ಬ್ಯಾಟರಿ ಬೆಳಕಲ್ಲಿ ಒಣಗಿದ ಬೆಳೆ ವೀಕ್ಷಿಸಿದ ಸಿಎಂ!


Team Udayavani, Jan 5, 2019, 11:09 AM IST

5-january-17.jpg

ಹಾವೇರಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ಸಂಜೆ ಕತ್ತಲೆಯಲ್ಲಿಯೇ ತಾಲೂಕಿನ ಮೂರ್‍ನಾಲ್ಕು ಹಳ್ಳಿಗಳಿಗೆ ಭೇಟಿ ನೀಡಿ, ಬ್ಯಾಟರಿ ಬೆಳಕಲ್ಲಿಯೇ ಒಣಗಿದ ಬೆಳೆ ವೀಕ್ಷಿಸಿದರು. ಮಧ್ಯಾಹ್ನ 2 ಗಂಟೆಗೆ ಬರ ವೀಕ್ಷಣೆಗೆ ಬರಬೇಕಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಸಂಜೆ 6:40ರ ಹೊತ್ತಿಗೆ ಆಗಮಿಸಿ ಎರೆಕುಪ್ಪಿ, ಜೋಯಿಸರಹಳ್ಳಿ, ಹೂಲಿಹಳ್ಳಿ, ಕದರಮಂಡಲಗಿ ಗ್ರಾಮಗಳಿಗೆ ಭೇಟಿ ನೀಡಿದರು.

ಮುಖ್ಯಮಂತ್ರಿ ಬರುವಿಕೆಗಾಗಿ ರೈತರು ಮಧ್ಯಾಹ್ನ 1ಗಂಟೆಯಿಂದಲೇ ಬಿಸಿಲಲ್ಲಿ ಕುಳಿತು ಕಾಯುತ್ತಿದ್ದರು. ಸಂಜೆ 5ಗಂಟೆಯಾದರೂ ಮುಖ್ಯಮಂತ್ರಿ ಬಾರದೆ ಇದ್ದಾಗ ಹಲವರು ನಿರಾಶರಾಗಿ ಮನೆಗೆ ನಡೆದರು. ಇನ್ನು ಕೆಲ ರೈತರು ಪೊಲೀಸರ ಮಾಹಿತಿ ಮೇರೆಗೆ ಮುಖ್ಯಮಂತ್ರಿಯವರಿಗೆ ಕಾಯುವ ಕಾಯಕ ಮುಂದುವರಿಸಿದರು. 6:30ರ ಹೊತ್ತಿಗೆ ಆಗಸದಲ್ಲಿ ಕುಮಾರಸ್ವಾಮಿಯವರ ಹೆಲಿಕಾಪ್ಟರ್‌ ಕಂಡೊಡನೆ ನಾಡಿನ ದೊರೆ ಅಂತೂ ಬಂದರಲ್ಲ ಎಂದು ನಿಟ್ಟುಸಿರುವ ಬಿಟ್ಟರು.

ತಡವಾಗಿ ಬರ ವೀಕ್ಷಣೆಗೆ ಬಂದಿರುವ ಬಗ್ಗೆ ರೈತರಿಗೆ ಸ್ಪಷ್ಟನೆ ನೀಡಿದ ಸಿಎಂ ಕುಮಾರಸ್ವಾಮಿ, ಧಾರವಾಡದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಬರುವವನಿದ್ದು ಸಮ್ಮೇಳನದ ಬಳಿಕ ಸಿಗುವ ಸಮಯದಲ್ಲಿ ಜಿಲ್ಲೆಯ ಬರ ವೀಕ್ಷಣೆ, ಇನ್ನಿತರ ಸಮಸ್ಯೆ ಆಲಿಸುವ ಆಲೋಚನೆಯಿಂದ ಭೇಟಿಗಾಗಿ ವ್ಯವಸ್ಥೆ ಮಾಡಲು ಗುರುವಾರ ದಿಢೀರ್‌ ಆಗಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಆದರೆ, ಧಾರವಾಡ ಸಮ್ಮೇಳನದಿಂದ ಬರುವುದು ತಡವಾಯಿತು. ಈ ಬಗ್ಗೆ ಯಾರೂ ಅನ್ಯತಾ ಭಾವಿಸಬಾರದು. ಅಧಿಕಾರಿಗಳಿಂದ ಜಿಲ್ಲೆಯ ಬರ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಸಮಾಧಾನ ಹೇಳಿದರು.

ದುಡಿಯುವ ಕೈಗಳಿಗೆ ಕೆಲಸ ಕೊಡಲು 8.5 ಕೋಟಿ ಉದ್ಯೋಗ ಹೆಚ್ಚುವರಿ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗಿದೆ. ಬರ ಪರಿಸ್ಥಿತಿಯನ್ನು ನಿಭಾಯಿಸಲು ಮಂತ್ರಿಗಳು, ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ ಎಂದರು.

ಎಲ್ಲೆಲ್ಲಿ ಭೇಟಿ?
ಸಂಜೆ ಕತ್ತಲಾವರಿಸಿದ ಬಳಿಕ ಬರ ವೀಕ್ಷಣೆಗೆ ಬಂದ ಸಿಎಂ ಕುಮಾರಸ್ವಾಮಿ, ಎರೆಕುಪ್ಪಿಯ ರೈತ ದ್ಯಾಮಪ್ಪ ಕಡ್ಲಿಗೊಂದಿ ಅವರ ಹೊಲದಲ್ಲಿ ಜೋಳದ ಬೆಳೆ ಹಾನಿ ವೀಕ್ಷಿಸಿದರು. ಅಲ್ಲಿಂದ ಜೋಯಿಸರಹರಳಹಳ್ಳಿ ಗ್ರಾಮಕ್ಕೆ ತೆರಳಿ ಖಾಸಗಿ ಕೊಳವೆಬಾವಿ ನೀರು ಸರಬರಾಜು ವೀಕ್ಷಿಸಿದರು. ಬಳಿಕ ಲಲಿತಾ ಜಟ್ಟೆಪ್ಪ ಹೊರಕೇರಿ, ಭೀಮಪ್ಪ ಬಸಪ್ಪ ಹೊರಕೇರಿ ಜಮೀನಿನಲ್ಲಿರುವ ಒಣಗಿದ ಬೆಳೆ
ವೀಕ್ಷಣೆ, ನಂತರ ಹಳೇಹೂಲಿಹಳ್ಳಿ ಗ್ರಾಮಕ್ಕೆ ಆಗಮಿಸಿ ಯುಟಿಪಿ ಕಾಮಗಾರಿ ವೀಕ್ಷಿಸಿ, ಕದರಮಂಡಲಗಿ ಗ್ರಾಮದ ನರೇಗಾ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ರಾತ್ರಿ 9:10ರ ವೇಳೆಗೆ ಕದರಮಂಡಲಗಿ ಗ್ರಾಮದಲ್ಲಿ ಬರ ಅಧ್ಯಯನ ನಡೆಸುವಾಗ ನೆರೆದಿದ್ದ ರೈತರು ಕೆರೆ ತುಂಬಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ಕಾರ್ಪೆಟ್ ಏಕೆ?
ಮುಖ್ಯಮಂತ್ರಿ ಕುಮಾರಸ್ವಾಮಿ ಹೊಲ ಭೇಟಿ ಹಿನ್ನೆಲೆಯಲ್ಲಿ ಅ ಧಿಕಾರಿಗಳು ರಸ್ತೆಯಿಂದ ಹೊಲದವರೆಗೆ ಹಸಿರು ಕಾಪೆìಟ್‌ ಹಾಸಿದ್ದರು. ಕಾರಿನಿಂದ ಇಳಿದ ಸಿಎಂ ಕುಮಾರಸ್ವಾಮಿ, ಹಾಸಿರುವ ಕಾರ್ಪೆಟ್ ನೋಡಿ, ‘ನಾನೂ ಮಣ್ಣಿನಲ್ಲೇ ಓಡಾಡುತ್ತೇನೆ. ಹೊಲಕ್ಕೆ ಹೋಗಲು ನನಗೇಕೆ ಕಾರ್ಪೆಟ್‌ ಹಾಕಿದ್ದೀರಿ’ ಎಂದು ನಗುಮೊಗದಿಂದಲೇ ಅಧಿಕಾರಿಗಳನ್ನು ಪ್ರಶ್ನಿಸಿ ಹೊಲದತ್ತ ಬ್ಯಾಟರಿ ಬೆಳಕಲ್ಲಿ ನಡೆದರು.

ಶಾಸಕ ಶಂಕರ್‌ ಮುನಿಸು?
ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಣಿಬೆನ್ನೂರು ತಾಲೂಕಿನ ಹಳ್ಳಿಗಳಲ್ಲಿಯೇ ಬರ ಪರಿಸ್ಥಿತಿ ವೀಕ್ಷಣೆಗೆ ಬಂದರೂ ಸ್ಥಳೀಯ ಶಾಸಕ, ಮಾಜಿ ಸಚಿವ ಆರ್‌. ಶಂಕರ್‌ ಬರ ವೀಕ್ಷಣೆಗೆ ಬಂದಿರಲಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆದು ಬಳಿಕ ಕಳೆದುಕೊಂಡ ತಾಲೂಕಿನ ಶಾಸಕರ ಅನುಪಸ್ಥಿತಿ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿತು.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.