ಇಪಿಎಫ್ ಎಂದರೇನು ಗೊತ್ತಾ?


Team Udayavani, Mar 12, 2018, 3:45 PM IST

epf.jpg

ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ಹಣ ಉಳಿಸುವ ದಾರಿ ಯಾವುದು ಅಂತ ಯೋಚಿರುತಾರೆ. ಆರ್‌ಡಿ, ಎಫ್ಡಿಗಿಂತ ಮೇಲು ಎನ್ನಬಹುದಾದದ್ದು ಈ ಇಪಿಎಫ್ (Employees Provident Fund)

ಇದಕ್ಕೆ ಇಪಿಎಫ್ ಆ್ಯಕ್ಟ್ 1952 ಎನ್ನುವ ಪ್ರತ್ಯೇಕ ಶಾಸನವಿದೆ.  ಇದರನ್ವಯ ಸರಕಾರವು ಎಂಪ್ಲಾಯೀಸ್‌ ಪ್ರಾವಿಡೆಂಟ್‌ ಫ‌ಂಡ್‌ ಎಂಬ ನಿಧಿಯನ್ನು ನೌಕರವರ್ಗದ ಭವಿಷ್ಯ ಕಲ್ಯಾಣಕ್ಕಾಗಿ ಸ್ಥಾಪಿಸಿತು. ಇದು ಸರಕಾರಿ ಹಾಗೂ ಖಾಸಗಿ ಕ್ಷೇತ್ರದ ನೌಕರರಿಗೆ ಸಮಾನವಾಗಿ ಅನ್ವಯಿಸುವ ಸೌಲಭ್ಯ. ಇದು ನಿಮ್ಮ ಕಂಪೆನಿಯೊಳಗೆ ಸಂಬಳದಿಂದ ಕಡಿತಗೊಂಡು ವೃದ್ಧಿಯಾಗುವ ಫ‌ಂಡು. ಹೊರಗೆ ಸ್ಟೇಟ್‌ ಬ್ಯಾಂಕ್‌/ಪೋಸ್ಟಾಫೀಸಿನಲ್ಲಿ ಸಾರ್ವಜನಿಕರಿಗಾಗಿ ದೊರಕುವ ಪಬ್ಲಿಕ್‌ ಪ್ರಾವಿಡೆಂಟ್‌ ಫ‌ಂಡ್‌ಗಿಂತ ಭಿನ್ನ.   

ಯಾರ ಹಣ ಹೂಡಬಹುದು?
 ಒಂದು ಸಂಸ್ಥೆಯಲ್ಲಿ ಪಿ.ಎಫ್ ಕಡಿತ ಮಾಡಬೇಕಾದರೆ 20ಕ್ಕೂ ಹೆಚ್ಚು ಉದ್ಯೋಗಿಗಳು ಇರಬೇಕಾದದ್ದು ಕಡ್ಡಾಯ. ಅದರಿಂದ ಕಡಿಮೆ ಉದ್ಯೋಗಿಗಳಿರುವ ಸಂಸ್ಥೆಗಳಿಗೆ ಪಿ.ಎಫ್ ನಿಧಿ ಅನುಷ್ಠಾನ ಕಡ್ಡಾಯವಲ್ಲ. ಅಲ್ಲದೆ, ಮಾಸಿಕ ಸಂಬಳ ರೂ 15,000 (ಬೇಸಿಕ್‌+ಡಿ.ಎ) ಗಿಂತ ಜಾಸ್ತಿ ಇರುವ ಉದ್ಯೋಗಿಗಳ ಮೇಲೆ ಕೂಡಾ ಈ ಸ್ಕೀಮು ಕಡ್ಡಾಯವಲ್ಲ. ಈ ಮಿತಿಯ ಒಳಗೆ ವೇತನ ಪಡೆಯುವ ವರ್ಗಕ್ಕೆ ಮಾತ್ರ ಈ ಸ್ಕೀಮು ಕಡ್ಡಾಯ. ಸರಕಾರದ ಕಾನೂನುಗಳು ದುರ್ಬಲ ವರ್ಗದವರನ್ನು ರಕ್ಷಿಸುವ ದೃಷ್ಟಿಯಿಂದ ಮಾಡಿದ್ದಾಗಿರುತ್ತದೆ. ಆದರೂ ಬಹುತೇಕ ಉತ್ತಮ ಕಂಪೆನಿಗಳು ತಮ್ಮ ಎಲ್ಲಾ ಉದ್ಯೋಗಿಗಳಿಗೂ ಪಿ.ಎಫ್ ಕಡಿತವನ್ನು ಐಚ್ಛಿಕವಾಗಿಯಾದರೂ ಮಾಡುತ್ತಿವೆ. ಇದು ಏಕೆಂದರೆ, ಪ್ರಾವಿಡೆಂಟ್‌ ಫ‌ಂಡ್‌ ಎಂಬುದು ಭವಿಷ್ಯಕ್ಕಾಗಿ ಮಾಡುವಂತಹ ಒಂದು ಉತ್ತಮವಾದ ಉಳಿತಾಯ ಯೋಜನೆ. ನಿಗದಿತ, ಕರಮುಕ್ತ ಆದಾಯಕ್ಕೆ ಪಿ.ಎಫ್ನಷ್ಟು ಪ್ರಶಸ್ತವಾದ ಹೂಡಿಕೆ ಇನ್ನೊಂದಿಲ್ಲ.

ಸಂಘಟಿತ ಉದ್ಯಮಗಳಿಗೆ ಈ ಕಾನೂನು ಕಟ್ಟುನಿಟ್ಟಾಗಿ ಅನ್ವಯಿಸುವುದಾದರೂ ಅಸಂಘಟಿತ ಕ್ಷೇತ್ರದ ಬಹುಪಾಲು ಕಾರ್ಮಿಕರಿಗೆ ಈ ಸೌಲಭ್ಯ ಇನ್ನೂ ದೊರಕುತ್ತಿಲ್ಲ ಎನ್ನುವುದು ದುಃಖದ ವಿಚಾರ. ಅಂತವರಿಗೆ ಬ್ಯಾಂಕ್‌/ಪೋಸ್ಟಾಫೀಸಿನ ಪಿಪಿಎಫ್ ಒಂದು ಪರ್ಯಾಯ.

ವೇತನದ (ಬೇಸಿಕ್‌ ಮತ್ತು ಡಿಎ) ಶೇ.12 ಉದ್ಯೋಗಿಯ ಸಂಬಳದಿಂದ ಕಡಿದು ಈ ನಿಧಿಗೆ ‘ಎಕೌಂಟ್‌ ಎ’ ಅಡಿಯಲ್ಲಿ ಸಂಪೂರ್ಣವಾಗಿ ಜಮೆ ಮಾಡಲಾಗುತ್ತದೆ. ಅದಲ್ಲದೆ ಉದ್ಯೋಗದಾತನ ವತಿಯಿಂದಲೂ ಕೂಡಾ ಪ್ರತ್ಯೇಕವಾಗಿ ಇನ್ನೊಂದು ಶೇ.12 ಕಡಿತಗೊಳಿಸಿ ‘ಎಕೌಂಟ್‌ ಬಿ’ ಅಡಿಯಲ್ಲಿ ಉದ್ಯೋಗಿಯ ಪಿಎಫ್ ಖಾತೆಗೆ ಸೇರಿಸಲಾಗುತ್ತದೆ.

ಹಾಗಾಗಿ ಒಟ್ಟು ಜಮೆ ಶೇ. 24 ನಿಜ ಹೇಳಬೇಕಾದರೆ, ನಾವು ಶೇ.24 ಎಂದು ಹೇಳುತ್ತೇವಾದರೂ ಅಸಲಿಗೆ ನಮ್ಮ ಪಿಎಫ್ ಖಾತೆಗೆ ಈ ಶೇ.24ರಷ್ಟು ಸಂಪೂರ್ಣವಾಗಿ ಜಮೆಯಾಗುವುದಿಲ್ಲ. ನಿಮ್ಮ ಶೇ.12 ಸಂಪೂರ್ಣವಾಗಿ ಪಿಎಫ್ ಖಾತೆಗೇನೇ ಜಮೆಯಾದರೂ ಕೂಡಾ ಉದ್ಯೋಗದಾತರ ಶೇ.12ರಲ್ಲಿ ಎರಡು ಭಾಗಗಳಿವೆ. ಮೊತ್ತಮೊದಲನೆಯ ಭಾಗ- ಸಂಬಳದ ಶೇ.8.33 (ಗರಿಷ್ಠ, ಸಂಬಳ ರೂ 15,000 ಮಿತಿಯೊಳಗೆ ಅಂದರೆ, ಗರಿಷ್ಠ ದೇಣಿಗೆ ರೂ 1250) ಇಪಿಎಫ್ಒ ಅಡಿಯಲ್ಲಿಯೇ ಬರುವ ಒಂದು ಪೆನÒನ್‌ ಉಪಖಾತೆಗೆ ಹೋಗುತ್ತದೆ.  ಎಂಪ್ಲಾಯ್‌ ಪೆನÒನ್‌ ಸ್ಕೀಮ್‌ ಅಥವಾ ‘ಇಪಿಎಸ್‌’ ಎನ್ನುವ ಈ ಸ್ಕೀಮು ನಿವೃತ್ತಿಯ ಬಳಿಕ ಸಿಗುವ ಪೆನÒನ್‌ಗಾಗಿ ಮೀಸಲಾಗಿದೆ. ಹಾಗಾಗಿ ಇಪಿಎಫ್ನಲ್ಲಿ ಪೆನÒನ್‌ ದೇಣಿಗೆಯಾದ ಶೇ.8.33 ಅಥವಾ ಗರಿಷ್ಠ ರೂ 1,250 ಕಳೆದು ಉಳಿದ ಮೊತ್ತ ಅಂದರೆ ಶೇ.3.67 (ಗರಿಷ್ಟ ಸಂಬಳ ರೂ 15,000 ಮಿತಿಯೊಳಗೆ ಅಂದರೆ ಗರಿಷ್ಟ ದೇಣಿಗೆ ರೂ 550) ಮಾತ್ರ ಪಿಎಫ್ನ ‘ಎಕೌಂಟ್‌ ಬಿ’ ಗೆ ಜಮೆಯಾಗುತ್ತದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.