೇಲೆ ಆವರು ನ್ಯೂ ಇಂಗ್ಲಿಷ್‌ ಸ್ಕೂಲ್‌ ಆರಂಭಿಸಿದರು. ಬಾಲ ಗಂಗಾಧರ ತಿಲಕರ ವಿಚಾರಧಾರೆಯನ್ವಯ ರಾಷ್ಟ್ರೀಯ ಭಾವನೆಯನ್ನು ಜಾಗೃತಗೊಳಿಸುವುದು ಅವರ ಉದ್ದೇಶವಾಗಿತ್ತು. 1877ರಲ್ಲಿ ಬ್ರಿಟಿಷ್‌ ಸಾಮ್ರಾಜ್ಯದ ವಿಕ್ಟೋರಿಯಾ ಭಾರತದ ಚಕ್ರವರ್ತಿಯಾಗಿ ಅಧಿಕಾರ ವಹಿಸಿಕೊಂಡರು. ಅದರಿಂದಾಗಿ ಶಾಲೆಗೆ ವಿಕ್ಟೋರಿಯಾ ಹೈಸ್ಕೂಲ್‌ ಎಂದು ಹೆಸರಿಡಲಾಯಿತು. ಮುಂದೆ ಅದು ಸ್ವಾತಂತ್ರ್ಯಾನಂತರ ವಿದ್ಯಾರಣ್ಯ ಮಾಧ್ಯಮಿಕ ಶಾಲೆ ಎಂದು ಮರು ನಾಮಕರಣಗೊಂಡಿತು. ಆರ್ಥಿಕ ಸಂಕಷ್ಟದಿಂದಾಗಿ ಅಪಾರ ತೊಂದರೆ ಅನುಭವಿಸಿದ ಶಾಲೆ ಗುಣಮಟ್ಟದ ಶಿಕ್ಷಣಕ್ಕೆ ಪ್ರಸಿದ್ಧಿ ಪಡೆದಿದೆ. ಬದ್ಧತೆಯ ಆಡಳಿತ ಮಂಡಳಿ ಹಾಗೂ ಸಮರ್ಥ ಶಿಕ್ಷಕರಿಂದಾಗಿ ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಅಗಾಧ ಸಾಧನೆ ಮಾಡಿದ್ದಾರೆ.

1913ರಿಂದ 1920ರವರೆಗೆ ಸಂಸ್ಥೆ ಅಗಾಧ ಪ್ರಗತಿ ಹೊಂದಿತು. ಹೊಸ ಚೈತನ್ಯದಿಂದ ಮುನ್ನುಗ್ಗಿ ಕನ್ನಡ ದಿಗ್ಗಜರನ್ನು ತನ್ನೆಡೆಗೆ ಆಕರ್ಷಿಸಿದ್ದು ಸಂಸ್ಥೆಯ ಬಲವರ್ಧನೆಗೆ ಸಹಾಯಕವಾಯಿತು. ದ.ರಾ.ಬೇಂದ್ರೆ, ದಿವಾಕರ ರಂಗರಾಯರು, ಆದ್ಯ ಅನಂತಾಚಾರ್ಯ, ಟಿ.ಬಿ.ಹರ್ಡಿಕರ, ಎಸ್‌.ಟಿ.ಪಪ್ಪು, ಸು.ಶಿ.ದೇಸಾಯಿ ಮೊದಲಾದವರು ಶಿಕ್ಷಕರಾಗಿ ಸೇವೆ ಸಲ್ಲಿಸಿ ಸಂಸ್ಥೆಯ ಏಳ್ಗೆಯಲ್ಲಿ ಮಹತ್ವದ ಪಾತ್ರ ನೀಡಿದರು. ವಿದ್ಯಾರಣ್ಯ ಶಾಲೆಯ ಆವರಣದಲ್ಲಿ 1944ರಲ್ಲಿ ಕೆ.ಇ. ಬೋರ್ಡ್ಸ್‌ ಕಲಾ ಮಹಾವಿದ್ಯಾಲಯ ಆರಂಭಗೊಂಡಿತು.

ಬಿ.ಎಂ.ಶ್ರೀಕಂಠಯ್ಯ ಇದರ ಪ್ರಾಚಾರ್ಯರಾದರು. ಸೇವಾ ನಿವೃತ್ತಿ ನಂತರ ಕೂಡ ವಿದ್ಯಾರಣ್ಯ ಶಾಲೆಗೆ ಬರುತ್ತಿದ್ದರು. 1946ರಲ್ಲಿ ಕಚೇರಿಯಲ್ಲಿಯೇ ಅವರು ನಿಧನರಾದರು. ಸಾಹಿತ್ಯ ಸಮ್ಮೇಳನಕ್ಕೆ ಬಂದವರು 136 ವರ್ಷಗಳ ಇತಿಹಾಸ ಹೊಂದಿದ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಅನಘ್ಯರ್ ರತ್ನಗಳನ್ನು ನೀಡಿದ ಶಾಲೆಯನ್ನು ವೀಕ್ಷಿಸಬಹುದಾಗಿದೆ.

136 ವರ್ಷಗಳಷ್ಟು ಹಳೆಯದಾದ ನಮ್ಮ ವಿದ್ಯಾರಣ್ಯ ಶಾಲೆ ಭವ್ಯ ಪರಂಪರೆ ಹೊಂದಿದೆ. ಸಾಕಷ್ಟು ತೊಂದರೆಗಳ ಮಧ್ಯೆಯೂ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಶಾಲೆಯನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಬಂದಿದ್ದಾರೆ. ನಮ್ಮ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಐವರು ಗಣ್ಯ ಸಾಹಿತಿಗಳು ಅಖೀಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದುದು ನಮಗೆ ಹೆಮ್ಮೆಯ ಸಂಗತಿ.
•ಸಿಂಧು ಶಿರೂರ,
ಉಪಪ್ರಾಚಾರ್ಯರು,
ವಿದ್ಯಾರಣ್ಯ ಮಾಧ್ಯಮಿಕ ಶಾಲೆ, ಧಾರವಾಡ

ಕನ್ನಡ ನಾಡಿಗೆ ಹಲವಾರು ಸಾಹಿತಿಗಳನ್ನು ನೀಡಿದ್ದು ವಿದ್ಯಾರಣ್ಯ ಶಾಲೆಯ ಹೆಗ್ಗಳಿಕೆ. ಸಾಹಿತ್ಯಾಸಕ್ತ ಬೋಧಕರು ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸಿದರು. ಇದರಿಂದ ಹಲವಾರು ಮಕ್ಕಳು ಸಹಜವಾಗಿಯೇ ಆಸಕ್ತಿ ಬೆಳೆಸಿಕೊಂಡು ಮುಂದೆ ಸಾಹಿತ್ಯ ಕೃಷಿ ಮಾಡಿದರು. ಇಲ್ಲಿ ಕಲಿತ ಹಲವು ವಿದ್ಯಾರ್ಥಿಗಳು ಸಾಹಿತ್ಯದ ಸಾಧನೆಗೆ ನೀಡುವ ಪ್ರತಿಷ್ಠಿತ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೊಂದು ಅಪೂರ್ವ ಶಿಕ್ಷಣ ಸಂಸ್ಥೆಯಾಗಿದೆ.
•ಹರ್ಷ ಡಂಬಳ,
ಹಿರಿಯ ಸಾಹಿತಿಗಳು

•ವಿಶ್ವನಾಥ ಕೋಟಿ

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.