‘ಕರ್ನಾಟಕ-1’ ಸೇವೆಗೆ ಜನಸ್ಪಂದನೆ


Team Udayavani, Feb 11, 2019, 10:05 AM IST

11-february-18.jpg

ಹಾವೇರಿ: ಒಂದೇ ಸೂರಿನಡಿ ಹಲವು ಸೇವೆ ನೀಡುವ ‘ಕರ್ನಾಟಕ-1’ ಸೇವಾ ಕೇಂದ್ರ ನಗರದ ಗುರುಭವನ ಬಳಿಯ ನಗರಸಭೆ ವಾಣಿಜ್ಯ ಮಳಿಗೆಯಲ್ಲಿ ಕಾರ್ಯಾರಂಭಗೊಂಡಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಗಣರಾಜ್ಯೋತ್ಸವ ದಿನದಂದು ಆರಂಭಗೊಂಡ ಈ ಕೇಂದ್ರದಲ್ಲಿ ಪ್ರಸ್ತುತ 15 ಇಲಾಖೆಗಳ 48 ಸೇವೆ ಒದಗಿಸಲಾಗುತ್ತಿದೆ. ಹಂತ ಹಂತವಾಗಿ ಸೇವಾ ಕ್ಷೇತ್ರ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ. ಸೇವಾ ಕೇಂದ್ರವು ರಾಷ್ಟ್ರೀಯ ಹಬ್ಬಗಳ ರಜಾ ದಿನ ಹೊರತುಪಡಿಸಿ ರವಿವಾರ ಸೇರಿದಂತೆ ಪ್ರತಿದಿನ ಬೆಳಗ್ಗೆ 8ರಿಂದ ಸಂಜೆ 7 ಗಂಟೆಯವರೆಗೆ ಕಾರ್ಯ ನಿರ್ವಹಿಸಲಿದೆ.

ಕರ್ನಾಟಕ ಸರ್ಕಾರ ಹಾಗೂ ನಿರ್ವಾಹಣಾ ಪಾಲುದಾರರು, ಬ್ಯಾಂಕಿಂಗ್‌ ಪಾಲುದಾರರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಗರಸಭೆ ಸಹಭಾಗಿತ್ವದಲ್ಲಿ ಜನರಿಗೆ ಈ ಸೇವೆ ನೀಡಲಾಗುತ್ತಿದೆ.

ಸಿಗುವ ಸೇವೆಗಳು: ವಿದ್ಯುತ್‌ ಸರಬರಾಜು ಕಂಪನಿ ವಿದ್ಯುತ್‌ ಬಿಲ್ಲುಗಳ ಪಾವತಿ, ಹೆಚ್ಚುವರಿ ಭದ್ರತಾ ಠೇವಣಿ ಪಾವತಿ, ಬಿಎಸ್‌ಎನ್‌ಎಲ್‌ ಲ್ಯಾಂಡ್‌ಲೈನ್‌ ಬಿಲ್‌ ಪಾವತಿ, ಸೆಲ್‌ಒನ್‌ ಮೊಬೈಲ್‌ ಬಿಲ್‌ ಪಾವತಿ, ಪೊಲೀಸ್‌ ಇಲಾಖೆಯ ಪೊಲೀಸ್‌ ವೆರಿಫಿಕೇಷನ್‌, ಕ್ಲಿಯರೆನ್ಸ್‌, ಪ್ರಮಾಣ ಪತ್ರಕ್ಕಾಗಿ ಶುಲ್ಕ ಪಾವತಿ, ಧ್ವನಿವರ್ಧಕ ವ್ಯವಸ್ಥೆ ಅಳವಡಿಸಲು ಶುಲ್ಕ ಪಾವತಿ, ವಾಹನಗಳ ವಿಚರಣಾ ವರದಿಗಾಗಿ ಶುಲ್ಕ ಪಾವತಿ, ಪಿಯುಸಿ ಉತ್ತರ ಪತ್ರಿಕೆ ಫೋಟೋಕಾಪಿಗಾಗಿ ಅರ್ಜಿ, ಮರು ಎಣಿಕೆಗಾಗಿ ಅರ್ಜಿ, ಮರು ಮೌಲ್ಯ ಮಾಪನಕ್ಕಾಗಿ ಅರ್ಜಿ, ಪಿಯುಸಿ ಫಲಿತಾಂಶ, ಬೆಂಗಳೂರು ವಿಶ್ವವಿದ್ಯಾಲಯದ ಕರೆಸ್ಪಾಂಡೆನ್ಸ್‌ ಕೋರ್ಸ್‌ಗಳಿಗಾಗಿ ಅರ್ಜಿ ಶುಲ್ಕ ಪಾವತಿ, ಕರೆಸ್ಪಾಂಡೆನ್ಸ್‌ ಕೋರ್ಸ್‌ಗಳಿಗಾಗಿ ಅರ್ಜಿ ವಿತರಣೆ.

ಪಾಸ್‌ ಪೋರ್ಟ್‌ ಇಲಾಖೆ ಪಾಸ್‌ಪೋರ್ಟ್‌ಗಾಗಿ ಆನ್‌ಲೈನ್‌ ಅರ್ಜಿ ಸಲ್ಲಿಕೆ(ವಾಕ್‌ಇನ್‌ ಅರ್ಜಿದಾರರಿಗೆ) ಮಾತ್ರ, ಪೊಲೀಸ್‌ ಕ್ಲಿಯರೆನ್ಸ್‌ ಪ್ರಮಾಣ ಪತ್ರಕ್ಕಾಗಿ ಆನ್‌ಲೈನ್‌ ಅರ್ಜಿ ಸಲ್ಲಿಕೆ, ಸಾರಿಗೆ ಇಲಾಖೆ ಆರ್‌ಸಿ ಎಕ್ಸ್‌ಟ್ರಾಕ್ಟ್ ವಿತರಣೆ, ಡಿಎಲ್‌ ಎಕ್ಸ್‌ಟ್ರಾಕ್ಟ್ ವಿತರಣೆ, ಆಧಾರ ಕುರಿತು ಇ-ಆಧಾರ್‌ ಮುದ್ರಿಸುವುದು, ಆಧಾರ್‌ ನೋಂದಣಿ, ಆಧಾರ್‌ನಲ್ಲಿರುವ ವಿವರಗಳ ಬದಲಾವಣೆಗಾಗಿ ಅರ್ಜಿ ಸಲ್ಲಿಕೆ, ಸರ್ಕಾರದ ವಿವಿಧ ಇಲಾಖೆಗಳ ಅರ್ಜಿ ಮುದ್ರಿಸುವುದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪಡಿತರ ಚೀಟಿಗಾಗಿ ಅರ್ಜಿ, ಪಡಿತರ ಚೀಟಿಯೊಂದಿಗೆ ಆಧಾರ್‌ ಮತ್ತು ಮತದಾರರ ಚೀಟಿ ವಿವರ ಜೋಡಿಸಲು ಅರ್ಜಿ, ಪಡಿತರ ಚೀಟಿಯಲ್ಲಿ ಕುಟುಂಬದ ಸದಸ್ಯರ ವಿವರ ಸೇರಿಸಲು ಅರ್ಜಿ, ಪಡಿತರ ಆದ್ಯತೆ ಪಟ್ಟಿಯಿಂದ ಕೈವಿಡಲು ನೋಂದಣಿ, ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ನಕಲು ಪ್ರತಿಗಾಗಿ ಅರ್ಜಿ, ಮರು ಎಣಿಕೆಗಾಗಿ ಅರ್ಜಿ, ಮರುಮೌಲ್ಯಪಾನಕ್ಕಾಗಿ ಅರ್ಜಿ.

ಹೊಸಬೆಳಕು ಯೋಜನೆಯಡಿ ಎಲ್‌ಇಡಿ ಬಲ್ಬ್ಗಳ ಮಾರಾಟ, ಕಂದಾಯ ಇಲಾಖೆಯ ಜನಸಂಖ್ಯೆ ಪ್ರಮಾಣಪತ್ರ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣಪತ್ರ(ಪ್ರವರ್ಗ-ಎ), ಜಾತಿ ಪ್ರಮಾಣಪತ್ರ(ಎಸ್ಸಿ/ಎಸ್ಟಿ), ಓಬಿಸಿ ಪ್ರಮಾಣಪತ್ರ(ಕೇಂದ್ರದ), ವಸತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಗೇಣಿರಹಿತ ಪ್ರಮಾಣಪತ್ರ, ವಿಧವಾ ಪ್ರಮಾಣಪತ್ರ, ಜೀವಂತ ಪ್ರಮಾಣಪತ್ರ, ಕೃಷಿ ಕುಟುಂಬ ಸದಸ್ಯ ಪ್ರಮಾಣಪತ್ರ, ಮರುವಿವಾಹ ರಾಹಿತ್ಯ ಪ್ರಮಾಣಪತ್ರ, ಭೂಮಿ ರಾಹಿತ್ಯ ಪ್ರಮಾಣಪತ್ರ, ಬದುಕಿರುವ ಕುಟುಂಬ ಸದಸ್ಯ ಪ್ರಮಾಣಪತ್ರ, ನಿರುದ್ಯೋಗ ಪ್ರಮಾಣಪತ್ರ, ಸರಕಾರಿ ಹುದ್ದೆಯಲ್ಲಿರದ್ದಕ್ಕೆ ಪ್ರಮಾಣಪತ್ರ, ಸಣ್ಣ, ಅತಿಸಣ್ಣ ಕೃಷಿಕರ ಪ್ರಮಾಣಪತ್ರ, ಕೃಷಿ ಕಾರ್ಮಿಕ ಪ್ರಮಾಣಪತ್ರ ಸೇರಿದಂತೆ ವಿವಿಧ 15 ಇಲಾಖೆ 48 ಸೇವೆಗಳು ಈ ಕರ್ನಾಟಕ್‌ ಓನ್‌ ಸೇವಾ ಕೇಂದ್ರದಿಂದ ಪಡೆಯಬಹುದಾಗಿದೆ.

ಒಟ್ಟಾರೆ ‘ಕರ್ನಾಟಕ-1’ ಸೇವಾ ಕೇಂದ್ರ ಸ್ಥಾಪನೆಯಿಂದ ವಿವಿಧ ಸೇವೆಗಳನ್ನು ಒಂದೇ ಕಡೆ ಪಡೆಯಲು ಸಾರ್ವಜನಿಕರಿಗೆ ಅನುಕೂಲವಾಗಿದ್ದು ರವಿವಾರವೂ ಕಾರ್ಯನಿರ್ವಹಿಸುತ್ತಿರುವುದರಿಂದ ಹೆಚ್ಚು ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ.

ಒಂದೇ ಸೂರಿನಡಿ ವಿವಿಧ ಇಲಾಖೆಗಳ ಸೇವೆ ಕಲ್ಪಿಸಲಾಗಿದ್ದು, ನಗರದ ಸಾರ್ವಜನಿಕರಿಗೆ ಇದು ಹೆಚ್ಚು ಸಹಕಾರಿಯಾಗಿದೆ. ಸಾರ್ವಜನಿಕರು ಈ ಕೇಂದ್ರ ಉಪಯೋಗ ಪಡೆದುಕೊಳ್ಳಬೇಕು.
 •ಡಾ.ಎಂ.ವಿ. ವೆಂಕಟೇಶ, ಜಿಲ್ಲಾಧಿಕಾರಿ 

ಸರ್ಕಾರಿ ಇಲಾಖೆಗಳ ಸೇವೆ ಪಡೆಯಲು ನಗರದ ವಿವಿಧ ಇಲಾಖೆಗಳ ಕಚೇರಿಗೆ ಅಲೆದಾಡಬೇಕಾಗಿತ್ತು. ‘ಕರ್ನಾಟಕ-1’ ಸೇವಾ ಕೇಂದ್ರ ನಗರದಲ್ಲಿ ಸ್ಥಾಪಿಸಿರುವುದರಿಂದ ಸಮಯ ಉಳಿತಾಯವಾಗಿ ಸೇವೆ ಸುಲಭವಾಗಿ ದೊರೆಯಲು ಅನುಕೂಲವಾಗಿದೆ.
•ಮಂಜಪ್ಪ ಮಠದ, ನಾಗರಿಕ

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.