ಸಂಚಾರಿ ಗೊಂಬೆಯ ಸಮಾಚಾರ


Team Udayavani, Sep 29, 2018, 2:42 PM IST

48.jpg

ಗೊಂಬೆಯಾಟ ಎಂದರೆ ಈಗಿನ ಮಕ್ಕಳ ಕಣ್ಮುಂದೆ ಕಾರ್ಟೂನ್‌ ಗೊಂಬೆಗಳೇ ಕುಣಿಯುತ್ತವೇನೋ. ಒಂದು ಕಾಲದಲ್ಲಿ ಮನೆಮನೆಯ ಮಾತಾಗಿದ್ದ ಗೊಂಬೆಯಾಟ ಕ್ರಮೇಣ ನೇಪಥ್ಯಕ್ಕೆ ಸರಿಯುತ್ತಾ ಬಂತು. ಈ ಪುರಾತನ ಕಲೆಯನ್ನು ಜೀವಂತವಾಗಿರಿಸಲು ಪ್ರಯತ್ನಗಳು ನಡೆಯುತ್ತಲೇ ಇದ್ದು, ಆ ನಿಟ್ಟಿನಲ್ಲಿ ಪುತ್ಥಳಿ ಕಲಾರಂಗ ಸಂಚಾರಿ ಸೂತ್ರಗೊಂಬೆಯಾಟ ರಂಗಶಾಲೆಯ ಕೆಲಸ ಗುರುತಿಸುವಂಥದ್ದು. ವೃತ್ತಿಯಲ್ಲಿ ಅಧ್ಯಾಪಕರಾಗಿರುವ ದತ್ತಾತ್ರೇಯ ಅರಳಿಕಟ್ಟೆ, ಮತ್ತವರ ತಂಡ ಈ ಶಾಲೆಯ ಮೂಲಕ ಗೊಂಬೆಯಾಟಕ್ಕೆ ಜೀವ ತುಂಬಿದೆ. 

ಸೂತ್ರ ಸಲಾಕೆ ಗೊಂಬೆಯಾಟ…
ಗೊಂಬೆಯಾಟದಲ್ಲಿ ಒಟ್ಟು 5 ಪ್ರಕಾರಗಳಿವೆ. ಸೂತ್ರ ಗೊಂಬೆ, ಸಲಾಕೆ ಗೊಂಬೆ, ಸೂತ್ರ ಸಲಾಕೆ ಗೊಂಬೆ, ತೊಗಲು ಗೊಂಬೆ ಹಾಗೂ ಕೈಗೊಂಬೆ. ಪುತ್ಥಳಿ ಕಲಾರಂಗಶಾಲೆ, ಸೂತ್ರ ಸಲಾಕೆ ಗೊಂಬೆಗಳ ಪ್ರದರ್ಶನದಲ್ಲಿ ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಿದೆ. ಈ ಗೊಂಬೆಗಳು ಮೂರೂವರೆ ಅಡಿ ಎತ್ತರವಿದ್ದು, ಸುಮಾರು 8 ಕೆ.ಜಿ. ತೂಗುತ್ತವೆ. ಮರದಿಂದ ಮಾಡುವ ಈ ಗೊಂಬೆಗಳನ್ನು, ಶಿಲ್ಪಶಾಸ್ತ್ರಕ್ಕೆ ಅನುಗುಣವಾಗಿ ಅಲಂಕರಿಸಲಾಗುತ್ತದೆ. ಈ ಗೊಂಬೆಯಾಟ, ಪುರಾಣ ಪ್ರಸಂಗಗಳನ್ನು ಆಧರಿಸಿದ್ದಾಗಿರುತ್ತವೆ.

ರಂಜನೆ, ಬೋಧನೆ…
ಕುಮಾರ ಸಂಭವ, ಗಿರಿಜಾ ಕಲ್ಯಾಣ, ಕೃಷ್ಣ ತುಲಾಭಾರ, ಶ್ರೀಕೃಷ್ಣ ಪಾರಿಜಾತ, ಹನುಮತ್‌ ವಿಲಾಸ್‌, ಲಂಕಾದಹನ… ಇತ್ಯಾದಿ ಪ್ರಸಂಗಗಳ ಮೂಲಕ ಜನರನ್ನು ರಂಜಿಸುವುದಲ್ಲದೆ, ಜನಸಂಖ್ಯಾಸ್ಫೋಟ, ಪರಿಸರ ಮಾಲಿನ್ಯ, ಸ್ತ್ರೀ ಶಿಕ್ಷಣ ಮುಂತಾದ ಸಮಸ್ಯೆಗಳನ್ನೂ ಗೊಂಬೆಯಾಟಕ್ಕೆ ಅಳವಡಿಸಿ ಅರಿವು ಮೂಡಿಸಲಾಗುತ್ತಿದೆ. ಅಷ್ಟೇ ಅಲ್ಲದೆ, ಗೊಂಬೆ ರಚನೆ ತರಬೇತಿಯನ್ನೂ ದತ್ತಾತ್ರೇಯ ಮತ್ತು ತಂಡ ನೀಡುತ್ತದೆ. ಇದುವರೆಗೆ ದೇಶ- ವಿದೇಶಗಳಲ್ಲಿ ನಡೆದಿರುವ ಈ ಕಾರ್ಯಾಗಾರಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
  ಅಂದಹಾಗೆ, ದತ್ತಾತ್ರೇಯ ಅವರು ಮೂಲತಃ ಶೃಂಗೇರಿ ಸಮೀಪದ ಅರಳಿಕಟ್ಟೆಯವರು. ವಿದ್ಯಾರ್ಥಿ ದಿಶೆಯಲ್ಲಿ ರಂಗಭೂಮಿಯ ಬಗ್ಗೆ ಆಸಕ್ತಿ ಹೊಂದಿದ್ದ, ಇವರು ನಂತರದ ದಿನಗಳಲ್ಲಿ ವಿಭಿನ್ನ ಸಾಹಸಕ್ಕೆ ಕೈ ಹಾಕಿದರು. ಆ ಫ‌ಲವೇ ಸಂಚಾರಿ ಪುತ್ಥಳಿ ಕಲಾರಂಗ ಶಾಲೆ. ಇವರಿಗೆ ಆರ್ಯಭಟ ಪ್ರಶಸ್ತಿಯೂ ಸೇರಿ ರಾಷ್ಟ್ರ- ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.

ಸಪ್ತ ಕಲಾವಿದರ ಸಂಚಾರಿ ತಂಡ
7 ಕಲಾವಿದರಿರುವ ಈ ತಂಡ, ಸುಮಾರು 35 ವರ್ಷಗಳಿಂದ, ಜನರು ಕರೆದಲ್ಲಿಗೇ ಹೋಗಿ ವಿಭಿನ್ನ ಪ್ರಯೋಗಗಳ ಮೂಲಕ ಮನರಂಜಿಸುತ್ತಾ ಬಂದಿದೆ. ದತ್ತಾತ್ರೇಯ ಅವರು, ಬಿ.ಎಚ್‌.ಎಸ್‌. ವಿದ್ಯಾಸಂಸ್ಥೆಯಲ್ಲಿ ಅಧ್ಯಾಪಕರಾಗಿದ್ದುಕೊಂಡೇ ತಂಡವನ್ನು ಮುನ್ನಡೆಸುತ್ತಿದ್ದಾರೆ. 

ಬಳಕೂರು ವಿ.ಎಸ್‌. ನಾಯಕ್‌ 

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.