ರಸ್ತೆ ಅಪಘಾತ ಕಂಡಾಗ ನಾವೇನು ಮಾಡಬಹುದು?


Team Udayavani, Feb 3, 2019, 12:30 AM IST

accident.jpg

ಮುಂದುವರಿದುದು– 3. ಸಹಾಯ ಮಾಡಲು ಅರಿತು ಯತ್ನಿಸಿ 
ಕೆಲವೊಮ್ಮೆ ಆ್ಯಂಬುಲೆನ್ಸ್‌ಯಾ ಆರೋಗ್ಯ ರಕ್ಷಕ ಸಿಬಂದಿ ಸ್ಥಳಕ್ಕೆ ತಲುಪುವಲ್ಲಿ ವಿಳಂಬವಾಗಬಹುದು. ನಗರ ಪ್ರದೇಶದಿಂದ ದೂರದಲ್ಲಿ ಅಪಘಾತವಾದಾಗ ಈ ರೀತಿಯ ಸಾಧ್ಯತೆಯಿರುತ್ತದೆ. ಆ್ಯಂಬುಲೆನ್ಸ್‌ ಬರುವಲ್ಲಿ  ವಿಳಂಬವಾಗುವ ಸಾಧ್ಯತೆ ಇದ್ದಾಗ ಘಟನೆಯ ಸ್ಥಳದಲ್ಲಿರುವ ಸಾರ್ವಜನಿಕರಲ್ಲಿ ಅಪಘಾತದ ಗಾಯಾಳುಗಳ ಆರೈಕೆಯ ಬಗ್ಗೆ ಪ್ರಾಥಮಿಕ ಮಾಹಿತಿ ಇದ್ದವರು ಪ್ರಥಮ ಚಿಕಿತ್ಸೆಯನ್ನು ಈ ಕೆಳಗಿನಂತೆ ಮಾಡಬಹುದು.

ಚ) ಬಿದ್ದಿರುವ ಗಾಯಾಳುವನ್ನು ಅಪಾಯಕರ ಸ್ಥಳದಿಂದ (ರಸ್ತೆ ಮಧ್ಯ ಇತ್ಯಾದಿ) ಒಂದು ಬದಿಗೆ ಸರಿಸುವುದರಿಂದ ಇನ್ನೊಂದು ಅಪಘಾತವಾಗುವುದು ತಪ್ಪುವುದಲ್ಲದೆ, ರಸ್ತೆ ಸಂಚಾರವೂ ಸುಗಮವಾಗುತ್ತದೆ. ಇಲ್ಲದಿದ್ದಲ್ಲಿ ಟ್ರಾಫಿಕ್‌  ಜಾಮ್‌ ಉಂಟಾಗಿ ಆ್ಯಂಬುಲೆನ್ಸ್‌ ತಲುಪಲು ಇನ್ನೂ ತೊಂದರೆಯಾಗುತ್ತದೆ. ಆದರೆ ಗಾಯಾಳುವನ್ನು ಬದಿಗೆ ಸರಿಸುವಾಗ ಬೆನ್ನು ಮೂಳೆಗೆ ಅಥವಾ ಕುತ್ತಿಗೆಯ ಹಿಂಭಾಗಕ್ಕೆ ಏಟು ಬಿದ್ದಿಲ್ಲ ಎಂಬುದನ್ನು ದೃಢಪಡಿಸಿಕೊಳ್ಳಬೇಕು. ಅಂತಹ ಸಂಭಾವ್ಯತೆ ಇದ್ದಲ್ಲಿ  ಆಯಾ ಮೂಳೆಗಳು ಅಲುಗಾಡದಂತೆ ಬೆನ್ನು ಮೂಳೆ ನೆಟ್ಟಗೆ ಇರುವಂತೆಯೇ ಗಾಯಾಳುವನ್ನು ಸರಿಸಬೇಕಾಗುತ್ತದೆ. ಇಲ್ಲದಿದ್ದಲ್ಲಿ ಬೆನ್ನು ಮೂಳೆಯ ಕೇಂದ್ರದಲ್ಲಿರುವ ಬೆನ್ನು ಹುರಿ ಘಾಸಿಗೊಳ್ಳಬಹುದು. ಹಾಗೆಯೇ ಕೈಕಾಲಿನ ಮೂಳೆಗಳು ಮುರಿದಿದ್ದರೂ ಹೆಚ್ಚಿನ ಚಾಲನೆಯಿಂದ ಆಂತರಿಕ ರಕ್ತಸ್ರಾವ ಹೆಚ್ಚಾಗಬಹುದು. ಪ್ರಜ್ಞೆ ಇರುವ ಗಾಯಾಳು ಎಲ್ಲೆಲ್ಲಿ ಏಟು ಬಿದ್ದಿದೆ ಎಂಬುದನ್ನು ತಿಳಿಯಲು ಸಹಕರಿಸಬಹುದು. ಏಕೆಂದರೆ ಬಾಹ್ಯ ಗಾಯಗಳಿಲ್ಲದೆ ಬರಿಯ ಮೂಗೇಟಿನಿಂದ ಒಳಗಿನ ಮೂಳೆ ಮುರಿದಿದ್ದರೆ ವೈದ್ಯರಲ್ಲದಿರುವವರಿಗೆ ಅದನ್ನು ಕಂಡುಹಿಡಿಯುವುದು ಕಷ್ಟಸಾಧ್ಯ. ಆದ್ದರಿಂದ ಮೇಲೆ  ವಿವರಿಸಿದ ಮಾಹಿತಿ ಇಲ್ಲದೇ ಇದು ಏನು ಮಾಡಬೇಕೆಂದು ತಿಳಿಯದಾದಾಗ ಸುಮ್ಮನೇ ಇರುವುದೇ ಲೇಸು, ಪ್ರಜ್ಞೆ ಇದ್ದು ಕೈಕಾಲು ಅಲುಗಾಡಿಸಲು ಸಾಧ್ಯವಿರುವ ಗಾಯಾಳುವಿಗೆ ತಾನಾಗಿ ಮೆಲ್ಲನೆ ಸರಿದು ರಸ್ತೆಯ ಬದಿಗೆ ಬರುವಂತೆ ಸೂಚಿಸಬಹುದು.ಆರೋಗ್ಯ ರಕ್ಷಕ ಸಿಬಂದಿ ಸ್ಥಳಕ್ಕೆ ತಲುಪಿದಾಗ ರೋಗಿಯನ್ನು ಆ್ಯಂಬುಲೆನ್ಸ್‌ ಒಳಕ್ಕೆ ಸಾಗಿಸಲು “ಸ್ಪೈನ್‌ ಬೋರ್ಡ್‌  (Spine board) ಎಂಬ ಹಲಗೆಯಂತಹ ಸಲಕರಣೆಯನ್ನು ಬಳಸುತ್ತಾರೆ.

ಚಿ) ಗಾಯಾಳು ಪ್ರಜ್ಞಾಹೀನನಾಗಿದ್ದು ಉಸಿರಾಟಕ್ಕೆ ತೊಂದರೆ ಆಗುವ ರೀತಿಯಲ್ಲಿ ಮೂಗು, ಬಾಯಿಯೊಳಗೆ ರಕ್ತ ಅಥವಾ ಮಣ್ಣು ತುಂಬಿಕೊಂಡಿದ್ದರೆ ಅದನ್ನು ಸ್ವತ್ಛ ಗೊಳಿಸಬೇಕು. ವ್ಯಕ್ತಿ ಮುಖ ಕೆಳಗಾಗಿ ಬೋರಲು ಬಿದ್ದಿದ್ದರೆ ಆತನನ್ನು ಬೆನ್ನುಮೂಳೆ ತಿರುಚದಂತೆ ಜಾಗರೂಕತೆಯಿಂದ ಮುಖ ಮೇಲಾಗುವಂತೆ ತಿರುಗಿಸಿದರೆ ಉಸಿರಾಟ ಸುಲಲಿತ ಆಗುತ್ತದೆ. ಪ್ರಜ್ಞಾ ಹೀನನಾಗಿ ಅಂಗಾತ ಬಿದ್ದಿರುವ ವ್ಯಕ್ತಿಯ ಮುಖವನ್ನು ಒಂದು ಬದಿಗೆ (ಎಡ/ಬಲ) ತಿರುಗಿಸುವುದರಿಂದಲೂ ಉಸಿರಾಟ ಸುಲಭವಾಗುತ್ತದೆ. ಮಾತ್ರವಲ್ಲ ಒಂದು ವೇಳೆ ವ್ಯಕ್ತಿ ವಾಂತಿ ಮಾಡಿಕೊಂಡರೆ ಅದರ ದ್ರವ ಶ್ವಾಸನಾಳಕ್ಕೆ ನುಗ್ಗುವ ಸಾಧ್ಯತೆ ಕುಗ್ಗುತ್ತದೆ.

c) ಗಾಯಾಳುವಿನ ಕೈ ಅಥವಾ ಕಾಲುಗಳಿಗಾಗಿರುವ ಗಾಯಗಳಿಂದ ತೀವ್ರ ರಕ್ತಸ್ರಾವವಾಗುತ್ತಿದ್ದರೆ ಗಾಯದ ಮೇಲಕ್ಕೆ ಮತ್ತು ಕೆಳಕ್ಕೆ ಬಟ್ಟೆಯ ಕಟ್ಟನ್ನು  ಹಾಕುವುದರ ಮೂಲಕ ರಕ್ತ ಸೋರುವುದನ್ನು ನಿಲ್ಲಿಸಬಹುದು. ಆದರೆ ರಕ್ತ ಸೋರುವಿಕೆ ನಿಲ್ಲಿಸಲು ಎಷ್ಟು ಬಿಗಿ ಬೇಕೋ ಅಷ್ಟನ್ನು ಮಾತ್ರ ಹಾಕಬೇಕು. ಅತಿ ಬಿಗಿಯಾದ ಕಟ್ಟು ಹಾಕುವುದರಿಂದ ಅಂಗಾಂಶಗಳಿಗೆ ಘಾಸಿ ಆಗಬಹುದು. ಕಟ್ಟು ಹಾಕುವಿಕೆಯಿಂದ ರಕ್ತ ಸ್ರಾವ ನಿಲ್ಲದಿದ್ದಲ್ಲಿ  ಆ್ಯಂಬುಲೆನ್ಸ್‌ ಬರುವ ತನಕ ಗಾಯವನ್ನು ಬಟ್ಟೆಯಿಂದ ಗಟ್ಟಿಯಾಗಿ ಒತ್ತಿ ಹಿಡಿಯಬೇಕು. ಅನಂತರ ಆರೋಗ್ಯ ರಕ್ಷಕ ಸಿಬಂದಿ ರಕ್ತಸ್ರಾವ ನಿಲ್ಲಿಸಲು ತಕ್ಕ ಉಪಾಯ ಮಾಡುತ್ತಾರೆ. ದೊಡ್ಡದಾದ ಧಮನಿಯೊಂದರಿಂದ ತೀವ್ರ ರಕ್ತಸ್ರಾವವಾಗುತ್ತಿದ್ದರೆ ಕೆಲವೇ ನಿಮಿಷಗಳಲ್ಲಿ ವ್ಯಕ್ತಿಯ ದೇಹದ ರಕ್ತವೆಲ್ಲ ಸೋರಿಹೋಗಿ ವ್ಯಕ್ತಿ ಸಾವನ್ನಪ್ಪಬಹುದು. ರಕ್ತ ಸ್ರಾವವನ್ನು  ಹತೋಟಿಗೆ ತರುವುದರಿಂದಲೇ ಹಲವಾರು ಅನವಶ್ಯಕ ಸಾವುಗಳನ್ನು ತಪ್ಪಿಸಬಹುದು.

ಛ) ಹೃದಯ ಪುನಃಶ್ಚೇತನ ಪ್ರಕ್ರಿಯೆ (Cardiac resuscitation)ಎಂದರೆ, ತೀರಾ ಮರಣದ ಸನಿಹದಲ್ಲಿರುವ ವ್ಯಕ್ತಿಗೆ ಹೃದಯದ ಮೇಲಣ ಎದೆಗೂಡಿಗೆ ಕ್ರಮಬದ್ಧವಾಗಿ ಅದುಮಿ ಹೃದಯವನ್ನು ಚಾಲನೆಯಲ್ಲಿಡುವ ಜೀವ ರಕ್ಷಕ ಕ್ರಿಯೆ. ಆದರೆ ಇದನ್ನು ಉಪಯೋಗಿಸಬೇಕಾದರೆ ಸಾರ್ವಜನಿಕರಿಗೆ ಇದರ ತರಬೇತಿ ಇರಬೇಕಾಗುತ್ತದೆ. ದುರದೃಷ್ಟವಶಾತ್‌ ನಮ್ಮ ದೇಶದಲ್ಲಿ ನಾವಿನ್ನೂ ಆ ಹಂತವನ್ನು ತಲುಪಿಲ್ಲ, ಸದ್ಯದ ಪರಿಸ್ಥಿತಿಯಲ್ಲಿ ಆರೋಗ್ಯ ರಕ್ಷಕ ಸಿಬಂದಿ ಮಾತ್ರ ಇದರ ತರಬೇತಿ ಹೊಂದಿರುತ್ತಾರೆ.

ಒಟ್ಟಾರೆ ಹೇಳುವುದಾದರೆ ಮೇಲೆ ವಿವರಿಸಿದ ಕೆಲವು ಸರಳ ವಿಧಾನ/ಕ್ರಿಯೆಗಳಿಂದ ಎಷ್ಟೋ ಜೀವಗಳನ್ನು ಉಳಿಸಲು ಸಾಧ್ಯ. ಅಪಘಾತವಾದ 1 ಗಂಟೆಯ ಒಳಗೆ (golden hour)  ವ್ಯಕ್ತಿ ಆಸ್ಪತ್ರೆಗೆ ಸೇರಿದರೆ ಅಪಘಾತದಿಂದ ಮರಣ ಹೊಂದುವವರ ಸಂಖ್ಯೆಯನ್ನು ಶೇ. 50 ಕಡಿಮೆ ಮಾಡಬಹುದು ಎಂದು ಅಂದಾಜಿಸಲಾಗಿದೆ. ನಮ್ಮಲ್ಲಿ ಸಹೃದಯಿ ಸಾರ್ವಜನಿಕರಿಗೇನೂ ಕೊರತೆಯಿಲ್ಲ. ಸಹಾಯ ಮಾಡಲು ಬಯಸುವವರಿಗೆ ಕಾನೂನಿನ ಅಭಯ, ಉಪಯುಕ್ತ ಮಾಹಿತಿ ಮತ್ತು ಸೂಕ್ತ ತರಬೇತಿ (ಸಾಧ್ಯವಿದ್ದಲ್ಲಿ) ದೊರೆತದ್ದೇ ಆದರೆ ಅಪಘಾತದ ಗಾಯಾಳುಗಳು ರಸ್ತೆ ಬದಿಯಲ್ಲಿಯೇ ದುರ್ಮರಣಕ್ಕೀಡಾಗುವುದನ್ನು ತಪ್ಪಿಸಬಹುದು. ಇತ್ತೀಚೆಗೆ ಇಂತಹ ಸಹೃದಯಿ ವ್ಯಕ್ತಿಗಳಿಗೆ (good Samaritan) ಕಾನೂನು ಸಂಪೂರ್ಣ ರಕ್ಷಣೆ ನೀಡಿದ್ದು ಅವರನ್ನು ಕೋರ್ಟ್‌, ಕಚೇರಿಗಳಿಗೆ ಕರೆಯುವಂತಿಲ್ಲ ಎಂದು ನಿರ್ದೇಶಿಸಿದೆ.

ರಸ್ತೆ ಅಪಘಾತದ ಗಾಯಾಳುಗಳ ಶುಶ್ರೂಷೆಯಲ್ಲಿ ಗಾಯಾಳು ದಾಖಲಾಗುವ ಆಸ್ಪತ್ರೆ ಎಷ್ಟು ಸುಸಜ್ಜಿತ ಎನ್ನುವುದಕ್ಕಿಂತಲೂ ಆತ ಎಷ್ಟು ಬೇಗ ಆಸ್ಪತ್ರೆಗೆ ಸೇರಿಸಲ್ಪಡುತ್ತಾನೆ ಎಂಬುದೇ ಮುಖ್ಯ. ಆಸ್ಪತ್ರೆ ತಲುಪುವವರೆಗೆ ಗಾಯಾಳುವಿನ ಜೀವ ಸಂರಕ್ಷಣೆ ನಮ್ಮಲ್ಲಿ ನಿರ್ಲಕ್ಷ್ಯಕ್ಕೊಳ ಗಾಗಿರುವ ಅಂಶ.  ಈ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಲೇಖನ ಒಂದು ಸಣ್ಣ ಪ್ರಯತ್ನ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.