ಕೂಲಿ ನೀಡಲು ಕಾರ್ಮಿಕರ ಒತ್ತಾಯ


Team Udayavani, Feb 28, 2019, 12:09 PM IST

28-february-21.jpg

ಹಾವೇರಿ: ಮಹತ್ಮಾಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರ್ಮಿಕರಿಗೆ ಕಳೆದ 3-4ತಿಂಗಳಿಂದ ಕೂಲಿ ನೀಡದೆ ಇರುವುದನ್ನು ಖಂಡಿಸಿ ಕೂಲಿಕಾರ್ಮಿಕರು ಬುಧವಾರ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿದರು. ವಿವಿಧ ಕೂಲಿಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿದ ನೂರಾರು ಕೂಲಿ ಕಾರ್ಮಿಕರು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾಮಿರ್ಕರಿಗೆ 3-4ತಿಂಗಳಿಂದ ಕೂಲಿ ನೀಡಿಲ್ಲ. ಇದರಿಂದ ಕೂಲಿ ಕಾರ್ಮಿಕರು ಜೀವನ ನಿರ್ವಹಣೆಗೆ ಹೆಣಗಾಡುವಂತಾಗಿದೆ. ಬರಗಾಲದ ಪರಿಸ್ಥಿತಿಯಲ್ಲಿ ಬದುಕು ಕಟ್ಟಿಕೊಳ್ಳಲು ಅನಿವಾರ್ಯವಾಗಿ ಜನರು ಮತ್ತೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣ ಮಾಡಿದ್ದು ಇದಕ್ಕೆ ಜಿಲ್ಲಾಡಳಿತ ಹಾಗೂ ಸರ್ಕಾರವೇ ಹೊಣೆ ಎಂದು ಪ್ರತಿಭಟನಾಕಾರರು ದೂರಿದರು.

ಕಾರ್ಮಿಕರ ಇಲಾಖೆಯಿಂದ ಉದ್ಯೋಗ ಖಾತ್ರಿಯಲ್ಲಿ 90 ದಿನ ಕೆಲಸ ಮಾಡಿದ ಕಾರ್ಮಿಕರಿಗೆ ಕಾರ್ಮಿಕರ ಕಾರ್ಡ್‌ ನೀಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದ್ದರೂ ಇಲ್ಲಿಯವರೆಗೆ ಕಾರ್ಮಿಕ ಕಾರ್ಡ್‌ ವಿತರಣೆ ಕ್ರಮ ಕೈಗೊಂಡಿಲ್ಲ. ಕೂಡಲೇ ಕಾರ್ಮಿಕ ಇಲಾಖೆಯಿಂದ ಕಾರ್ಡ್‌ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬರಗಾಲದ ಹಿನ್ನೆಲೆಯಲ್ಲಿ ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 50 ದಿನ ಹೆಚ್ಚುವರಿ ಕೆಲಸ ನೀಡುತ್ತಿಲ್ಲ. ಕೃಷಿ, ತೋಟಗಾರಿಕೆ ಇಲಾಖೆ ಮೂಲಕ ಖಾತ್ರಿ ಯೋಜನೆಯಡಿ ರೈತರ ಜಮೀನುಗಳ ಅಭಿವೃದ್ಧಿ ಕೆಲಸವನ್ನು ಕೂಲಿ ಕಾರ್ಮಿಕರಿಂದ ಮಾಡಿಸಿದ್ದು, ಈ ವರೆಗೂ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ನೀಡಿಲ್ಲ. ಅಲ್ಲದೇ ಕೂಲಿ ಕಾರ್ಮಿಕರಿಗೆ ಆರೋಗ್ಯ ಇಲಾಖೆಯಿಂದ ನೀಡುವ ಆರೋಗ್ಯ ಕರ್ನಾಟಕ ಹಾಗೂ ಆಯುಷ್ಮಾನ್‌ ಕಾರ್ಡ್‌ಗಳ ವಿತರಣೆ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಸೂಕ್ತ ಕ್ರಮ ಕೈಗೊಂಡು ಕೂಲಿ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯ, ಷೋಷಣೆಯನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಹಸೀನಾ ಹೆಡಿಯಾಲ, ಶಂಕ್ರಯ್ಯ ಕಳಸೂರಮಠ, ಬೀರಪ್ಪ ಗೋಡೆರ, ಚಂದ್ರಶೇಖರ ಕಜ್ಜೇರ, ಕಾಂತಪ್ಪ ಹರಿಜನ, ಮಾಲತೇಶ ಭೂತಣ್ಣನವರ, ಚಂದ್ರವ್ವ ಲಮಾಣಿ, ನೇತ್ರವ್ವ ಹಿರೇಮಠ, ತಿರಕಪ್ಪ ಹರಿಜನ, ದ್ಯಾಮಕ್ಕ ಹರಿಜನ, ಯಲ್ಲಪ್ಪ ಹುಳಿಬುತ್ತಿ, ಶೇಖಪ್ಪ ಡಮ್ಮಳ್ಳಿ, ಚನಬಸಪ್ಪ ಚಿಕ್ಕಪ್ಪನವರ, ಹನುಂತಪ್ಪ ಬ್ಯಾಡಗಿ ಇತರರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.