ಅಕ್ವೇರಿಯಂ, ಸಾಕು ಹಕ್ಕಿಗಳು ಮನೆಯಲ್ಲಿ ಇರಬಹುದೇ?


Team Udayavani, Jun 26, 2017, 3:45 AM IST

aqua.jpg

ಯಾವುದೇ ಕಾರಣಕ್ಕೂ ಮೀನಿನ ತೊಟ್ಟಿಯನ್ನು ಅಥವಾ ಮೀನಿರುವ ನೀರಿನ ಬಟ್ಟಲು, ಗಾಜಿನ ಗಿಂಡಿಗಳನ್ನು ಮಲಗುವ
ಕೋಣೆಯಲ್ಲಿ ಮಾತ್ರ ಇಟ್ಟುಕೊಳ್ಳಬೇಡಿ. ಮಲಗುವ ಕೋಣೆಯಲ್ಲಿ ಎಡಬಿಡದೆ ಓಡಾಡುತ್ತಾ, ಗಾಜಿನ ಗೋಡೆಗೆ ಮೂತಿ ಬಡಿದುಕೊಳ್ಳುತ್ತ ದಿಕ್ಕು ತಪ್ಪುವ ಮೀನುಗಳು ಮಲಗಿದ ಮಂದಿಯ ಸ್ವಾಸ್ಥ್ಯಕ್ಕೆ ಶುಭ ಲಕ್ಷಣವಾಗುವುದಿಲ್ಲ.

ಮನೆಯ ಸೊಬಗಿದೆ ಎಂದು ನಾವು ಅಕ್ವೇರಿಯಂ ಅಥವಾ ಗಿಣಿ, ಪಾರಿವಾಳ, ನವಿಲು ಗುಬ್ಬಿ ಇತ್ಯಾದಿ ಹಕ್ಕಿಗಳನ್ನು, ಲವ್‌ ಬರ್ಡ್ಸ್‌ ಗಳಂಥ ಬಣ್ಣದ ಮೈ ಹೊದಿಕೆಯ ಹಕ್ಕಿಗಳನ್ನುಇಟ್ಟು ಆರೈಕೆ ಮಾಡುವುದನ್ನು ಗಮನಿಸುತ್ತೇವೆ. ಅಕ್ವೇರಿಯಂ ಇಟ್ಟು ಬಣ್ಣಬಣ್ಣದ ಅವುಗಳ ಹೊರ ಮೈ ಮಿಂಚಲ್ಲಿ ತೆವಳುತ್ತಾ, ಈಜುತ್ತಾ ತಾವು ಹೊರಬರಲಾರದ ಗಾಜಿನ ಗೋಡೆಗಳಿಗೆ ಢೀ ಕೊಡುತ್ತ, ಮೂತಿ ಬಡಿಯುತ್ತ, ಮೂತಿ ಉರುಟುರುಟಾಗಿಸುತ್ತಾ ಓಡಾಡುವ ಮೀನುಗಳು ಕಣ್ಣಿಗೆ
ಆಹ್ಲಾದವನ್ನು ಕೊಡುತ್ತವೆಂಬುದನ್ನು ಆನಂದಿಸುತ್ತೇವೆ.

ಆದರೆ ಯಾವುದೇ ಕಾರಣಕ್ಕೂ ಮೀನಿನ ತೊಟ್ಟಿಯನ್ನು ಅಥವಾ ಮೀನಿರುವ ನೀರಿನ ಬಟ್ಟಲು, ಗಾಜಿನ ಗಿಂಡಿಗಳನ್ನು ಮಲಗುವ ಕೋಣೆಯಲ್ಲಿ ಮಾತ್ರ ಇಟ್ಟುಕೊಳ್ಳಬೇಡಿ. ಮಲಗುವ ಕೋಣೆಯಲ್ಲಿ ಎಡಬಿಡದೆ ಓಡಾಡುತ್ತಾ, ಗಾಜಿನ ಗೋಡೆಗೆ ಮೂತಿ ಬಡಿದುಕೊಳ್ಳುತ್ತ ದಿಕ್ಕು ತಪ್ಪುವ ಮೀನುಗಳು ಮಲಗಿದ ಮಂದಿಯ ಸ್ವಾಸ್ಥ್ಯಕ್ಕೆ ಶುಭ ಲಕ್ಷಣವಾಗುವುದಿಲ್ಲ. ಜೊತೆಗೆ ಮಲಗುವ ಕೋಣೆಯಲ್ಲಿ ನೀರನ್ನು ತುಂಬಿಕೊಂಡ ಯಾವುದೇ ಪಾತ್ರೆಗಳು, ತೊಟ್ಟಿಗಳು, ಜಾಡಿಗಳು, ಗಿಂಡಿಗಳು ಅಶುಭಸೂಚಕವಾಗಿದೆ. ಇದಕ್ಕೆ ಕಾರಣ ಮಲಗಿರುವ ಸಂದರ್ಭದ ಸುಪ್ತಾವಸ್ಥೆಗೂ ನೀರಿನ ಕಾರಣವಾದ ಜಲತತ್ವಕ್ಕೂ ಒಂದು ಇನ್ನೊಂದನ್ನು ಭೇದಿಸಿ ಅಶುಭ ಸ್ಪಂದನಗಳನ್ನು ಮನೆಯ ಯಜಮಾನನಿಗೆ ತಂದಿಡುವ ಅಂಶಗಳಾಗಿವೆ.

ಅಕ್ವೇರಿಯಂ ಜಾಡಿಯನ್ನು ಹೊರ ದಿವಾನಖಾನೆಯಲ್ಲಿ ಇರಿಸಬಹುದು. ಹೊಸದಾಗಿ ಮದುವೆಯಾದ ದಂಪತಿಗೆ
ಕೂಡಾ ಈ ರೀತಿಯ ಅಕ್ವೇರಿಯಂ ಜೋಡಣೆ ಉತ್ತಮ. ಮದುವೆಯಾಗಬೇಕಾದ ದಾಂಪತ್ಯ ಆಕಾಂಕ್ಷಿಗಳಿಗೂ ಇದು
ಒಳ್ಳೆಯದು. ಹೀಗಿರುವ ಅಕ್ವೇರಿಯಂನಲ್ಲಿ ಕಡುಗಪ್ಪು ಪೂರ್ತಿಯಾಗಿ ಮೈಬಣ್ಣವಾಗಿರುವ ಮೀನುಗಳಿರದಂತೆ ನೋಡಿಕೊಳ್ಳಿ. ಬಂಗಾರದ ಬಣ್ಣ, ನಸು ನೀಲಿ, ನಸುಗೆಂಪು, ಬಿಳಿಕಪ್ಪುಗಳು ಪಟ್ಟೆಯಾದ ಮೀನುಗಳು ಆಲೆಯಾಕಾರದ ವಜ್ರದ ಸ್ವರೂಪದಲ್ಲಿರುವ ಮೀನುಗಳು ಅತ್ಯುತ್ಸಾಹದಿಂದ ಪುಟಿಯುವಂತೆ, ಕತ್ತು, ಮೂತಿ ಕೊಂಕಿಸುತ್ತಾ ಓಡಾಡುತ್ತಿರಲಿ. ಸೂರ್ಯ ಬರುವ ಮುನ್ನ ಆಹಾರವನ್ನು ಹಾಕುವ ಪದ್ಧತಿ ಮಾಡಬೇಡಿ. ಮುಂಜಾನ ಸೂರ್ಯ
ಬಂದಾಗಲೇ ಆಹಾರದ ಗೋಲಿಗಳು ಅಕ್ವೇರಿಯಂ ಒಳಗೆ ಮೀನುಗಳಿಗೆ ನೀಡುವ ಅಭ್ಯಾಸ ನೆರವೇರಲಿ. ಒಳಗಿನ ನೀರು
ನಸು ನೀಲಿಯನ್ನು ಹಳದಿ ಛಾಯೆಯ ಬೆಳಕಲ್ಲಿ ಹೊಂದುವಂತೆ ಪ್ರತಿಫ‌ಲಿಸುವಂತಾಗಲಿ. ಹೊರಸೂಸುವಂಥ ರೀತಿಯಲ್ಲಿ ಇರಲಿ.

ಇದರಿಂದ ಮನೆಯೊಳಗೆ ಪರಸ್ಪರರನ್ನು ಅರಿಯುವ ನಿಟ್ಟಿನ ವಿಚಾರದಲ್ಲಿ ಒಂದು ಆದ್ರìತೆ ನಿರ್ಮಾಣಗೊಳ್ಳಲು ಸಹಾಯವಾಗುತ್ತದೆ. ಇನ್ನು ಹಕ್ಕಿಗಳ ವಿಷಯಕ್ಕೆ ಬಂದಾಗ, ಬಂಧನಕ್ಕೆ ತಳ್ಳಿಕೊಂಡ ಹಕ್ಕಿಗಳು ಮನೆಯೊಳಗಡೆ ಇರಲೇ ಬಾರದು. ಗುಬ್ಬಿಗಳ ವಿಷಯದಲ್ಲಿ ಬಂಧನವೆಂಬುದು ನಿರ್ಮಾಣವಾಗದಿದ್ದರೂ ಹಾರಾಡಿಕೊಂಡಿರುವ ಗುಬ್ಬಿಗಳು ಕೂಡಾ ಮನೆಯಲ್ಲಿ ಗೂಡು ಕಟ್ಟದಿದ್ದರೆ ಒಳ್ಳೆಯದು.

ಯಾಕೆಂದರೆ ಗುಬ್ಬಿಗಳು ತಮ್ಮ ಆಹಾರವಾದ ಕೀಟಗಳನ್ನು ಮನೆಯೊಳಗೆ ತಂದುಕೊಂದು ತಿನ್ನುವ ಅದರ ಭೋಜನ ವಿಶೇಷ ಸಂಭವಿಸಕೂಡದು. ಗುಬ್ಬಿಗಳನ್ನು ಈ ವಿಷಯದಲ್ಲಿ ಮನುಷ್ಯ ಪ್ರಯತ್ನಗಳೊಡನೆ ಈ ನೆಲೆಯಲ್ಲಿ ನಿಯಂತ್ರಿಸಲಾಗದು. ಈ ಕಾರಣದಿಂದಾಗಿ ಗುಬ್ಬಿಗಳು ಮನೆಯೊಳಗಡೆ ನಿಷಿದ್ಧವೇ ಆಗಿವೆ. ಉಳಿದಂತೆ ಗಿಣಿ ಲವ್‌ ,
ಬರ್ಡ್ಸ್‌ ಪಾರಿವಾಳಗಳು ಸಹಾ ಮನೆಯೊಳಗೆ ನಿಷಿದ್ಧವೇ ಆಗಿವೆ. ಇವು ಮನೆಯೊಳಗೆ ತನ್ನಿಂತಾನೆ ವಸತಿ ನಿರ್ಮಿಸಿಕೊಳ್ಳುವುದು ಬೇಡ. ಜೊತೆಗೆ ಪಂಜರವೊಂದನ್ನು ನಿರ್ಮಿಸಿ ರೆಕ್ಕೆಗಳನ್ನು ಸಂಯೋಜಿಸಿಕೊಂಡ ಇವುಗಳ
ಅಸಹಾಯಕ ಸೆರೆವಾಸವೂ ಬೇಡ. 

– ಅನಂತಶಾಸ್ತ್ರಿ

ಟಾಪ್ ನ್ಯೂಸ್

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.