ಬರಗಾಲ ಎದುರಿಸಲು ಸಿದ್ಧತೆ ನಡೆಸಿ


Team Udayavani, Feb 24, 2019, 10:16 AM IST

24-february-16.jpg

ಸವಣೂರು: ಕೆಲ ದಿನಗಳಲ್ಲಿ ಬೇಸಿಗೆ ಪ್ರಾರಂಭವಾಗಲಿದ್ದು ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯ. ಹೀಗಾಗಿ ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಜಿಪಂ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ ಖಡಕಕ್ಕಾಗಿ ಅಧಿಕಾರಿಗಳಿಗೆ ಸೂಚಿಸಿದರು. 

ಸವಣೂರು ತಾಲೂಕು ಪಂಚಾಯತ್‌ ಕಾರ್ಯಾಲಯದ ಸಭಾಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ, ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ಬರಗಾಲನ್ನು ಸಮರ್ಪಕವಾಗಿ ಎದುರಿಸುವ ನಿಟ್ಟಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಅನುದಾನದ ಕೊರತೆಯಿಲ್ಲ. ಕುಡಿಯುವ ನೀರಿನ ಸಮಸ್ಯೆ ಇರುವ ಪ್ರತಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗ್ರಾಮಗಳಲ್ಲಿ ಕೊಳವೆ ಬಾವಿಗಳನ್ನು ಆಳಗೊಳಿಸುವುದು ಮತ್ತು ಕೊಳವೆ ಬಾವಿಗಳನ್ನು ಕೊರೆಯಿಸಿ ಕಾರ್ಯ ಕೈಗೊಳ್ಳುವ ಮೂಲಕ ಎಲ್ಲ ರೀತಿಯಿಂದ ಬರಗಾಲ ಸಮರ್ಪಕವಾಗಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದರು.

ಬೇಸಿಗೆ ಸಂದರ್ಭದಲ್ಲಿ ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಸಾರ್ವಜನಿಕ ನೀರಿನ ಟ್ಯಾಂಕ್‌, ಕೊಳವೆ ಬಾವಿ ನೀರು ಹರಿದು ಪೋಲಾಗದಂತೆ ಕ್ರಮವಹಿಸಬೇಕು. ಒಂದು ವೇಳೆ ಗ್ರಾಪಂ ಸಿಬ್ಬಂದಿ ಬೇಜವಾಬ್ದಾರಿ ತೋರಿದಲ್ಲಿ ಅಂತವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ತೊಟ್ಟಿಗಳ ವ್ಯವಸ್ಥೆ ಮಾಡುವಂತೆ ಅಧ್ಯಕ್ಷರು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆದೇಶಿಸಿದರು.

ತಾಲೂಕಿನ ಪ್ರತಿ ಗ್ರಾಮ ಪಂಚಾಯತ್‌ನಲ್ಲಿ ಎಂಜಿಎನ್‌ ಆರ್‌ಇಜಿಎ ಯೋಜನೆಯಡಿ ಶಾಲಾ ಕಂಪೌಂಡ್‌, ಕೆರೆಗಳ ನಿರ್ಮಾಣ, ರೈತರ ಖಣ, ಚೆಕ್‌ ಡ್ಯಾಂ ಸೇರಿದಂತೆ ಇತರೆ ಕಾಮಗಾರಿಗಳನ್ನು ತೆಗೆದುಕೊಳ್ಳಲು ಅವಕಾಶವಿದ್ದು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಇರುವ ಈ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಗ್ರಾಪಂಗೆ ನೀಡಿರುವ ಅಭಿವೃದ್ಧಿ ಗುರಿ ಸಾಧಿಸಬೇಕು ಎಂದರು.

ಯಾವುದೇ ಕಾರಣಕ್ಕೂ ಅಭಿವೃದ್ಧಿಗಾಗಿ ಬಂದಿರುವ ಅನುದಾನ ಸಮರ್ಪಕವಾಗಿ ಬಳಕೆ ಮಾಡುವ ಮೂಲಕ ಆಯಾ ಇಲಾಖೆಗಳಿಗೆ ಇರುವ ಗುರಿ ಸಾಧಿಸುವುದು ಅಧಿಕಾರಿಗಳ ಜವಾಬ್ದಾರಿ. ಒಂದು ವೇಳೆ ಸರ್ಕಾರದ ಅನುದಾನ ನಷ್ಟವಾದರೆ ಅದಕ್ಕೆ ಇಲಾಖೆಗಳ ಅಧಿಕಾರಿಗಳೇ ಹೊಣೆಗಾರರು ಎಂದು ಎಚ್ಚರಿಸಿದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ ಕಿವಟೆ ಇಲಾಖೆ ಪ್ರಗತಿ ವಿವರಿಸುತ್ತಿದ್ದಂತೆ ತಾಪಂ ಅಧ್ಯಕ್ಷ ತಿಪ್ಪಣ್ಣ ಸುಬ್ಬಣ್ಣನವರ ಮಧ್ಯ ಪ್ರವೇಶಿಸಿ, ಈ ಅಧಿಕಾರಿಗೆ ಏನು ಮಾಹಿತಿಯೇ ಇರುವುದಿಲ್ಲ. ಪ್ರತಿ ಸಭೆಯಲ್ಲಿ ಎಸ್‌ಸಿ, ಎಸ್‌ಟಿ ಫಲಾನುಭವಿಗಳ ಮಾಹಿತಿ ಕೇಳಿದರೂ ಏನು ಗೊತ್ತಿಲ್ಲ. ಆಮೇಲೆ ಕೊಡುತ್ತೇನೆ ಎಂದು ಹೇಳುತ್ತಾರೆ. ಇಲಾಖೆ ಜಿಲ್ಲಾ ಅಧಿಕಾರಿಗಳು ಹೇಳಿದರೂ ಮಾಹಿತಿ ನೀಡಿಲ್ಲ. ಇಂತಹ ಅ ಧಿಕಾರಿ ನಮಗೆ ಬೇಡ; ಬೇರೆ ಕಡೆ ಹಾಕಿಸಿ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಜಯಶೀಲಾ ರೊಟ್ಟಿಗವಾಡ ಧ್ವನಿಗೂಡಿಸಿ ಈ ಅಧಿಕಾರಿ ಯಾವುದೇ ಗ್ರಾಮಸಭೆಗಳಿಗೆ ಬರುವುದಿಲ್ಲ. ಸರ್ಕಾರದ ಯೋಜನೆಗಳ ಮಾಹಿತಿಗಳು ರೈತರಿಗೆ ಗೊತ್ತಾಗುತ್ತಿಲ್ಲ ಎಂದು ದೂರಿದರು.

ತಾಪಂ ಅಧ್ಯಕ್ಷರನ್ನು ಸಮಾಧಾನ ಪಡಿಸಿದ ಜಿಪಂ ಅಧ್ಯಕ್ಷರು, ‘ಯಾಕಪ್ಪ, ಸರ್ಕಾರದ ಯೋಜನೆಗಳ ಮತ್ತು ಫಲಾನುಭವಿಗಳ ಮಾಹಿತಿ ನೀಡಲಿಕ್ಕೆ ಏನು ತೊಂದರೆ’ ಎಂದು ತರಾಟೆ ತೆಗೆದುಕೊಂಡರು. ತಾಪಂ ಅಧ್ಯಕ್ಷರಿಗೇ ಮಾಹಿತಿ ನೀಡುತ್ತಿಲ್ಲವೆಂದರೆ ಇನ್ನು ಸಾಮಾನ್ಯ ಜನರಿಗೆ ಏನು ಮಾಹಿತಿ ನೀಡುವಿರಿ ಎಂದು ಪ್ರಶ್ನಿಸಿದರು. ಅಧ್ಯಕ್ಷರು, ಸದಸ್ಯರಿಗೆ ಸರ್ಕಾರದ ಅನುದಾನ ಮತ್ತು ಫಲಾನುಭವಿಗಳ ಮಾಹಿತಿ ನೀಡುವಂತೆ ಮತ್ತು ಎಂಜಿಎನ್‌ಆರ್‌ಇಜಿಎ ಯೋಜನೆಯಡಿ ಚೆಕ್‌ ಡ್ಯಾಂಗಳನ್ನು ಕಡ್ಡಾಯವಾಗಿ ನಿರ್ಮಿಸಲು ಸೂಚಿಸಿದರು.

ಶಿಕ್ಷಣ ಇಲಾಖೆಯ ಶಾಲಾ ಕೊಠಡಿಗಳ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳು ಸರಿಯಾಗಿ ಆಗುತ್ತಿರುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲಿಸಬೇಕು ಎಂದು ಹೇಳಿದರು. ಜಿಪಂ ಮುಖ್ಯ ಲೆಕ್ಕಾಧಿಕಾರಿ ಜಾಫರ್‌ಷರೀಫ್‌ ಸುತಾರ ದುರಸ್ತಿ ಹಂತದಲ್ಲಿರುವ ಶಾಲಾ ಕೊಠಡಿಗಳ ಮಾಹಿತಿ ನೀಡುವ ಜೊತೆಗೆ ತಾಲೂಕಿನ ಗ್ರಾಪಂ ವ್ಯಾಪ್ತಿಯ ಶಾಲೆಗಳಲ್ಲಿ ಅವಶ್ಯವಿರುವ ಶೌಚಾಲಯಗಳ ನಿರ್ಮಾಣಕ್ಕೆ ಪ್ರಾಸ್ತಾವನೆ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ರೇಷ್ಮೆ ಇಲಾಖೆ ಅಧಿಕಾರಿ ನವಲಗುಂದ ಅವರು ಇಲಾಖೆ ಪ್ರಗತಿ ಮಾಹಿತಿ ನೀಡುತ್ತಿದ್ದಂತೆ ಜಿಪಂ ಸದಸ್ಯ ರಮೇಶ ದುಗ್ಗತ್ತಿ ಮಧ್ಯ ಪ್ರವೇಶಿಸಿ, ಏನ್ರಿ ನೀವು ಕೈ ಬರಹದ ಮಾಹಿತಿ ನೀಡುತ್ತಿದ್ದೀರಿ, ನಿಮ್ಮಲ್ಲಿ ಕಂಪ್ಯೂಟರ್‌ ವ್ಯವಸ್ಥೆ ಇಲ್ಲವೇ? ಎಂದು ಅ ಧಿಕಾರಿಯನ್ನು ತರಾಟೆ ತೆಗೆದುಕೊಂಡರು. ಅದಕ್ಕೆ ಉತ್ತರಿಸಿದ ಅಧಿಕಾರಿ ಸರ್‌, ಇಲಾಖೆಯಲ್ಲಿ ಕಂಪ್ಯೂಟರ್‌ ವ್ಯವಸ್ಥೆ ಇಲ್ಲ ಎಂದು ಉತ್ತರಿಸಿದರು. ಇದಕ್ಕೆ ಆಕ್ರೋಶಗೊಂಡ ಸದಸ್ಯ, ತಾಪಂ ಇಲಾಖೆಯಲ್ಲಿ ಕುಳಿತು ಕಂಪ್ಯೂಟರ್‌ ಮಾಹಿತಿ ತಯಾರಿಸಲೂ ಆಗುವುದಿಲ್ಲವೇ ಎಂದು ಗರಂ ಆದರು. ಜಿಪಂ ಮುಖ್ಯ ಲೆಕ್ಕಾಧಿಕಾರಿ ಜಾಫರ್‌ಷರೀಫ್‌ ಸುತಾರಿ ಮಧ್ಯ ಪ್ರವೇಶಿಸಿ ನಿಮ್ಮ ಇಲಾಖೆಯಲ್ಲಿ ಸಿಬ್ಬಂದಿಗಳ ಸಂಬಳವನ್ನೂ ಕೈ ಬರಹದ ಮೂಲಕವೇ ಮಾಡುತ್ತೀರಾ ಎಂದು ತರಾಟೆ ತೆಗೆದುಕೊಂಡು, ನಂತರ ನರೇಗಾ ಅನುದಾನದಲ್ಲಿ ಕಂಪ್ಯೂಟರ್‌ ನೀಡಲು ಅವಕಾಶವಿದೆ. ಆ ಕುರಿತು ಇಲಾಖೆಗೆ ಪ್ರಸ್ತಾವನೆ ಕಳುಹಿಸಿಕೊಡಿ ಎಂದು ಸೂಚನೆ ನೀಡಿದರು.

ವಿವಿಧ ಇಲಾಖೆ ಅಧಿಕಾರಿಗಳು ಸಭೆಗೆ ವರದಿ ಸಲ್ಲಿಸಿದರು. ತಾಪಂ ಇಒ ಎಸ್‌ಎಂಡಿ ಇಸ್ಮಾಯಿಲ್‌, ಇಡಿ ಸದಾನಂದ ಅಮರಾಪೂರ, ಜಿಪಂ ಸದಸ್ಯೆ ನೀಲವ್ವ ಚವ್ಹಾಣ ಇದ್ದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.