ಕೊಟ್ಟೂರು ಜಾತ್ರೆಗೆ ಭಕ್ತರ ದಂಡು


Team Udayavani, Feb 27, 2019, 10:46 AM IST

27-february-13.jpg

ಕೊಟ್ಟೂರು: ಇಲ್ಲಿನ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವಕ್ಕೆ ವಿವಿಧ ಕಡೆಯಿಂದ ಸಾವಿರಾರು ಭಕ್ತಾದಿ ಗಳು ಪಾದಯಾತ್ರೆ ಮೂಲಕ ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ. ಪಾದಯಾತ್ರೆ ಮೂಲಕ ಬಂದ ಭಕ್ತಾದಿಗಳಿಗೆ ಇಲ್ಲಿನ ಸಂಘ-ಸಂಸ್ಥೆ ಮತ್ತು ಜನರು ತಮ್ಮ ಕೈಲಾದ ಮಟ್ಟಿಗೆ ಉಪಾಹಾರ, ಊಟ ಸೇರಿದಂತೆ ಮೂಲ ಸೌಲಭ್ಯ ಒದಗಿಸುತ್ತಿದ್ದಾರೆ.

ಫೆ.28ರಂದು ಜರುಗುವ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಳ್ಳಲು ದಾವಣಗೆರೆಯಿಂದ ಒಂದೂವರೆ ಲಕ್ಷಕ್ಕೂ ಅಧಿಕ ಭಕ್ತರು ಪಾದಯಾತ್ರೆ ಮೂಲಕ ಮಂಗಳವಾರವೇ ಆಗಮಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದರು. ಪ್ರತಿ ವರ್ಷ ಸ್ವಾಮಿಯ ರಥೋತ್ಸವಕ್ಕೆ ದಾವಣಗೆರೆಯಿಂದ ಪಾದಯಾತ್ರಿಗಳು ಅಧಿಕ ಸಂಖ್ಯೆಯಲ್ಲಿ ಬರುವುದು ವಾಡಿಕೆ. ಪ್ರಸಕ್ತ ವರ್ಷ ಈ ಸಂಖ್ಯೆ ಲಕ್ಷಕ್ಕೂ ಹೆಚ್ಚು ದಾಟಿದೆ.

ಬೆಂಗಳೂರು, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ಹುಬ್ಬಳ್ಳಿ, ಹಾಸನ, ಮುಂಡರಗಿ, ಗದಗ, ರಾಣಿಬೆನ್ನೂರು, ಹಾವೇರಿ, ಬ್ಯಾಡಗಿ, ಕೊಪ್ಪಳ, ಹೊಸಪೇಟೆ, ಹರಪನಹಳ್ಳಿ ಮತ್ತು ಹರಿಹರ ಸೇರಿದಂತೆ ವಿವಿಧೆಡೆಯಿಂದ ಬಂಡಿಯಲ್ಲಿ ಬಂದು ಕೊಟ್ಟೂರೇಶ್ವರನ ರಥೋತ್ಸವ ಕಣ್ತುಂಬಿಕೊಳ್ಳುವ ಭಕ್ತಾದಿಗಳು ಅಧಿ ಕ ಸಂಖ್ಯೆಯಲ್ಲಿದ್ದಾರೆ. ಪಾದಯಾತ್ರೆ ಮೂಲಕ ಆಗಮಿಸುವವರನ್ನು ಸ್ವಾಗತಿಸಲೆಂದು ಪಟ್ಟಣದ ವಿವಿಧ ವರ್ಗದ ಜನರು ಮತ್ತು ಸಂಘ-ಸಂಸ್ಥೆಗಳು ನಿಂತಿವೆ.

ಜಿಪಂ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ್‌ ತಮ್ಮ ತೋಟದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪಾದಯಾತ್ರಿಗಳಿಗೆ ಸ್ನಾನ, ಅಡುಗೆ, ವಿಶ್ರಾಂತಿಗೆ ವ್ಯವಸ್ಥೆ ಕಲ್ಪಿಸಿದ್ದಾರೆ. ಪಾದಯಾತ್ರಿಗಳಿಗೆ ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಪಾಯಸ, ಅನ್ನಸಾರು, ಕಾಫಿ, ಟೀ ಸೇವೆ ಗೈಯುತ್ತಿದ್ದಾರೆ. ಪಾದಯಾತ್ರಿಯಲ್ಲಿ ನಿತ್ರಾಣ ಆದವರು, ನೋವು ಅನುಭವಿಸುವವರ ಆರೈಕೆ ಮತ್ತು ಶ್ರೂಶುಷೆ ಮಾಡುವಲ್ಲಿ ಖರೀದಿ ಮತ್ತು ದಲ್ಲಾಲರ ಸಂಘದ ಅಧ್ಯಕ್ಷ ಪತ್ತಿಕೊಂಡ ಗಣೇಶ ದಂಪತಿ ನಿರತರಾಗಿದ್ದಾರೆ.

ಬಸವೇಶ್ವರ ಸ್ವಾಮಿಗೆ ಅರ್ಪಿಸಲು ರುದ್ರಾಕ್ಷಿ ಮಾಲೆ ಸಿದ್ಧ
ಪಟ್ಟಣದ ಹರಪನಹಳ್ಳಿ ರಸ್ತೆಯುದ್ದಕ್ಕೂ ಪಾದಯಾತ್ರಿಗಳಿಗೆ ಎಳೆನೀರು, ಶರಬತ್ತು, ಮಜ್ಜಿಗೆ, ತಂಪು ಪಾನೀಯ, ಕಲ್ಲು ಸಕ್ಕರೆ, ಐಸ್‌, ದ್ರಾಕ್ಷಿ, ಗೋಡಂಬಿ, ಹಾಲು, ಕಾಫಿ  ವಿತರಿಸಲು ಕೆಲವರು ಮುಂದಾಗಿದ್ದಾರೆ. ಹಾವೇರಿ ಜಿಲ್ಲೆ ಕೆಸರಳ್ಳಿ ಗ್ರಾಮದ ಮೂಳೆ ತಜ್ಞ ಕುಲಕರ್ಣಿ ಹಾಲಯ್ಯ ಸ್ವಾಮಿ, ಕೊಟ್ರಯ್ಯ ಸ್ವಾಮಿ ಸಹೋದರರು ಒಂದುವರೆ ಲಕ್ಷದ ರೂ. ಮೌಲ್ಯದ ರುದ್ರಾಕ್ಷಿ ಮಾಲೆಯನ್ನು ಶ್ರೀಗುರು ಕೊಟ್ಟೂರು ಬಸವೇಶ್ವರ ಸ್ವಾಮಿಗೆ ಸಮರ್ಪಿಸಲು ಸಿದ್ಧಗೊಳಿಸಿದ್ದಾರೆ. ಜಾತ್ರೆ ನಿಮಿತ್ತ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ಜನಜಂಗುಳಿ ಕಂಡು ಬರುತ್ತಿದೆ.

„ರವಿಕುಮಾರ ಎಂ

ಟಾಪ್ ನ್ಯೂಸ್

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.