ಮಧುಮೇಹ: ನಾವು ತಿಳಿಯಬೇಕಾದದ್ದು ಏನು?


Team Udayavani, Oct 14, 2018, 6:00 AM IST

diabetes-13.jpg

ಹಿಂದಿನ ವಾರದಿಂದ- ವ್ಯಾಯಾಮ ಮತ್ತು ಸೇವಿಸುವ ಆಹಾರಗಳ ನಡುವೆ ಉತ್ತಮ ಸಮತೋಲನ ಹೊಂದಿರುವುದು ಕೂಡ ಆವಶ್ಯಕ. ಇದು ಸ್ನಾಯುಶಕ್ತಿ ಮತ್ತು ಸೂಕ್ತ ದೇಹತೂಕವನ್ನು ಕಾಯ್ದುಕೊಳ್ಳಲು ಸಹಾಯ ಮಾಡುತ್ತದೆ. ಪ್ರತಿದಿನ ನಡಿಗೆ, ಜಾಗಿಂಗ್‌ನಂತಹ ಮಧ್ಯಮ ತೀವ್ರತೆಯ ವ್ಯಾಯಾಮವನ್ನು 30 ನಿಮಿಷಗಳ ಕಾಲ ಮಾಡುವುದು ಯೋಗ್ಯವಾಗಿದೆ.

ಮಧುಮೇಹವನ್ನು ಆದಷ್ಟು ಬೇಗನೆ ಪತ್ತೆಹಚ್ಚಿ ಚಿಕಿತ್ಸೆ ಆರಂಭಿಸುವುದು ಕೂಡ ರೋಗ ನಿರ್ವಹಣೆಯಲ್ಲಿ ಅತ್ಯಂತ ಪ್ರಾಮುಖ್ಯವಾಗಿದೆ. ಇದರಿಂದ ಕಾಯಿಲೆಯ ಆರಂಭಿಕ ಹಂತದಿಂದಲೇ ಗ್ಲೆ„ಸೇಮಿಕ್‌ ನಿಯಂತ್ರಣವನ್ನು ಇರಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ಇದು “ಮೆಟಬಾಲಿಕ್‌ ಮೆಮರಿ’ ಎಂಬುದಾಗಿ ಕರೆಯಲ್ಪಡುವ ವಿದ್ಯಮಾನದ ಮೂಲಕ ಮಧುಮೇಹದ ಸಂಕೀರ್ಣ ಸಮಸ್ಯೆಗಳು ಪ್ರಗತಿ ಹೊಂದುವುದನ್ನು ತಡೆಯುತ್ತದೆ ಹಾಗೂ ಚಿಕಿತ್ಸೆಗೆ ಪ್ರತಿಸ್ಪಂದನೆಯನ್ನು ಉತ್ತಮಗೊಳಿಸುತ್ತದೆ. ಮಧುಮೇಹದ ವಿಧ ಮತ್ತು ರೋಗಿಯ ದೇಹಸ್ವಭಾವಕ್ಕೆ ಅನುಗುಣವಾಗಿ ಚಿಕಿತ್ಸೆಯನ್ನು ವ್ಯಕ್ತಿ ನಿರ್ದಿಷ್ಟಗೊಳಿಸಬೇಕಾಗುತ್ತದೆ. 

ಮಧುಮೇಹಕ್ಕೆ ಒದಗಿಸಲಾಗುವ ಔಷಧ ಚಿಕಿತ್ಸೆಯು ಮಧುಮೇಹದಲ್ಲಿ ಅಡಕವಾಗಿರುವ ವಿವಿಧ ಚಯಾಪಚಯ ಸಮಸ್ಯೆಗಳನ್ನು ಉತ್ತರಿಸುವ ಹಲವು ವಿಧದ ಔಷಧಗಳು ಮತ್ತು ಇನ್ಸುಲಿನನ್ನು ಒಳಗೊಂಡಿರುತ್ತದೆ.

ಮಧುಮೇಹದ ದೀರ್ಘ‌ಕಾಲಿಕ ಸಂಕೀರ್ಣ ಸಮಸ್ಯೆಗಳನ್ನು ತಡೆಯುವುದಕ್ಕಾಗಿ ಚಿಕಿತ್ಸೆಯ ಸಂದರ್ಭದಲ್ಲಿ ಹಾಕಿಕೊಳ್ಳಲಾಗಿರುವ ಗುರಿಗಳನ್ನು ಸಾಧಿಸಲಾಗಿದೆಯೇ ಎಂಬುದನ್ನು ಪರಿಶೀಲಿಸುವ ನಿಗದಿತ ಅವಧಿಗಳಲ್ಲಿ ತಪಾಸಣೆಯೂ ಮಧುಮೇಹದ ನಿಭಾವಣೆಯಲ್ಲಿ ಅತ್ಯಂತ ಮುಖ್ಯವಾಗಿದೆ. ಮಧುಮೇಹದ ಬಹುತೇಕ ಸಮಸ್ಯೆಗಳು ಆಂತರಿಕವಾಗಿ ಪ್ರಗತಿ ಹೊಂದುವಂಥವಾಗಿದ್ದು, ಯಾವುದೇ ಚಿಹ್ನೆಗಳನ್ನು ತೋರ್ಪಡಿಸದೆ ಇರುವುದರಿಂದ ಅವುಗಳನ್ನು ಶೀಘ್ರ ಪತ್ತೆ ಹಚ್ಚಿ ಚಿಕಿತ್ಸೆ ಒದಗಿಸುವುದಕ್ಕಾಗಿ ನಿಗದಿತ ಅವಧಿಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು. ಮಧುಮೇಹವು ಒಂದು ದೀರ್ಘ‌ಕಾಲಿಕ ಆರೋಗ್ಯ ಸಮಸ್ಯೆಯಾಗಿದ್ದು, ಮಧುಮೇಹದ ವಿವಿಧ ಅಂಶಗಳು ಮತ್ತು ವಿಚಾರಗಳ ಬಗ್ಗೆ ಮಧುಮೇಹ ಪೀಡಿತರಿಗೆ ಅರಿವು ಹಾಗೂ ಮಾಹಿತಿಯನ್ನು ಒದಗಿಸಬೇಕು. ಅಲ್ಲದೆ ಸ್ವಯಂ ನಿರ್ವಹಣೆಯ ನಿಟ್ಟಿನಲ್ಲಿ ಆರೋಗ್ಯ ಸೇವಾ ಪೂರೈಕೆದಾರರ ಜತೆಗೆ ಚಿಕಿತ್ಸೆಯ ಯೋಜನೆಯಲ್ಲಿ ಅವರನ್ನು ಸೇರಿಸಿಕೊಳ್ಳಬೇಕು. 

ಟೈಪ್‌ 2 ಮಧುಮೇಹವು ಅತ್ಯಂತ ಕಳವಳಕಾರಿ ವೇಗದಲ್ಲಿ ವೃದ್ಧಿಸುತ್ತಿರುವುದಕ್ಕೆ ಪ್ರಧಾನ ಕಾರಣ ಪ್ರಸ್ತುತ ಜೀವನಶೈಲಿಯೇ ಆಗಿದೆ. ಆರೋಗ್ಯಯುತ ಆಹಾರ ಶೈಲಿ, ಸಮರ್ಪಕ ವ್ಯಾಯಾಮಗಳನ್ನು ಎಳೆಯ ವಯಸ್ಸು ಮತ್ತು ಹದಿಹರೆಯದಲ್ಲಿ ರೂಢಿಸಿಕೊಳ್ಳುವುದು ಮಧುಮೇಹವೆಂಬ ಜಾಗತಿಕ ಆರೋಗ್ಯ ಸಮಸ್ಯೆಯನ್ನು ನಿಯಂತ್ರಿಸಲು ಅತ್ಯಂತ ಮುಖ್ಯವಾಗಿದೆ. ರಕ್ತದಲ್ಲಿ ಗುÉಕೋಸ್‌ ಅಂಶದ ಮೇಲೆ ಆದಷ್ಟು ಬೇಗನೆ ಪರಿಣಾಮಕಾರಿಯಾಗಿ ನಿಯಂತ್ರಣ ಸಾಧಿಸುವುದು ಮಧುಮೇಹದ ಪ್ರಗತಿ ಹಾಗೂ ಸಂಕೀರ್ಣ ಸಮಸ್ಯೆಗಳ ತೀವ್ರತೆಯನ್ನು ಹದ್ದುಬಸ್ತಿನಲ್ಲಿ ಇರಿಸಲು ಸಹಾಯ ಮಾಡುತ್ತದೆ. ಮಧುಮೇಹದ ವಿರುದ್ಧ ಈ ಕ್ಷಣದಿಂದಲೇ ಸಕ್ರಿಯರಾಗೋಣ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.