ದೇಹಕ್ಕೆ ತಂಪು ನೀಡುವ ಸಾಸಿವೆ


Team Udayavani, Aug 8, 2017, 6:41 AM IST

DSC00135 copy.JPG

ವಿವಿಧ ಹಣ್ಣುಗಳು, ತರಕಾರಿಗಳು, ಮೊಸರು, ತೆಂಗಿನತುರಿ ಇತ್ಯಾದಿಗಳನ್ನು ಬಳಸಿ ತಯಾರಿಸುವ ಸಾಸಿವೆಗಳು ಬಿಸಿಲಿನ ಬೇಗೆಗೆ ಬಸವಳಿದ ದೇಹಕ್ಕೆ ತಂಪು ನೀಡಿ ಹೊಸ ಚೈತನ್ಯವನ್ನು ನೀಡಬಲ್ಲದು. ಇಲ್ಲಿವೆ ಕೆಲವು ರಿಸಿಪಿಗಳು. ಸವಿದು ಬೇಸಿಗೆಯನ್ನು ಹಿತವಾಗಿಸಿಕೊಳ್ಳಿ.

ಹಾಗಲಕಾಯಿ ಸಾಸಿವೆ
ಬೇಕಾಗುವ ಸಾಮಗ್ರಿ:

ಸಣ್ಣಗೆ ಹೆಚ್ಚಿದ ಹಾಗಲಕಾಯಿ- ಅರ್ಧ ಕಪ್‌, ತೆಂಗಿನತುರಿ- ಒಂದು ಕಪ್‌, ಸಾಸಿವೆ- ಎರಡು ಚಮಚ, ಹಸಿಮೆಣಸು- ಒಂದು, ಮೊಸರು- ಒಂದು ಕಪ್‌.

ತಯಾರಿಸುವ ವಿಧಾನ:
ದಪ್ಪ ತಳದ ಬಾಣಲೆಗೆ ನಾಲ್ಕು ಚಮಚ ಎಣ್ಣೆ ಹಾಕಿ ಬಿಸಿಯಾದ ಕೂಡಲೇ ಸಣ್ಣಗೆ ಹೆಚ್ಚಿದ ಹಾಗಲಕಾಯಿಯನ್ನು ಸ್ವಲ್ಪ ಉಪ್ಪು ಬೆರೆಸಿ ಇದಕ್ಕೆ ಹಾಕಿ ಚೆನ್ನಾಗಿ ಬಾಡಿಸಿಕೊಳ್ಳಿ. ತೆಂಗಿನತುರಿಗೆ ಉಪ್ಪು, ಹಸಿಮೆಣಸು, ಸಾಸಿವೆ ಸೇರಿಸಿ ನುಣ್ಣಗೆ ರುಬ್ಬಿ ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ಇದಕ್ಕೆ ಆರಿದ ಹಾಗಲಕಾಯಿ ಹೋಳುಗಳು, ಮೊಸರು ಮತ್ತು ಬೇಕಷ್ಟು ನೀರು ಸೇರಿಸಿ ಸಾಸಿವೆಯ ಹದ ಮಾಡಿಕೊಳ್ಳಿ. ಈಗ ತಯಾರಾದ ಸಾಸಿವೆಗೆ ತುಪ್ಪದಲ್ಲಿ ಸಾಸಿವೆ ಒಗ್ಗರಣೆಯನ್ನು ಕರಿಬೇವಿನ ಜೊತೆ ನೀಡಿ.

ಕಾಡುಮಾವಿನ ಹಣ್ಣಿನ ಸಾಸಿವೆ 
ಬೇಕಾಗುವ ಸಾಮಗ್ರಿ:

ಮಾವಿನ ಹಣ್ಣು- ಎಂಟು, ತೆಂಗಿನತುರಿ- ಒಂದು ಕಪ್‌, ಸಾಸಿವೆ- ಒಂದೂವರೆ ಚಮಚ,  ಬೆಲ್ಲದ ಪುಡಿ- ಎಂಟು ಚಮಚ, ಕೆಂಪುಮೆಣಸು- ಒಂದು, ಉಪ್ಪು ರುಚಿಗೆ.

ತಯಾರಿಸುವ ವಿಧಾನ:
ಸಿಪ್ಪೆ ತೆಗೆದ ಮಾವಿನ ಹಣ್ಣಿಗೆ ಬೆಲ್ಲ ಹಾಗೂ ಉಪ್ಪು ಬೆರೆಸಿಡಿ. ತೆಂಗಿನತುರಿಗೆ ಉಪ್ಪು, ಸಾಸಿವೆ, ಕೆಂಪುಮೆಣಸು ಸೇರಿಸಿ ನಯವಾಗಿ ರುಬ್ಬಿ ಮಾವಿನಹಣ್ಣಿಗೆ ಸೇರಿಸಿ. ನಂತರ ಇದಕ್ಕೆ ಬೇಕಷ್ಟು ನೀರು ಸೇರಿಸಿ ಹದ ಮಾಡಿಕೊಳ್ಳಿ. ಈಗ ಬಹಳ ರುಚಿಯಾದ ಕಾಡುಮಾವಿನ ಹಣ್ಣಿನ ಸಾಸಿವೆ ಸರ್ವ್‌ ಮಾಡಲು ಸಿದ್ಧ.

ಸೇಬು ವಿದ್‌ ದಾಳಿಂಬೆಯ ಸಾಸಿವೆ
ಬೇಕಾಗುವ ಸಾಮಗ್ರಿ:

ಹೆಚ್ಚಿದ ಸೇಬು- ಒಂದು ಕಪ್‌, ದಾಳಿಂಬೆ- ಅರ್ಧ ಕಪ್‌, ಹೆಚ್ಚಿದ ಸೌತೆಕಾಯಿ- ಅರ್ಧ ಕಪ್‌, ಹೆಚ್ಚಿದ ದ್ರಾಕ್ಷಿ- ಅರ್ಧ ಕಪ್‌, ಮೊಸರು- ಒಂದು ಕಪ್‌, ಬೆಲ್ಲ- ಒಂದು ಚಮಚ, ತೆಂಗಿನ ತುರಿ- ಒಂದು ಕಪ್‌, ಸಾಸಿವೆ- ಒಂದು ಚಮಚ, ಉಪ್ಪು ರುಚಿಗೆ.

ತಯಾರಿಸುವ ವಿಧಾನ:
ಮಿಕ್ಸಿಂಗ್‌ ಬೌಲ್‌ಗೆ ಹೆಚ್ಚಿದ ಸೇಬು, ದಾಳಿಂಬೆ, ಸೌತೆಕಾಯಿ, ದ್ರಾಕ್ಷಿಗಳನ್ನು ಹಾಕಿ ಸ್ವಲ್ಪ ಉಪ್ಪು, ಬೆಲ್ಲ ಬೆರೆಸಿ ಮಿಶ್ರಮಾಡಿ. ಇದಕ್ಕೆ, ತೆಂಗಿನತುರಿ, ಸಾಸಿವೆ, ಹಸಿಮೆಣಸು, ಉಪ್ಪು ಸೇರಿಸಿ ನುಣ್ಣಗೆ ರುಬ್ಬಿ ಸೇರಿಸಿ. ನಂತರ, ಮೊಸರು, ಉಪ್ಪು ಹಾಗೂ ಬೇಕಷ್ಟು ನೀರು ಸೇರಿಸಿ ಹದ ಮಾಡಿಕೊಳ್ಳಿ.

ಗೀತಸದಾ

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.