ಸಿರಿಧಾನ್ಯ ಖಾದ್ಯಗಳ “ಸ್ಪ್ರಿಂಗ್‌ ಆಫ್ ಹೆಲ್ತ್‌’ 


Team Udayavani, Jul 23, 2018, 12:23 PM IST

hotel.png

ಸಾವಯವ ಉತ್ಪನ್ನಗಳಿಂದ ತಯಾರಿಸಲಾಗುವ ತಿಂಡಿಗೆ 60 ರೂಪಾಯಿ ಮತ್ತು ಊಟಕ್ಕೆ 120 ರೂಪಾಯಿ ನಿಗದಿಪಡಿಸಲಾಗಿದೆ. ಈ ಹೋಟೆಲಿನಲ್ಲಿ ಕಾಫಿ, ಟೀ ಸಿಗುವುದಿಲ್ಲ. ಬದಲಿಗೆ ಕಷಾಯ ಹಾಗೂ ಸಿರಿಧಾನ್ಯ ಪೇಯ ಸಿಗುತ್ತದೆ…

ಸಿರಿಧಾನ್ಯಗಳಿಂದ ಮಾಡಿದ ಬಗೆ ಬಗೆಯ ಶುಚಿ ರುಚಿಯಾದ ಖಾದ್ಯಗಳು ಈ ಹೋಟೆಲ್‌ನ ವಿಶೇಷತೆ. ನವಣಕ್ಕಿ ದೋಸೆ, ಸಾವಕ್ಕಿ ಇಡ್ಲಿ, ಊದಲು ಉಪ್ಪಿಟ್ಟು, ಬರಗು ಶಿರಾ, ಜೋಳದ ರೊಟ್ಟಿ, ರಾಗಿ ದೋಸೆ, ಬರಗಿನ ಪಡ್ಡು, ಆರ್ಕದ ಪಾಯಸ ಹೀಗೆ ವಿಶಿಷ್ಟ , ಹೊಸ ರುಚಿಯ ತಿಂಡಿ ಹಾಗೂ ಪಕ್ಕಾ ಜವಾರಿ ಊಟ ನೀಡುತ್ತಿದೆ ಹುಬ್ಬಳ್ಳಿಯ ಸ್ಪ್ರಿಂಗ್‌ ಆಫ್ ಹೆಲ್ತ್‌ ಹೊಟೇಲ್‌.

ನಗರದ ಶಿರೂರ ಪಾರ್ಕ್‌ 2ನೇ ಸ್ಟೇಜ್‌ನಲ್ಲಿರುವ ಈ ಹೋಟೆಲ್‌ನಲ್ಲಿ ಸಕ್ಕರೆ, ಮೈದಾ, ಕೃತಕ ಬಣ್ಣ, ಟೇಸ್ಟಿಂಗ್‌ ಪೌಡರ್‌, ಬಿಳಿ ಅಕ್ಕಿ, ಗೋಧಿ ಬಳಕೆ ಮಾಡದೇ ಸಿರಿಧಾನ್ಯ, ಗಾಣದಿಂದ ತೆಗೆಯಲಾದ ಎಣ್ಣೆ, ಸಾವಯವ ಬೆಲ್ಲದಿಂದ ತಯಾರಿಸಿದ ಕಲಬೆರಕೆಯಿಲ್ಲದ ಆಹಾರ, ಆರೋಗ್ಯದ ಬಗ್ಗೆ ಕಾಳಜಿ ಇರುವ ಜನರನ್ನು ಆಕರ್ಷಿಸುತ್ತಿದೆ.
ಉತ್ತರ ಕರ್ನಾಟಕದ ಮೊದಲ ಸಿರಿಧಾನ್ಯ ಹೋಟೆಲ್‌ ಎಂಬ ಕೀರ್ತಿ,  ಸ್ಪ್ರಿಂಗ್‌ ಆಫ್ ಹೆಲ್ತ್‌ ಹೊಟೇಲ್‌ಗೆ ಸಲ್ಲುತ್ತದೆ.

ಸಿವಿಲ್‌ ಎಂಜಿನೀಯರ್‌ ಆಗಿದ್ದ ವೀರನಾರಾಯಣ ಕುಲಕರ್ಣಿ ಅವರು ಈ ಹೋಟೆಲ್‌ ಆರಂಭಿಸಿದ್ದಾರೆ. ಬಿ.ಇ ಹಾಗೂ ಎಂಬಿಎ ಪದವಿ ಪಡೆದ ವೀರನಾರಾಯಣ ಸಿಂಗಾಪುರದಲ್ಲಿ ಕೆಲ ವರ್ಷ ಉದ್ಯೋಗ ಮಾಡಿದರು. ಕಾರ್ಪೋರೇಟ್‌ ಬದುಕಿನಿಂದ ರೋಸಿ ಹೋಗಿ ಧಾರವಾಡಕ್ಕೆ ಬಂದರು.

ಸಿರಿಧಾನ್ಯ ಬಳಕೆಯಿಂದ ವೀರನಾರಾಯಣ ಅವರ ಮಾವನಿಗೆ ಡಯಾಬಿಟಿಸ್‌ ನಿವಾರಣೆಗೊಂಡು ರಕ್ತದಲ್ಲಿನ ಸಕ್ಕರೆ ಪ್ರಮಾಣ ಸಾಮಾನ್ಯ ಮಟ್ಟಕ್ಕೆ ತಲುಪಿತು. ಇದರಿಂದ ಸಿರಿಧಾನ್ಯಗಳ ಬಗ್ಗೆ ಆಸಕ್ತಿ ತಳೆದ ವೀರನಾರಾಯಣ ಅವರು ಡಾ| ಖಾದರ್‌ ಸೇರಿದಂತೆ ಹಲವರಿಂದ ಮಾಹಿತಿ ಪಡೆದುಕೊಂಡರು. ನಂತರ ಕಾರ್ಯಾಗಾರಗಳ ಮೂಲಕ ಜನರಿಗೆ ಸಿರಿಧಾನ್ಯಗಳ ಬಳಕೆ ಬಗ್ಗೆ ಜಾಗೃತಿ ಮೂಡಿಸಲಾರಂಭಿಸಿದರು. ಹೆಚ್ಚು ಜನರಿಗೆ ತಲುಪಬಹುದೆಂಬ ಉದ್ದೇಶದಿಂದ ಸಿರಿಧಾನ್ಯ ಖಾದ್ಯಗಳ ಹೋಟೆಲ್‌ ಆರಂಭಿಸಿದರು.

ಅಲ್ಪಾವಧಿಯಲ್ಲಿ ಈ ಹೋಟೆಲ್‌ ಜನಮನ್ನಣೆ ಗಳಿಸಿದೆ. ಸಿರಿಧಾನ್ಯ ವೈದ್ಯರೆಂದೇ ಖ್ಯಾತಿ ಪಡೆದಿರುವ ಡಾ| ಖಾದರ್‌, ಉದ್ಯಮಿ ನಂದನ್‌ ನಿಲೇಕಣಿ, ಗುರುರಾಜ ದೇಶಪಾಂಡೆ, ಡಾ| ವಿಜಯ ಸಂಕೇಶ್ವರ, ವಿವೇಕ ಪವಾರ್‌ ಮೊದಲಾದ ಗಣ್ಯರು ಹೊಟೇಲ್‌ಗೆ ಬಂದು ಭೋಜನ ಸವಿದು ಇಷ್ಟಪಟ್ಟಿದ್ದಾರೆ.

ಬೆಳಗ್ಗೆ 8 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ವಾರದ ಎಲ್ಲ ದಿನ ಹೊಟೇಲ್‌ ತೆರೆದಿರುತ್ತದೆ. ಬೆಳಗ್ಗೆ 8ರಿಂದ 11ರವರೆಗೆ ಹಾಗೂ ಸಂಜೆ 5:30ರಿಂದ 9ರವರೆಗೆ ತಿಂಡಿ ಸಿಗುತ್ತದೆ. ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಊಟ ಲಭಿಸುತ್ತದೆ. ಊಟದಲ್ಲಿ ಜೋಳ ಅಥವಾ ನವಣಕ್ಕಿ ರೊಟ್ಟಿ, ನವಣಕ್ಕಿ ಅನ್ನ, ಸಾವಕ್ಕಿ ಮೊಸರನ್ನ, 2 ಬಗೆಯ ಪಲ್ಯ, ಸಲಾಡ್‌, ಕೋಸಂಬರಿ, ಸಿರಿಧಾನ್ಯ ಪಾಯಸ ನೀಡಲಾಗುತ್ತದೆ. ತಿಂಡಿಗೆ 60 ರೂ. ಹಾಗೂ ಊಟಕ್ಕೆ 120 ರೂ. ನಿಗದಿಪಡಿಸಲಾಗಿದೆ. ಇಲ್ಲಿ ಚಹಾ, ಕಾಫಿ ಸಿಗುವುದಿಲ್ಲ, ಅದರ ಬದಲಿಗೆ ಕಷಾಯ, ಸಿರಿಧಾನ್ಯ ಪೇಯ ಸಿಗುತ್ತದೆ.
ಇಲ್ಲಿ ಎಲ್ಲ ಖಾದ್ಯಗಳನ್ನು ನವಣೆ, ಸಾಮೆ, ಆರ್ಕ, ಊದಲು, ಕೊರಲೆ, ಜೋಳ, ರಾಗಿ, ಸೆಜ್ಜೆ, ಬರಗುಗಳಿಂದ ತಯಾರಿಸಲಾಗುತ್ತದೆ.  ಋತುಮಾನಕ್ಕೆ ಅನುಗುಣವಾಗಿ ಖಾದ್ಯಗಳನ್ನು ತಯಾರಿಸಲಾಗುತ್ತದೆ. ಅಲ್ಲದೇ ಹಬ್ಬಗಳಂದು ವಿಶೇಷ ಖಾದ್ಯಗಳನ್ನು ನೀಡಲಾಗುವುದು.

“ಜನರಲ್ಲಿ ಸಿರಿಧಾನ್ಯದ ಬಗ್ಗೆ ಜಾಗೃತಿ ಮೂಡುತ್ತಿದೆ. ಕಡಿಮೆ ಎಣ್ಣೆ ಬಳಕೆ ಮಾಡುವ, ಕಲಬೆರಕೆ ಇಲ್ಲದ ಆಹಾರ ಪದಾರ್ಥಗಳನ್ನು ಬಯಸುವವರು ನಮ್ಮ ಹೊಟೇಲ್‌ಗೆ ಬರುತ್ತಾರೆ. ಸಿರಿಧಾನ್ಯಗಳ ಬಳಕೆ ಹೆಚ್ಚಾದಂತೆ ಬೆಳೆಯುವ ರೈತರಿಗೆ ಉತ್ತೇಜನ ಸಿಗುತ್ತದೆ. ಅಲ್ಲದೇ ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ’ ಎಂದು ಹೊಟೇಲ್‌ ಮಾಲೀಕ ವೀರನಾರಾಯಣ ಕುಲಕರ್ಣಿ ಹೇಳುತ್ತಾರೆ.

ಹೊಟೇಲ್‌ ಚಿಕ್ಕದಾದರೂ ಚೊಕ್ಕವಾಗಿದೆ.  ಗೌಜು ಗದ್ದಲ ಇಲ್ಲಿಲ್ಲ. ಇಲ್ಲಿ ಮನೆಯ ವಾತಾವರಣವಿದೆ. ಗೋಡೆಯ ಮೇಲೆ ವರ್ಲಿ ಕಲೆಯ ಚಿತ್ರಗಳಿದ್ದು, ಸಿರಿಧಾನ್ಯಗಳ ಮಹತ್ವವನ್ನು ಬರೆಯಲಾಗಿದೆ. ಊಟ, ತಿಂಡಿ ಮಾತ್ರವಲ್ಲ; ಸಿರಿಧಾನ್ಯಗಳೂ ಇಲ್ಲಿ ಮಾರಾಟಕ್ಕಿದ್ದು, ಅವು ಮಾಡಬಹುದಾದ ಖಾದ್ಯಗಳ ತಯಾರಿಕೆ ತರಬೇತಿಯೂ ಇಲ್ಲಿ ಸಿಗುತ್ತದೆ. 

– ವಿಶ್ವನಾಥ ಕೋಟಿ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.