ಹಣ್ಣಿನ ಪಾನಕ ಆರೋಗ್ಯಕ್ಕೆ ಹಿತಕರ


Team Udayavani, Aug 8, 2017, 11:35 AM IST

panaka copy.jpg

ಇಬ್ಬುಡ್ಲ ಪಾನಕ (ಚಿಬ್ಬಡ)
ಬೇಕಾಗುವ ಸಾಮಗ್ರಿ:

ಹದವಾದ ಇಬ್ಬುಡ್ಲ- 1, ಬೆಲ್ಲದ ಚೂರು- 2 ಕಪ್‌, ಏಲಕ್ಕಿ ಹುಡಿ- 1 ಚಮಚ, ಕಾಳುಮೆಣಸಿನ ಹುಡಿ- 1 ಚಮಚ.
ತಯಾರಿಸುವ ವಿಧಾನ:
ಇಬ್ಬುಡ್ಲದ ಸಿಪ್ಪೆ ತೆಗೆದು ಮಿಕ್ಸಿಜಾರ್‌ನಲ್ಲಿ ಹಾಕಿ ನಯವಾಗಿ ರುಬ್ಬಿ ತೆಗೆಯುವ ಮೊದಲು ಬೆಲ್ಲ ಹಾಕಿ ರುಬ್ಬಿ ತೆಗೆದು ಪಾತ್ರೆಗೆ ಹಾಕಿ ಏಲಕ್ಕಿ ಹುಡಿ, ಕಾಳುಮೆಣಸಿನ ಹುಡಿ ಹಾಕಿ ಬೇಕಾದಷ್ಟು ತೆಳ್ಳಗೆ ಮಾಡಿ ತಣಿಸಿ ಕುಡಿಯಿರಿ. ಇಬ್ಬುಡ್ಲ ಸಿಪ್ಪೆ ತೆಗೆದು ಚಿಕ್ಕ ಚಿಕ್ಕ ಹೋಳು ಮಾಡಿ ಬೆಲ್ಲ , ಏಲಕ್ಕಿ ಬೆರೆಸಿ ತಿನ್ನಬಹುದು. ಸ್ವಲ್ಪ ಅವಲಕ್ಕಿ ಹಾಕಿ ಸವಿದರೆ ಹೊಟ್ಟೆ ತಣ್ಣಗಾಗುವುದು. ಅಲ್ಲದೆ ಹೊಟ್ಟೆ ತುಂಬುವುದು. ಇಬ್ಬುಡ್ಲ ತರಿ ತರಿಯಾಗಿ ಪರಿಮಳಯುಕ್ತ ಸಿಹಿ ಆಗಿರುವುದು. ಇದಕ್ಕೆ ಬೆಲ್ಲದ ಬದಲು ಸಕ್ಕರೆ ಹಾಕಿ ಸವಿದರೆ ಸ್ವಾದಿಷ್ಟವಾಗುವುದು.

ನೇರಳೆ ಹಣ್ಣಿನ ಪಾನಕ
ಬೇಕಾಗುವ ಸಾಮಗ್ರಿ:
ನೇರಳೆಹಣ್ಣು-20, ಬೆಲ್ಲದ ಹುಡಿ-1/2 ಕಪ್‌/ಸಕ್ಕರೆ, ಉಪ್ಪಿನ ಹುಡಿ ಚಿಟಿಕೆ.
ತಯಾರಿಸುವ ವಿಧಾನ:
ನೇರಳೆಹಣ್ಣು ತೊಳೆದು ಒಂದು ಪಾತ್ರೆಗೆ ಹಾಕಿ ಸ್ವಲ್ಪ ನೀರು ಹಾಕಿ ಚೆನ್ನಾಗಿ ಹಿಚುಕಿ ಬೀಜ ಬೇರ್ಪಡಿಸಿರಿ. ಬೆಲ್ಲದ ಹುಡಿ, ಉಪ್ಪು ಹಿಚುಕಿದ ನೇರಳೆಹಣ್ಣು ಮಿಕ್ಸಿ ಜಾರಿಗೆ ಹಾಕಿ ನಯವಾಗಿ ರುಬ್ಬಿ ತೆಗೆಯಿರಿ. ಫ್ರಿಜ್ ನಲ್ಲಿಟ್ಟು ತಂಪು ಮಾಡಿ ಕುಡಿಯಿರಿ. ನೇರಳೆ ಹಣ್ಣಿನ ಪಾನಕ  (ಬೀಜ) ಮಧುಮೇಹಿಗಳಿಗೆ ಉತ್ತಮ ಪಾನೀಯ.

ಸೋರೆಕಾಯಿ ಪಾನಕ
ಬೇಕಾಗುವ ಸಾಮಗ್ರಿ:
ಸಿಪ್ಪೆ ತೆಗೆದ ಸೋರೆಕಾಯಿ ಹೋಳು- 3 ಕಪ್‌, ಬೆಲ್ಲ- 2 ಕಪ್‌, ಏಲಕ್ಕಿ ಹುಡಿ- 1 ಚಮಚ.
ತಯಾರಿಸುವ ವಿಧಾನ:
ಸೋರೆಕಾಯಿ ಹೋಳು ಬೇಯಿಸಿ ತಣಿಸಿರಿ. ಬೆಲ್ಲ , ಬೇಯಿಸಿದ ಸೋರೆಕಾಯಿ ಮಿಕ್ಸಿ ಪಾತ್ರೆಗೆ ಹಾಕಿ ನಯವಾಗಿ ರುಬ್ಬಿ ತೆಗೆದು ಪಾತ್ರೆಗೆ ಹಾಕಿ ಏಲಕ್ಕಿ ಹುಡಿ ಹಾಕಿ ಬೆರೆಸಿ ತಣಿಸಿ ಕುಡಿಯಿರಿ. ಜಾಂಡೀಸ್‌ ಕಾಯಿಲೆಯವರಿಗೆ ಉತ್ತಮ ಪಾನಿಯ

ಎಸ್‌. ಜಯಶ್ರೀ ಶೆಣೈ

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.