ಉಪವಾಸಕ್ಕೆ ಹಣ್ಣು ಹಂಪಲು ಖರೀದಿ ಜೋರು


Team Udayavani, Mar 4, 2019, 10:12 AM IST

4-march-13.jpg

ಅಕ್ಕಿಆಲೂರು: ಶಿವರಾತ್ರಿ ಆಚರಣೆಗೆ ಅರೇಮಲೆನಾಡು ಪ್ರದೇಶ ಅಕ್ಕಿಆಲೂರು ಪಟ್ಟಣ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಶಿವರಾತ್ರಿ ಉಪವಾಸ ಆಚರಣೆಯ ಹಿನ್ನೆಲೆಯಲ್ಲಿ ಶಿವನ ನೈವೇದ್ಯಕ್ಕಾಗಿ ವಿವಿಧ ಹಣ್ಣು ಹಂಪಲು, ಫಲ-ಪುಷ್ಪಗಳ ಖರೀದಿ ರವಿವಾರ ಮಾರುಕಟ್ಟೆಯಲ್ಲಿ ಭರದಿಂದ ಸಾಗಿತ್ತು.

ಶಿವರಾತ್ರಿಗೆ ಉಪವಾಸ ವೃತ ಆಚರಣೆ ಮಾಡುವ ಬಹುತೇಕ ಜನ ಉಪವಾಸ ಸಮಯದಲ್ಲಿ ಸೇವಿಸುವ ಹಣ್ಣು ಹಂಪಲುಗಳ ಖರೀದಿಯಲ್ಲಿ ಮಗ್ನರಾಗಿದ್ದರು. ವಿವಿಧ ಖಾದ್ಯಗಳ ಮೂಲಕ ಭರ್ಜರಿಯಾಗಿ ಆಚರಿಸಲ್ಪಡುವ ಇತರೆ ಹಬ್ಬಗಳಿಗೆ ತದ್ವಿರುದ್ಧವಾಗಿ ಆಚರಿಸಲ್ಪಡುವ ಶಿವರಾತ್ರಿ ಉಪವಾಸ ಆಚರಣೆ ದೇಶಾದ್ಯಂತ ಪ್ರಾಮುಖ್ಯತೆ ಪಡೆದುಕೊಂಡಿದೆ. ಉಪವಾಸ ಆಚರಣೆಗೆ ಅಗತ್ಯ ಹಣ್ಣು ಹಂಪಲು ಬೆಲೆ ಕಳೆದಬಾರಿಗಿಂತಲೂ ಹೆಚ್ಚಾಗಿದೆ. ಕಲ್ಲಂಗಡಿ, ಕರಬೂಜ, ದ್ರಾಕ್ಷಿ, ಕಿತ್ತಳೆ, ಮೋಸಂಬಿ ಸೇರಿದಂತೆ ಹಲವಾರು ಹಣ್ಣುಗಳ ಖರೀದಿಗೆ ಮುಂದಾಗಿದ್ದರು.

ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲೊಂದಾದ ಶಿವರಾತ್ರಿಯನ್ನು ಮಾಘ ಮಾಸದ ಬಹುಳ ಚತುದರ್ಶಿಯಂದು ಅತ್ಯಂತ ಶ್ರದ್ಧಾ ಭಕ್ತಿಯಿಂದ ಪ್ರತಿಮನೆಗಳಲ್ಲಿಯೂ ಆಚರಿಸಲಾಗುತ್ತದೆ. ಮಳೆಯ ಅಭಾವದಿಂದಾಗಿ ಮಾರುಕಟ್ಟೆಯಲ್ಲಿ ಹೂವಿನ ಬೆಲೆಯೂ ಮಾರಿಗೆ 50-70 ರವರೆಗೆ ಏರಿಕೆ ಕಂಡಿತ್ತು. ಉಪವಾಸ ಆರಂಭಕ್ಕೂ ಮುನ್ನ ಶಿವನ ನೈವೇದ್ಯಕ್ಕಾಗಿ ಉಪಯೋಗಿಸುವ ಕಡಲೆ, ಶೇಂಗಾ, ಕರ್ಜೂರಗಳ ಮಾರುಕಟ್ಟೆಯಲ್ಲಿ 60-100 ರೂ. ವರೆಗೆ ಪ್ರತಿ ಕಿಲೋ ಗೆ ಮಾರಾಟವಾಯಿತು. ಹಣ್ಣುಗಳ ಪೈಕಿ ಕಲ್ಲಂಗಡಿ ಪ್ರತಿ ಕೆಜಿಗೆ 25ರೂ. ನಂತೆ ಮಾರಾಟವಾಗಿದ್ದು, ಶಿವರಾತ್ರಿ ಆಚರಣೆಗೆ ಲೋಡ್‌ಗಟ್ಟಲೇ ಕಲ್ಲಂಗಡಿ ಪಟ್ಟಣದ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ.

ಶಿವರಾತ್ರಿ ಹಿನ್ನೆಲೆಯಲ್ಲಿ ಪಟ್ಟಣದ ಹೊರವಲಯದ ಕೆರೆ ಈಶ್ವರ ದೇವಸ್ಥಾನ ಮತ್ತು ಪೇಟೆ ಓಣಿಯ ಗಂಗಾಧರೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ದೇವಸ್ಥಾನದ ಶುದ್ಧೀಕರಣ ಕಾರ್ಯವೂ ಭರದಿಂದ ಸಾಗಿತ್ತು. ವಿಶೇಷವೆಂದರೆ ವಿರಕ್ತಮಠದಲ್ಲಿ ಶಿವಬಸವ ಶ್ರೀಗಳ ಸಾನ್ನಿಧ್ಯದಲ್ಲಿ ಪ್ರತಿವರ್ಷ ಶಿವರಾತ್ರಿಯಂದು ಸಾಮೂಹಿಕ ಇಷ್ಠಲಿಂಗ ಪೂಜೆ ನೆರವೇರುವುದು ಇಲ್ಲಿನ ವಾಡಿಕೆ.

ಉಪವಾಸ ವೃತವನ್ನು ಕಟ್ಟು ನಿಟ್ಟಾಗಿ ಪಾಲಿಸುವವರು ದೇಗುಲಗಳಲ್ಲಿ, ಮಠ ಮಂದಿರಗಳಲ್ಲಿ ಶಿವ ನಾಮ ಸ್ಮರಣೆ, ಭಜನೆಗಳಲ್ಲಿ ತೊಡಗಿಕೊಳ್ಳುವುದು ಸಾಮಾನ್ಯವಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹಣ್ಣುಗಳ ಬೆಲೆಯಲ್ಲಿ ಹೆಚ್ಚೇನೂ ಏರಿಕೆಯಾಗಿಲ್ಲ. ವರ್ಷಕ್ಕೊಮ್ಮೆ ಬರುವ ಹಬ್ಬವನ್ನು ಆಚರಿಸಲು ಜನ ಖರೀದಿಗೆ ಮುಂದಾಗುತ್ತಿದ್ದಾರೆ. ವ್ಯಾಪಾರ ರವಿವಾರ ಚೆನ್ನಾಗಿತ್ತು. 
. ಮೊಹ್ಮದ್‌ ಮಕಾಂದಾರ್‌,
   ಹಣ್ಣಿನ ವ್ಯಾಪಾರಿ

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.