ರಾಹುಲ್‌ ಸಮಾವೇಶ ಯಶಸ್ವಿಗೊಳಿಸಿ


Team Udayavani, Mar 5, 2019, 8:36 AM IST

hub-07.jpg

ಬ್ಯಾಡಗಿ: ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಪ್ರಧಾನಿಗಳು ಕೇವಲ ಕಾಂಗ್ರೆಸ್‌ನಲ್ಲಿದ್ದಾರೆ. ಅದಕ್ಕೂ ಮುನ್ನ ಸ್ವಾತಂತ್ರ್ಯಾ ಹೋರಾಟದಲ್ಲಿ ಪಾಲ್ಗೊಳ್ಳುವ ಮೂಲಕ ಪಕ್ಷದ ಬಹಳಷ್ಟು ಮುಖಂಡರು ದೇಶಕ್ಕಾಗಿ ಮತ್ತು ನೆಲಕ್ಕಾಗಿ ತಮ್ಮ ಪ್ರಾಣ ಕಳೆದುಕೊಂಡು ಹುತಾತ್ಮರಾಗಿದ್ದಾರೆ ಎಂದು ಮಾಜಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಮಾ.9ರಂದು ಹಾವೇರಿಗೆ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ  ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಪಟ್ಟಣದ ಕಾಂಗ್ರೆಸ್‌ ಕಚೇರಿ ಆವರಣದಲ್ಲಿ ಜರುಗಿದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಜನರಲ್ಲಿ ಭಾವೈಕ್ಯತೆ ಮೂಡಿಸುವ ಸಾಮರ್ಥ್ಯವಿರುವ ಏಕೈಕ ಪಕ್ಷ ಕಾಂಗ್ರೆಸ್‌ ಎಂದರು.

ದೇಶದಲ್ಲಿ ಜನರಲ್ಲಿ ಐಕ್ಯತೆ ಮೂಡಿಸಿ ಕಳೆದ 70 ವರ್ಷಗಳ ಕಾಲ ದೇಶವನ್ನು ಸುಭದ್ರವಾಗಿಡುವಲ್ಲಿ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆಯಾಗದಂತೆ ಕಾಂಗ್ರೆಸ್‌ ನೋಡಿಕೊಂಡಿದೆ. ಸ್ವಾತಂತ್ರ್ಯಾ ಪಡೆದ ಬಳಿಕ ಯಾವುದೇ ಕೈಗಾರಿಕೆಗಳಲ್ಲಿದೇ ಬಡತನದ ಸ್ಥಿತಿಯಲ್ಲಿದ್ದ ಜನರಿಗೆ ಅನ್ನ ನೀರು ನೀಡುವ ಮೂಲಕ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಇಂದು ಭವ್ಯ ಭಾರತವೆಂಬ ಬಲಿಷ್ಠ ರಾಷ್ಟ್ರ ಉದಯಿಸಿದೆ ಎಂದರು.

ಹಿರಿಯ ಮುಖಂಡ ಎಸ್‌.ಆರ್‌.ಪಾಟೀಲ ಮಾತನಾಡಿ, ಅಧಿಕಾರದಲ್ಲಿದ್ದಾಗ ಯಾರೊಬ್ಬರು ಪಕ್ಷದ ಸಂಘಟನೆ ಬಗ್ಗೆ ಗಮನ ಹರಿಸುವುದಿಲ್ಲ. ಅಧಿಕಾರ ಕಳೆದುಕೊಂಡ ತಕ್ಷಣವೇ ಸಂಘಟನೆ ಬಗ್ಗೆ ನೆನಪಾಗುತ್ತದೆ. ಪಕ್ಷ ಸಂಘಟನೆ ಎಂದರೆ ಚುನಾವಣೆ ಬಂದಾಗ ಮಾಡುವ ಕೆಲಸವಲ್ಲ. ಮಾಜಿ ಪ್ರಧಾನಿ ಇಂದಿರಾಗಾಂಧಿ ತಂದಿದ್ದ ಹೊಸ ಹೊಸ ಯೋಜನೆಗಳ ಮಾದರಿಯಲ್ಲಿ ಟ್ರೆಂಡ್‌ ಹುಟ್ಟು ಹಾಕುವ ಯೋಜನೆಗಳು ಜಾರಿಗೆ ತರಬೇಕಿದೆ ಎಂದರು. 

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ ಮಾತನಾಡಿ, ಕಾಂಗ್ರೆಸ್‌ ಸರಕಾರದ ಹಿಂದಿನ ಸಾಧನೆಗಳನ್ನು ಮನೆ ಮನೆಗೂ ತಲುಪಿಸುವ ಮೂಲಕ ಲೋಕಸಭೆ ಚುನಾವಣೆಗೆ ತಯಾರಿ ನಡೆಸಬೇಕಿದೆ. ಗದಗ ಹಾಗೂ ಹಾವೇರಿ ಲೋಕಸಭೆ ಚುನಾವಣೆ ಕುರಿತಂತೆ ಶಿಗ್ಗಾವಿ ತಾಲೂಕಿನ ಬಿಸನಳ್ಳಿ ಗ್ರಾಮಕ್ಕೆ ಮಾ.9 ರಂದು ಆಗಮಿಸುತ್ತಿರುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುವಂತೆ ಮನವಿ ಮಾಡಿದರು.

ಇದೇ ವೇಳೆ ಕಾಂಗ್ರೆಸ್‌ ನೂತನ ಜಿಲ್ಲಾಧ್ಯಕ್ಷರನ್ನು ಸನ್ಮಾನಿಸಲಾಯಿತು. ಕಾಗಿನೆಲೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಲಾಯಿತು. ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಕರಿಲಿಂಗಣ್ಣನವರ, ಜಿಪಂ ಸದಸ್ಯ ಅಬ್ದುಲ ಮುನಾಫ್‌ ಎಲಿಗಾರ, ಎಪಿಎಂಸಿ ಅಧ್ಯಕ್ಷ ಕೆ.ಎಸ್‌.ನಾಯ್ಕರ, ಪುರಸಭೆ ಸದಸ್ಯರಾದ ದುಗ್ಗೇಶ ಗೋಣೆಮ್ಮನರ, ನಜೀರ ಅಹಮ್ಮದ ಶೇಕ್‌ ಇತರರು ಇದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.