ಗುಂಡಪ್ಪ ಏನೆಲ್ಲಾ ಮಾಡಿದ್ರು ನೋಡ್ರಪ್ಪ


Team Udayavani, Jul 16, 2018, 6:00 AM IST

16.jpg

ಕಲ್ಲು ಮುಳ್ಳು ಬೆಂಡೆಗಳಿಂದ ಕೂಡಿದ್ದ ಗುಡ್ಡು ಅಗೆದು ಅಲ್ಲಿಯೇ ಕೃಷಿ ಮಾಡುತ್ತ ಎಲ್ಲರ ನಿರೀಕ್ಷೆ ಮೀರಿ ಯಶಸ್ಸು ಪಡೆದಿದ್ದಾರೆ ಗುಂಡಪ್ಪ. ಅವರ ಸಾಧನೆ ಗುರುತಿಸಿ ಧಾರವಾಡದ ಕೃಷಿ ವಿವಿ ಪ್ರಶಸ್ತಿ ನೀಡಿ ಗೌರವಿಸಿದೆ. 

ಸುತ್ತಲೂ ಕಲ್ಲಿನ ಗುಡ್ಡ. ವಿದ್ಯುತ್‌ ಸಂಪರ್ಕ ಇಲ್ಲ. ಎತ್ತು, ಚಕ್ಕಡಿ, ಟ್ರ್ಯಾಕ್ಟರ್‌ ಹೋಗುವಂತಿಲ್ಲ. ಇನ್ನು ಆ ಪ್ರದೇಶ ತಲುಪಲು ಅರ್ಧ ಕಿ.ಮೀ. ನಡೆದುಕೊಂಡೇ ಹೋಗಬೇಕು. ಇಂಥ ಕಲ್ಲು-ಮುಳ್ಳುಗಳಿಂದ ಕೂಡಿದ ಗುಡ್ಡವನ್ನೇ ಕಡಿದು ಹೊಲವನ್ನಾಗಿ ಪರಿವರ್ತಿಸಿದರೆ ಹೇಗೆ?

 ಹೋಗೋ ಹುಚ್ಚಪ್ಪ- ಯಾರನ್ನಾದರು ಕೇಳಿದರ ಹೀಗಂದಾರು.  ಆದರೆ ಬಾಗಲಕೋಟೆ, ಬಾದಾಮಿಯ ಕೋಟೇಕಲ್‌ ಗ್ರಾಮದ ಮಹಾಗುಂಡಪ್ಪ ಹುಚ್ಚಪ್ಪ ಕಮತರ, ಗುಡ್ಡವನ್ನೇ ಹೊಲವಾಗಿಸಿ,  ವಿವಿಧ ಬೆಳೆಗಳನ್ನು ಬೆಳೆಯುವುದರ ಜೊತೆಗೆ ಸಾವಿರಾರು ರೂ. ಆದಾಯ ಗಳಿಸುತ್ತಿದ್ದಾರೆ. 

ಹುಚ್ಚಪ್ಪ ಕಮತರ,  ಓದಿದ್ದು ಪಿಯುಸಿ. ಕೃಷಿಯಲ್ಲಿ ಅವರಿಗೆ ಹೆಚ್ಚು ಆಸಕ್ತಿ ಇತ್ತು. ಕೃಷಿ ಕೆಲಸ ಕಷ್ಟವಾದರೂ ಅದನ್ನು ಇಷ್ಟಪಟ್ಟು ಮಾಡುವ ಮನೋಭಾವ. ಹಿಡಿದ ಕೆಲಸವನ್ನು ಛಲದಿಂದ ಪೂರೈಸುವ ಹುಮ್ಮಸ್ಸು. ಇವೆಲ್ಲದರ ಫಲವಾಗಿ ಕೃಷಿಯಲ್ಲಿ ಖುಷಿ ಕಂಡುಕೊಂಡ ಸಾರ್ಥಕತೆ. ಇದೆಲ್ಲವೂ ಸಾಧ್ಯವಾಗಿರೋದು ಕೇವಲ ಒಂದು ಎಕರೆ ಭೂಮಿಯಲ್ಲಿ ಮಾತ್ರ ಎಂದರೆ ನೀವು ನಂಬಲೇಬೇಕು.

ಗುಡ್ಡವಾಯ್ತು ಹೊಲ
ಗುಡ್ಡದ ಬಳಿ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದ ಮಹಾಗುಂಡಪ್ಪ ಕಮತರ ಅವರಿಗೆ, 2005ರಲ್ಲಿ ಪಿತ್ರಾರ್ಜಿತ ಆಸ್ತಿ ಭಾಗವಾಯಿತು. ಆಗ ಕೃಷಿ ಜಮೀನಿನ ನೋಂದಣಿಗೆ ಮುಂದಾದರು. ಸರ್ವೇ ವೇಳೆ ಇವರ ಜಮೀನು ಬೇರೆಡೆ ಗುರುತಿಸಲ್ಪಟ್ಟಿತ್ತು. ಅನಿವಾರ್ಯವಾಗಿ ಕೃಷಿ ಕಾಯಕ ನಿಲ್ಲಿಸಬೇಕಾಯಿತು. ಇದರಿಂದ ಮಹಾಗುಂಡಪ್ಪ ವಿಚಲಿತರಾದರೂ, ಕೃಷಿ ಬಗೆಗಿನ ಆಸಕ್ತಿ ಸುಮ್ಮನಿರಲು ಬಿಡಲಿಲ್ಲ. ಎಲ್ಲರ ಮಾತನ್ನು ಧಿಕ್ಕರಿಸಿ ತಮ್ಮ ಪಾಲಿಗೆ ಬಂದ ಕಲ್ಲಿನ ಗುಡ್ಡವನ್ನೇ ಸಮತಟ್ಟು ಮಾಡಲು ಮುಂದಾದರು. ಸತತ 5 ವರ್ಷಗಳ ಕಾಲ ಗುಡ್ಡವನ್ನು ಅಗೆದರು. ದೊಡ್ಡ ದೊಡ್ಡ ಕಲ್ಲು ಬಂಡೆಗಳನ್ನು ಬಗೆದರು. ಬುಟ್ಟಿಗಟ್ಟಲೇ ಮಣ್ಣು ಹೊತ್ತು ಹಾಕಿದರು. ನಂತರ ಕೃಷಿಗೆ ಮುಂದಾದಾಗ ಎದುರಾಗಿದ್ದು ನೀರಿನ ಸಮಸ್ಯೆ. ಆಗ ತಾವೇ ಸುಮಾರು 12-14 ಅಡಿ ಆಳ, 6 ಅಡಿ ಅಗಲದ ವಿಸ್ತೀರ್ಣದ ಬಾವಿ ತೆಗೆದರು. ನೈಸರ್ಗಿಕವಾಗಿ ಹರಿದು ಬರುವ ನೀರನ್ನು ಈ ಬಾವಿಯಲ್ಲಿ ಸಂಗ್ರಹಿಸಿದರು. ಈಗಲೂ ಅದೇ ನೀರನ್ನೇ ಬೆಳೆಗಳಿಗೆ ಉಪಯೋಗಿಸತ್ತಿದ್ದಾರೆ. ತನ್ನ ಜಮೀನಿನಲ್ಲಿರುವ ಒಂದು ಅಡಿ ಜಾಗವನ್ನು ಇವರು ಹಾಗೆ ಬಿಡುವುದಿಲ್ಲ. ಹೊಲದ ಬದುವಿನಲ್ಲೂ ವಿವಿಧ ಬಗೆಯ ಬಳ್ಳಿಗಳನ್ನು ಇವರು ಬೆಳೆಸಿದ್ದಾರೆ.

ಹೊಲದಲ್ಲಿ ಏನೇನುಂಟು?
 ಒಂದು ಎಕರೆ ಜಮೀನಿನಲ್ಲಿ ನುಗ್ಗೆ (20 ಗಿಡ), ಲಿಂಬು (30), ಪೇರು (30), ಕರಿಬೇವು (20), ಚಿಕ್ಕು (5), ಮಾವು (9), ಬೆಟ್ಟದ ನೆಲ್ಲಿ (02), ಒಂದೊಂದು ಮೋಸಂಬಿ, ದಾಳಿಂಬೆ ಗಿಡ ಬೆಳೆಸಿದ್ದಾರೆ. ಜೊತೆಗೆ ವರ್ಷಕ್ಕೆರಡು ಹಂತದಲ್ಲಿ ಹಿರೇಕಾಯಿ, ಸೌತೆ, ಬೆಂಡೆ, ಟೊಮೆಟೊ, ಬದನೆ, ಮೆಣಸಿನಕಾಯಿ ಬೆಳೆಗಳನ್ನು ಮಿಶ್ರ ಪದ್ಧತಿಯಲ್ಲಿ ಬೆಳೆಯುತ್ತಾರೆ. ಪ್ರಮುಖ ಹಬ್ಬಗಳಿಗೆ ಚೆಂಡು ಹೂ, ಕಬ್ಬು, ಬಗೆ ಬಗೆಯ ಸೊಪ್ಪು (ಕೊತ್ತಂಬರಿ, ಮೆಂತ್ಯೆ, ಪಾಲಕ್‌, ಪುಂಡಿಪಲ್ಲೆ, ಸಬ್ಬಸಗಿ, ಹಕ್ಕರಕಿ) ಕಟಾವಿಗೆ ಬರುವಂತೆ ಬೇಸಾಯ ಮಾಡುತ್ತಾರೆ. ಸಮೀಪದ ಗುಳೇದಗುಡ್ಡಕ್ಕೆ ಹೋಗಿ ತರಕಾರಿ ಮಾರುತ್ತಾರೆ. ವರ್ಷಕ್ಕೆ ಬರೀ ತರಕಾರಿಯಿಂದಲೇ ಬರುವ ಸುಮಾರು 50-60 ಸಾವಿರ ರೂ. ಲಾಭದಲ್ಲಿ ಖರ್ಚು-ವೆಚ್ಚ 15 ಸಾವಿರ ರೂ. ಆದರೂ ಕನಿಷ್ಠ 45 ಸಾವಿರ ರೂ. ಆದಾಯವಂತೂ ಗ್ಯಾರಂಟಿ. 

ಬೇಸಿಗೆಯಲ್ಲಿ ಬೆಳೆಗಳಿಗೆ ನೀರಿನ ಅಭಾವ ಆದಾಗ ಜನರೇಟರ್‌ ಮೂಲಕ ಬಾವಿ ನೀರನ್ನು ಬೆಳೆಗಳಿಗೆ ಪೂರೈಸುತ್ತಾರೆ. ಹೀಗಾಗಿ ವರ್ಷವಿಡೀ ತರಕಾರಿ ಬೆಳೆಯುತ್ತಾರೆ. ತರಕಾರಿ ಮತ್ತು ಇತರೆ ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಹಾಕುವುದಿಲ್ಲ. ತಮ್ಮ ಎರಡು ಆಕಳಿನ ಕೊಟ್ಟಿಗೆ ಗೊಬ್ಬರವನ್ನು ಬೆಳೆಗಳಿಗೆ ಬಳಸುತ್ತಿರುವುದರಿಂದ ಹೆಚ್ಚು ಇಳುವರಿ ಪಡೆಯುತ್ತಿದ್ದಾರೆ. ಕುಟುಂಬದ ಸದಸ್ಯರು ಇವರಿಗೆ ಸಾಥ್‌ ನೀಡುತ್ತಾರೆ.

ವಿನೂತನ ಯತ್ನ
ಗುಡ್ಡದಲ್ಲಿನ ತಮ್ಮ ಜಮೀನಿನ ಉಳುಮೆ ಮಾಡಲು ಹತ್ತಾರು ಸಮಸ್ಯೆ.  ಕೊನೆಗೆ ಸೈಕಲ್‌ನಿಂದ ತಾವೇ ಕೈ ಕುಂಟೆ ತಯಾರಿಸಿಕೊಂಡು, ಇದರಿಂದಲೇ ಉಳುಮೆ ಮಾಡ ತೊಡಗಿದರು. ಬಿತ್ತನೆಯನ್ನು ಸಹ ಇದರಿಂದಲೇ ಮಾಡುವುದು ವಿಶೇಷ. ಬಹಳಷ್ಟು ಜನ ಕೃಷಿಯತ್ತ ವಿಮುಖವಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಶ್ರಮಜೀವಿ ಮಹಾ “ಗುಂಡಪ್ಪ’ ಇತರರಿಗೆ ಮಾದರಿಯಾಗಿದ್ದಾರೆ. ಇವರ ಸಾಧನೆ ಗುರುತಿಸಿ ಧಾರವಾಡ ಕೃಷಿ ವಿಶ್ವವಿದ್ಯಾಲಯ 2015ರಲ್ಲಿ ಪ್ರಶಸ್ತಿ ನೀಡಿ ಗೌರವಿಸಿದೆ.

ಶರಣು ಹುಬ್ಬಳ್ಳಿ

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.