ಭಾಷೆಯಿಂದ ಭಾವನಾತ್ಮಕ ಸಂಬಂಧ ವೃದ್ಧಿ


Team Udayavani, Jan 10, 2019, 11:33 AM IST

10-january-23.jpg

ಸವಣೂರು: ಭಾಷೆ ಮನುಷ್ಯರ ನಡುವಿನ ಭಾವನಾತ್ಮಕ ಸಂಬಂಧ ಬೆಸೆಯುವ ಸಾಧನ. ಭಾಷೆಯಿಲ್ಲದಿದ್ದರೆ ಜಗತ್ತೆಲ್ಲವೂ ಕತ್ತಲೆಯಲ್ಲಿ ಮುಳುಗುತ್ತಿತ್ತು ಎಂದು ಸಮ್ಮೇಳನದ ಸರ್ವಾಧ್ಯಕ್ಷ ಶ್ರೀಕಂಠಗೌಡ ಅಯ್ಯನಗೌಡರ ಹೇಳಿದರು.

ಪಟ್ಟಣದ ಲಲಾಟೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಿದ ತಾಲೂಕು 7 ನೇ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಮಾತನಾಡಿದ ಅವರು, ಭಾವನೆಗಳಿಲ್ಲದಿದ್ದರೆ ಸಾಹಿತ್ಯ, ಸಂಸ್ಕೃತಿ ಅರಿವಾಗುತ್ತಿರಲಿಲ್ಲ. ಭಾಷೆಯಿಲ್ಲದೆ ಮಾನವನಿಲ್ಲ, ಜನಾಂಗವಿಲ್ಲ, ಸಮಾಜವಿಲ್ಲ. ಭಾಷೆ ಬೆಳೆದಂತೆ ಭಾವನೆಗಳು, ಭಾವನೆಗಳು ಬೆಳೆದಂತೆ ಬಾಂಧವ್ಯ, ಬಾಂಧವ್ಯದಿಂದ ಬಾಳು ಬೆಳೆದು ಪರಿಸರ ಪಸರಿಸಿದಂತೆ ಬದುಕು, ಬದುಕಿನ ಬೆಳಕಿನಲ್ಲಿ ಪ್ರಗತಿ, ಪ್ರಗತಿಯಿಂದ ಭವ್ಯತೆ ಲಭ್ಯವಾಗುತ್ತದೆ ಎಂದರು.

ಹೇಳುವುದು, ಕೇಳುವುದು, ಓದುವುದು, ಬರೆಯುವುದು, ಭಾಷಾ ಕೌಶಲ್ಯಗಳು ವಿಜ್ಞಾನದ ಆವಿಷ್ಕಾರದಿಂದ ಬದಲಾಗುತ್ತ ನಡೆದಿದೆ. ಮಾತೃ ಭಾಷೆ ಮೊದಲು ನಂತರ ರಾಷ್ಟ್ರ, ಜಾಗತಿಕ ಭಾಷೆಗಳ ಅರಿವಿನೊಂದಿಗೆ ಜಗತ್ತಿನ ಹೆಚ್ಚಿನ ಭಾಷೆಗಳನ್ನು ತಿಳಿದು ಬೆಳಕನ್ನು ಎಲ್ಲ ಕಡೆಯಿಂದ ಸ್ವೀಕರಿಸಿ ಬೆಳೆಯಬೇಕು. ಇಂಥ ಬೆಳವಣಿಗೆಗೆ ಈ ಸಾಹಿತ್ಯ ಸಮ್ಮೇಳನ ಕಾರ್ಯಗಳು ವಿದ್ಯಾರ್ಥಿಗಳನ್ನು ವಿಶ್ವಮಟ್ಟದಲ್ಲಿ ಬೆಳಗಿಸಲಿ ಎಂದು ಹೇಳಿದರು.

ಸರ್ಕಾರ ಸಮಾನ ಶಿಕ್ಷಣ ಒದಗಿಸಲಿ. ಮಾತೃ ಭಾಷೆ ಮೂಲಕ ಕನ್ನಡ ಶಾಲೆಗಳನ್ನು ಮುನ್ನಡೆಸುವಂತಾಗಬೇಕು. ಕನ್ನಡ ಪತ್ರಿಕೆಗಳನ್ನು ಸರ್ಕಾರ ರಕ್ಷಿಸಿ ಬೆಳೆಸಬೇಕು. ಇಂಗ್ಲಿಷ್‌ ಭಾಷೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ವಿಷಯಗಳ ಪರಿಜ್ಞಾನ ಪೂರ್ಣವಾಗದು. ಜಗತ್ತಿನಲ್ಲಿಯೇ ಮೊಟ್ಟಮೊದಲ ವಿಶ್ವವಿದ್ಯಾಲಯ ರಾಜ್ಯದ ಶಿಗ್ಗಾವಿ ತಾಲೂಕಿನಲ್ಲಿ ಆರಂಭವಾಗಿದ್ದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿ ಎಂದರು.

ದೇಶದ ಸಾಹಿತ್ಯದ ಅತ್ಯುನ್ನತ ಪ್ರಶಸ್ತಿಯಾದ ಜ್ಞಾನಪೀಠ ಪ್ರಶಸ್ತಿ ವಿ.ಕೃ. ಗೋಕಾಕರಿಗೆ ಲಭಿಸಿದ್ದು, ಸವಣೂರಿನ ಹಿರಿಮೆಯಾಗಿದೆ. ಇಲ್ಲಿನ ಸಂಸ್ಥಾನದ ನವಾಬರು ಶಿಕ್ಷಣ, ಕೃಷಿ, ತೋಟಗಾರಿಕೆಗಳಿಗೆ ಪ್ರೇರಣೆ ನೀಡುವ ಮೂಲಕ ಕಾಯಕವಂತರನ್ನು ಪ್ರೋತ್ಸಾಹಿಸಿದ್ದರು. ನವಾಬರಿಂದ ಪ್ರಾರಂಭವಾದ ಸರ್ಕಾರಿ ಮಜೀದ ಹೈಸ್ಕೂಲ್‌ ಈಗ ಕಾಲೇಜಿನವರೆಗೆ ಬೆಳೆದಿದೆ. ಸವಣೂರು ತಾಲೂಕಿನ ಏಳು ಶಾಲೆಗಳು ಶತಮಾನ ಕಂಡಿರುವುದು ಈ ನೆಲದಲ್ಲಿನ ಶಿಕ್ಷಣ ಹಾಗೂ ಸಾಹಿತ್ಯದ ಕುರಿತ ಒಲವನ್ನು ತೋರುತ್ತದೆ. ಇಂತಹ ಶಾಲೆಗಳನ್ನು ರಕ್ಷಿಸಿ ಕನ್ನಡ ಉಳಿಸುವ ಮೂಲಕ ಇತರೆ ಭಾಷೆಗಳನ್ನೂ ಪ್ರೋತ್ಸಾಹಿಸುವಂತಾಗಬೇಕು. ಜತೆಗೆ ದೇಸಿ ಪದಕೋಶಗಳನ್ನು ಸಿದ್ಧಪಡಿಸಬೇಕು ಎಂದು ಹೇಳಿದರು.

ಕನ್ನಡವನ್ನು ಜಾಗತೀಕರಣಗೊಳಸಬೇಕು. ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ಬಡತನ, ಅಸ್ಪೃಶ್ಯತೆ, ಭಿಕ್ಷಾಟನೆ, ನಿರುದ್ಯೋಗ ನಿವಾರಣೆಗೆ ವಚನಕಾರರ ಸಾಹಿತ್ಯದ ವಿವಿಧ ಕಾಯಕಗಳ ಮೂಲಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯ ನಡೆಯಬೇಕು. ಹಿಂದೂ-ಮುಸ್ಲಿಂರ ಐಕ್ಯತೆ ಸಂಕೇತವಾಗಿ ಉಳಿಸಿಕೊಂಡು ಬಂದ ತಾಣಗಳನ್ನು ರಕ್ಷಿಸಲು ಯೋಜನೆ ರೂಪಿಸುವಂತಾಗಬೇಕು. ಕೇಂದ್ರ ಸಾಹಿತ್ಯ ಪರಿಷತ್ತು ಶಾಖೋಪಶಾಖೆಗಳ ಮೂಲಕ ಅನೇಕ ವರ್ಷಗಳಿಂದ ವಿವಿಧ ಯೋಜನೆ ರೂಪಿಸಿ ಜಿಲ್ಲೆ, ತಾಲೂಕು, ಹಳ್ಳಿಗಳಿಗೆ ಸಂದೇಶ ಬೀರುತ್ತ ಭಾಷೆ,ನಾಡು-ನುಡಿ, ಕಲೆ-ಇತಿಹಾಸ ಸಂವರ್ಧನೆಗಾಗಿ ದುಡಿಯುತ್ತ ಬಂದಿದ್ದು, ಈಗಲೂ ದುಡಿಯುತ್ತಲಿದೆ. ಆ ನಿಟ್ಟಿನಲ್ಲಿ ಸರ್ವರೂ ಕನ್ನಡ ತೇರನ್ನು ಮುನ್ನಡೆಸಲಿ ಎಂದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.