ಬೆನ್ನು ಬಿಡದ ಬೇತಾಳ-ಪೋಂಜಿ ಭೂತ


Team Udayavani, Nov 20, 2017, 11:28 AM IST

20-15.jpg

ಕೇವಲ ಜನರನ್ನು ಮರುಳು ಮಾಡಲು ಯಾವ್ಯಾವುದೋ ವಿಚಿತ್ರ ಉದ್ಯಮಗಳ ಬಗ್ಗೆ ಬುರುಡೆ ಬಿಟ್ಟು ಅದರಲ್ಲಿ ಭಾರೀ ಲಾಭ ಸಿಗುತ್ತಾ ಇದೆ ಎಂದು ಜನರನ್ನು ನಂಬಿಸುತ್ತಾರೆ. ಅದನ್ನೆಲ್ಲಾ ಬಿಟ್ಟು ದುಡ್ಡಿನ ಸರಳ ತತ್ವಗಳನ್ನು ಮನದಟ್ಟು ಮಾಡಿಕೊಂಡಲ್ಲಿ ಈ ಪೋಂಜಿ ಭೂತಗಳಿಂದ ಬಚಾವಾಗಿ ಬದುಕಬಹುದು. ದುಡ್ಡಿನಾಸೆಗೆ ಬಿದ್ದರೆ ಹಣ ಕಳೆದುಕೊಳ್ಳುವುದು ಗ್ಯಾರಂಟಿ.

ಆಶೆ ಬಲೆಯನು ಬೀಸಿ ನಿನ್ನ ತನ್ನೆಡೆಗೆಳೆದು
ಘಾಸಿನೀಂಬಡುತ ಬಾಯ್ಬಿಡಲೋರೆ ನೋಡಿ
ಮೈಸವರಿ ಕಾಲನೆಡವಿಸಿ ಗುಟ್ಟಿನಲಿ ನಗುವ
ಮೋಸದಾಟವು ದೈವ ಮಂಕುತಿಮ್ಮ||

ಈ ಬಾರಿ ಗುರುಗುಂಟಿರಾಯರ ಬಾಯಲ್ಲಿ ನೀರೂರಿದ್ದು ಮಾತ್ರವಲ್ಲ, ಅಲ್ಲಿಗೆ ಬೋರ್‌ ಹೊಡೆದು ಒಂದು ಅರ್ಧ ಇಂಚು ನೀರೇ ಸಿಕ್ಕಿದಂತಾಯಿತು. ಕಾರಣ, ಬೆಳಗ್ಗಿನ ಚಳಿಗೆ ದಿನ ಪತ್ರಿಕೆಯ ಹೊದಿಕೆಯೆಡೆಯಲ್ಲಿ ಬೆಚ್ಚಗೆ ಹಾಯಾಗಿ ನಿದ್ದೆ ಹೊಡೆಯುತ್ತಾ ಮನೆಗೆ ಬಂದು “ಥಡ್‌’ ಅಂತ ಬಿದ್ದ ಗರಿ ಗರಿ ಪಾಂಪ್ಲೆಟ್‌!

ಈ ಪಾಂಪ್ಲೆಟ್‌ನಲ್ಲಿ “ಬೇತಾಳ ಫೈನಾನ್ಸ್‌’ ಎಂಬ ಕಂಪೆನಿಯ ವಾರ್ಷಿಕ 120% ಬಡ್ಡಿ ಕೊಡುವಂತಹ ಒಂದು ಫಿಕ್ಸ್‌ ಡೆಪಾಸಿಟ್‌ ಸ್ಕೀಮಿನ ಒಂದು ಸುಂದರ ಜಾಹೀರಾತು ಇತ್ತು. ಯಾವುದೇ ಸುರಸುಂದರಿಯ ಮುಖಾರವಿಂದವಿಲ್ಲದೆ ಬರೇ ದೊಡ್ಡ ದೊಡ್ಡ ಕುಂಬಳಕಾಯಿ ಅಕ್ಷರಗಳಲ್ಲಿ 120% ಬಡ್ಡಿ ದರದ ಸುವರ್ಣ ಅವಕಾಶ ಅಂತ ಬರೆದುಕೊಂಡು ಇತ್ತು. 120% ಬಡ್ಡಿದರ ಕೊಡ್ಬೇಕಾದ್ರೆ ಯಾವ ಹುಡುಗಿಯ ಮುಖಾರವಿಂದದ ಅಗತ್ಯ ಯಾಕೆ ಬೇಕು ಸ್ವಾಮಿ? ನೀವೇ ಹೇಳಿ.  ಜುಜುಬಿ 10-12% ಗಾದ್ರೆ ಹುಡ್ಗಿರ್‌ ಬೇಕಾಗ್ತಾರೆ. ಇನ್ನೂ ಕಡಿಮೆ ಆದ್ರೆ ಕಿಲ್ಲರ್‌ ಬಿಪಾಶಾನೇ ಬೇಕು. ಆದ್ರೆ 120 ಕ್ಕೆ ಯಾರೂ ಬೇಡ. ಅಲ್ವೆ? ದುಡ್ಡಿನ ನಶೆಯೇ ಅಂತದ್ದು. ರಾಯರು ಪಂಪ್ಲೆಟ್‌ ಅನ್ನು ಒಮ್ಮೆ ಕೂಲಂಕುಶವಾಗಿ ಓದಿ “ಗ್ಯಾರಂಟಿ ಪ್ರತಿಫ‌ಲ’ ಎಂಬಿತ್ಯಾದಿ ವೇದವಾಕ್ಯಗಳನ್ನು ಎರಡೆರಡು ಬಾರಿ ಓದಿ ಭದ್ರತೆಯ ಬಗ್ಗೆ ಖಚಿತ ಪಡಿಸಿಕೊಂಡು ಮನಸ್ಸಿನಲ್ಲಿಯೇ ಆ 120% ಮಂಡಿಗೆ ತಿನ್ನುವ ಸ್ಕೆಚ್‌ ಹಾಕತೊಡಗುತ್ತಾರೆ.  

ಆ ಬಳಿಕ, ಸ್ನಾನಮಾಡಿ ಶುಚೀಭೂತರಾದ ರಾಯರು ತಮ್ಮ ಫೇಸಾರವಿಂದವನ್ನು ಸಿಂಗರಿಸಿ, ಇಲ್ಲದ ಕೂದಲಿನ ತಲೆಯ ಮೇಲೆ ಒಮ್ಮೆ ಶಾಸ್ತ್ರಕ್ಕೆ ಕೂಂಬಾಡಿಸಿ, ತಮ್ಮ ಚರ್ಮದ ಮೆಟ್ಟನ್ನು ಮೆಟ್ಟಿ ಚರ್‌? ಚರ್‌? ಎನ್ನಿಸುತ್ತಾ ಬಸ್ಟಾಪಿನ ಕಡೆ ತಮ್ಮ ಪಾದವನ್ನು ಬೆಳೆಸಿದರು. ಕಿಸೆಯಲ್ಲಿ ನೀಟಾಗಿ ನಾಲ್ಕು ಮಡಿಸಿದ ಪಾಂಪ್ಲೆಟ್‌ ಭದ್ರವಾಗಿ ಕುಳಿತಿತ್ತು. ರಾಯರು ಈ ಬೇತಾಳ ಫೈನಾನ್ಸ್‌ ಕಚೇರಿಯನ್ನು ತಲಪಿದಾಗ ಬೆಳಗ್ಗೆ ಹತ್ತು ಘಂಟೆಯಾಗಿತ್ತು. ಆಗಾಗಲೇ ಹತ್ತಾರು ಜನ ಫೈನಾನ್ಸ್‌ ಕಚೇರಿ ತೆರೆಯುವುದನ್ನೇ ಕಾದು ಕುಳಿತಿದ್ದರು. 

ಬೇತಾಳ ಫೈನಾನ್ಸ° ಯಂಗ್‌, ಡೈನಾಮಿಕ್‌, ಡ್ಯಾಶಿಂಗ್‌, ಡೆಬೋ ನೇರ್‌ ಡ್ಯಾಮೇಜರ್‌ ತನ್ನ ಸ್ಕೀಮಿನ ಬಗ್ಗೆ ವಿವರ ತಿಳಿಸಿದ್ದು ಹೀಗೆ: “ಮಿನಿಮಮ್‌ ಒಂದು ಹತ್ಸಾವ್ರ ಡೆಪಾಜಿಟ್‌ ಇಡಿ ಸಾರ್‌, ತಿಂಗಾÛ ಒಂದೊಂದು ಸಾವ್ರ ಬಡ್ಡಿ ಇಸ್ಕೊಂಡು ಹೋಗಿ. ಒಂದು ವರ್ಷಕ್ಕೆ ಹತ್ಸಾವ್ರದ ಮೇಲೆ ಹನ್ನೆರಡು ಸಾವ್ರ ಬಡ್ಡಿ. 120% ವಾರ್ಷಿಕ ಬಡ್ಡಿ. ಎಲ್ಲಿ ಸಿಗತ್ತೆ ಹೇಳಿ ಸಾರ್‌ ಇಷ್ಟೊಂದು ಬಡ್ಡಿ? ಬ್ಯಾಂಕ್ನಲ್ಲಿ ಇಡ್ತೀರಾ, ವರ್ಷಕ್ಕೆ ಜುಜುಬಿ 6% ಕೊಟ್ಟು ಕಳಿಸ್ತಾವೆ. ಇನೆಶನ್ನೇ 10% ಇದೆ. ಬಂದ ಬಡ್ಡಿನಲ್ಲಿ ತರಕಾರಿ ಕೂಡಾ ತಗೊ ಳಕ್ಕೆ ಆಗಲ್ಲ ಸಾರ್‌’ ಅಂತ ಸ್ಪಷ್ಟವಾದ ಸ್ವರದಲ್ಲಿ ಸೂಕ್ತ ಹಾವ ಭಾವಗಳೊಂದಿಗೆ ಮೇಜು ಕುಟ್ಟಿ ನೆರೆದಿರುವ ಸರ್ವ ಸಭಿಕರನ್ನೂ “ಕನ್‌ವಿನ್ಸ್‌’ ಮಾಡುತ್ತಾನೆ. ನೆರೆದವರು ತಲೆದೂಗುತ್ತಾರೆ. ತಮ್ಮ ತಮ್ಮ ಜೇಬಿನಲ್ಲಿ ಕೇಫ‌ುìಲ್ಲೀ ಬಚ್ಚಿಟ್ಟಿದ್ದ ನಗದ್‌   ನಾರಾಯಣನನ್ನು ಪ್ರತ್ಯಕ್ಷಗೊಳಿಸಿ ಎದುರಿಗಿದ್ದ ಬೇತಾಳನ ಕೈಗೆ ಹಸ್ತಾಂತರಿಸಿ ಕಿಸೆಹಗುರಿಗರಾಗುತ್ತಾರೆ. ನಮ್ಮ ಗುರುಗುಂಟಿರಾಯರೂ ಈ ಮಳೆರಾಯನ ಅರ್ಥವಿಲ್ಲದ ಅರ್ಥಶಾಸ್ತ್ರಕ್ಕೆ, ಪ್ರತಿ ಸೋಮವಾರ ಬೆಳಗ್ಗಿನ ಅಪ್ಪರ್ದಂಡದ ವಿತ್ತಪ್ರವಚನಕ್ಕೆ  ಹಿಡಿಶಾಪ ಹಾಕುತ್ತಾ ಒಂದು ಹತ್ತು ಸಾವಿರ ಕಟ್ಟಿ ರಿಸಿಟ್‌ ಪಡಕೊಳ್ಳುತ್ತಾರೆ. ಇನ್ನು ಕೆಲವರು “ಈಗ ಹತ್ತು ಇಲ್ಲ. ಒಂದೈದಾÕವ್ರ ಇದೆ, ಅದ್ರಲ್ಲೇ ಏನಾರ ಎಜೆಸ್ಟ್‌ ಮಾಡ್ಕೊಳಕ್ಕಾಗುತ್ಯೇ?’ ಅಂತ ಆತನಿಗೆ ದುಂಬಾಲು ಬೀಳುತ್ತಾರೆ. “ಹೂØಂ! ಸರಿ. ಬಾಕಿ ದುಡ್ಡು ನಾಳೆ ತಂದೊRಡಿ, ಕಷ್ಟ ಕಣ್ರೀ, ಈ ಚಿಲ್ರೆ ಸಹವಾಸ!’ ಅಂತ ಗೊಣಗಾಡ್ಕೊಂಡು ದುಡ್ಡು ಇಸ್ಕೊಂಡು ರಿಸೀಟ್‌ ನೀಡುತ್ತಾನೆ. ರಿಸೀಟ್‌ ಅನ್ನು ಭದ್ರವಾಗಿ ಇಟ್ಕೊಳಿ. ಪ್ರತೀ ತಿಂಗಳೂ ಬಡ್ಡಿ ಪಡಕೊಳ್ಳಲು ಬರುವಾಗ ಎಂಟ್ರಿ ಮಾಡೊÕàಕೆ ತಗೊಂಡು ಬರ್ಬೆàಕು ಎಂದೂ ಅದಿಲ್ಲದೆ ಬಂದ್ರೆ ದುಡ್ಡು ಕೊಡಕ್ಕಾಗೋದಿಲ್ಲ ಎಂದೂ ಎರಡೆರಡು ಬಾರಿ ಒತ್ತಿ ಹೇಳುತ್ತಾನೆ.    

ಇದಿಷ್ಟು ಸ್ವಂತ ದುಡ್ಡಿನಿಂದ ಪಡೆಯಬಹುದಾದ ಪ್ರತಿಫ‌ಲ. ಇನ್ನು ಈ ಸ್ಕೀಮನ್ನು ಬೇರೆಯವರಿಗೆ ಶಿಪಾರಸ್ಸು ಮಾಡಿ ಅವರಿಂದ ಡೆಪಾಸಿಟ್‌ ಇರಿಸಿದರೆ ಅಂತಹ ದುಡ್ಡಿನ ಮೇಲೆ 20% ಕಮಿಶನ್‌ ಬೇರೆ ಕೊಡ್ತಾರಂತೆ. ಅಬ್ಬಬ್ಬ!! ಕೆಲವರಂತೂ ತತ್ಕಣವೇ ಒಂದು ಚಿಕ್ಕ ಕೈಬ್ಯಾಗ್‌ ಹಿಡ್ಕೊಂಡು ಈ ಫೈನಾನ್ಸ್‌ ಕಂಪೆನಿಯ ಏಜೆಂಟರಾಗಿ ಬಂಧು ಮಿತ್ರರನ್ನು ಪೀಡಿಸಲು ಆರಂಭಿಸುತ್ತಾರೆ. “ಜುಜುಬಿ ಐದಾರು ಶೇಕಡಾ ಬಡ್ಡಿಗೇ ಅಲ್ಪತೃಪ್ತರಾಗುವ ನಿಮಗೆಲ್ಲಾ ತಲೆಯೇ ಇಲ್ಲ, ಈ ಸ್ಕೀಮಿನಲ್ಲಿ ಹೂಡಿ’ ಎಂದು ಈ ಸ್ಕೀಮನ್ನು ಧರೆಗಿಳಿಸಿದ ಬೇತಾಳನೆಂಬ ದೇವದೂತನನ್ನು ಹಾಡಿ ಹೊಗಳುತ್ತಾರೆ.     

ಹೀಗೆ ಕಾಲಚಕ್ರ ಉರುಳುತ್ತವೆ… 
ತಿಂಗಳುಗಳು ಉರುಳಿದಂತೆಯೇ ಮಾಸಿಕ ಬಡ್ಡಿಗಳನ್ನು ಟೈಮಿಗೆ ಸರಿಯಾಗಿ ಪಡೆದ ಇನ್ನಿತರ ಜನತೆ ಸಂಪೂರ್ಣವಾಗಿ ತೃಪ್ತರಾಗಿ ತಾವೂ ಕೂಡಾ ಒಂದು ಕೈಬ್ಯಾಗ್‌ ಹಿಡಕೊಂಡು ಏಜೆಂಟರಾಗಿ “ನನ್ನನ್ನೇ ನೋಡಿ ನಾನೇ ಗ್ಯಾರಂಟಿ’ ಎಂದೆಲ್ಲಾ ಎದೆ ತಟ್ಟಿ ಹೇಳಿ ಡೆಪಾಸಿಟ್‌ ಮೊಬಿಲೈಸ್‌ ಮಾಡಲು ಊರು ಸುತ್ತುತ್ತಾರೆ. ಮೊದಲೆಲ್ಲಾ ನಂಬದವರು ಕ್ರಮೇಣ ನಂಬಲು ಆರಂಬಿಸುತ್ತಾರೆ. ತಾವೂ ಅಲ್ಪ ಸ್ವಲ್ಪ ಡೆಪಾಸಿಟ್‌ ಮಾಡುತ್ತಾರೆ. ಪೂರ್ತಿ ನಂಬಿದವರು ಇದ್ದದ್ದನ್ನೆಲ್ಲಾ ಮಾರಿ ಇನ್ನು ಕೆಲವರು ಸಾಲ ಕೂಡಾ ಮಾಡಿ ಬೇತಾಳನ ಮೇಜಿಗೆ ಬಂದು ದುಡ್ಡು ಸುರಿಯುತ್ತಾರೆ. ಏಜೆಂಟರಾದವರು ಹಳೆ ಸೈಕಲ್‌ ಗುಜುರಿಗೆ ಬಿಸಾಕಿ ಹೊಸ ಮಾರುತಿ ಖರೀದಿಸಿ ರೋಡಿನಲ್ಲಿ ದೂಳೆಬ್ಬಿಸುತ್ತಾ ಹೋಗುತ್ತಾರೆ. ಒಂದು ಸೈಟ್‌ ಕೊಂಡು ಹೊಸ ಮನೆಯ ಕನ್ಸ$óಕ್ಷನ್‌ ಕೂಡಾ ಆರಂಭಿಸುತ್ತಾರೆ. ದಿನಾ ಬೆಳಗ್ಗೆ ಹಣೆಯಲ್ಲಿ ಎರಡು ನಾಮ ಬಳಿದುಕೊಂಡು ದಿನಾ ಸಂಜೆ ದೇವಸ್ಥಾನಗಳಿಗೆ ಸುತ್ತು ಬರುತ್ತಾರೆ. “ಎಲ್ಲಾ ದೈವ ಲೀಲೆ’ ಎಂದು ಆಕಾಶ ನೋಡಿ ಕೈ ಮುಗಿಯುತ್ತಾರೆ. 

ಇದೀಗ ಈ ಕತೆ ಒಂದು ಹಂತಕ್ಕೆ ಬಂತು. ಈಗ ಕಂಪೆನಿಯ ಮೇಲೆ ಭಾರಿ ನಂಬಿಕೆ ಹುಟ್ಟಿರುತ್ತದೆ. ಇಡೀ ಊರಿಗೆ ಊರೇ ಈ ಫೈನಾನ್ಸ್‌ ಅನ್ನು ನಂಬಿ ಬಾಳುತ್ತದೆ. ಮೊದಲು ಅದರ ವಿರುದ್ಧ ಮಾತನಾಡಿದವರೆಲ್ಲಾ ಸುಮ್ಮನಾಗಿಸಲ್ಪಡುತ್ತಾರೆ. ಪ್ರತಿಯೊಬ್ಬರೂ ಸಾಲ ಸೋಲ ಮಾಡಿಯಾದರೂ ಬೇತಾಳ ಫೈನಾನ್ಸ್‌ ನಲ್ಲಿ ದುಡ್ಡು ಹೂಡಲು ಅದರ ಕಚೇರಿಯ ಹೊರಗೆ ಕ್ಯೂ ನಿಲ್ಲುತ್ತಾರೆ. 

ಈಗ ಈ ಕತೆ ಇಲ್ಲಿಗೆ ನಿಲ್ಲಿಸೋಣ. ನಿಲ್ಲಿಸಿ, ಇಧರ್‌ ಹಮ್‌ ಲೇಂಗೇ ಏಕ್‌ ಚೋಟಾ ಸಾ ಬ್ರೇಕ್‌! ಔರ್‌ ಬ್ರೇಕ್‌ ಕೇ ಬಾದ್‌, ಇನ್ನೊಂದು ಹಳೆ ಕತೆ ಕೇಳುವಂತವರಾಗಿ. ಈ ಬಾರಿ ಕಾಕುವಿನಲ್ಲಿ ಎರಡೆ ರಡು ಕತೆ, ಡಬ್ಬಲ್‌ ಧಮಾಕಾ. ಪ್ಲೀಸ್‌ ಡೋಂಟ್‌ ಗೋ ಅವೇ…      

ಬ್ರೇಕ್‌ ಕೆ ಬಾದ್‌ ಸ್ವಾಗತ್‌ ಹೈ|
1919 ರ ಸಮಯ. ದೂರದ ಅಮೆರಿಕಾದ ಬೋಸ್ಟನ್‌ ಪಟ್ಟಣ ದಲ್ಲಿ ಚಾರ್ಲ್ಸ್ ಪೋಂಜಿ (1882-1949) ಎಂಬ ಇಟಾಲಿಯನ್‌ ಮೂಲದ ಒಬ್ಬ ಚೋರನಿದ್ದನು. ಅವನು ಅಂತಿಂತಹ ಚೋರನಲ್ಲ. ಅವನೊಬ್ಬ ಸೂಟ್‌ ಬೂಟ್‌ ಧರಿಸಿ, ಬಿಸಿನೆಸ್‌ ನಡೆಸಿ ಒಂದು ಅತ್ಯಾಕರ್ಷಕ “ಇನ್ವೆಸ್ಟೆ¾ಂಟ್‌ ಸ್ಕೀಂ’ ಮುಖಾಂತರ ಲಕ್ಷಾಂತರ ಜನರ ಕೋಟ್ಯಾಂತರ “ಗುಳುಂ’ ಮಾಡಿದ ಕುಖ್ಯಾತ ಚೋರ – ವಿತ್ತ ಜಗತ್ತಿನ ವೀರಪ್ಪನ್‌! 

ಆತ ಮಾಡಿದ್ದಾದರೂ ಏನು? 
 ಸಣ್ಣ ಪುಟ್ಟ ಕಳ್ಳತನ ಮಾಡುತ್ತಾ ಅಲ್ಲಿ ಇಲ್ಲಿ ಕೆಲಸ ನೋಡುತ್ತಾ ಇರುತ್ತಿದ್ದ ಈ ಪೋಂಜಿಗೆ ಒಂದು ದಿನ ಸ್ಪೆನ್‌ ದೇಶದ ಒಬ್ಬ ಗ್ರಾಹಕನಿಂದ ಒಂದು ಓಲೆ ಬಂತು. ಅದರೊಳಗೆ ಮರು ಉತ್ತರ ಕ್ಕಾಗಿ ಬೇಕಾದ ಅಂಚೆ ವೆಚ್ಚಕ್ಕಾಗಿ ‘ಅಂತರಾಷ್ಟ್ರೀಯ ರಿಪ್ಲೆ ಕೂಪನ್‌’ (MSA) ಒಂದನ್ನು ಇರಿಸಲಾಗಿತ್ತು. ಪದ್ಧತಿ ಪ್ರಕಾರ ಆ ಕೂಪನನ್ನು ಅಮೇರಿಕಾದ ಪೋಸ್ಟ್‌ ಆಫೀಸಿನಲ್ಲಿ ತೋರಿಸಿ ಸ್ಪೆçನ್‌ ದೇಶಕ್ಕೆ 
ಮರು ಉತ್ತರಕ್ಕೆ ಬೇಕಾದಷ್ಟು ಅಂಚೆ ಚೀಟಿಯನ್ನು ವಿನಿಮಯದಲ್ಲಿ ತೆಗೆದುಕೊಳ್ಳಬಹುದಿತ್ತು. ಅದನ್ನು ಮಾಡುವಾಗ ಆತನು ಗಮನಿ ಸಿದ ಅಂಶವೆಂದರೆ ಸ್ಪೆçನ್‌ ನಲ್ಲಿ ಅಂತಹ ಒಂದು ಕೂಪನ್ನಿಗೆ ತಗ  ಲುವ ವೆಚ್ಚ ಅಮೇರಿಕಾದಿಂದ ಮರುಟಪ್ಪಾಲಿಗೆ ತಗಲುವ ಅಂಚೆ ವೆಚ್ಚಕ್ಕಿಂತ ಕಡಿಮೆಯಾಗಿತ್ತು. ಅಂತಹ ‘ಆರ್ಬಿಟ್ರಾಜ್‌’ ಅಥವಾ ಬೆಲೆಯ ವ್ಯತ್ಯಾಸದಲ್ಲಿ  ಸುಮಾರು 400 % ದಷ್ಟು ಲಾಭ ಗಳಿಸ ಬಹುದಾಗಿತ್ತು. ಪೋಂಜಿಯ ತೀಕ್ಷ್ಣ ಬುದ್ಧಿಗೆ ಇಷ್ಟೇ  ಸಾಕಿತ್ತು. ಕೂಡಲೇ ಪೋಂಜಿ ಅದರಲ್ಲಿ ಒಂದು ಬಿಸಿನೆಸ್‌ ಶುರು ಮಾಡೇ ಬಿಟ್ಟ.

 ಸಾರ್ವಜನಿಕರಿಗೆ ಈ ಲಾಭದ ಕತೆಯನ್ನು ಹೇಳಿ ಅಂತಹ ಕೂಪನಳಲ್ಲಿ ಹೂಡಿ 90 ದಿನಗಳಲ್ಲಿ ಹಣವನ್ನು ದುಪ್ಪಟ್ಟು ಮಾಡಿ ಕೊಡುತ್ತೇನೆ ಎಂದು ಹಣ ಸಂಗ್ರಹ ಶುರು ಮಾಡಿದ. ಜನರು ಅವನ ಸ್ಕೀಂ ವಿವರಣೆಯನ್ನು ಕೇಳಿ ಅತಿಯಾಸೆಯಿಂದ ಮರು ಳಾಗಿ ಹಣ ಹೂಡಿಕೆಗೆ ಮುಗಿಬಿದ್ದರು. 

ಈ ರಿಪ್ಲೆç ಕೂಪನಿನ ಕತೆ “ನೋಡಲು-ಕೇಳಲು’ ಚಂದ. ಅದರೆ ವಾಸ್ತವವೇ ಬೇರೆ. ವಾಸ್ತವದಲ್ಲಿ ಸಾರ್ವಜನಿಕರು ಹೂಡಿದ ಹಣ ದಷ್ಟು ಪೋಸ್ಟಲ್‌ ಕೂಪನ್‌ ಇಡೀ ಜಗತ್ತಿನಲ್ಲೇ ರಿಲೀಸ್‌ ಆಗಿರ ಲಿಲ್ಲ. ಅಲ್ಲದೆ ಪೋಂಜಿ ವಾಸ್ತವದಲ್ಲಿ ಕೂಪನ್ನುಗಳನ್ನು ಆಂತಹ ಸಗಟು ಪ್ರಮಾಣದಲ್ಲಿ ವಿನಿಮಯ ಮಾಡಿಕೊಳ್ಳಲೇ ಇಲ್ಲ. ಅವನು ಮಾಡಿದ್ದೆಂದರೆ, ‘ರಿಪ್ಲೆç ಕೂಪನ್‌’ ಕತೆ ಹೇಳಿ ಹೊಸ ಹೂಡಿಕೆ  ದಾರರ ಹಣದಿಂದ ಹಳೆ ಹೂಡಿಕೆದಾರರಿಗೆ ಬಡ್ಡಿ ಪಾವತಿ ಮಾಡುತ್ತಿದ್ದದ್ದು. ಹಾಗೂ ಸಾಕಷ್ಟು ಪ್ರಮಾಣದಲ್ಲಿ ಮುಗಿಬಿದ್ದು ಬರುತ್ತಿದ್ದ ಹೂಡಿಕೆಗಳನ್ನು ಬಾಚಿ ಬಾಚಿ ತನ್ನ ಜೇಬು ತುಂಬಿಸಿ ಕೊಳ್ಳುತ್ತಿದ್ದದ್ದು.            

ಶ್ರೀಮಾನ್‌ ಪೋಂಜಿ ಹುಟ್ಟು ಹಾಕಿದ “ಪೋಂಜಿ ಸ್ಕೀಮ್‌’ ಎಂದೇ ಜಗತøಸಿದ್ಧಿಯಾದ ಇಂತಹ ತಂತ್ರಗಳು ಈ ರೀತಿ ನಡೆಯುತ್ತವೆ: ಒಂದು ಸ್ಕೀಂನಲ್ಲಿ ಒಂದು ಆಕರ್ಷಕ ಉದ್ಯಮದ ಕತೆ ಹೇಳಿ ಅದರ ಹೂಡಿಕೆದಾರನಿಗೆ ಪ್ರತಿಫ‌ಲ ಅಥವ ರಿಟರ್ನ್ ಕೊಡುವುದು ಮುಂಬರುವ ಇನ್ನೊಬ್ಬನ ಹೂಡಿಕೆಯಿಂದಲೇ ಹೊರತು ಬೇರೆ ಯಾವುದೇ ಔದ್ಯಮಿಕ ಲಾಭದಿಂದಲ್ಲ. ಅತೀ ಹೆಚ್ಚು ಬಡ್ಡಿದರ ಅಥವ ಪ್ರತಿಫ‌ಲದ ಘೋಷಣೆಯನ್ನು ಮಾಡಿ ಹೆಚ್ಚೆಚ್ಚು ಮೂಲಧನವನ್ನು ಸಂಗ್ರಹಿಸುತ್ತಾ ಅದೇ ಮೂಲಧನವನ್ನು ಹಳೆ ಹೂಡಿಕೆದಾರರಿಗೆ ಕೊಡುತ್ತಾ ಮುಂದುವರಿಯುವುದೇ ಇದರ ಮೂಲ ತಂತ್ರ. ಹೊಸ ಹೊಸ ಅಮಾಯಕರು ಸ್ಕೀಮಿಗೆ ಸೇರುತ್ತಲೇ ಇರುವವರೆಗೆ ಈ ಸರಣಿ ಮುಂದುವರಿಯುತ್ತದೆ ಹಾಗೂ ಹಳಬರಿಗೆ ಪ್ರತಿಫ‌ಲ ಸಿಗುತ್ತದೆ. ಹೊಸ ಹೂಡಿಕೆದಾರರು ಬೇಕಾದಷ್ಟು ಸಂಖ್ಯೆಯಲ್ಲಿ ಸಿಗದೇ ಹೋದಾಗ ಈ ಸರಣಿ ತುಂಡಾಗಿ ಹಳೆ ಹೂಡಿಕೆದಾರರಿಗೆ ಕೊಡಲು ಹಣ ಇರುವುದಿಲ್ಲ. ಹೂಡಿಕೆದಾರರು ದಿವಾಳಿಯಾಗುತ್ತಾರೆ. ಅದರೆ ಅಗಲೇ ಅದನ್ನು ಅರಂಭಿಸಿದ ಖದೀಮರು ತಮ್ಮ ಜೇಬು ತುಂಬಿಸಿ ಆಗಿರುತ್ತದೆ. ಇನ್ನು ಕೆಲವೊಮ್ಮೆ ಈ ಪೋಂಜಿ ಭೂತಗಳು ಸಂಗ್ರಹಿಸಿದ ನಿಧಿಯನ್ನು ಎತ್ತಿ ಗಂಟು ಮೂಟೆ ಕಟ್ಟಿ ರಾತ್ರೋ ರಾತ್ರಿ ಪರಾರಿಯಾಗು ತ್ತಾರೆ. ಹೀಗೆ ಎಲ್ಲರ ಹೂಡಿಕೆಯೂ ಒಂದು ದಿನ ತೆಳುಗಾಳಿಯಲ್ಲಿ ಆವಿಯಾಗಿ ಹೋಗುತ್ತದೆ.

ಹೆಚ್ಚು ಬಡ್ಡಿದರದ ಆಮಿಷಕ್ಕೆ ಒಳಗಾಗ ಬೇಡಿ 
ಯಾವುದೇ ಒಂದು ಹಣಕಾಸಿನ ವ್ಯವಸ್ಥೆಯಲ್ಲಿ ಪ್ರತಿಯೊಂದು ಕಾಲಘಟ್ಟದಲ್ಲೂ ಬಡ್ಡಿದರ “ಇಂತಿಷ್ಟು’ ಎಂದು ಇರುತ್ತದೆ. ಭಾರತ ದಲ್ಲಿ ರಿಸರ್ವ್‌ ಬ್ಯಾಂಕ್‌ ಇದನ್ನು ನಿರ್ಧರಿಸುವಲ್ಲಿ ಮಹತ್ತರ ಪಾತ್ರವಹಿಸುತ್ತದೆ.  ಅದರಿಂದ ಅತೀ ಹೆಚ್ಚು ಬಡ್ಡಿದರದ ಆಮಿಷ ತೋರಿಸಿ ದುಡ್ಡು ಸಂಗ್ರಹ ಮಾಡಿದಲ್ಲಿ ಅದನ್ನು ಯಾವುದೇ ನೈಜ ಉದ್ಯಮದಲ್ಲಿ ಹೂಡಿ ಘೋಷಿತ ಪ್ರತಿಫ‌ಲ ನೀಡುವುದು ಸಾಧ್ಯವಿರುವುದಿಲ್ಲ. ಒಂದು ವೇಳೆ ಸಾಧ್ಯವಿದ್ದರೂ, ಪ್ರಚಲಿತ ಬ್ಯಾಂಕು ದರಕ್ಕಿಂತ ಅತಿಹೆಚ್ಚನ ದರದಲ್ಲಿ ಅವರು ಡೆಪಾಸಿಟ್‌ ಯಾಕೆ ಪಡೆಯಬೇಕು? ಬ್ಯಾಂಕಿನಿಂದಲೇ ಸಾಲ ಪಡೆಯಬಹು ದಲ್ಲವೇ? ಕೇವಲ ಜನರನ್ನು ಮರುಳು ಮಾಡಲು ಯಾವ್ಯಾವುದೋ ವಿಚಿತ್ರ ಉದ್ಯಮಗಳ ಬಗ್ಗೆ ಬುರುಡೆ ಬಿಟ್ಟು ಅದರಲ್ಲಿ ಭಾರೀ ಲಾಭ ಸಿಗುತ್ತಾ ಇದೆ ಎಂದು ಜನರನ್ನು ನಂಬಿಸುತ್ತಾರೆ. ಅದನ್ನೆಲ್ಲಾ ಬಿಟ್ಟು ದುಡ್ಡಿನ ಸರಳ ತತ್ವಗಳನ್ನು ಮನದಟ್ಟು ಮಾಡಿಕೊಂಡಲ್ಲಿ ಈ ಪೋಂಜಿ ಭೂತಗಳಿಂದ ಬಚಾವಾಗಿ ಬದುಕಬಹುದು. ಅತಿಯಾದ ದುಡ್ಡಿನಾಸೆಗೆ ಮರುಳಾಗಿ ಅತೀ ಹೆಚ್ಚಿನ ಬಡ್ಡಿದರಗಳ ಹಿಂದೆ ಹೋದಲ್ಲಿ ಪೋಂಜಿ ಭೂತದ ಪೀಡೆಗೆ ಬಲಿಯಾಗುವುದು ಗ್ಯಾರಂಟಿ. ಹಾಗೆ ಆಗಿ ಹೊಂಡಕ್ಕೆ ಬಿದ್ದ ಮೇಲೆ ಯಾವ ಭೂತ ಕೋಲವೂ ಉಪಯೋಗಕ್ಕೆ ಬಾರದು. 
ಎಚ್ಚರವಿರಲಿ!

ಜಯದೇವ ಪ್ರಸಾದ ಮೊಳೆಯಾರ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಯ ಅಂದ್ರೆ ಏನ್ರೀ.. ಎನ್ನುವ ಲೇಡಿ ಜೇಮ್ಸ್‌ ಬಾಂಡ್‌!

ಭಯ ಅಂದ್ರೆ ಏನ್ರೀ.. ಎನ್ನುವ ಲೇಡಿ ಜೇಮ್ಸ್‌ ಬಾಂಡ್‌!

ಕರ ಚೋರರ ಮೇಲೆ ಹದ್ದಿನ ಕಣ್ಣಿಡುವ ಫಾರ್ಮ್ 26ಎಎಸ್‌

ಕರ ಚೋರರ ಮೇಲೆ ಹದ್ದಿನ ಕಣ್ಣಿಡುವ ಫಾರ್ಮ್ 26ಎಎಸ್‌

ವಿದ್ಯಾ ಸಾಲದ ಬಡ್ಡಿ ಮತ್ತು ಕರ ವಿನಾಯಿತಿ

ವಿದ್ಯಾ ಸಾಲದ ಬಡ್ಡಿ ಮತ್ತು ಕರ ವಿನಾಯಿತಿ

Home-Loan-730

ಗೃಹ ಸಾಲದ ಮೇಲೆ ಕರ ವಿನಾಯಿತಿ

tax-rebate

ಇನ್ನಷ್ಟು 87ಎ ರಿಬೇಟ್‌ಗಳು ಮತ್ತು ಅವುಗಳ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.