ಮನೆಮದ್ದು : ಶ್ವೇತ ವರ್ಣದ ಹಲ್ಲುಗಳಿಗಾಗಿ


Team Udayavani, Mar 6, 2018, 9:00 AM IST

gk2.jpg

ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸಲು ನಗು ಅತೀ ಅಗತ್ಯ. ನಗು ಆಕರ್ಷಣೀಯವಾಗಿರಲು ಸುಂದರ ಹಲ್ಲುಗಳು ಅನಿವಾರ್ಯ. ಆದ್ದರಿಂದ ಹಲ್ಲುಗಳ ಬಗ್ಗೆ ಕಾಳಜಿ ವಹಿಸುವುದು ಅತೀ ಮುಖ್ಯ.  ಹಲ್ಲುಗಳು ಹಳದಿಯಾಗದಂತೆ ರಕ್ಷಿಸಲು ವಿಟಮಿನ್‌ ಎ ಅಧಿಕವಾಗಿರುವ ಹಸುರು ತರಕಾರಿಗಳ ಸೇವನೆ ಸಹಕಾರಿ. ಹಾಲು ಮತ್ತು ಹಾಲಿನ ಇತರ ಉತ್ಪನ್ನಗಳಲ್ಲಿ ಕ್ಯಾಲ್ಸಿಯಂ ಅಧಿಕ ಪ್ರಮಾಣದಲ್ಲಿರುವುದರಿಂದ ಅವುಗಳ ಸೇವನೆ ಹಲ್ಲುಗಳನ್ನು ಗಟ್ಟಿಯಾಗಿಸುತ್ತವೆ. ಅಲ್ಲದೆ ಬೆಳ್ಳಗೆ ಹೊಳೆಯುವಂತೆ ಮಾಡುತ್ತವೆ. ಎಣ್ಣೆ ತಿಂಡಿ, ಮಸಾಲೆಯುಕ್ತ ಕರುಕುರು ತಿಂಡಿಗಳು, ಚಾಕಲೇಟ್‌, ಫಾಸ್ಟ್‌ಪುಡ್‌ಗಳಿಂದ ದೂರ ಇದ್ದಷ್ಟು ಹಲ್ಲುಗಳ ಆರೋಗ್ಯ ಚೆನ್ನಾಗಿರುತ್ತದೆ  ಮತ್ತು ಅವುಗಳು ಬೆಳ್ಳಗಿರುತ್ತವೆ.

ಹಳದಿ ಹಲ್ಲುಗಳು ವ್ಯಕ್ತಿಯಲ್ಲಿ ಕೀಳರಿಮೆಗೆ ಕಾರಣವಾಗಿ ಆತ ಮಾನಸಿಕವಾಗಿ ನೊಂದುಕೊ ಳ್ಳುವಂತೆ ಮಾಡುತ್ತವೆ. ಅಲ್ಲದೆ ಹಳದಿ ಹಲ್ಲು ಹೊಂದಿರುವ ವ್ಯಕ್ತಿ ಇತರರೊಂದಿಗೆ ಮಾತನಾಡಲು, ಬೆರೆಯಲು ಹಿಂಜರಿಯುತ್ತಾರೆ. ಆದ್ದರಿಂದ ಹಳದಿ ಹಲ್ಲುಗಳಿಂದ ಮುಕ್ತಿ ಹೊಂದಲು ಕೆಲವೊಂದು ಮನೆ ಮದ್ದುಗಳನ್ನು ಬಳಸುವುದು ಉತ್ತಮ.   

ಮನೆಮದ್ದು
·  ಅಡುಗೆ ಸೋಡ, ಉಪ್ಪು, ಮಾವಿನ ಎಲೆ, ಗೇರು ಎಲೆ ಇತ್ಯಾದಿಗಳನ್ನು ಬಳಸಿ ಹಲ್ಲು ಉಜ್ಜುವುದರಿಂದ ಹೊಳಪು ಲಭಿಸುವುದು.
·  ಉಪ್ಪು, ಸೋಡಾ, ಪುದೀನ ಎಲೆಗಳನ್ನು ಬೆರೆಸಿ ಪೇಸ್ಟ ಮಾಡಿಕೊಳ್ಳಿ. ಇದನ್ನು ಹಲ್ಲುಗಳ ಮೇಲೆ ಹಚ್ಚಿ 20 ನಿಮಿಷ ಬಿಡಿ, ಅನಂತರ  ಬಿಸಿನೀರಿನಲ್ಲಿ ಬಾಯಿ ಮುಕ್ಕಳಿಸಿ. ಇದು ಹಲ್ಲು ಹಳದಿಯಾಗಿರುವುದನ್ನು ನಿವಾರಿಸುತ್ತದೆ. 
·  ಬೇವಿನ ಎಲೆಯನ್ನು ನೀರೊಳಗೆ ಹಾಕಿ ಕುದಿಸಿ, ಕಷಾಯ ಮಾಡಿ ಮೌತ್‌ವಾಶ್‌ನಂತೆ ಬಳಸಿ.
·  ಕಬ್ಬನ್ನು ಜಗಿದು ತಿನ್ನುವುದರಿಂದ ಹಲ್ಲುಗಳು ಗಟ್ಟಿಯಾಗುತ್ತವೆ. ಹಲ್ಲಿನ ಮೇಲಿನ ಕಲೆ, ಹಲ್ಲು ಹಳದಿಯಾಗುವುದನ್ನು ತಡೆಯಬಹುದು.
·  ಕ್ಯಾಲ್ಷಿಯಂ ಹೇರಳವಾಗಿರುವ ಆಹಾರ ಪದಾರ್ಥಗಳನ್ನು ಸೇವಿಸಿ. 
·  ನಿಂಬೆ ರಸವನ್ನು ಉಪ್ಪಿನೊಂದಿಗೆ ಮಿಶ್ರ ಮಾಡಿ ಹಲ್ಲುಜ್ಜುವುದರಿಂದ ಹೊಳಪು ಲಭಿಸುತ್ತದೆ.  
·  ನಿಂಬೆಹಣ್ಣಿನ ಸಿಪ್ಪೆಯಿಂದ ಉಜ್ಜಿದರೂ ಹಲ್ಲುಗಳು ಬೆಳ್ಳಗಾಗುತ್ತವೆ. 
·  ವಿವಿಧ ಜೀವಸತ್ವಗಳಿರುವ ತರಕಾರಿಗಳ ಸೇವನೆ ಉತ್ತಮ. 
·  ಹಲ್ಲುಗಳ ವರ್ಣ ಬದಲಾಯಿಸುವ ಆಂಟಿ ಬಯೋಟಿಕ್‌ಗಳ ಅನಗತ್ಯ ಸೇವನೆಯನ್ನು ಆದಷ್ಟು ಕಡಿಮೆ ಮಾಡಿ.
·  ಸ್ಟ್ರಾಬೆರಿಯಿಂದ ಉಜ್ಜುವುದರಿಂದಲೂ ಹಳದಿ ಹಲ್ಲಿನಿಂದ ಮುಕ್ತಿ ಪಡೆಯಬಹುದು.
·  ಪುದೀನ ಬಳಸಿರುವ ಟೂತ್‌ ಪೇಸ್ಟ್‌ ಬಳಕೆ ಉಪಯುಕ್ತ.
·  ತೆಂಗಿನೆಣ್ಣೆ ಒಂದು ಚಮಚ ಬಾಯಿಗೆ ಹಾಕಿ 5 ನಿಮಿಷಗಳ ಬಳಿಕ ಬಾಯಿ ಮುಕ್ಕಳಿಸಿ.
·  ಬೇವಿನ ಎಣ್ಣೆ ಬಳಸಿ ಮೌತ್‌ವಾಶ್‌ ಮಾಡಿ.
·  ತುಳಸಿ ಎಲೆಗಳನ್ನು  ನೆರಳಲ್ಲಿ ಇಟ್ಟು ಒಣಗಿಸಿ ಪುಡಿಮಾಡಿ ಹಲ್ಲುಜ್ಜಲು ಉಪಯೋಗಿಸಿ.
·  ಸ್ವಲ್ಪ ತೆಂಗಿನೆಣ್ಣೆಗೆ ಚಿಟಿಕೆಯಷ್ಟು ಅರಿಸಿ ನ ಪುಡಿ ಮಿಶ್ರ ಮಾಡಿ ಹಲ್ಲುಜ್ಜಿ. 
·  ಅರಿಸಿನವನ್ನು ಹಾಲಿನೊಂದಿಗೆ ಚೆನ್ನಾಗಿ ಮಿಶ್ರ ಮಾಡಿ ಹಲ್ಲುಜ್ಜಲು ಬಳಸಬಹುದು.

ಜಿಕೆ

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Measles: ದಡಾರ

4-health

Tooth Health: ನಿಮ್ಮ ದವಡೆ ಸಂಧಿಯ ಆರೋಗ್ಯವೂ ಬಹಳ ಮುಖ್ಯ!

5-health

World Coma Day; ಮಾರ್ಚ್‌ 22: ವಿಶ್ವ ಕೋಮಾ ದಿನ

14-

Psychosis Recovery: ವ್ಯಕ್ತಿಯ ಮನೋರೋಗ ಚೇತರಿಕೆಯಲ್ಲಿ ನಮ್ಮ ನಿಮ್ಮ ಮತ್ತು ಸಮಾಜದ ಪಾತ್ರ ‌

13-constipation

Constipation: ಮಲಬದ್ಧತೆಯ ನಿರ್ವಹಣೆ; ಶೌಚ ಆರೋಗ್ಯಕ್ಕೆ ಪಥ್ಯಾಹಾರ ಸಲಹೆಗಳು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.