ಮಸ್ತ್ ರುಚಿಯ ಮತ್ಸ್ಯ 


Team Udayavani, Mar 2, 2019, 12:30 AM IST

300-d.jpg

ಬೆಂಗಳೂರಿಗೆ ಕಡಲು ಬಹಳ ದೂರ. ತಾಜಾ ಮೀನುಗಳನ್ನು ಫ್ರೀಜ್‌ ಮಾಡಿ, ಒಂದೆರಡು ದಿನಗಳ ಬಳಿಕ ಬಳಕೆ ಮಾಡುವ ಈ ಮಹಾನಗರದಲ್ಲಿ ಒಂದು ಭಿನ್ನ ಹೋಟೆಲ್‌ ಇದೆ. ಇಲ್ಲಿ ಎಲ್ಲವೂ ಫ್ರೆಶ್‌. ಅಷ್ಟೇ ಅದ್ಭುತ ರುಚಿ. ಆ ದಿನದ ಮೀನನ್ನು ಆ ದಿನವೇ ಬಳಸುವ ಪರಿಪಾಠ ಇಲ್ಲಿನ ಮೀನೂಟದ ಸ್ಪೆಷಾಲಿಟಿ. ಅದಕ್ಕೇ ಜನ “ಮತ್ಸ್ಯ’ ಹೋಟೆಲ್‌ ಅಂದ್ರೆ, ಹುಡುಕಿಕೊಂಡು ಬಂದು, ಹೊಟ್ಟೆ ಭರ್ತಿ ಮಾಡ್ಕೊಂಡು ಹೋಗ್ತಾರೆ. ಮೀನು ಅಂದ್ರೆ, ಕಾಣೆ, ಬೂತಾಯಿ, ಬಂಗಡೆ ಅಷ್ಟೇ ಅಂತ ಅಂದುಕೊಂಡವರಿಗೆ ಇಲ್ಲಿ ಸಾಕಷ್ಟು ಆಯ್ಕೆಗಳಿವೆ. ಪಕ್ಕಾ ಕರಾವಳಿ ರುಚಿ. ಚಪ್ಪರಿಸಿ ತಿನ್ನುವಷ್ಟು ರುಚಿಯ ಚಮತ್ಕಾರ.

ಹೆಸರೇ “ಮತ್ಸ್ಯ’, ಮೀನೇ ಸ್ಪೆಷಲ್‌!
ಶೇಷಾದ್ರಿಪುರದಲ್ಲಿ “ಮತ್ಸ್ಯ’ ಹೋಟೆಲ್‌ ಅನ್ನು ಪ್ರಾರಂಭಿಸಿದವರು, ಬಂಟ್ವಾಳದ ಸಂತೋಷ ಸಾಲಿಯಾನ ಮತ್ತು ಮಂಗಳೂರಿನ ಮನೋಜ ಕುಮಾರ ಎಂಬವರು. ಮಂಗಳೂರಿನ ಮೀನಿನ ಅಡುಗೆ ಹೇಗಿರುತ್ತದೆ ಎಂಬುದರ ಬಗ್ಗೆ ಸ್ವಾನುಭವ ಹೊಂದಿದ್ದ ಕರಾವಳಿಯ ಈ ಮಿತ್ರರು, ತಮ್ಮೂರಿನ ಅಪ್ಪಟ ಮೀನಿನ ಸ್ವಾದವನ್ನು ಉಣ ಬಡಿಸುವ ಉದ್ದೇಶದಿಂದ ಈ ಹೋಟೆಲ್‌ ಅನ್ನು ತೆರೆದರು. 2018ರ ಸೆಪ್ಟೆಂಬರ್‌ ನಲ್ಲಿ ಪ್ರಾರಂಭವಾದ ಈ ಹೋಟೆಲ್‌, ಅತಿ ಕಡಿಮೆ ಅವಧಿಯಲ್ಲಿ, ತನ್ನ ಶುಚಿ-ರುಚಿಯ ಕಾರಣದಿಂದ ಹೆಸರು ಮಾಡು¤ತಿದೆ. ಇಲ್ಲಿನ ನುರಿತ ಬಾಣಸಿಗರು ಮಂಗಳೂರು ಶೈಲಿಯಲ್ಲಿ ಮೀನಿನ ಅಡುಗೆ ಮಾಡುವುದರಲ್ಲಿ ಎತ್ತಿದ ಕೈ.

ಏನೇನ್‌ ಸಿಗತ್ತೆ?
ಬಂಗುಡೆ, ಬೂತಾಯಿ, ಬೋಂಡಸ್‌, ಅಂಜಲ್‌, ಪಾಂಪ್ಲೆಟ್‌, ಕೊಡೈಕಾಣೆ, ಸಿಲ್ವರ್‌ μಷ್‌, ಹೊಳೆ ಮೀನು… ಹೀಗೆ ಥರಹೇವಾರಿ ಮೀನುಗಳಿಂದ ಮಾಡುವ ಬಗೆಬಗೆಯ ಖಾದ್ಯಗಳು ಇಲ್ಲಿ ಸಿಗುತ್ತವೆ. ನಾಟಿ ಸ್ಟೈಲ್‌ ಜೊತೆಗೆ ನೀರು ದೋಸೆ, ಮಂಗಳೂರು ಕಡುಬು, ಕೇರಳ ಪರೋಟ, ಕುಚ್ಚಲಕ್ಕಿ ಅನ್ನ, ಒತ್ತು ಶ್ಯಾವಿಗೆಯನ್ನೂ ಸವಿಯಬಹುದು.

ಬರೀ ಮೀನಷ್ಟೇ ಅಲ್ಲ… ವೆಜ್‌ ಕರಿ ರೈಸ್‌, ಎಗ್‌ ಕರಿ ರೈಸ್‌, ಮಟನ್‌ ಕರಿ ರೈಸ್‌, ಚಿಕನ್‌ ಕರಿ ರೈಸ್‌, ಚಿಕನ್‌  ರೋಸ್ಟ್‌, ಚಿಕನ್‌ ಸುಕ್ಕಾ, ಚಿಕನ್‌ ಕಬಾಬ್‌, ಚಿಕನ್‌ ಫ್ರೈ, ಚಿಕನ್‌ ಚಿಲ್ಲಿ, ಚಿಕನ್‌ ಮಂಚೂರಿಯನ್‌, ಚಿಕನ್‌ ಖೊಲ್ಲಾಪುರಿ, ಚಿಕನ್‌ ಬಿರಿಯಾನಿ, ಮಟನ್‌ ಬಿರಿಯಾನಿ, ಎಗ್‌ ಬಿರಿಯಾನಿ, ವೆಜ್‌ ಬಿರಿಯಾನಿ, ಪ್ರಾನ್ಸ್‌ ಬಿರಿಯಾನಿ ಮುಂತಾದವೂ ಲಭ್ಯ. ಸಿನಿಮಾ ನಟರಾದ ಆದಿತ್ಯ, ಕೋಮಲ್‌, ರೇಖಾ ಅವರಿಗೆ ಈ ಹೋಟೆಲ್‌ ಅಂದ್ರೆ ಬಲು ಇಷ್ಟ.

ಆರೋಗ್ಯಭರಿತ ದೇಸಿರುಚಿ ಹೋಟೆಲ್‌ ಊಟ ಮಾಡಿ ಹೊಟ್ಟೆ ಕೆಟ್ಟಿತು ಅಂತ ಇಲ್ಲಿನ ಗ್ರಾಹಕರು ಹೇಳುವುದಿಲ್ಲ. ಯಾಕಂದ್ರೆ, ಇಲ್ಲಿನ ಯಾವ ಅಡುಗೆಗೂ ಸೋಡಾ, ಕೃತಕ ಬಣ್ಣ, ಟೇಸ್ಟಿಂಗ್‌ ಪೌಡರ್‌
ಗಳನ್ನು ಬಳಸುವುದಿಲ್ಲ. ಮತ್ತೂಂದು ವಿಶೇಷವೆಂದರೆ, ಕೆಲವು ಗ್ರಾಹಕರು ಎಣ್ಣೆಯಲ್ಲಿ ಕರಿದ ತಿನಿಸುಗಳನ್ನು ತಿನ್ನಲು ಹಿಂಜರಿಯುತ್ತಾರೆ. ಅಂಥವರಿಗಾಗಿ ಈ ಹೋಟೆಲ್‌ನಲ್ಲಿ, ಪುದೀನಾ, ಶುಂಠಿ, ಬೆಳ್ಳುಳ್ಳಿ, ಮೆಣಸು, ಉಪ್ಪು ಹಾಕಿ ಮಾಡಿದ ಪೇಸ್ಟ್‌ ಅನ್ನು ಮೀನಿಗೆ ಸವರಿ, ಅದನ್ನು ಬಾಳೆಎಲೆಯಲ್ಲಿ ಕಟ್ಟಿ, ತಂದೂರ್‌ ಹಬೆಯಲ್ಲಿಟ್ಟು ಬೇಯಿಸುತ್ತಾರೆ. ಈ ರೀತಿ ಖಾದ್ಯ ತಯಾರಿಸುವ ಹೋಟೆಲ್‌ಗ‌ಳು ಬಹಳ ವಿರಳ.

ಕುಡ್ಲದ ಮೀನಿನ ರುಚಿ ಕಂಡಿರಾ?

ರುಚಿ ಮಂಗಳೂರಿನದ್ದು ನಿಜ.ಆದರೆ, ಮೀನು ಎಲ್ಲಿಯದ್ದು ಅಂದುಕೊಂಡ್ರಾ? ಅದು ಕೂಡ ಕುಡ್ಲದ್ದೇ. ಒಂದೆರಡು ದಿನದ ಹಿಂದಿನ ಮೀನುಗಳನ್ನು ಫ್ರೀಜ್‌ ಮಾಡಿ, ಬಳಸುವ ಹೋಟೆಲ್‌ ಅಲ್ಲ ಇದು. ಪ್ರತಿದಿನವೂ ಮಂಗಳೂರಿನಿಂದ ತಾಜಾ ಮೀನುಗಳನ್ನು ತರಿಸಿಕೊಳ್ಳಲಾಗುತ್ತದೆ. ಬಾಳೆ ಎಲೆ ಊಟದಲ್ಲಿ ಆ ಮೀನಿನ ಖಾದ್ಯಗಳನ್ನು ಸವಿಯುವ ಗಮ್ಮತ್ತೇ ಬೇರೆ.

ಎಲ್ಲಿದೆ?:
ಮತ್ಸ್ಯ, 33,
1ನೇ ಮುಖ್ಯರಸ್ತೆ,ಸಿಂಡಿಕೇಟ್‌ ಬ್ಯಾಂಕ್‌ನಪಕ್ಕ, ಶೇಷಾದ್ರಿಪುರ
ಸಮಯ:ಮ. 12- ರಾ. 12
ದೂ.ಸಂಖ್ಯೆ:080-23364777,9740017171

ಬಳಕೂರು ವಿ.ಎಸ್‌. ನಾಯಕ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.