ಸಿರಿಧಾನ್ಯ ಖಾದ್ಯಗಳ “ಸ್ಪ್ರಿಂಗ್‌ ಆಫ್ ಹೆಲ್ತ್‌’ 


Team Udayavani, Jul 23, 2018, 12:23 PM IST

hotel.png

ಸಾವಯವ ಉತ್ಪನ್ನಗಳಿಂದ ತಯಾರಿಸಲಾಗುವ ತಿಂಡಿಗೆ 60 ರೂಪಾಯಿ ಮತ್ತು ಊಟಕ್ಕೆ 120 ರೂಪಾಯಿ ನಿಗದಿಪಡಿಸಲಾಗಿದೆ. ಈ ಹೋಟೆಲಿನಲ್ಲಿ ಕಾಫಿ, ಟೀ ಸಿಗುವುದಿಲ್ಲ. ಬದಲಿಗೆ ಕಷಾಯ ಹಾಗೂ ಸಿರಿಧಾನ್ಯ ಪೇಯ ಸಿಗುತ್ತದೆ…

ಸಿರಿಧಾನ್ಯಗಳಿಂದ ಮಾಡಿದ ಬಗೆ ಬಗೆಯ ಶುಚಿ ರುಚಿಯಾದ ಖಾದ್ಯಗಳು ಈ ಹೋಟೆಲ್‌ನ ವಿಶೇಷತೆ. ನವಣಕ್ಕಿ ದೋಸೆ, ಸಾವಕ್ಕಿ ಇಡ್ಲಿ, ಊದಲು ಉಪ್ಪಿಟ್ಟು, ಬರಗು ಶಿರಾ, ಜೋಳದ ರೊಟ್ಟಿ, ರಾಗಿ ದೋಸೆ, ಬರಗಿನ ಪಡ್ಡು, ಆರ್ಕದ ಪಾಯಸ ಹೀಗೆ ವಿಶಿಷ್ಟ , ಹೊಸ ರುಚಿಯ ತಿಂಡಿ ಹಾಗೂ ಪಕ್ಕಾ ಜವಾರಿ ಊಟ ನೀಡುತ್ತಿದೆ ಹುಬ್ಬಳ್ಳಿಯ ಸ್ಪ್ರಿಂಗ್‌ ಆಫ್ ಹೆಲ್ತ್‌ ಹೊಟೇಲ್‌.

ನಗರದ ಶಿರೂರ ಪಾರ್ಕ್‌ 2ನೇ ಸ್ಟೇಜ್‌ನಲ್ಲಿರುವ ಈ ಹೋಟೆಲ್‌ನಲ್ಲಿ ಸಕ್ಕರೆ, ಮೈದಾ, ಕೃತಕ ಬಣ್ಣ, ಟೇಸ್ಟಿಂಗ್‌ ಪೌಡರ್‌, ಬಿಳಿ ಅಕ್ಕಿ, ಗೋಧಿ ಬಳಕೆ ಮಾಡದೇ ಸಿರಿಧಾನ್ಯ, ಗಾಣದಿಂದ ತೆಗೆಯಲಾದ ಎಣ್ಣೆ, ಸಾವಯವ ಬೆಲ್ಲದಿಂದ ತಯಾರಿಸಿದ ಕಲಬೆರಕೆಯಿಲ್ಲದ ಆಹಾರ, ಆರೋಗ್ಯದ ಬಗ್ಗೆ ಕಾಳಜಿ ಇರುವ ಜನರನ್ನು ಆಕರ್ಷಿಸುತ್ತಿದೆ.
ಉತ್ತರ ಕರ್ನಾಟಕದ ಮೊದಲ ಸಿರಿಧಾನ್ಯ ಹೋಟೆಲ್‌ ಎಂಬ ಕೀರ್ತಿ,  ಸ್ಪ್ರಿಂಗ್‌ ಆಫ್ ಹೆಲ್ತ್‌ ಹೊಟೇಲ್‌ಗೆ ಸಲ್ಲುತ್ತದೆ.

ಸಿವಿಲ್‌ ಎಂಜಿನೀಯರ್‌ ಆಗಿದ್ದ ವೀರನಾರಾಯಣ ಕುಲಕರ್ಣಿ ಅವರು ಈ ಹೋಟೆಲ್‌ ಆರಂಭಿಸಿದ್ದಾರೆ. ಬಿ.ಇ ಹಾಗೂ ಎಂಬಿಎ ಪದವಿ ಪಡೆದ ವೀರನಾರಾಯಣ ಸಿಂಗಾಪುರದಲ್ಲಿ ಕೆಲ ವರ್ಷ ಉದ್ಯೋಗ ಮಾಡಿದರು. ಕಾರ್ಪೋರೇಟ್‌ ಬದುಕಿನಿಂದ ರೋಸಿ ಹೋಗಿ ಧಾರವಾಡಕ್ಕೆ ಬಂದರು.

ಸಿರಿಧಾನ್ಯ ಬಳಕೆಯಿಂದ ವೀರನಾರಾಯಣ ಅವರ ಮಾವನಿಗೆ ಡಯಾಬಿಟಿಸ್‌ ನಿವಾರಣೆಗೊಂಡು ರಕ್ತದಲ್ಲಿನ ಸಕ್ಕರೆ ಪ್ರಮಾಣ ಸಾಮಾನ್ಯ ಮಟ್ಟಕ್ಕೆ ತಲುಪಿತು. ಇದರಿಂದ ಸಿರಿಧಾನ್ಯಗಳ ಬಗ್ಗೆ ಆಸಕ್ತಿ ತಳೆದ ವೀರನಾರಾಯಣ ಅವರು ಡಾ| ಖಾದರ್‌ ಸೇರಿದಂತೆ ಹಲವರಿಂದ ಮಾಹಿತಿ ಪಡೆದುಕೊಂಡರು. ನಂತರ ಕಾರ್ಯಾಗಾರಗಳ ಮೂಲಕ ಜನರಿಗೆ ಸಿರಿಧಾನ್ಯಗಳ ಬಳಕೆ ಬಗ್ಗೆ ಜಾಗೃತಿ ಮೂಡಿಸಲಾರಂಭಿಸಿದರು. ಹೆಚ್ಚು ಜನರಿಗೆ ತಲುಪಬಹುದೆಂಬ ಉದ್ದೇಶದಿಂದ ಸಿರಿಧಾನ್ಯ ಖಾದ್ಯಗಳ ಹೋಟೆಲ್‌ ಆರಂಭಿಸಿದರು.

ಅಲ್ಪಾವಧಿಯಲ್ಲಿ ಈ ಹೋಟೆಲ್‌ ಜನಮನ್ನಣೆ ಗಳಿಸಿದೆ. ಸಿರಿಧಾನ್ಯ ವೈದ್ಯರೆಂದೇ ಖ್ಯಾತಿ ಪಡೆದಿರುವ ಡಾ| ಖಾದರ್‌, ಉದ್ಯಮಿ ನಂದನ್‌ ನಿಲೇಕಣಿ, ಗುರುರಾಜ ದೇಶಪಾಂಡೆ, ಡಾ| ವಿಜಯ ಸಂಕೇಶ್ವರ, ವಿವೇಕ ಪವಾರ್‌ ಮೊದಲಾದ ಗಣ್ಯರು ಹೊಟೇಲ್‌ಗೆ ಬಂದು ಭೋಜನ ಸವಿದು ಇಷ್ಟಪಟ್ಟಿದ್ದಾರೆ.

ಬೆಳಗ್ಗೆ 8 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ವಾರದ ಎಲ್ಲ ದಿನ ಹೊಟೇಲ್‌ ತೆರೆದಿರುತ್ತದೆ. ಬೆಳಗ್ಗೆ 8ರಿಂದ 11ರವರೆಗೆ ಹಾಗೂ ಸಂಜೆ 5:30ರಿಂದ 9ರವರೆಗೆ ತಿಂಡಿ ಸಿಗುತ್ತದೆ. ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಊಟ ಲಭಿಸುತ್ತದೆ. ಊಟದಲ್ಲಿ ಜೋಳ ಅಥವಾ ನವಣಕ್ಕಿ ರೊಟ್ಟಿ, ನವಣಕ್ಕಿ ಅನ್ನ, ಸಾವಕ್ಕಿ ಮೊಸರನ್ನ, 2 ಬಗೆಯ ಪಲ್ಯ, ಸಲಾಡ್‌, ಕೋಸಂಬರಿ, ಸಿರಿಧಾನ್ಯ ಪಾಯಸ ನೀಡಲಾಗುತ್ತದೆ. ತಿಂಡಿಗೆ 60 ರೂ. ಹಾಗೂ ಊಟಕ್ಕೆ 120 ರೂ. ನಿಗದಿಪಡಿಸಲಾಗಿದೆ. ಇಲ್ಲಿ ಚಹಾ, ಕಾಫಿ ಸಿಗುವುದಿಲ್ಲ, ಅದರ ಬದಲಿಗೆ ಕಷಾಯ, ಸಿರಿಧಾನ್ಯ ಪೇಯ ಸಿಗುತ್ತದೆ.
ಇಲ್ಲಿ ಎಲ್ಲ ಖಾದ್ಯಗಳನ್ನು ನವಣೆ, ಸಾಮೆ, ಆರ್ಕ, ಊದಲು, ಕೊರಲೆ, ಜೋಳ, ರಾಗಿ, ಸೆಜ್ಜೆ, ಬರಗುಗಳಿಂದ ತಯಾರಿಸಲಾಗುತ್ತದೆ.  ಋತುಮಾನಕ್ಕೆ ಅನುಗುಣವಾಗಿ ಖಾದ್ಯಗಳನ್ನು ತಯಾರಿಸಲಾಗುತ್ತದೆ. ಅಲ್ಲದೇ ಹಬ್ಬಗಳಂದು ವಿಶೇಷ ಖಾದ್ಯಗಳನ್ನು ನೀಡಲಾಗುವುದು.

“ಜನರಲ್ಲಿ ಸಿರಿಧಾನ್ಯದ ಬಗ್ಗೆ ಜಾಗೃತಿ ಮೂಡುತ್ತಿದೆ. ಕಡಿಮೆ ಎಣ್ಣೆ ಬಳಕೆ ಮಾಡುವ, ಕಲಬೆರಕೆ ಇಲ್ಲದ ಆಹಾರ ಪದಾರ್ಥಗಳನ್ನು ಬಯಸುವವರು ನಮ್ಮ ಹೊಟೇಲ್‌ಗೆ ಬರುತ್ತಾರೆ. ಸಿರಿಧಾನ್ಯಗಳ ಬಳಕೆ ಹೆಚ್ಚಾದಂತೆ ಬೆಳೆಯುವ ರೈತರಿಗೆ ಉತ್ತೇಜನ ಸಿಗುತ್ತದೆ. ಅಲ್ಲದೇ ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ’ ಎಂದು ಹೊಟೇಲ್‌ ಮಾಲೀಕ ವೀರನಾರಾಯಣ ಕುಲಕರ್ಣಿ ಹೇಳುತ್ತಾರೆ.

ಹೊಟೇಲ್‌ ಚಿಕ್ಕದಾದರೂ ಚೊಕ್ಕವಾಗಿದೆ.  ಗೌಜು ಗದ್ದಲ ಇಲ್ಲಿಲ್ಲ. ಇಲ್ಲಿ ಮನೆಯ ವಾತಾವರಣವಿದೆ. ಗೋಡೆಯ ಮೇಲೆ ವರ್ಲಿ ಕಲೆಯ ಚಿತ್ರಗಳಿದ್ದು, ಸಿರಿಧಾನ್ಯಗಳ ಮಹತ್ವವನ್ನು ಬರೆಯಲಾಗಿದೆ. ಊಟ, ತಿಂಡಿ ಮಾತ್ರವಲ್ಲ; ಸಿರಿಧಾನ್ಯಗಳೂ ಇಲ್ಲಿ ಮಾರಾಟಕ್ಕಿದ್ದು, ಅವು ಮಾಡಬಹುದಾದ ಖಾದ್ಯಗಳ ತಯಾರಿಕೆ ತರಬೇತಿಯೂ ಇಲ್ಲಿ ಸಿಗುತ್ತದೆ. 

– ವಿಶ್ವನಾಥ ಕೋಟಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.