ಬರಿದಾದ  ವರದೆ 


Team Udayavani, Mar 22, 2019, 10:14 AM IST

22-march-17.jpg

ಹಾವೇರಿ: ಕುಡಿಯುವುದಕ್ಕಾಗಿ, ಕೃಷಿಗಾಗಿ ಯಥೇತ್ಛವಾಗಿ ನೀರುಣಿಸುತ್ತ ಬಂದಿರುವ ವರದೆ ಈ ಬಾರಿ ತನ್ನ ಒಡಲನ್ನು ಸಂಪೂರ್ಣವಾಗಿ ಬರಿದಾಗಿಸಿಕೊಂಡಿದೆ. ಹೀಗಾಗಿ ವರದೆಯ ಒಡಲ ಮಕ್ಕಳು ಹನಿ ನೀರಿಗೂ ಪರದಾಡುವಂತಾಗಿದೆ. ಜಿಲ್ಲೆಯಲ್ಲಿ ಹರಿದಿರುವ ವರದಾ ನದಿ ಸಾವಿರಾರು ರೈತರಿಗೆ ನೀರುಣಿಸುತ್ತ ಬಂದಿದೆ. ಮಳೆಗಾಲದಲ್ಲಿ ತುಂಬಿ ಹರಿಯುವ ಈ ನದಿ, ಬೇಸಿಗೆಯಲ್ಲಿ ತನ್ನೊಡಲೊಳಗಿಟ್ಟುಕೊಂಡಿರುವ ನೀರನ್ನು ಜನರ ಕೃಷಿಗೆ, ಕುಡಿಯಲು ಕೊಡುತ್ತ ಬಂದಿದೆ. ಆದರೆ, ಈ ಬಾರಿ ಹಿಂಗಾರು-ಮುಂಗಾರು ಎರಡೂ ಮಳೆ ಸಮರ್ಪಕವಾಗಿ ಬಾರದೆ ಇರುವುದರಿಂದ ನದಿಯಲ್ಲಿ ನೀರಿನ ಹರಿವು ನಿಂತು ವರದೆಯ ಒಡಲು ಒಣಗಿ ಬಾಯ್ತೆರೆದಿದೆ.

ಪ್ರತಿ ಬೇಸಿಗೆಯಲ್ಲಿ ನದಿಯ ಹರಿವು ಕಡಿಮೆಯಾದರೂ ನದಿ ಒಡಲಲ್ಲಿ ಒಂದಿಷ್ಟು ನೀರು ಸಂಗ್ರಹ ಇದ್ದೇ ಇರುತ್ತಿತ್ತು. ಕೆಲವು ಪ್ರದೇಶಗಳಲ್ಲಿ ನದಿ ಒಡಲು ತೇವಾಂಶದಿಂದ ಕೂಡಿದ್ದು ಸ್ವಲ್ಪ ಅಗೆದಾಗ ವರತೆ ನೀರಾದರೂ ಬರುತ್ತಿತ್ತು. ಈ ಬಾರಿ ನದಿ ಸಂಪೂರ್ಣ ಬತ್ತಿ ಕುಡಿಯಲು ವರತೆ ನೀರೂ ಸಿಗದ ಪರಿಸ್ಥಿತಿ ಇದೆ.

ಮಳೆಗಾಲದಲ್ಲಿ ಮೈದುಂಬಿ ಹರಿಯುವ ವರದಾ ನದಿ, ಬೇಸಿಗೆ ಕಾಲದಲ್ಲಿ ತನ್ನ ಒಡಲನ್ನು ಬರಿದಾಗಿಸಿಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಬೇಸಿಗೆ ಕಾಲದಲ್ಲೂ ನದಿಯಲ್ಲಿ ಸಮರ್ಪಕ ನೀರು ಹರಿಸಬೇಕೆಂಬ ಉದ್ದೇಶದಿಂದ ನದಿಗೆ ಅಡ್ಡಲಾಗಿ 10ಕ್ಕೂ ಹೆಚ್ಚು ಬ್ಯಾರೇಜ್‌ಗಳನ್ನು ಜಿಲ್ಲೆಯಲ್ಲಿ ನಿರ್ಮಿಸಲಾಗಿದೆ. ಆದರೆ, ಜನಪ್ರತಿನಿಧಿಗಳ ಹಾಗೂ ಜಿಲ್ಲಾಡಳಿತದ ದೂರದೃಷ್ಟಿಯ ಕೊರತೆಯಿಂದ ಸಮಯಕ್ಕೆ ಸರಿಯಾಗಿ ಬ್ಯಾರೇಜ್‌ಗಳನ್ನು ಬಂದ್‌ ಮಾಡದ ಪರಿಣಾಮ ಇಂದು ಬ್ಯಾರೇಜ್‌ಗಳಲ್ಲೂ ಹನಿ ನೀರು ಇಲ್ಲದಂತಹ ಪರಿಸ್ಥಿತಿ ಎದುರಾಗಿದೆ.

ಇನ್ನು ವರದಾ ನದಿ ನೀರು ಆಧರಿಸಿ ಕೆಲವು ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿತ್ತು. ನದಿಯಲ್ಲಿ ನೀರಿಲ್ಲದೇ ಇರುವುದರಿಂದ ಆ ಗ್ರಾಮಸ್ಥರೆಲ್ಲ ಕುಡಿಯುವ ನೀರಿಗಾಗಿ ಕೊಳವೆ ಬಾವಿಗಳ ಮೊರೆ ಹೋಗುವುದು ಅನಿವಾರ್ಯವಾಗಿದೆ. ಅಂತರ್ಜಲಮಟ್ಟ ಕುಸಿತ: ನದಿ, ಕೆರೆ, ಹೊಳೆ ಸೇರಿದಂತೆ ನೀರಿನ ಮೂಲಗಳು ಒಣಗಿದ್ದರಿಂದ ಅಂತರ್ಜಲ ಮಟ್ಟವೂ ಕುಸಿದಿದೆ. ಗ್ರಾಮೀಣ ಪ್ರದೇಶದ ಕೊಳವೆ ಬಾವಿಗಳ ಮೂಲಕ ನೀರು ಹಿಡಿಯಲು 300ರಿಂದ 500 ಅಡಿವರೆಗೂ ಆಳಕ್ಕೆ ಹೋಗಬೇಕಿದೆ. ಹೀಗೆ ಸಿಕ್ಕ ನೀರು ಫ್ಲೋರೈಡ್‌ನಿಂದ ಕೂಡಿದ್ದು ಕುಡಿಯಲು ಅಯೋಗ್ಯವಾದರೂ ಇದನ್ನೇ ಕುಡಿಯುವುದು ಗ್ರಾಮಸ್ಥರಿಗೆ ಅನಿವಾರ್ಯವಾಗಿದೆ. ಕೊಳವೆಬಾವಿ ನೀರು ಕುಡಿಯಲು ಆಗದೆ ನದಿ ಪಾತ್ರದ ಜನರು ತಾಸುಗಟ್ಟಲೆ ನಿಂತು ಬತ್ತಿದ ನದಿಯ ಒಡಲನ್ನು ಬಗೆದು ವರತೆ ನೀರು (ಬೊಗಸೆ ನೀರು) ತುಂಬಿ ಸೈಕಲ್‌, ಚಕ್ಕಡಿ, ಬೈಕ್‌, ದೂಡುವ ಗಾಡಿ ಸೇರಿದಂತೆ ವಿವಿಧ ವಾಹನಗಳಲ್ಲಿ ಒಯ್ಯುವ ಪರಿಸ್ಥಿತಿ ಇದೆ.

ಜಾನುವಾರುಗಳಿಗೂ ತೊಂದರೆ: ವರದಾ ನದಿಯಲ್ಲಿ ನೀರು ಖಾಲಿಯಾಗಿರುವುದರಿಂದ ಕೃಷಿ ಚಟುವಟಿಕೆ, ಜನರ ಕುಡಿಯುವ ನೀರಿಗೆ ಮಾತ್ರ ತೊಂದರೆಯಾಗಿಲ್ಲ. ಜಾನುವಾರುಗಳಿಗೆ ಕುಡಿಯಲು, ಮೈತೊಳೆಯಲು ಸಹ ನೀರಿನ ಸಮಸ್ಯೆ ಎದುರಾಗಿದೆ. ಹಳ್ಳಿಗಳಲ್ಲಿ ಈಗಾಗಲೇ ವಿದ್ಯುತ್‌ ಕಣ್ಣಾಮುಚ್ಚಾಲೇ ಆಟ ಈಗಲೇ ಆರಂಭವಾಗಿದ್ದು, ಕೊಳವೆ ಬಾವಿ ನೀರು ಸಹ
ಸಕಾಲಕ್ಕೆ ಸಮರ್ಪಕವಾಗಿ ಸಿಗುತ್ತಿಲ್ಲ. ಹೀಗಾಗಿ ರೈತರು ವಾರಕ್ಕೊಮ್ಮೆ ಮಾತ್ರ ಜಾನುವಾರುಗಳ ಮೈ ತೊಳೆಯುವುದು ಕಷ್ಟವಾಗಿದೆ.

ಈ ಬಾರಿ ಮಳೆಯಿಲ್ಲದೇ ಇರುವುದು ಗೊತ್ತಿದ್ದರೂ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ನದಿಯ ಬ್ಯಾರೇಜ್‌ಗಳಲ್ಲಿ ನೀರು ನಿಲ್ಲಿಸುವ ಪ್ರಯತ್ನ ಮಾಡಿಯೇ ಇಲ್ಲ. ಹೀಗಾಗಿ ನದಿಯಲ್ಲಿ ಇರುವಷ್ಟು ನೀರು ಹರಿದು ಹೋಗಿ ಈಗ ನದಿ ಒಣಗಿದ್ದು ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ಇದಕ್ಕೆ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ.
ವಿರುಪಾಕ್ಷಪ್ಪ, ರೈತ.

ಬೇಸಿಗೆಯಲ್ಲಿ ಸಮಸ್ಯೆಯಾಗಬಹುದಾದ 116 ಹಳ್ಳಿಗಳನ್ನು ಗುರುತಿಸಲಾಗಿದೆ. ಟಾಸ್ಕ್´ೋರ್ಸ್‌ ಸಮಿತಿ ಮೂಲಕ ಅಗತ್ಯವಿದ್ದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಕೆಲವೆಡೆ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆದು ಜನರಿಗೆ ನೀರು ಪೂರೈಸಲಾಗುತ್ತಿದೆ. ನೀರಿನ ಮೂಲ ಇಲ್ಲದ ಕಡೆಗಳಲ್ಲಿ ಹಾಗೂ ತುರ್ತು ಸಮಸ್ಯೆ ಇದ್ದಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುವುದು.
. ವಿನಾಯಕ ಹುಲ್ಲೂರ‌, 
ಕಾರ್ಯ ನಿರ್ವಾಹಕ ಇಂಜಿನಿಯರ್‌,
ಕುಡಿಯುವ ನೀರು, ನೈರ್ಮಲ್ಯ ವಿಭಾಗ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.