ಮನೆಮದ್ದು : ಶ್ವೇತ ವರ್ಣದ ಹಲ್ಲುಗಳಿಗಾಗಿ


Team Udayavani, Mar 6, 2018, 9:00 AM IST

gk2.jpg

ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸಲು ನಗು ಅತೀ ಅಗತ್ಯ. ನಗು ಆಕರ್ಷಣೀಯವಾಗಿರಲು ಸುಂದರ ಹಲ್ಲುಗಳು ಅನಿವಾರ್ಯ. ಆದ್ದರಿಂದ ಹಲ್ಲುಗಳ ಬಗ್ಗೆ ಕಾಳಜಿ ವಹಿಸುವುದು ಅತೀ ಮುಖ್ಯ.  ಹಲ್ಲುಗಳು ಹಳದಿಯಾಗದಂತೆ ರಕ್ಷಿಸಲು ವಿಟಮಿನ್‌ ಎ ಅಧಿಕವಾಗಿರುವ ಹಸುರು ತರಕಾರಿಗಳ ಸೇವನೆ ಸಹಕಾರಿ. ಹಾಲು ಮತ್ತು ಹಾಲಿನ ಇತರ ಉತ್ಪನ್ನಗಳಲ್ಲಿ ಕ್ಯಾಲ್ಸಿಯಂ ಅಧಿಕ ಪ್ರಮಾಣದಲ್ಲಿರುವುದರಿಂದ ಅವುಗಳ ಸೇವನೆ ಹಲ್ಲುಗಳನ್ನು ಗಟ್ಟಿಯಾಗಿಸುತ್ತವೆ. ಅಲ್ಲದೆ ಬೆಳ್ಳಗೆ ಹೊಳೆಯುವಂತೆ ಮಾಡುತ್ತವೆ. ಎಣ್ಣೆ ತಿಂಡಿ, ಮಸಾಲೆಯುಕ್ತ ಕರುಕುರು ತಿಂಡಿಗಳು, ಚಾಕಲೇಟ್‌, ಫಾಸ್ಟ್‌ಪುಡ್‌ಗಳಿಂದ ದೂರ ಇದ್ದಷ್ಟು ಹಲ್ಲುಗಳ ಆರೋಗ್ಯ ಚೆನ್ನಾಗಿರುತ್ತದೆ  ಮತ್ತು ಅವುಗಳು ಬೆಳ್ಳಗಿರುತ್ತವೆ.

ಹಳದಿ ಹಲ್ಲುಗಳು ವ್ಯಕ್ತಿಯಲ್ಲಿ ಕೀಳರಿಮೆಗೆ ಕಾರಣವಾಗಿ ಆತ ಮಾನಸಿಕವಾಗಿ ನೊಂದುಕೊ ಳ್ಳುವಂತೆ ಮಾಡುತ್ತವೆ. ಅಲ್ಲದೆ ಹಳದಿ ಹಲ್ಲು ಹೊಂದಿರುವ ವ್ಯಕ್ತಿ ಇತರರೊಂದಿಗೆ ಮಾತನಾಡಲು, ಬೆರೆಯಲು ಹಿಂಜರಿಯುತ್ತಾರೆ. ಆದ್ದರಿಂದ ಹಳದಿ ಹಲ್ಲುಗಳಿಂದ ಮುಕ್ತಿ ಹೊಂದಲು ಕೆಲವೊಂದು ಮನೆ ಮದ್ದುಗಳನ್ನು ಬಳಸುವುದು ಉತ್ತಮ.   

ಮನೆಮದ್ದು
·  ಅಡುಗೆ ಸೋಡ, ಉಪ್ಪು, ಮಾವಿನ ಎಲೆ, ಗೇರು ಎಲೆ ಇತ್ಯಾದಿಗಳನ್ನು ಬಳಸಿ ಹಲ್ಲು ಉಜ್ಜುವುದರಿಂದ ಹೊಳಪು ಲಭಿಸುವುದು.
·  ಉಪ್ಪು, ಸೋಡಾ, ಪುದೀನ ಎಲೆಗಳನ್ನು ಬೆರೆಸಿ ಪೇಸ್ಟ ಮಾಡಿಕೊಳ್ಳಿ. ಇದನ್ನು ಹಲ್ಲುಗಳ ಮೇಲೆ ಹಚ್ಚಿ 20 ನಿಮಿಷ ಬಿಡಿ, ಅನಂತರ  ಬಿಸಿನೀರಿನಲ್ಲಿ ಬಾಯಿ ಮುಕ್ಕಳಿಸಿ. ಇದು ಹಲ್ಲು ಹಳದಿಯಾಗಿರುವುದನ್ನು ನಿವಾರಿಸುತ್ತದೆ. 
·  ಬೇವಿನ ಎಲೆಯನ್ನು ನೀರೊಳಗೆ ಹಾಕಿ ಕುದಿಸಿ, ಕಷಾಯ ಮಾಡಿ ಮೌತ್‌ವಾಶ್‌ನಂತೆ ಬಳಸಿ.
·  ಕಬ್ಬನ್ನು ಜಗಿದು ತಿನ್ನುವುದರಿಂದ ಹಲ್ಲುಗಳು ಗಟ್ಟಿಯಾಗುತ್ತವೆ. ಹಲ್ಲಿನ ಮೇಲಿನ ಕಲೆ, ಹಲ್ಲು ಹಳದಿಯಾಗುವುದನ್ನು ತಡೆಯಬಹುದು.
·  ಕ್ಯಾಲ್ಷಿಯಂ ಹೇರಳವಾಗಿರುವ ಆಹಾರ ಪದಾರ್ಥಗಳನ್ನು ಸೇವಿಸಿ. 
·  ನಿಂಬೆ ರಸವನ್ನು ಉಪ್ಪಿನೊಂದಿಗೆ ಮಿಶ್ರ ಮಾಡಿ ಹಲ್ಲುಜ್ಜುವುದರಿಂದ ಹೊಳಪು ಲಭಿಸುತ್ತದೆ.  
·  ನಿಂಬೆಹಣ್ಣಿನ ಸಿಪ್ಪೆಯಿಂದ ಉಜ್ಜಿದರೂ ಹಲ್ಲುಗಳು ಬೆಳ್ಳಗಾಗುತ್ತವೆ. 
·  ವಿವಿಧ ಜೀವಸತ್ವಗಳಿರುವ ತರಕಾರಿಗಳ ಸೇವನೆ ಉತ್ತಮ. 
·  ಹಲ್ಲುಗಳ ವರ್ಣ ಬದಲಾಯಿಸುವ ಆಂಟಿ ಬಯೋಟಿಕ್‌ಗಳ ಅನಗತ್ಯ ಸೇವನೆಯನ್ನು ಆದಷ್ಟು ಕಡಿಮೆ ಮಾಡಿ.
·  ಸ್ಟ್ರಾಬೆರಿಯಿಂದ ಉಜ್ಜುವುದರಿಂದಲೂ ಹಳದಿ ಹಲ್ಲಿನಿಂದ ಮುಕ್ತಿ ಪಡೆಯಬಹುದು.
·  ಪುದೀನ ಬಳಸಿರುವ ಟೂತ್‌ ಪೇಸ್ಟ್‌ ಬಳಕೆ ಉಪಯುಕ್ತ.
·  ತೆಂಗಿನೆಣ್ಣೆ ಒಂದು ಚಮಚ ಬಾಯಿಗೆ ಹಾಕಿ 5 ನಿಮಿಷಗಳ ಬಳಿಕ ಬಾಯಿ ಮುಕ್ಕಳಿಸಿ.
·  ಬೇವಿನ ಎಣ್ಣೆ ಬಳಸಿ ಮೌತ್‌ವಾಶ್‌ ಮಾಡಿ.
·  ತುಳಸಿ ಎಲೆಗಳನ್ನು  ನೆರಳಲ್ಲಿ ಇಟ್ಟು ಒಣಗಿಸಿ ಪುಡಿಮಾಡಿ ಹಲ್ಲುಜ್ಜಲು ಉಪಯೋಗಿಸಿ.
·  ಸ್ವಲ್ಪ ತೆಂಗಿನೆಣ್ಣೆಗೆ ಚಿಟಿಕೆಯಷ್ಟು ಅರಿಸಿ ನ ಪುಡಿ ಮಿಶ್ರ ಮಾಡಿ ಹಲ್ಲುಜ್ಜಿ. 
·  ಅರಿಸಿನವನ್ನು ಹಾಲಿನೊಂದಿಗೆ ಚೆನ್ನಾಗಿ ಮಿಶ್ರ ಮಾಡಿ ಹಲ್ಲುಜ್ಜಲು ಬಳಸಬಹುದು.

ಜಿಕೆ

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.