ಪಾಟೀಲರ ತೋಟದಲ್ಲಿ ಹೂವಿನಿಂದ ಹೊನ್ನು


Team Udayavani, Oct 30, 2017, 11:25 AM IST

30-14.jpg

ಬಾಗಲಕೋಟ ಜಿಲ್ಲೆ ಬಾದಾಮಿ ತಾಲೂಕಿನ ಆಡಗಲ್‌ ಗ್ರಾಮದ ಮುಖ್ಯರಸ್ತೆಯ ಕಡೆಗೆ ಹೋದರೆ ಬಣ್ಣ, ಬಣ್ಣದ ಹೂಗಳು ಕಣ್ಣು ಸೆಳೆಯುತ್ತವೆ. ಹೌದು, ಅದೇ ಯಲ್ಲನಗೌಡ ರಂಗನಗೌಡ ಪಾಟೀಲರ ತೋಟ. ಇವತ್ತು ಪಾಟೀಲರ ಕಿಸೆಗೆ ಲಕ್ಷ ಲಕ್ಷ ಆದಾಯ ತುಂಬಿಸುತ್ತಿರುವುದು ಇದೇ ಹೂಗಳು. 

ಪಾಟೀಲರಿಗೆ ಒಟ್ಟು ಐದು ಎಕರೆ ಯಲ್ಲಿ ಜಮೀನಿದೆ. ಈ ಹಿಂದೆ ಜೋಳ, ಸಜ್ಜೆಗಳನ್ನು ಬೆಳೆಯುತ್ತಿದ್ದರು. ಆದರೆ ಕೆಲಸದ ನಿಮಿತ್ತ ಬಳ್ಳಾರಿ ಕಡೆ ತಿರುಗಾಡುತ್ತಿದ್ದಾಗಲೇ ಕಣ್ಣಿಗೆ ಬಿದ್ದಿದ್ದು ಈ ಹೂವಿನ ಕೃಷಿ. ಪ್ರಯಾಣದ ವೇಳೆಯಲ್ಲಿ ವಿಸ್ತಾರವಾಗಿ ಹರಡಿರುವ ಕೃಷಿ ಭೂಮಿಯನ್ನು ಕುತೂಹಲದಿಂದ ವೀಕ್ಷಿಸುವುದು ಇವರಅಭ್ಯಾಸ. ಕುಷ್ಟಗಿ, ಗಂಗಾವತಿ, ಕಂಪ್ಲಿ ಹೀಗೆ ಹಲವು ಕಡೆಗಳಲ್ಲಿ ರಸ್ತೆಯ ಬದಿಯ ಹೊಲಗಳಲ್ಲಿ ಕಾಣುತ್ತಿದ್ದ ಸಣ್ಣ ಸಣ್ಣ ತಾಕುಗಳಲ್ಲಿ ಬೆಳೆಯುತ್ತಿದ್ದ ಹೂವಿನ ತೋಟ ಆಕರ್ಷಿಸಿತು. ಅದನ್ನು ನೋಡಿದ ನಂತರ ತಮ್ಮ ಹೊಲವನ್ನು ಪರಿವರ್ತಿಸಿದರು.  

ಕೆಲಸದವರ ಕಿರಿಕಿರಿ ಇಲ್ಲ ಪಾಟೀಲರಿಗೆ. ಏಕೆಂದರೆ, ಇವರದ್ದು ಹದಿನಾರು ಜನರ ಅವಿಭಕ್ತ ಕುಟುಂಬ. ಹೀಗಾಗಿ ತೊಂದರೆ ಆಗಲಾರದು ಎಂದು ಧೈರ್ಯವಾಗಿ ಮುನ್ನುಗ್ಗಿದ ಪರಿಣಾಮ ಇವತ್ತು ಮೂರು ಎಕರೆಯಲ್ಲಿ ಹೂವು ಅರಳಿ ನಿಂತಿದೆ.

ಸುಗಂಧ ಬೀರಿದ ಸುಗಂಧರಾಜ
ಹೂವಿನ ಕೃಷಿಯಲ್ಲಿ ಪಾಟೀಲರಿಗೆ ಐದು ವರ್ಷದ ಅನುಭವವಿದೆ. ಆರಂಭದಲ್ಲಿ ಮೂರು ಎಕರೆಯಲ್ಲಿ ಸುಗಂಧರಾಜ ಬೆಳೆದರು. ಆಳವಾಗಿ ಉಳುಮೆ ಮಾಡಿ, ಯಥೇಚ್ಚ ಕಾಂಪೋಸ್ಟ್‌ ಗೊಬ್ಬರ ಸೇರಿಸಿದರು. ನೇಗಿಲು ಹೊಡೆದು ರೆಂಟೆಯಲ್ಲಿ ಹರಗಿ ಸಾಲಿನಿಂದ ಸಾಲಿಗೆ ಎರಡೂವರೆ ಅಡಿ, ಗಿಡದ ನಡುವೆ ಒಂದು ಅಡಿ ಅಂತರವಿಟ್ಟು ಗಡ್ಡೆಗಳನ್ನು ನಾಟಿ ಮಾಡಿದರು. ಮುಂದೆ ದುರಾಗಬಹುದಾದ ಕೊಳೆರೋಗ, ಗೆದ್ದಲು ಹುಳುಗಳ ನಿಯಂತ್ರಣಕ್ಕೆ ಗಡ್ಡೆ ಊರಿದ ಸ್ಥಳದಲ್ಲಿ ಒಂದೊಂದು ಹಿಡಿಯಷ್ಟು ಬೇವಿನ ಬೀಜದ ಪುಡಿಯನ್ನು ಸುರಿದು ಮಣ್ಣಿನ ಹೊದಿಕೆ ಮಾಡಿದರು. ಮೂವತ್ತು ದಿನದಲ್ಲಿ ಚಿಗುರು ಗೋಚರಿಸಿತು. ನಾಟಿ ಮಾಡಿದ ಎರಡೂವರೆ ತಿಂಗಳಿಗೆ
ಫ‌ಲವತ್ತಾದ ಕೆರೆ ಮಣ್ಣನ್ನು ಬುಡಕ್ಕೇರಿಸಿಕೊಟ್ಟರು. ಎಕರೆಗೆ ಆರು ಟ್ರಾಕ್ಟರ್‌ ಕಾಂಪೋಸ್ಟ್‌ ಗೊಬ್ಬರವನ್ನು ಮಣ್ಣಿನಲ್ಲಿ ಸೇರಿಸಿದರು.ಆರು ತಿಂಗಳಲ್ಲಿ 4-5 ಕೆಜಿಯಿಂದ ಆರಂಭವಾದ ಹೂವು ಒಂದು ವರ್ಷ ಪೂರೈಸುವುದರೊಳಗಾಗಿ ದಿನವೊಂದಕ್ಕೆ 40-45 ಕಿ.ಗ್ರಾಂ ದೊರೆಯತೊಡಗಿತು.

ಐದನೆಯ ವರ್ಷದ ಗಡ್ಡೆಗಳು 
ಸುಗಂಧರಾಜ ಕೃಷಿಯಲ್ಲಿ ಮೂರು ವರ್ಷಕ್ಕೊಮ್ಮೆ ಸ್ಥಳ ಬದಲಾಯಿಸುವುದು ವಾಡಿಕೆ. ಆದರೆ ಇವರ ಜಮೀನಿನಲ್ಲಿರುವ ಸುಗಂಧರಾಜಕ್ಕೆ ಐದು ವರ್ಷ. ಆರಂಭದಲ್ಲಿ ನಾಟಿ ಮಾಡಿದ ಗಡ್ಡೆಗಳೇ ಈಗಲೂ ಹೊಲದಲ್ಲಿವೆ. ಭರ್ತಿ ಹೂ ಇಳುವರಿಯನ್ನೇ
ನೀಡುತ್ತಿದೆ. ಹೂವಿಗೆ ಹುಳದ ಬಾಧೆ ಕಾಡಿದರೆ ಎಂದು ತಿಂಗಳಲ್ಲಿ ಎರಡರಿಂದ ಮೂರು ಬಾರಿ ಭೂಮ್‌ ಫ್ಲವರ್‌ ಔಷಧಿ ಸಿಂಪಡಿಸುತ್ತಾರೆ. ಡಿಸೆಂಬರ್‌ ತಿಂಗಳಿನಿಂದ ಮೇ  ತಿಂಗಳ ವರೆಗೆ ಹೂವಿನ ಇಳುವರಿ ಕಡಿಮೆ.ಆಗ ದಿನಕ್ಕೆ 20-25 ಕಿ.ಗ್ರಾಂ ಸಿಗುತ್ತದೆ.ಉಳಿಕೆ ದಿನಗಳಲ್ಲಿ 70-100 ಕೆ.ಜಿಯ ವರೆಗೆ ಸಿಗುತ್ತದೆ. ಈ ವರ್ಷದ ಜುಲೈ ಮತ್ತು ಆಗಸ್ಟ್‌ ಎರಡೇ ತಿಂಗಳಲ್ಲಿ 1,37,000ಆದಾಯ ಬಂದಿದ್ದನ್ನು ನೆನಪಿಸಿಕೊಂಡರು.

ಎಚ್‌.ಆರ್‌.ಕಡಿವಾಲ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.