ದೇಹಕ್ಕೆ ತಂಪು ನೀಡುವ ಸಾಸಿವೆ


Team Udayavani, Aug 8, 2017, 6:41 AM IST

DSC00135 copy.JPG

ವಿವಿಧ ಹಣ್ಣುಗಳು, ತರಕಾರಿಗಳು, ಮೊಸರು, ತೆಂಗಿನತುರಿ ಇತ್ಯಾದಿಗಳನ್ನು ಬಳಸಿ ತಯಾರಿಸುವ ಸಾಸಿವೆಗಳು ಬಿಸಿಲಿನ ಬೇಗೆಗೆ ಬಸವಳಿದ ದೇಹಕ್ಕೆ ತಂಪು ನೀಡಿ ಹೊಸ ಚೈತನ್ಯವನ್ನು ನೀಡಬಲ್ಲದು. ಇಲ್ಲಿವೆ ಕೆಲವು ರಿಸಿಪಿಗಳು. ಸವಿದು ಬೇಸಿಗೆಯನ್ನು ಹಿತವಾಗಿಸಿಕೊಳ್ಳಿ.

ಹಾಗಲಕಾಯಿ ಸಾಸಿವೆ
ಬೇಕಾಗುವ ಸಾಮಗ್ರಿ:

ಸಣ್ಣಗೆ ಹೆಚ್ಚಿದ ಹಾಗಲಕಾಯಿ- ಅರ್ಧ ಕಪ್‌, ತೆಂಗಿನತುರಿ- ಒಂದು ಕಪ್‌, ಸಾಸಿವೆ- ಎರಡು ಚಮಚ, ಹಸಿಮೆಣಸು- ಒಂದು, ಮೊಸರು- ಒಂದು ಕಪ್‌.

ತಯಾರಿಸುವ ವಿಧಾನ:
ದಪ್ಪ ತಳದ ಬಾಣಲೆಗೆ ನಾಲ್ಕು ಚಮಚ ಎಣ್ಣೆ ಹಾಕಿ ಬಿಸಿಯಾದ ಕೂಡಲೇ ಸಣ್ಣಗೆ ಹೆಚ್ಚಿದ ಹಾಗಲಕಾಯಿಯನ್ನು ಸ್ವಲ್ಪ ಉಪ್ಪು ಬೆರೆಸಿ ಇದಕ್ಕೆ ಹಾಕಿ ಚೆನ್ನಾಗಿ ಬಾಡಿಸಿಕೊಳ್ಳಿ. ತೆಂಗಿನತುರಿಗೆ ಉಪ್ಪು, ಹಸಿಮೆಣಸು, ಸಾಸಿವೆ ಸೇರಿಸಿ ನುಣ್ಣಗೆ ರುಬ್ಬಿ ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ಇದಕ್ಕೆ ಆರಿದ ಹಾಗಲಕಾಯಿ ಹೋಳುಗಳು, ಮೊಸರು ಮತ್ತು ಬೇಕಷ್ಟು ನೀರು ಸೇರಿಸಿ ಸಾಸಿವೆಯ ಹದ ಮಾಡಿಕೊಳ್ಳಿ. ಈಗ ತಯಾರಾದ ಸಾಸಿವೆಗೆ ತುಪ್ಪದಲ್ಲಿ ಸಾಸಿವೆ ಒಗ್ಗರಣೆಯನ್ನು ಕರಿಬೇವಿನ ಜೊತೆ ನೀಡಿ.

ಕಾಡುಮಾವಿನ ಹಣ್ಣಿನ ಸಾಸಿವೆ 
ಬೇಕಾಗುವ ಸಾಮಗ್ರಿ:

ಮಾವಿನ ಹಣ್ಣು- ಎಂಟು, ತೆಂಗಿನತುರಿ- ಒಂದು ಕಪ್‌, ಸಾಸಿವೆ- ಒಂದೂವರೆ ಚಮಚ,  ಬೆಲ್ಲದ ಪುಡಿ- ಎಂಟು ಚಮಚ, ಕೆಂಪುಮೆಣಸು- ಒಂದು, ಉಪ್ಪು ರುಚಿಗೆ.

ತಯಾರಿಸುವ ವಿಧಾನ:
ಸಿಪ್ಪೆ ತೆಗೆದ ಮಾವಿನ ಹಣ್ಣಿಗೆ ಬೆಲ್ಲ ಹಾಗೂ ಉಪ್ಪು ಬೆರೆಸಿಡಿ. ತೆಂಗಿನತುರಿಗೆ ಉಪ್ಪು, ಸಾಸಿವೆ, ಕೆಂಪುಮೆಣಸು ಸೇರಿಸಿ ನಯವಾಗಿ ರುಬ್ಬಿ ಮಾವಿನಹಣ್ಣಿಗೆ ಸೇರಿಸಿ. ನಂತರ ಇದಕ್ಕೆ ಬೇಕಷ್ಟು ನೀರು ಸೇರಿಸಿ ಹದ ಮಾಡಿಕೊಳ್ಳಿ. ಈಗ ಬಹಳ ರುಚಿಯಾದ ಕಾಡುಮಾವಿನ ಹಣ್ಣಿನ ಸಾಸಿವೆ ಸರ್ವ್‌ ಮಾಡಲು ಸಿದ್ಧ.

ಸೇಬು ವಿದ್‌ ದಾಳಿಂಬೆಯ ಸಾಸಿವೆ
ಬೇಕಾಗುವ ಸಾಮಗ್ರಿ:

ಹೆಚ್ಚಿದ ಸೇಬು- ಒಂದು ಕಪ್‌, ದಾಳಿಂಬೆ- ಅರ್ಧ ಕಪ್‌, ಹೆಚ್ಚಿದ ಸೌತೆಕಾಯಿ- ಅರ್ಧ ಕಪ್‌, ಹೆಚ್ಚಿದ ದ್ರಾಕ್ಷಿ- ಅರ್ಧ ಕಪ್‌, ಮೊಸರು- ಒಂದು ಕಪ್‌, ಬೆಲ್ಲ- ಒಂದು ಚಮಚ, ತೆಂಗಿನ ತುರಿ- ಒಂದು ಕಪ್‌, ಸಾಸಿವೆ- ಒಂದು ಚಮಚ, ಉಪ್ಪು ರುಚಿಗೆ.

ತಯಾರಿಸುವ ವಿಧಾನ:
ಮಿಕ್ಸಿಂಗ್‌ ಬೌಲ್‌ಗೆ ಹೆಚ್ಚಿದ ಸೇಬು, ದಾಳಿಂಬೆ, ಸೌತೆಕಾಯಿ, ದ್ರಾಕ್ಷಿಗಳನ್ನು ಹಾಕಿ ಸ್ವಲ್ಪ ಉಪ್ಪು, ಬೆಲ್ಲ ಬೆರೆಸಿ ಮಿಶ್ರಮಾಡಿ. ಇದಕ್ಕೆ, ತೆಂಗಿನತುರಿ, ಸಾಸಿವೆ, ಹಸಿಮೆಣಸು, ಉಪ್ಪು ಸೇರಿಸಿ ನುಣ್ಣಗೆ ರುಬ್ಬಿ ಸೇರಿಸಿ. ನಂತರ, ಮೊಸರು, ಉಪ್ಪು ಹಾಗೂ ಬೇಕಷ್ಟು ನೀರು ಸೇರಿಸಿ ಹದ ಮಾಡಿಕೊಳ್ಳಿ.

ಗೀತಸದಾ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.