ಭಾಗ್ಯಗಳ ಹೆಸರಲ್ಲಿ ನಿರುದ್ಯೋಗ ಸೃಷ್ಟಿ


Team Udayavani, Jan 21, 2019, 10:13 AM IST

21-january-15.jpg

ಶಿಗ್ಗಾವಿ: ಸರ್ಕಾರಗಳು ತಮ್ಮ ಜನಪ್ರಿಯತೆಗಾಗಿ ಬೇರೆ ಬೇರೆ ಹೆಸರಿನಲ್ಲಿ ಭಾಗ್ಯದ ಯೋಜನೆಗಳ ಮೂಲಕ ರಾಜ್ಯದಲ್ಲಿ ಲಕ್ಷಾಂತರ ನಿರುದ್ಯೋಗಿಗಳನ್ನು ಸೃಷ್ಟಿಸುತ್ತಿದ್ದು, ಅದರ ಬದಲಾಗಿ ನೂರಾರು ಉದ್ಯೋಗ ಸೃಷ್ಟಿಸಿದರೆ ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ರಾಜಸ್ವ ನೀಡಬಹುದು ಎಂದು ಚಿತ್ರದುರ್ಗ ಭೋವಿ ಗುರುಪೀಠದ ಜ| ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಸಂತೆ ಮೈದಾನದ ರಂಗಮಂದಿರದಲ್ಲಿ ತಾಲೂಕು ಆಡಳಿತ, ಪುರಸಭೆ ಹಾಗೂ ತಾಲೂಕು ಭೋವಿ ಸಮಾಜದ ಆಶ್ರಯದಲ್ಲಿ ಗುರು ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದರು.

ಸರ್ಕಾರದ ಮರಳು ನೀತಿ ಹಾಗೂ ಗಣಿಗಾರಿಕೆ ಕಾಯಿದೆಗಳಿಂದ ಸ್ವಾವಲಂಬಿ ಮೂಲವೃತ್ತಿಯಿಂದ ಬದುಕು ನಡೆಸಿಕೊಂಡು ಹೋಗಲು ಸಂಕಷ್ಟ ಎದುರಾಗಿದೆ. ಸಮುದಾಯದ ಜನರ ಉದ್ಯೋಗಕ್ಕೆ ಕಾನೂನು ಸಂಕಷ್ಟಗಳಿಂದ ಧಕ್ಕೆ ಬಂದಿದೆ. ಬದುಕು ಕಟ್ಟಿಕೊಳ್ಳಲು ಕೆಲಸ ಅರಸಿ ಅಲೆಮಾರಿಗಳಾಗಿ ಜನ ಗುಳೆ ಹೋಗುವಂಥ ಸ್ಥಿತಿಯನ್ನು ಸರ್ಕಾರವೇ ನಿರ್ಮಾಣ ಮಾಡುತ್ತಿದೆ. ಕಲ್ಲು ಗಣಿಗಾರಿಕೆ, ಕಟ್ಟಡ ನಿರ್ಮಾಣ, ಕೆರೆಕಟ್ಟೆ ನಿರ್ಮಾಣ, ಸ್ಮಾರಕಗಳಂದತಹ ಸ್ಥಾವರಗಳನ್ನು ನಿರ್ಮಿಸಿದ ಕಾಯಕ ಪ್ರಧಾನ ಸಮುದಾಯದ ಜನರು, ಕಾಲಕ್ಕೆ ತಕ್ಕಂತೆ ತಮ್ಮ ವೃತ್ತಿಪರತೆ ಬದಲಾಯಿಸಿಕೊಳ್ಳಬೇಕು. ಸಮುದಾಯದ ಜನರಿಗೆ ಸಾಕ್ಷರತೆ ಪ್ರಮಾಣ ವೃದ್ಧಿಸಿಕೊಂಡು ಶಿಕ್ಷಿತರಾದಲ್ಲಿ ಅರ್ಥಿಕ ಸ್ವಾವಲಂಬನೆ ಸಾಧ್ಯ ಎಂದು ತಿಳಿ ಹೇಳಿದರು.

ಅಕ್ಷರ ಹಾಗೂ ಅರ್ಥಿಕ ಕ್ರಾಂತಿ ಮಾಡಿದ ಸಮುದಾಯಗಳು ಇಂದು ದೇಶವನ್ನಾಳುತ್ತಿವೆ. ದಲಿತ, ಶೋಷಿತ ಹಿಂದುಳಿದ ವರ್ಗ, ಅಸ್ಥಿರ ಸಮುದಾಯದ ಸಮಾಜೋದ್ಧಾರಕ ಅಶ್ಮೀತೆಯಾದಲ್ಲಿ; ನಾಡಿನ ವಚನ ಶರಣ ಶ್ರೇಷ್ಠ ಸಿದ್ಧರಾಮೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮ ಸಾರ್ಥಕತೆ ಕಾಣಲು ಸಾಧ್ಯ ಎಂದರು.

ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಕಲ್ಲು, ಮಣ್ಣುಗಳ ಶ್ರೇ‚ಷ್ಠತೆ, ಮಹತ್ವತೆ ನಾಡಿಗೆ ಪರಿಚಯಿಸಿದ ಸಿದ್ಧರಾಮೇಶ್ವರರು; ಜ್ಞಾನ ದಾಸೋಹಿ ವಚನಕಾರರಲ್ಲಿಯೇ ಹಿರಿಯರು. ಮಾನವತೆಯಿಂದ ದೈವತ್ವದೆಡೆಗೆ ಸಾಗಿದ ಶರಣ ಸಿದ್ಧರಾಮೇಶ್ವರರು 68ಸಾವಿರಕ್ಕೂ ಅಧಿಕ ವಚನ ರೂಪಕ ಬರೆದು ಕಾಯಕ ಜೀವನದಲ್ಲಿ ತೊಡಗಿಸಿಕೊಂಡವರು. ಮುಂಬರುವ ದಿನದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಿದ್ಧರಾಮೇಶ್ವರ ವಚನ ಅಧ್ಯಯನ ಪೀಠ ಸ್ಥಾಪಿಸಿ, ನಾಡಿಗೆ ಪರಿಚಯಿಸುವ ಚಿಂತನೆಯಿದೆ ಎಂದರು.

ಶಾಸಕ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆವಹಿಸಿ ಮಾತನಾಡಿ, ಶರಣರ ಬೋಧನೆಯನ್ನು ಕಾರ್ಯಸಿದ್ಧಿ ಮಾಡಿದ ಬಸವಾದಿ ಶರಣ ಶ್ರೇಷ್ಠ ವಚನಕಾರರಲ್ಲಿ ಸಿದ್ಧರಾಮೇಶ್ವರರು ಪ್ರಥಮರು. ಶ್ರೀಶೈಲ ಮಲ್ಲಿಕಾರ್ಜುನನ ವರಪುತ್ರರಾಗಿ ಸಮಾಜದ ತುಳಿತ, ಅವಮಾನಕ್ಕೆ ಒಳಗಾದವರ ಪರ ನಿಂತು ವಚನ ಸಾಹಿತ್ಯ ಶ್ರೀಮಂತಗೊಳಿಸಿದರು. ಅಂದಿನ ಕಾಲದಲ್ಲಿಯೇ ಲಿಂಗಭೇದ, ತಾರತಮ್ಯ ತಿರಸ್ಕರಿಸಿ ಸಮಾನತೆ ಪ್ರತಿಪಾದಿಸಿದ ಅವರು, ಕಾಯಕದ ಮೂಲಕ ದೇವರನ್ನು ಕಾಣಲು ಬೋಧನೆ ಮಾಡಿದರು. ಸಮಾಜದ ಜನರು ಶೈಕ್ಷಣಿಕವಾಗಿ, ಅರ್ಥಿಕವಾಗಿ ಸದೃಢರಾಗಬೇಕು. ಈ ಮೂಲಕ ಜ್ಞಾನ ಹಾಗೂ ವಿಜ್ಞಾನದ ಜೊತೆಗೆ ಸಮುದಾಯ ಸಾಗಬೇಕಿದೆ ಎಂದು ಹೇಳಿದರು.

ಪ್ರಾಧ್ಯಾಪಕ ಡಾ| ಎಂ.ಎಚ್. ಹೊಳಿಯಣ್ಣವರ ಉಪನ್ಯಾಸ ನೀಡಿದರು. ತಾಲೂಕು ಭೋವಿ ಸಮಾಜದ ಅಧ್ಯಕ್ಷ ಅರ್ಜುನ ಹಂಚಿನಮನಿ. ಉಪನ್ಯಾಸಕ ಎಚ್.ಡಿ. ದೇವಿಹೊಸೂರು, ನ್ಯಾಯವಾದಿ ಹನುಮಂತಪ್ಪ ಬಂಡಿವಡ್ಡರ, ಎಪಿಎಂಸಿ ಅಧ್ಯಕ್ಷೆ ಪ್ರೇಮಾ ಪಾಟೀಲ, ಪುರಸಭೆ ಅಧ್ಯಕ್ಷ ಶಿವಪ್ರಸಾದ ಸುರಗೀಮಠ ಹಾಗೂ ಸದಸ್ಯರು ವೇದಿಕೆಯಲ್ಲಿದ್ದರು. ಕಂದಾಯ ಪುರಸಭೆ. ಶಿಕ್ಷಣ ಇಲಾಖೆ ಶಿಶು ಅಭಿವೃದ್ಧಿ ವಿವಿಧ ಅಕಾರಿಗಳು ಮತ್ತು ಸಮಾಜದ ಗಣ್ಯರು ಹಿರಿಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.