ಲಕ್ಷ ದೀಪ!  ಚಿತ್ರಶಾಲೆಯಲಿ ಹಣತೆಗಳ ಶಾಪಿಂಗ್‌


Team Udayavani, Oct 27, 2018, 1:16 PM IST

5665.jpg

ಹಬ್ಬ ಹರಿದಿನಗಳಲ್ಲಿ ಪೂಜೆ, ಅಡುಗೆ, ಮನೆಯ ಅಲಂಕಾರ ಇದ್ದದ್ದೇ. ಈ ಸಂದರ್ಭಗಳಲ್ಲಿ ಅಗತ್ಯವಾಗಿ ಬೇಕಾದುದು ದೀಪಗಳು, ಹಣತೆಗಳು. ಅವುಗಳನ್ನು ಆನ್‌ಲೈನ್‌ನಲ್ಲಿ ಖರೀದಿಸಲೂ ಹಲವರಿಗೆ ಮನಸ್ಸಾಗದು. ಕಣ್ಣಾರೆ ಕಂಡು, ಮುಟ್ಟಿ, ಗುಣಮಟ್ಟ, ಬಣ್ಣ ಎಲ್ಲಾ ಗಮನಿಸಿ ಕೊಳ್ಳುವುದೆಂದರೆ ಅನೇಕರಿಗೆ ಬಲು ಇಷ್ಟ. ದೀಪಾವಳಿಯೂ ಸಮೀಪಿಸುತ್ತಿರುವುದರಿಂದ ಮನೆಗಳಲ್ಲಿ ಹಬ್ಬಕ್ಕೆ ತಯಾರಿ ಈಗಲೇ ಶುರುವಾಗಿರುತ್ತದೆ. ಈ ಸಂದರ್ಭದಲ್ಲಿ ಹಣತೆಗಳದೇ ಸಂತೆ ಇದ್ದರೆ ಎಷ್ಟು ಚೆನ್ನ ಅಲ್ಲವೇ? ಅದೀಗ ಚಿತ್ರಕಲಾ ಪರಿಷತ್ತಿನಲ್ಲಿ ನಡೆಯುತ್ತಿದೆ. ಹತ್ತು ದಿನಗಳ “ಬೆಂಗಳೂರು ಉತ್ಸವ’ದಲ್ಲಿ ಹಬ್ಬದ ಸಾಮಗ್ರಿಗಳ ಬೃಹತ್‌ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆಯಾಗಿದೆ. 

ದೀಪಗಳ ಸಾಲು
ಬೆಳಕಿನ ಹಬ್ಬಕ್ಕೆ ಪ್ರಮುಖವಾಗಿ ಬೇಕಾದ ದೀಪಗಳ ಬೃಹತ್‌ ಸಂಗ್ರಹ ಇಲ್ಲಿದೆ. ದೇಶದ ವಿವಿಧ ಭಾಗಗಳ ಕಲಾಕಾರರು, ಲೋಹ, ಗಾಜು, ಕಲ್ಲು, ಮರ ಇತ್ಯಾದಿ ವಸ್ತುಗಳಿಂದ ರಚಿಸಿರುವ ದೀಪಗಳನ್ನು ಇಲ್ಲಿ ಪ್ರದರ್ಶನಕ್ಕಿಟ್ಟಿದ್ದಾರೆ. ಕರಕುಶಲ ವಸ್ತುಗಳು, ಪೂಜಾ ಸಾಮಗ್ರಿಗಳು, ಅಲಂಕಾರಿಕ ವಸ್ತುಗಳು, ಆಭರಣಗಳು, ಮೂರ್ತಿಗಳು, ಮನೆ ಮಂದಿಗೆ ಬೇಕಾದ ಬಟ್ಟೆಗಳು, ಸಿಹಿ ತಿಂಡಿಗಳೂ ಇಲ್ಲಿ ಲಭ್ಯ. 

ನೂರಾರು ಮಳಿಗೆಗಳು 
ಕಾಶ್ಮೀರದಿಂದ ಕಾಂಜೀಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು, ರೇಷ್ಮೆ ಸಹಕಾರ ಸಂಘಗಳೂ ಸೇರಿ 100ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಕರಕುಶಲ ಉತ್ಪನ್ನಗಳು ಪ್ರದರ್ಶನಕ್ಕಿವೆ. ಹುಲ್ಲಿನ ಹಾಸು, ಬೆಳ್ಳಿಯ ಸೂಕ್ಷ್ಮಕೆತ್ತನೆಯ ಆಭರಣಗಳು, ಸೆಣಬಿನ ಚಪ್ಪಲಿ, ಅಂದದ ಆಟಿಕೆಗಳು, ಜವಳಿ ಮತ್ತು ಗೃಹೋಪಾಲಂಕಾರಿ ಸಾಮಗ್ರಿಗಳು ಸೇರಿದಂತೆ ಅನೇಕ ಕರಕುಶಲ ವಸ್ತುಗಳು ಲಭ್ಯ. ಕಣ್ಮನ ಸೆಳೆಯುವ ಪುರಾತನ ಹಿತ್ತಾಳೆಯ ಕರಕುಶಲ ವಸ್ತುಗಳು, ಸೌರ ಚಿತ್ರಕಲಾಕೃತಿಗಳು, ಬೆಳ್ಳಿಯ ಆಭರಣಗಳು, ಆಧುನಿಕತೆಯ ಹಿನ್ನೆಲೆಯಲ್ಲಿ ಪುರಾತನ ಸೊಬಗನ್ನು ಬಿಂಬಿಸಲಿವೆ. ಪೆಂಡೆಟ್‌ಗಳು, ಬಳೆಗಳು, ಹೇರ್‌ಪಿನ್‌ಗಳಷ್ಟೇ ಅಲ್ಲದೆ ಮುತ್ತಿನ ಆಭರಣದ ಕುಂಕುಮ ಬಾಕ್ಸ್‌ಗಳೂ ಕಣ್ಮನ ಸೆಳೆಯುತ್ತವೆ. ಉತ್ಸವದಲ್ಲಿ ಪ್ರತಿದಿನ ಸಂಜೆ, ಸಂಗೀತ ಕಾರ್ಯಕ್ರಮಗಳೂ ನೀಡಲಿದೆ. 

ಎಲ್ಲಿ?: ಕರ್ನಾಟಕ ಚಿತ್ರಕಲಾ ಪರಿಷತ್‌, ರೇಸ್‌ ಕೋರ್ಸ್‌ ರಸ್ತೆ
ಯಾವಾಗ?: ಅಕ್ಟೋಬರ್‌ 27- ನವೆಂಬರ್‌ 4, ಬೆಳಗ್ಗೆ 11- 7.30
ಪ್ರವೇಶ: ಉಚಿತ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.