ಬ್ಯಾಡಗಿ ಬಂದ್‌ ಸರ್ಕಾರಕ್ಕೆ ಎಚ್ಚರಿಕೆ ಗಂಟೆ: ಗಂಗಣ್ಣ ಎಲಿ


Team Udayavani, Feb 18, 2019, 9:47 AM IST

18-february-17.jpg

ಬ್ಯಾಡಗಿ: ಫೆ. 18ರಂದು ರೈತ ಸಂಘ ಕರೆದ ‘ಬ್ಯಾಡಗಿ ಬಂದ್‌’ಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಸುಮಾರು 20 ಸಾವಿರಕ್ಕೂ ಹೆಚ್ಚು ಜನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮುಖಂಡ ಗಂಗಣ್ಣ ಎಲಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಲ ನಕ್ಷೆಯಂತೆ ಆಣೂರ ಕೆರೆಗೆ ನೀರು ತುಂಬಿಸುವ ಯೋಜನೆ ಜಾರಿಗೊಳಿಸದಿದ್ದರೇ ರೈತರ ಪ್ರತಿರೋಧ ಎದುರಿಸಬೇಕಾಗುತ್ತದೆ. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪುಟ್ಟಣ್ಣಯ್ಯ ಬಣ) ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳು ಉತ್ತಮ ಸ್ಪಂದನೆ ನೀಡಿದ್ದಾರೆ ಎಂದರು.

‘ ಜೀವ ಬಿಟ್ಟೇವು ಜೀವಜಲ ಬಿಡಲ್ಲ’ ಎಂಬ ಘೋಷ ವಾಕ್ಯದೊಂದಿಗೆ ಎಸ್‌ ಜೆಜೆಎಂ ತಾಲೂಕು ಕ್ರೀಡಾಂಗಣದಿಂದ ಹೊರಡಲಿರುವ ಬೃಹತ್‌ ಪ್ರತಿಭಟನಾ ಮೆರವಣಿಗೆ, ಎಪಿಎಂಸಿ ಯಾರ್ಡ್‌, ಹಳೇ ಪುರಸಭೆ ಮುಖ್ಯರಸ್ತೆ, ಸ್ಟೇಶನ್‌
ರಸ್ತೆಗಳಲ್ಲಿ ಸಂಚರಿಸಿ ತಹಶೀಲ್ದಾರ್‌ ಕಚೇರಿ ತಲುಪಲಿದೆ. ಮೆರವಣಿಗೆಯಲ್ಲಿ ಹಲಗಿ, ಡೊಳ್ಳು ಕುಣಿತ, ಜಾಂಝ್ಮೇ ಳ ಹೆಜ್ಜೆ ಹಾಕಲಿದ್ದು, ನೂರಾರು ಟ್ರ್ಯಾಕ್ಟರ್‌ಗಳ ಮೆರವಣಿಗೆ ಕೂಡ ನಡೆಯಲಿದೆ ಎಂದರು.

ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ರೈತರ ಹೋರಾಟ ಬೆಂಬಲಿಸಿ ಜಿಲ್ಲೆಯಲ್ಲಿರುವ ಎಲ್ಲ
ಮಠಾಧಿಧೀಶರು ಸೇರಿದಂತೆ ಸಂಘ ಸಂಸ್ಥೆಗಳು, ರಾಜಕೀಯ ನಾಯಕರು, ಸಾರ್ವಜನಿಕರು ಪಕ್ಷಾತೀತವಾಗಿ ಬೆಂಬಲ ವ್ಯಕ್ತಪಡಿಸಿದ್ದು, ಹೋರಾಟ ಯಶಸ್ವಿಯತ್ತ ಸಾಗುತ್ತಿದೆ. ಮತ ಪಡೆದ ಬಳಿಕ ಅವರನ್ನೇ ಮರೆಯುವಂತಹ
ರಾಜಕಾರಣಿಗಳ ಹೊಣೆಗೇಡಿತನಕ್ಕೆ ನಾಳೆ ತಕ್ಕ ಉತ್ತರ ನೀಡಲಿದ್ದೇವೆ. ನೀರಿನ ಭವಣೆ ತಪ್ಪಿಸುವಂತೆ ಸರ್ಕಾರಗಳೆದುರು ಅಂಗಲಾಚುವಂತಹ ಸ್ಥಿತಿ ಬದಲಾಯಿಸಲು ನಿರ್ಧರಿಸಲಾಗಿದ್ದು, ಪ್ರಜಾಪ್ರಭುತ್ವಕ್ಕೆ ಹೊಸದೊಂದು ಭಾಷ್ಯ ಬರೆಯಲಿದೆ ಎಂದರು.

ಕಿರಣ ಗಡಿಗೋಳ ಮಾತನಾಡಿ, ಆಣೂರ ಕೆರೆ ತುಂಬಿಸಿದಲ್ಲಿ ತಾಲೂಕಿನ ಶೇ. 99ರಷ್ಟು ನೀರಿನ ಸಮಸ್ಯೆ ತಪ್ಪಲಿದೆ. ಈ ಕುರಿತು ಹಲವು ಬಾರಿ ಉಸ್ತುವಾರಿ ಸಚಿವರು, ಮಾಜಿ ಹಾಗೂ ಹಾಲಿ ಶಾಸಕರಿಗೆ ಯೋಜನೆಯ ಅನುಷ್ಠಾನಕ್ಕೆ ಮತ್ತು ಯೋಜನಾ ವೆಚ್ಚವನ್ನು ಬಜೆಟ್‌ನಲ್ಲಿ ಪ್ರಕಟಿಸುವಂತೆ ಮನವಿ ಸಲ್ಲಿಸಿದಾಗ್ಯೂ ಕೇವಲ ಕಾಗದಕ್ಕಷ್ಟೆ ಸೀಮಿತ ಮಾಡಲಾಗಿದೆ. ಜನಪ್ರತಿನಿಧಿಗಳಿಗೆ ಹೋರಾಟದ ಮೂಲಕ ಎಚ್ಚರಿಕೆ ಸಂದೇಶ ನೀಡಲಿದ್ದೇವೆ ಮತ್ತು ಯೋಜನೆ ಅನುಷ್ಠಾನಕ್ಕೆ ಬರುವವರೆಗೂ ನಿರಂತರವಾಗಿ ಪಕ್ಷಾತೀತವಾಗಿ ಸಾರ್ವಜನಿಕರೆಲ್ಲರೂ ಹೋರಾಡಲಿದ್ದೇವೆ
ಎಂದು ತಿಳಿಸಿದರು.

ಮೌನೇಶ ಕಮ್ಮಾರ ಮಾತನಾಡಿ, ಫೆ. 6ರಿಂದ 9ರ ವರೆಗೆ ಅಹೋರಾತ್ರಿ ಹೋರಾಟ ಮಾಡಿದ್ದೇವೆ. ಆದರೆ, ನಮ್ಮ ಹೋರಾಟಕ್ಕೆ ಸರ್ಕಾರ ಸೂಕ್ತ ಸ್ಪಂದನೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಬ್ಯಾಡಗಿ ಬಂದ್‌ಗೆ ಕರೆ ನೀಡಲಾಗಿದ್ದು, ವರ್ತಕರ ಸಂಘ, ನ್ಯಾಯವಾದಿಗಳ ಸಂಘ, ರಸ್ತೆ ಅಗಲೀರಣ ಸಮಿತಿ, ಎಪಿಎಂಸಿ, ಪುರಸಭೆ, ಭಜರಂಗದಳ, ಅಂಗವಿಕಲರ ಸಂಘ, ಗುಲಾಮೆ ಮುಸ್ತಫಾ ಸಮಿತಿ, ಅಂಜುಮನ್‌ ಸಮಿತಿ ಸೇರಿದಂತೆ ಪಕ್ಷಾತೀತವಾಗಿ ಎಲ್ಲ ಪಕ್ಷದ ಮುಖಂಡರು ಬೆಂಬಲ ನೀಡಿದ್ದಾರೆ ಎಂದರು.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.