ಈ ವಿತ್ತ ವರ್ಷದ (2017-18) ಹೂಡಿಕೆ ಮತ್ತು ಕರವಿನಾಯತಿ


Team Udayavani, Jun 18, 2018, 10:25 AM IST

kasu.jpg

ಶೀಘ್ರವೇ ಬರುತ್ತಿರುವ ಜುಲೈ 31ರ ಒಳಗಾಗಿ ರಿಟರ್ನ್ ಫೈಲಿಂಗ್‌ ಮಾಡಬೇಕಾಗಿರುವುದು ಕಳೆದ 2017-18 ವಿತ್ತ ವರ್ಷಕ್ಕೆ ಸಂಬಂಧ ಪಟ್ಟ ಆದಾಯಕ್ಕೆ. ಅಂದರೆ ಅಸೆಸೆ¾ಂಟ್‌ ವರ್ಷ 2018-19ಕ್ಕೆ. ಆ ವರ್ಷಕ್ಕೆ ಸಲ್ಲುವಂತೆ ಕರ ಕಡಿತಕ್ಕೆ ಸಂಬಂಧಪಟ್ಟ ಹೂಡಿಕೆ ಮತ್ತು ಪಾವತಿಗಳು ಯಾವ್ಯಾವುವು ಎನ್ನುವುದರ ಬಗ್ಗೆ ಚರ್ಚೆ ಮಾಡೋಣ. ಅದು 2017ರ ಬಜೆಟ್‌ ಪ್ರಕಾರ ಇರುತ್ತದೆ (ಈಗಿನ 2018ರ ಬಜೆಟ್‌ ಮುಂದಿನ ಬಾರಿ ವರ್ಷಕ್ಕೆ ಸಲ್ಲುವ ಕಾನೂನು. ಇದನ್ನು ಸಜ್ಜಿಗೆ-ಬಜಿಲ್‌ ಮಾಡದಿರಿ ಎಂಬುದಾಗಿ ಯಾವತ್ತಿನಂತೆ ಕಳಕಳಿಯ ವಿನಂತಿ. ಬಹಳಷ್ಟು ಜನ ಈ ರೀತಿ ಗೊಂದಲಪಟ್ಟುಕೊಂಡು ತಪ್ಪು ಲೆಕ್ಕ ಹಾಕುತ್ತಿರುತ್ತಾರೆ). 

ಮೊತ್ತಮೊದಲನೆಯದಾಗಿ ನೀವು ಈ ಕೆಳಗಿನ ವಿಚಾರಗಳಲ್ಲಿ ಮಾಡಿದ ಖರ್ಚು/ಹೂಡಿಕೆ ಎನಾದರೂ ಇವೆಯೇ ಎನ್ನುವುದನ್ನು ಹಂತ ಹಂತವಾಗಿ ಪರಿಶೀಲಿಸಿ ಪಟ್ಟಿ ಮಾಡಿಕೊಳ್ಳಿ.

1. ಗೃಹ ಸಾಲದ ಮೇಲಿನ ಬಡ್ಡಿ
    ನೀವು ಗೃಹ ಸಾಲದ ಬಡ್ಡಿ ಪಾವತಿಸುವವರಾಗಿದ್ದಲ್ಲಿ ವಾರ್ಷಿಕ ಒಟ್ಟು ರೂ. 2 ಲಕ್ಷದವರೆಗೆ ಸ್ವಂತ ಅಥವಾ ಬಾಡಿಗೆ ನೀಡಿರುವ ಮನೆಯ ಮೇಲೆ ಮಾಡಿದ ಗೃಹಸಾಲದ ಬಡ್ಡಿಯನ್ನು Income from House property ಎಂಬ ಹೆಸರಿನಲ್ಲಿ ಕಳೆಯ ಬಹುದಾಗಿದೆ. ಮನೆಯನ್ನು ಬಾಡಿಗೆಗೆ ಕೊಟ್ಟಿದ್ದರೆ ಆ ಆದಾಯ ತೋರಿಸಿ ಹೌಸ್‌ ಟ್ಯಾಕÕ… ಹಾಗೂ  ಮತ್ತು ಬಾಡಿಗೆಯ 30% ನಿರ್ವಹಣಾ ವೆಚ್ಚಗಳನ್ನೂ ಕಳೆಯಬಹುದು. 

2.ಎನ್‌.ಪಿ.ಎಸ್‌ 
    ಎನ್‌.ಪಿ.ಎಸ್‌. ದೇಣಿಗೆಯು 2 ಬೇರೆ ಬೇರೆ ಸೆಕ್ಷನ್‌ಗಳ ಅಡಿಯಲ್ಲಿ ಬರುತ್ತದೆ. ಮೂಲತಃ ಎನ್‌.ಪಿ.ಎಸ್‌. ದೇಣಿಗೆ ಸೆಕ್ಷನ್‌ 80ಇ ಅಡಿಯಲ್ಲಿ PPF, NSC, ELSS,ವಿಮೆ ಇತ್ಯಾದಿ ಬೇರೆ ಇತರ ಹೂಡಿಕೆಗಳ ಒಟ್ಟಿಗೆ ಬರುತ್ತದೆ. ಅದನ್ನು ಆಮೇಲೆ ನೋಡೋಣ. ಆದರೆ ಇತ್ತೀಚೆಗೆ ಅದನ್ನು ಇನ್ನೊಂದು ಸೆಕ್ಷನ್‌ 80 ಸಿಸಿಡಿ (1ಬಿ) ಅಡಿಯಲ್ಲಿ ಹೆಚ್ಚುವರಿ ದೇಣಿಗೆಯಾಗಿ ರೂ. 50,000 ಮಿತಿಯಲ್ಲಿ ಕೂಡ ಸೇರಿಸ ಲಾಗಿದೆ. ಆ ಹೂಡಿಕೆಗೆ ಪ್ರತ್ಯೇಕವಾದ ಕರವಿನಾಯಿತಿ ಲಭ್ಯ. ಹಾಗಾಗಿ ಮೊತ್ತಮೊದಲು ಎನ್‌.ಪಿ.ಎಸ್‌. ಹೂಡಿಕೆಯನ್ನು 80 ಸಿಸಿಡಿ (1ಚಿ) ಅಡಿಯಲ್ಲಿಯೇ ತೆಗೆದುಕೊಳ್ಳೋಣ (ಮೂರನೆಯದಾಗಿ, ಕಂಪೆನಿಯ ದೇಣಿಗೆಯು 80ಸಿಸಿಡಿ(2) ಸೆಕ್ಷನ್ನಿನಲ್ಲಿ ಬರುತ್ತದೆ. ಅದನ್ನು ಉದ್ಯೋಗಿಗಳು ತಮ್ಮ ಲೆಕ್ಕದಲ್ಲಿ ಮುಟ್ಟುವಂತಿಲ್ಲ. ಅದು ಪ್ರತ್ಯೇಕ).

3. ಮೆಡಿಕಲ್‌ ಇನ್ಶೂರೆನ್ಸ್ (ಸೆಕ್ಷನ್‌ 80ಡಿ)
    ಇದು ಆರೋಗ್ಯ ವಿಮೆಯ ಪ್ರೀಮಿಯಂ ಮೇಲೆ ಸಿಗುವ ತೆರಿಗೆ ರಿಯಾಯಿತಿ. ಸ್ವಂತ ಹಾಗೂ ಕುಟುಂಬದವರ ವಿಮೆಯ ಮೇಲೆ ರೂ. 25,000 ಹಾಗೂ ಹೆತ್ತವರ ವಿಮೆಯ ಮೇಲೆ ಇನ್ನೊಂದು ರೂ. 25,000ವರೆಗೆ ಕಟ್ಟಿದ ಪ್ರೀಮಿಯಂ ಮೇಲೆ ರಿಯಾಯಿತಿ ಲಭ್ಯವಿದೆ. ವಿಮಾ ಪ್ರೀಮಿಯಂಗಾಗಿ ಈ ಸೆಕ್ಷನ್‌ ಇದ್ದರೂ ಕೂಡ ವಾರ್ಷಿಕ ಸ್ವಾಸ್ಥ್ಯ ತಪಾಸಣೆಗಾಗಿ ರೂ. 5,000ದ ಒಳಮಿತಿಯನ್ನು ಇದು ಹೊಂದಿರುತ್ತದೆ. 60 ದಾಟಿದ ಹಿರಿಯ ನಾಗರಿಕರಿಗೆ ಒಟ್ಟು ಮಿತಿ ರೂ. 30,000 ಆಗಿದೆ. 80 ವರ್ಷ ದಾಟಿದ ಅತಿಹಿರಿಯ ನಾಗರಿಕರು ವಿಮಾ ಪ್ರೀಮಿಯಂ ಕಟ್ಟದೆ ಇದ್ದಲ್ಲಿ ಅವರ ಮಿತಿಯನ್ನು ಸಂಪೂರ್ಣವಾಗಿ ತಮ್ಮ ವೈದ್ಯಕೀಯ ವೆಚ್ಚಕ್ಕಾಗಿ ಉಪಯೋಗಿಸಬಹುದು.  

4. ಅವಲಂಬಿತರ ಅಂಗವೈಕಲ್ಯ (ಸೆಕ್ಷನ್‌ 80 ಡಿಡಿ)
    ಅವಲಂಬಿತರ ಅಂಗವೈಕಲ್ಯದ ವೈದ್ಯಕೀಯ (ನರ್ಸಿಂಗ್‌ ಸಹಿತ) ತರಬೇತಿ ಮತ್ತು ಪುನರ್ವಸತಿಗಾಗಿ ಅಥವಾ ಪಾಲನೆಗಾಗಿ ಕರವಿನಾಯಿತಿ ಸೌಲಭ್ಯ ನೀಡಲಾಗುತ್ತದೆ. 40%-80% ಅಂಗವೈಕಲ್ಯ ಇದ್ದರೆ ವಾರ್ಷಿಕ ಮಿತಿ ರೂ. 75,000 ಹಾಗೂ 80% ಮೀರಿದ ತೀವ್ರವಾದ ಅಂಗವೈಕಲ್ಯ ವಿದ್ದರೆ ಈ ಮಿತಿ ರೂ. 1,25,000 ಆಗಿರುತ್ತದೆ. 

5. ಗಂಭೀರ ಖಾಯಿಲೆಗಳ ಚಿಕಿತ್ಸೆ (ಸೆಕ್ಷನ್‌ 80ಡಿಡಿಬಿ)
    ಸ್ವಂತ ಹಾಗೂ ಅವಲಂಭಿತರ ಕ್ಯಾನ್ಸì, ನ್ಯುರೋ, ಏvÕ…, ಥಲಸೇಮಿಯ, ರೀನಲ…, ಹೀಮೋಫಿಲಿಯಾ ಇತ್ಯಾದಿ ಕೆಲವು ಗಂಭೀರ ಕಾಯಿಲೆಗಳ ಚಿಕಿತ್ಸೆಗಾಗಿ ಈ ಮಿತಿಯನ್ನು ಬಳಸಬಹುದು. ಮಿತಿ ರೂ. 40,000. ಆದರೆ, 60 ದಾಟಿದ ವರಿಷ್ಠರಿಗೆ ಈ ಮಿತಿ ರೂ. 60,000 ಹಾಗೂ 80 ದಾಟಿದ ಅತಿವರಿಷ್ಠರಿಗೆ ಇದು ರೂ. 80,000. 

6. ವಿದ್ಯಾ ಸಾಲದ ಬಡ್ಡಿ (ಸೆಕ್ಷನ್‌ 80 ಇ)
    ಸ್ವಂತ ಹಾಗೂ ಕುಟುಂಬದವರ ಉನ್ನತ ವ್ಯಾಸಂಗಕ್ಕಾಗಿ ಪಡೆದ ವಿದ್ಯಾ ಸಾಲದ ಬಡ್ಡಿ ಯಾವುದೇ ಮಿತಿಯಿಲ್ಲದೆ 8 ವರ್ಷಗಳ ವರೆಗೆ ತೆರಿಗೆ ವಿನಾಯಿತಿಗೆ ಅರ್ಹತೆ ಪಡೆದಿರುತ್ತದೆ.

7. ಡೊನೇಶನ್‌ (ಸೆಕ್ಷನ್‌ 80 ಜಿ)
    ನಿಗದಿತ ಸಂಸ್ಥೆಗಳಿಗೆ ನೀಡಿದ ದಾನದ 50% ಅಥವಾ 100% – ಸರಕಾರ ನಿಗದಿಪಡಿಸಿದಂತೆ, ಸಂಬಳದ 10% ಮೀರದಂತೆ; ನಿಮ್ಮ ಆದಾಯದಿಂದ ನೇರವಾಗಿ ಕಳೆಯಬಹುದಾಗಿದೆ.

8. ಬಾಡಿಗೆ ರಿಯಾಯಿತಿ (ಸೆಕ್ಷನ್‌ 80 ಜಿಜಿ)
    ಸಂಬಳ ಮೂಲಕ ಎಚ್‌ಆರ್‌ಎ ಪಡೆಯದ ಹಾಗೂ ಸ್ವಂತ ಮನೆಯಿಲ್ಲದೆ ವಾಸ್ತವದಲ್ಲಿ ಬಾಡಿಗೆ ಮನೆಯಲ್ಲಿದ್ದು ಬಾಡಿಗೆ ನೀಡುತ್ತಿರುವವರಿಗೆ ಗರಿಷ್ಠ ವಾರ್ಷಿಕ ರೂ. 60,000ವರೆಗೆ ವಿನಾಯಿತಿ ಸಿಗುತ್ತದೆ. ಇದಕ್ಕೆ ಕೆಲವು ನಿಯಮಗಳು ಅನ್ವಯಿಸುತ್ತವೆ. 

9. ಸ್ವಂತ ಅಂಗವೈಕಲ್ಯ (ಸೆಕ್ಷನ್‌ 80 ಯು)
    ಸ್ವಂತ ಅಂಗವೈಕಲ್ಯದ ಚಿಕಿತ್ಸೆಗಾಗಿ ರೂ. 75,000 ಮತ್ತು ಗಂಭೀರ ಊನಕ್ಕೆ ರೂ. 1,25,000 ವಾರ್ಷಿಕ ರಿಯಾಯಿತಿ ಲಭ್ಯವಿದೆ. 
ಮೇಲ್ಕಾಣಿಸಿದ ರಿಯಾಯಿತಿಗಳನ್ನು ಒಂದೊಂದಾಗಿ ಪರಿಗಣಿಸಬೇಕು. ಅದಾದ ಮೇಲೆ ಪ್ರತ್ಯೇಕವಾಗಿ ಈ ಕೆಳಗಿನ ಸೆಕ್ಷನ್‌ 80ಸಿ ಅಡಿಯಲ್ಲಿ ಮಾಡಿದ ಹೂಡಿಕೆಗಳಿಗೆ ಒಟ್ಟಾರೆ ಮೊತ್ತ ರೂ. 1.5 ಲಕ್ಷದ ವರೆಗೆ ಕರ ವಿನಾಯಿತಿಯನ್ನು ನೀಡಲಾಗಿದೆ. ಇವುಗಳಲ್ಲಿ ಹೂಡಿದ ಮೊತ್ತವನ್ನು ಈ ವರ್ಷದ ಆದಾಯದಿಂದ ನೇರವಾಗಿ ಕಳೆಯಬಹುದು

ಸೆಕ್ಷನ್‌ 80 ಸಿ
ಈ ಸೆಕ್ಷನ್‌ ಅಡಿಯಲ್ಲಿ ಈ ಕೆಳಗಿನ ಹೂಡಿಕೆ/ಪಾವತಿಗಳು ಬರುತ್ತವೆ. (ಒಟ್ಟು ಮಿತಿ ರೂ. 1.5 ಲಕ್ಷ) 
– ಎಂಪ್ಲಾಯೀಸ್‌ ಪ್ರಾವಿಡೆಂಟ್‌ ಫ‌ಂಡ್‌ (ಇಪಿಎಸ್‌) – ನಿಮ್ಮ ದೇಣಿಗೆಯಲ್ಲದೆ ಸ್ವಂತ ಇಚ್ಛೆಯಿಂದ ವಾಲಂಟರಿಯಾಗಿ ಪಿಎಫ್ಗೆ ನೀಡಿದ್ದು ಸಹಿತ: (ಕಂಪೆನಿಯ ದೇಣಿಗೆಯನ್ನು ನೀವು ನಿಮ್ಮ ಈ ಕರ ಲೆಕ್ಕಕ್ಕೆ ತೆಗೆದುಕೊಳ್ಳುವಂತಿಲ್ಲ. ಅದು ಪ್ರತ್ಯೇಕ). 

– ಸ್ವಂತ, ಸೌ³ಸ್‌, ಮಕ್ಕಳ ಜೀವ ವಿಮೆ/ಯುಲಿಪ್‌ನ ವಾರ್ಷಿಕ ಪ್ರೀಮಿಯಂ – ವಿಮಾ ಮೊತ್ತದ 10% ಮಿತಿಯೊಳಗೆ, ಪ್ರತಿ ಪಾಲಿಸಿಗೆ. ಸರಿಸುಮಾರು ಜೀವವಿಮೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಕರ ವಿನಾಯಿತಿಗೆ ಅರ್ಹವಾದ ಆ ಪ್ರೀಮಿಯಂ ಮೊತ್ತವನ್ನು ಮೊದಲು ತೆಗೆದುಕೊಳ್ಳಿ. 

– ಗರಿಷ್ಟ ಎರಡು ಮಕ್ಕಳ ಪರವಾಗಿ ಪಾವತಿಸಿದ ನರ್ಸರಿ/ಶಾಲಾ ಟ್ಯೂಶನ್‌ ಫೀ (ಬೇರೆ ಯಾವುದೇ ಫೀಸ್‌ ಆಗುವುದಿಲ್ಲ, ಟ್ಯೂಶನ್‌ ಫೀ ಹೆಸರಿನಲ್ಲಿರುವ ಫೀ ಮಾತ್ರ).   

– ಗೃಹಸಾಲದ ಮರುಪಾವತಿಯಲ್ಲಿ (ಇಎಂಐನ) ಅಸಲು ಭಾಗ (ಬಡ್ಡಿ ಬಿಟ್ಟು). 

– ಈ ವಿತ್ತ ವರ್ಷದಲ್ಲಿ ಮನೆ ಖರೀದಿಸಿದ್ದರೆ ಆ ಮನೆ ಖರೀದಿಯ ರಿಜಿಸ್ಟ್ರೇಶನ್‌, ಸ್ಟಾಂಪ್‌ ಡ್ನೂಟಿ ವೆಚ್ಚಗಳು.  

– ಸಾರ್ವಜನಿಕವಾಗಿ ಮಾಡಿದ 15 ವರ್ಷದ ಪಬ್ಲಿಕ್‌ ಪ್ರಾವಿಡೆಂಟ್‌ ಫ‌ಂಡ್‌ ದೇಣಿಗೆ. 

– ಅಂಚೆ ಕಚೇರಿಯ ಎನ್‌.ಎಸ್‌.ಸಿ. ಮತ್ತದರ ಬಡ್ಡಿಯ ಮರುಹೂಡಿಕೆ: ಈ ಯೋಜನೆಯ ಮೇಲಿನ ಬಡ್ಡಿಯನ್ನೂ ಕೂಡ ಮರು ಹೂಡಿಕೆ ಎಂದು ಪರಿಗಣಿಸಿ ಅದರ ಮೇಲೂ ಕರ ವಿನಾಯಿತಿ ಸೌಲಭ್ಯವಿದೆ. 

– ಇಕ್ವಿಟಿ ಲಿಂಕ್ಡ್ ಸೇವಿಂಗ್ಸ್ ಸ್ಕೀಮ್‌ ((ELSS) ನಾಮಾಂಕಿತ ಮ್ಯೂಚುವಲ್‌ ಫ‌ಂಡ್‌. ಇಲ್ಲಿ ಯಾವುದೇ ಇಕ್ವಿಟಿ ಫ‌ಂಡುಗಳು ಬರುವುದಿಲ್ಲ. ಇವುಗಳು ಇ.ಎಲ್.ಎಸ್‌.ಎಸ್‌. ಅಥವಾ ಟ್ಯಾಕ್ ಸೇವರ್‌ ಇತ್ಯಾದಿ ನಿರ್ದಿಷ್ಟ ಲೇಬಲ್‌ಗ‌ಳೊಂದಿಗೆ ಬಿಡುಗಡೆಯಾಗುತ್ತವೆ.  

– ಮ್ಯೂಚುವಲ್‌ ಫ‌ಂಡ್‌ಗಳ ಯುನಿಟ್‌ ಲಿಂಕ್ಡ್ ಪೆನÒನ್‌ ಪ್ಲಾನ್‌ಗಳು ((UTI&RBP, Franklin Templeton&TIPP, Reliance Retirement Fund)

– ಐದು ವರ್ಷಾವಧಿಯ ಬ್ಯಾಂಕು/ಪೋಸ್ಟಾಫೀಸಿನ ಕರನೋಂದಾಯಿತ ಎಫ್.ಡಿ: ಇಲ್ಲೂ 80ಸಿ ಸೆಕ್ಷನ್‌ ಅನ್ವಯ, ಕರ ಉಳಿತಾಯಕ್ಕೆ ಎನ್ನುವ ಲೇಬಲ್‌ ಅಗತ್ಯ. ಇವುಗಳ ಮೇಲೆ 5 ವರ್ಷಗಳ ಲಾಕ್‌-ಇನ್‌ ಇರುತ್ತವೆ. 

– ಅಂಚೆ ಕಚೇರಿಯ 5 ವರ್ಷದ ಸೀನಿಯರ್‌ ಸಿಟಿಜನ್‌ ಸೇವಿಂಗ್‌ ಸ್ಕೀಂ (SCSS) ನಲ್ಲಿ ಮಾಡಿದ ಹೂಡಿಕೆ.

– ಸುಕನ್ಯಾ ಸಮೃದ್ಧಿ ಯೋಜನೆ: ಕೇವಲ ಹತ್ತು ವರ್ಷ ಮೀರದ ಹೆಣ್ಮಕ್ಕಳಿಗಾಗಿ ಮಾತ್ರ ಮೀಸಲಾಗಿರುವ ಈ ಯೋಜನೆಯಲ್ಲಿ ಮಾಡಿದ ಹೂಡಿಕೆ.   

– ಎಲ್‌ಐಸಿ ಮತ್ತಿತರ ಜೀವ ವಿಮಾ ಕಂಪೆನಿಗಳು ನೀಡುವ ಪೆನÒನ್‌ ಪ್ಲಾನುಗಳು.

– ನ್ಯಾಶನಲ್‌ ಪೆನ್ಶನ್‌ ಸ್ಕೀಂ (NPS): ಮೇಲ್ಕಾಣಿಸಿದಂತೆ ಈ ಯೋಜನೆಯ ದೇಣಿಗೆ 2 ಸೆಕ್ಷನ್‌ಗಳಲ್ಲಿ ಬರುತ್ತವೆ – 80c ಮತ್ತು 80CCD(1b). ನಿಮಗೆ ಬೇಕಾದಂತೆ ಬೇಕಾದ ಸೆಕ್ಷನ್ನಿನಲ್ಲಿ ರಿಯಾಯಿತಿ ಪಡಕೊಳ್ಳಬಹುದು. ಇದರಲ್ಲಿ ಲಾಭವನ್ನು ಮೊತ್ತ ಮೊದಲು 80CCD(1b) ಅಡಿಯಲ್ಲಿಯೇ ತೆಗೆದುಕೊಳ್ಳುವುದು ಉತ್ತಮ. ಅದರಡಿಯಲ್ಲಿ ಬೇರೆ ಆಯ್ಕೆಗಳಿಲ್ಲ. 80c ಅಡಿಯಲ್ಲಿ ಬೇರೆ ಹಲವಾರು ಆಯ್ಕೆಗಳಿವೆ. 80CCD(1b) ಮಿತಿ ಮೀರಿದರೆ ಉಳಿದ ಮೊತ್ತವನ್ನು ಇಲ್ಲಿ ತೆಗೆದುಕೊಳ್ಳಬಹುದು. 

– ಜಯದೇವ ಪ್ರಸಾದ ಮೊಳೆಯಾರ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಯ ಅಂದ್ರೆ ಏನ್ರೀ.. ಎನ್ನುವ ಲೇಡಿ ಜೇಮ್ಸ್‌ ಬಾಂಡ್‌!

ಭಯ ಅಂದ್ರೆ ಏನ್ರೀ.. ಎನ್ನುವ ಲೇಡಿ ಜೇಮ್ಸ್‌ ಬಾಂಡ್‌!

ಕರ ಚೋರರ ಮೇಲೆ ಹದ್ದಿನ ಕಣ್ಣಿಡುವ ಫಾರ್ಮ್ 26ಎಎಸ್‌

ಕರ ಚೋರರ ಮೇಲೆ ಹದ್ದಿನ ಕಣ್ಣಿಡುವ ಫಾರ್ಮ್ 26ಎಎಸ್‌

ವಿದ್ಯಾ ಸಾಲದ ಬಡ್ಡಿ ಮತ್ತು ಕರ ವಿನಾಯಿತಿ

ವಿದ್ಯಾ ಸಾಲದ ಬಡ್ಡಿ ಮತ್ತು ಕರ ವಿನಾಯಿತಿ

Home-Loan-730

ಗೃಹ ಸಾಲದ ಮೇಲೆ ಕರ ವಿನಾಯಿತಿ

tax-rebate

ಇನ್ನಷ್ಟು 87ಎ ರಿಬೇಟ್‌ಗಳು ಮತ್ತು ಅವುಗಳ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.