ಜಾಂಡಿಸ್‌ ಅಥವಾ ಕಾಮಾಲೆ


Team Udayavani, Jul 22, 2018, 6:00 AM IST

dsc0509.jpg

ಜಾಂಡಿಸ್‌ ಅಥವಾ ಕಾಮಾಲೆ ಒಂದು ಸಾಮಾನ್ಯ ಆರೋಗ್ಯ ಸಮಸ್ಯೆ. ಆದರೆ ಇದರ ಬಗ್ಗೆ ಜನಸಾಮಾನ್ಯರಲ್ಲಿ ಅನೇಕ ತಪ್ಪು ಕಲ್ಪನೆಗಳಿವೆ. ನಿಮಗೆ ಜಾಂಡಿಸ್‌ ಇದೆ ಎಂಬುದಾಗಿ ಯಾವುದೇ ರೋಗಿಗೆ ಹೇಳಿದರೆ ಸಾಕು, ಆಲೋಪತಿ ವೈದ್ಯಕೀಯ ಪದ್ಧತಿಯಲ್ಲಿ ಅದಕ್ಕೆ ಔಷಧವೇ ಇಲ್ಲ ಎಂಬಂತೆ ಆಯುರ್ವೇದ ವೈದ್ಯರತ್ತ ಧಾವಿಸುತ್ತಾರೆ. ಜಾಂಡಿಸ್‌ನ ವಿವಿಧ ಅಂಶಗಳ ಬಗ್ಗೆ ಚರ್ಚಿಸಿ ಮುಂದಿನ ಬಾರಿ ಜಾಂಡಿಸ್‌ ಜತೆಗೆ ಮುಖಾಮುಖೀಯಾದಾಗ ಏನು ಮಾಡಬೇಕು ಎಂಬ ಬಗ್ಗೆ ನಿಮ್ಮ ಅರಿವನ್ನು ವಿಸ್ತರಿಸುವ ಪ್ರಯತ್ನ ಈ ಲೇಖನದಲ್ಲಿದೆ. 

ಜಾಂಡಿಸ್‌ ಅಥವಾ ಅರಶಿನ ಕಾಮಾಲೆಯಲ್ಲಿ ಕಣ್ಣು ಮತ್ತು ಚರ್ಮ ಹಳದಿಯಾಗುತ್ತವೆ. ಬಹುತೇಕ ಬಾರಿ ಮೂತ್ರವೂ ಹಳದಿಯಾಗುತ್ತದೆ, ಆದರೆ ಯಾವಾಗಲೂ ಅಲ್ಲ. ಕೆಲವು ಪ್ರಕರಣಗಳಲ್ಲಿ ಕಣ್ಣುಗಳು ಹಳದಿ ಬಣ್ಣ ತಾಳುತ್ತವೆ, ಆದರೆ ಮೂತ್ರದ ಬಣ್ಣ ಸಹಜವಾಗಿರುತ್ತದೆ. ಇದರ ಬಗ್ಗೆ ಮುಂದೆ ವಿವರಿಸುತ್ತೇನೆ.
 
ಈಗ ಕಣ್ಣುಗಳು ಏಕೆ ಹಳದಿಯಾಗುತ್ತವೆ ಎಂಬುದನ್ನು ನೋಡೋಣ. ಇದಕ್ಕೆ ಕಾರಣ ರಕ್ತದಲ್ಲಿ ಬಿಲಿರುಬಿನ್‌ ಪ್ರಮಾಣ ಹೆಚ್ಚಳವಾಗುವುದು. ಸಾಮಾನ್ಯವಾಗಿ ಇದು ರಕ್ತದಲ್ಲಿ ಡೆಸಿಲೀಟರ್‌ಗೆ ಒಂದು ಮಿ. ಗ್ರಾಂಗಿಂತ ಕಡಿಮೆ ಇರುತ್ತದೆ, ಇದು 2 ಮಿಲಿಗ್ರಾಂಗಿಂತ ಹೆಚ್ಚಾದರೆ ಕಣ್ಣುಗಳು ಹಳದಿಯಾಗುವುದನ್ನು ಕಾಣಬಹುದು.

ಈ ಬಿಲಿರುಬಿನ್‌ 
ಬರುವುದೆಲ್ಲಿಂದ?
ನಮ್ಮ ರಕ್ತದಲ್ಲಿ ಇರುವ ಕೆಂಪು ರಕ್ತಕಣಗಳ ಜೀವಿತಾವಧಿ ಸುಮಾರು 120 ದಿನಗಳು. ಈ ಕೆಂಪು ರಕ್ತಕಣಗಳು ಹಳೆಯದಾದಂತೆ ಅವುಗಳು ಪ್ಲೀಹ (ಸ್ಪ್ಲೀನ್‌) ನಲ್ಲಿ ನಾಶ ಹೊಂದುತ್ತವೆ. ರಕ್ತದಲ್ಲಿರುವ ಹಿಮೊಗ್ಲೊಬಿನ್‌ ವಿಭಜನೆಯಾಗಿ ಹೆಮೆ ಎಂಬ ಪ್ರೊಟೀನ್‌ ಉತ್ಪಾದನೆಯಾಗುತ್ತದೆ. ಈ ಹೆಮೆಗಳು ಬಿಲಿರುಬಿನ್‌ ಆಗಿ ವಿಭಜನೆಯಾಗುತ್ತವೆ. ಸಾಮಾನ್ಯವಾಗಿ ಈ ಬಿಲಿರುಬಿನ್‌ಗಳನ್ನು ಪಿತ್ತಕೋಶವು ಸ್ವೀಕರಿಸಿ ಅದು ಪಿತ್ತರಸದಲ್ಲಿ ಹೊರಹರಿಯುವಂತೆ ಪರಿವರ್ತಿಸುತ್ತದೆ. ಈ ಪಿತ್ತರಸವು ಬಳಿಕ ಕರುಳನ್ನು ಪ್ರವೇಶಿಸಿದಾಗ ಬಹುತೇಕ ಬಿಲಿರುಬಿನ್‌ಗಳು ಸ್ಟೆರ್ಕೊಬ್ಲಿನ್‌ ಆಗಿ ಪರಿವರ್ತನೆಗೊಂಡು ಮಲದ ಮೂಲಕ ದೇಹದಿಂದ ಹೊರಹಾಕಲ್ಪಡುತ್ತವೆ. 

– ಮುಂದಿನ ವಾರಕ್ಕೆ  

– ಡಾ| ಬಿ. ವಿ. ತಂತ್ರಿ, 
ವಿಭಾಗ ಮುಖ್ಯಸ್ಥರು, 
ಗ್ಯಾಸ್ಟ್ರೊಎಂಟರಾಲಜಿ ವಿಭಾಗ
ಕೆಎಂಸಿ ಆಸ್ಪತ್ರೆ, ಮಂಗಳೂರು.

ಟಾಪ್ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.