ಸ್ತ್ರೀಯರಿಗೆ ಭಾರತ ಅಪಾಯಕಾರಿ


Team Udayavani, Jun 27, 2018, 12:04 PM IST

suddikosha.png

ಜಗತ್ತಿನಲ್ಲೇ ಮಹಿಳೆಯರಿಗೆ ಅತ್ಯಂತ ಅಪಾಯಕಾರಿ ದೇಶ ಭಾರತ. ಹೀಗೆಂದು ಹೇಳಿರುವುದು ಥಾಮ್ಸನ್‌ ರಾಯಿಟರ್ಸ್‌ ಫೌಂಡೇಷನ್‌ ನಡೆಸಿದ ಸಮೀಕ್ಷೆ. ವಿಶ್ವಾದ್ಯಂತದ 548 ಮಂದಿಯ ಅಭಿಪ್ರಾಯ ಪಡೆದು ಈ ತೀರ್ಮಾನಕ್ಕೆ ಬರಲಾಗಿದೆ. ಈ ಸಮೀಕ್ಷೆಯ ಕುರಿತು ಮಾಹಿತಿ ಇಲ್ಲಿದೆ.

ಸಮೀಕ್ಷೆ ಮಾಡಿದ್ದು?
ಥಾಮ್ಸನ್‌ ರಾಯಿಟರ್ಸ್‌ 
ಫೌಂಡೇಷನ್‌ನ 550 ತಜ್ಞರು

ನಡೆದಿದ್ದು ಹೇಗೆ?
ಮಾ.26ರಿಂದ ಮೇ 4ರವರೆಗೆ ಆನ್‌ಲೈನ್‌, ಫೋನ್‌ ಹಾಗೂ ಖುದ್ದು ಭೇಟಿಯ ಮೂಲಕ ವಿಶ್ವಾದ್ಯಂತದ 548 ಮಂದಿಯ ಅಭಿಪ್ರಾಯ ಸಂಗ್ರಹ

2011ರ ಸಮೀಕ್ಷೆಯಲ್ಲಿ ಅಫ್ಘಾನ್ ಮೊದಲ ಸ್ಥಾನದಲ್ಲಿತ್ತು. ನಂತರದ ಸ್ಥಾನಗಳನ್ನು ರಿಪಬ್ಲಿಕ್‌ ಆಫ್ ಕಾಂಗೋ, ಪಾಕಿಸ್ತಾನ, ಭಾರತ ಮತ್ತು ಸೊಮಾಲಿಯಾ ಇತ್ತು.

83% 2007ರಿಂದ 2016ರ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆದ ಹೆಚ್ಚಳ
04 ಪ್ರತಿ ಗಂಟೆಗೆ ಭಾರತದಲ್ಲಿ ದಾಖಲಾಗುವ ಅತ್ಯಾಚಾರ ಪ್ರಕರಣಗಳ ಸಂಖ್ಯೆ.

10ನೇ ಸ್ಥಾನ ಅಮೆರಿಕಕ್ಕೆ ಇತ್ತೀಚಿನ ತಿಂಗಳಲ್ಲಿ ಅಮೆರಿಕದಾದ್ಯಂತ ಲೈಂಗಿಕ ದೌರ್ಜನ್ಯದ ವಿರುದ್ಧ ನಡೆದ “ಮೀ ಟೂ’ ಮತ್ತು “ಟೈಮ್‌ ಈಸ್‌ ಅಪ್‌’ ಅಭಿಯಾನವು ಅಮೆರಿಕವನ್ನು ಟಾಪ್‌ 10ರ ಸ್ಥಾನಕ್ಕೆ ಕೊಂಡೊಯ್ದಿದೆ. 

ಸಮೀಕ್ಷೆ ಹೇಳಿದ್ದೇನು?
ಭಾರತದಲ್ಲಿ ನಿರ್ಭಯಾ ಪ್ರಕರಣದ ಬಳಿಕವೂ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ನಡೆದಿಲ್ಲ ಎಂದು ವರದಿ ಹೇಳಿದೆ. ಜತೆಗೆ, ಭಾರತವು ಮಾನವ ಕಳ್ಳಸಾಗಣೆ, ಲೈಂಗಿಕ ದಾಸ್ಯ, ಲೈಂಗಿಕೇತರ ಹಿಂಸೆ, ಹೆಣ್ಣು ಭ್ರೂಣ ಹತ್ಯೆ, ಒತ್ತಾಯಪೂರ್ವಕ ವಿವಾಹ ಮತ್ತಿತರ ವಿಚಾರಗಳಲ್ಲಿ ಅತ್ಯಂತ ಅಪಾಯಕಾರಿ ದೇಶ ಎಂಬ ಕುಖ್ಯಾತಿಗೂ ಪಾತ್ರವಾಗಿದೆ ಎಂದಿದೆ.

ಸಮೀಕ್ಷೆ ತಿರಸ್ಕರಿಸಿದ ಭಾರತ
ಭಾರತವು ಅಪಾಯಕಾರಿ ದೇಶ ಎಂಬ ಸಮೀಕ್ಷಾ ವರದಿಯನ್ನು ರಾಷ್ಟ್ರೀಯ ಮಹಿಳಾ ಆಯೋಗ ಸಾರಾಸಗಟಾಗಿ ತಿರಸ್ಕರಿಸಿದೆ. ಪಟ್ಟಿಯಲ್ಲಿ ಭಾರತದ ನಂತರ ಬರುವ ಅನೇಕ ದೇಶಗಳಲ್ಲಿ ಮಹಿಳೆಯರಿಗೆ ಸಾರ್ವಜನಿಕವಾಗಿ ಮಾತನಾಡುವ ಅವಕಾಶವೂ ಇಲ್ಲ. ಇನ್ನು ಸಮೀಕ್ಷೆಯಲ್ಲಿ ಬಹಳ ಕಡಿಮೆ ಮಂದಿಯ ಅಭಿಪ್ರಾಯ ಪಡೆಯಲಾಗಿದೆ. ಅದನ್ನು ಇಡೀ ದೇಶದ ಪ್ರಾತಿನಿಧಿತ್ವ ಎಂದು ಪರಿಗಣಿಸಲಾಗದು ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಹೇಳಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.