ಹಲಸು ಲಾಭ ಹುಲುಸು


Team Udayavani, May 14, 2018, 2:14 PM IST

halasu.jpg

ತುಮಕೂರು, ಗುಬ್ಬಿಯ ಸುತ್ತಮುತ್ತ  ಅಡಿಕೆ, ತೆಂಗು, ಮಾವಿನ ಕೃಷಿಯೇ ಹೆಚ್ಚು. ಆದರೆ ಈಗ ಒಂದಷ್ಟು ರೈತರು ಹಲಸಿನ ಕಡೆಗೆ ವಾಲಿದ್ದಾರೆ.  ತಾಲೂಕಿನ ಚೇಳೂರಿನಲ್ಲಿರುವ ರೈತ ಸಿದ್ಧರಾಜು, ರಾಷ್ಟ್ರೀಯ ತಳಿಸಂರಕ್ಷಕ ಪ್ರಶಸ್ತಿಯನ್ನು ಗಳಿಸಿರುವುದೂ ಕೂಡ ಇದಕ್ಕೆ ಸ್ಫೂರ್ತಿ ಇರಬಹುದು. ಈ ಹಲಸಿನ ತಳಿಯ ವಿಚಾರ ರಾಷ್ಟ್ರಮಟ್ಟದಲ್ಲಿ ಚರ್ಚಯಾಗಿತ್ತು. ಸಿದ್ದೇಶ್‌ ಕಂಡುಹಿಡಿದ ಈ ತಳಿಗೆ ಭಾರತೀಯ  ತೋಟಗಾರಿಕೆ ಸಂಶೋಧನಾ ಸಂಸ್ಥೆಯು ” ಸಿದ್ದು ಹಲಸು’ ಎಂದು ನಾಮಕರಣ ಮಾಡಿದ್ದು ಈ ಭಾಗದಲ್ಲಿ ಹಲಸಿನ ಕೃಷಿಗೆ ಪರೋಕ್ಷವಾಗಿ ಉತ್ಸಾಹ ತುಂಬಿಂದಂತಾಗಿದೆ. 

ರುದ್ರಾಕ್ಷಿ ಹಲಸು, ಹರಿಶಿಣ, ಕೆಂಪು ವರ್ಣದ ಹಲಸು, ಜಾಣಗೆರೆ, ಚಂದ್ರ ಹಲಸು,  ಶಿವಮೊಗ್ಗ ಹಳದಿ, ಮೇಣರಹಿತ ಹಲಸು,  ಶಿಡ್ಲಘಟ್ಟ, ಸಿಂಗಾಪುರ್‌, ಮದ್ದೂರ್‌ ಬಿಳಿ, ಲಾಲ್‌ಬಾಗ್‌, ಮಂಕಳಲೆ ಚಂದ್ರ ಹಲಸು, ಸುವರ್ಣಋತು ಹಲಸು, ಸದಾನಂದ, ಲಾಲ್‌ಬಾಗ್‌ ಮಧುರ, ತೂಬುಗೆರೆ ಚಂದ್ರಬುಕ್ಕೆ, ಚಂದ್ರ, ಹೇಮ ಚಂದ್ರ ಹಲಸು ಹೀಗೆ, ಹಲಸಿನ ತಳಿಯಲ್ಲೂ ಹಲವು ವಿಧಗಳಿವೆ. ಇವುಗಳಲ್ಲಿ  ಬಹುತೇಕ ತಳಿಗಳನ್ನು ಇಲ್ಲಿ ಬೆಳೆಯುತ್ತಾರೆ. 
  ಈ ಭಾಗದಲ್ಲಿ ರೈತರು ಹಲಸನ್ನು ಮಿಶ್ರ ಅಥವಾ ಬದುವಿನ ಬೆಳೆಯಾಗಿ ಬೆಳೆಯುತ್ತಾರೆ.  ಇಲ್ಲಿ ಯಾವುದೇ ರಾಸಾಯನಿಕಗಳನ್ನು ಉಪಯೋಗಿಸದೆ ಬೆಳೆಸುವುದರಿಂದ  ಬೇಡಿಕೆ ಹೆಚ್ಚಿಗೆ ಇದೇ ಎನ್ನುತ್ತಾರೆ ರೈತ ದೊಡ್ಡನೆಟ್ಟಕುಂಟ ಡಿ.ರಾಜೇಶ್‌.

ಲಾಭ ಹೇಗೆ?
ರೈತರು  ಒಂದು ಹೆಕ್ಟೇರಿನಲ್ಲಿ ಅಂದಾಜು 100 ಮರಗಳನ್ನು ಬೆಳೆಸಬಹುದು.  ಇವು ನಾಲ್ಕು ಅಥವಾ ಐದು ವರ್ಷಗಳಲ್ಲಿ ಕಾಯಿ ಬಿಡಲು ಪ್ರಾರಂಭಿಸುತ್ತದೆ.  ಕಸಿ ಮಾಡಿದ ಸಸಿಗಳಾದರೆ 3 ವರ್ಷಕ್ಕೆ ಕಾಯಿ ಬಿಡುತ್ತವೆ. 
 10 ವರ್ಷ ವಯಸ್ಸಾದ ಮರವು ಸುಮಾರು 100 ರಿಂದ 150 ಕಾಯಿಗಳನ್ನು ಬಿಡುತ್ತದೆ. ಒಂದು ಕಾಯಿಗೆ 100ರೂ. ಸಿಕ್ಕರೂ ಲಾಭವೋ ಲಾಭ.  

 ಹಲಸು, ಬಹುಬಳಕೆಯ ಹಣ್ಣು. ಇದರ ಚಿಪ್ಸ್‌ಗೆ  ಹೆಚ್ಚು ಬೇಡಿಕೆ ಇದೆ.  ಒಂದು ಕೆಜಿ ಚಿಪ್ಸ್‌ ಗೆ 400 ರೂ. ಬೆಲೆ ಇದೆ.  ನಾವು ಮಾಡುವ ಹಪ್ಪಳ ಮತ್ತು ಚಿಪ್ಸ್‌ ಅನ್ನು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತೇವೆ ಎನ್ನುತ್ತಾರೆ ಸಾವಯವ ಕೃಷಿ ಮಾಡುತ್ತಿರುವ ಅಮ್ಮನಘಟ್ಟದ ಮಂಜುಳ. 

– ಕೆಂಪರಾಜು ಜಿ.ಆರ್‌.ಗುಬ್ಬಿ

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.