ಸಹಕಾರ ನಗರದಲ್ಲೊಂದು ಸುಂದರ ಬಸ್‌ ನಿಲ್ದಾಣ


Team Udayavani, Mar 18, 2017, 4:54 PM IST

1004.jpg

ಬಿಸಿಲ ಬೇಗೆಯಲ್ಲಿ ದಣಿದು ಬರುವ ಪ್ರಯಾಣಿಕರಿಗೆ ಈ ಬಸ್‌ ನಿಲ್ದಾಣದಲ್ಲಿ ಸಂಗೀತದ ಇಂಪಿನೊಂದಿಗೆ ಕನ್ನಡದ ಕಂಪು ಸವಿಯುವ ಅವಕಾಶ. ಜತೆಗೆ ಕನ್ನಡದ ವರ್ಣಮಾಲೆಯಿಂದ ಹಿಡಿದು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರ ಸಂಪೂರ್ಣ ಮಾಹಿತಿ. 

ಇದು ಯಲಹಂಕದ ಸಹಕಾರ ನಗರದಲ್ಲಿ ನಿರ್ಮಾಣವಾಗಿರುವ “ಸುವರ್ಣ ಕರ್ನಾಟಕ ಬಿಎಂಟಿಸಿ ಬಸ್‌ ತಂಗು ನಿಲ್ದಾಣ’ದ ವಿಶೇಷತೆ.

 ಅರಮನೆ ಹಾಗೂ ಗುಮ್ಮಟಗಳ ವಿನ್ಯಾಸದಲ್ಲಿ ಕಲ್ಲುಗಳಿಂದ ನಿರ್ಮಿಸಲಾಗಿರುವ ಈ ತಂಗುದಾಣ ಸುತ್ತಮುತ್ತಲ ಭಾಗದ ಪ್ರಯಾಣಿಕರ ಅಚ್ಚುಮೆಚ್ಚಿನ ತಾಣವೂ ಹೌದು.

ತಂಗುದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕುಳಿತುಕೊಳ್ಳಲು ಸುಸಜ್ಜಿತವಾದ ಬೆಂಚು ಕಲ್ಲುಗಳನ್ನು ಅಳವಡಿಸಲಾಗಿದೆ. ಜತೆಗೆ ಪ್ರಯಾಣಿಕರಿಗೆ ಸಮಯ ನೋಡಿಕೊಳ್ಳಲು ಗಡಿಯಾರವೂ ಇಲ್ಲಿದೆ. ಕುಡಿಯುವ ನೀರಿನ ಸೌಲಭ್ಯವೂ ಇದೆ.

ಸಹಕಾರ ನಗರದ ನಿವಾಸಿ ಸಮಾಜ ಸೇವಕ ಎಂ.ಎಸ್‌.ಸುರೇಶ್‌ ಕುಮಾರ್‌ ಎಂಬುವವರು ಬಸ್‌ ತಂಗುದಾಣವನ್ನು ಸ್ವಂತ ವೆಚ್ಚದಲ್ಲಿ  ನಿರ್ಮಿಸಿದ್ದು, ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಎರಡು ಸಿ.ಸಿ ಟಿ.ವಿ ಕ್ಯಾಮೆರಾಗಳನ್ನೂ ಅಳವಡಿಸಲಾಗಿದೆ.  ತಂಗುದಾಣದ ಸ್ವತ್ಛತೆಯನ್ನು ನೋಡಿಕೊಳ್ಳಲು ಪ್ರತ್ಯೇಕವಾಗಿ ಒಬ್ಬರು ಸಿಬ್ಬಂದಿಯನ್ನು ನೇಮಿಸಲಾಗಿದೆ.

ಬಸ್‌ ನಿಲ್ದಾಣ ಸಂಪೂರ್ಣ ಕನ್ನಡಮಯವಾಗಿದ್ದು ಕನ್ನಡದ ವರ್ಣಮಾಲೆ, ಕನ್ನಡದ ಪ್ರಸಿದ್ಧ ಸಾಹಿತಿ ಲೇಖಕರು, ರಾಜ ಮನೆತನಗಳು, ದಾಸರು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಕನ್ನಡ ಶಾಸನಗಳು, ರಾಜ್ಯದ ಗಿರಿಧಾಮಗಳು, ಪ್ರೇಕ್ಷಣೀಯ ಸ್ಥಳಗಳು, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಕನ್ನಡಿಗರು, ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತ ಕನ್ನಡಿಗರು, ಕನ್ನಡ ಚಲನಚಿತ್ರ ಕ್ಷೇತ್ರದ ಮಹನೀಯರು… ಹೀಗೆ ಕನ್ನಡದ ಎಲ್ಲ ವಿಭಾಗಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳ ಪರಿಚಯ ಮಾಹಿತಿ ಸಹ ಇದೆ. ಬಸ್‌ ತಂಗುದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕನ್ನಡದ ಎಲ್ಲ ದಿನ ಪತ್ರಿಕೆಗಳೂ ಲಭ್ಯವಿದೆ.

ಸಂಗೀತದ ಇಂಪು
ತಂಗುದಾಣದಲ್ಲಿ ಸಂಗೀತ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಬೆಳಗಿನಿಂದ ರಾತ್ರಿಯವರೆಗೆ ನಿರಂತರವಾಗಿ ಸಂಗೀತ ಕೇಳಬಹುದಾಗಿದೆ. ಬೆಳಗ್ಗೆ 6ರಿಂದ 7ರವರೆಗೆ ಸುಪ್ರಭಾತ, 7-8 ಭಕ್ತಿ ಗೀತೆಗಳು, 8 ರಿಂದ 1 ಜಾನಪದ ಗೀತೆಗಳು, 1ರಿಂದ 4ರವರೆಗೆ ಶಾಸ್ತ್ರೀಯ ಸಂಗೀತ, ಸಂಜೆ 4ರಿಂದ 8ವರೆಗೆ ಹಳೆಯ ಕನ್ನಡ ಚಲನಚಿತ್ರ ಗೀತೆಗಳು, ರಾತ್ರಿ 8 ರಿಂದ 12ರ ತನಕ ಕನ್ನಡ ಹೊಸ ಚಲನಚಿತ್ರ ಗೀತೆಗಳನ್ನು ಕೇಳಿ ಆನಂದಿಸಬಹುದಾಗಿದೆ. 

*ಇಂತಹ ಒಳ್ಳೆಯ ಕೆಲಸಗಳನ್ನು ಮಾಡಿರುವವರಿಗೆ ನಾಗರಿಕರು ಧನ್ಯವಾದಗಳನ್ನು ಹೇಳಬೇಕು. ನಗರದ ಎಲ್ಲ ಭಾಗಗಳಲ್ಲಿ ಇಂತಹ ನಿಲ್ದಾಣಗಳ ನಿರ್ಮಾಣಕ್ಕೆ ಬಿಬಿಎಂಪಿ ಮುಂದಾಗಬೇಕು.
– ಆರ್‌.ಎಸ್‌.ಚಿಕ್ಕಮs…, ಸಹಕಾರ ನಗರ ನಿವಾಸಿ

*ಬಸ್‌ ನಿಲ್ದಾಣಕ್ಕೆ ಬಂದು ಬಸ್‌ಗಾಗಿ ಕಾಯುವ ಪ್ರಯಾಣಿಕರು ಬಸ್‌ ಬರುವ ವೇಳೆಯೊಳಗೆ ಕನ್ನಡ ಕುರಿತು ಹಲವಾರು ಮಾಹಿತಿ ಪಡೆಯಬಹುದು. ಇದರೊಂದಿಗೆ ಕನ್ನಡ ಹಲವು ಮಾದರಿಯ ಸಂಗೀತ ಪ್ರಕಾರಗಳನ್ನು ಸವಿಯುವ ಅವಕಾಶ ಇಲ್ಲಿದೆ. 
– ಶಶಿಕುಮಾರ್‌, ಸಂಜೀವಿನಿ ನಗರ ನಿವಾಸಿ

*ಬಸ್‌ ನಿಲ್ದಾಣದಲ್ಲಿ ಸಂಗೀತ ಕೇಳುವ ವ್ಯವಸ್ಥೆಯನ್ನು ಕಲ್ಪಿಸಿರುವುದು ಉತ್ತಮ ಸಂಗತಿಯಾಗಿದೆ. ಇದರೊಂದಿಗೆ ಕನ್ನಡ ಕುರಿತು ಜಾಗೃತಿ ಮೂಡಿಸುವ ಫ‌ಲಕಗಳು ಮತ್ತು ಸಂಚಾರಿ ನಿಯಮಗಳ ಪಾಲನೆ ಕುರಿತಂತೆ ಸಂದೇಶಗಳು ಮತ್ತು ಮಹಿಳೆಯರ ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಿರುವುದು ಅಭಿನಂದನೀಯ. 
– ಮಹೇಶ್‌, ಆರ್‌.ಟಿ.ನಗರ

– ವೆಂ. ಸುನೀಲ್‌ಕುಮಾರ್‌ 

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.