ಮೈಂಡ್‌ಸೆಟ್‌ ಬದಲಾಗಬೇಕು


Team Udayavani, Aug 27, 2018, 6:00 AM IST

sudha.jpg

ಹೂಡಿಕೆಯ ವಿಷಯದಲ್ಲಿ ಇನ್ನೂ ಬಹುತೇಕರು ಫಿಕ್ಸೆಡ್‌ ಮೈಂಡ್‌ ಸೆಟ್‌ ಹೊಂದಿರುವವರೇ. ನಮಗೆ ಇದೆಲ್ಲ ಅರ್ಥ ಆಗುವುದಿಲ್ಲ ಬಿಡಿ ಎನ್ನುತ್ತಾ, ಅರ್ಥ ಮಾಡಿಕೊಳ್ಳುವ ಪ್ರಯತ್ನವನ್ನೂ ಮಾಡುವುದಿಲ್ಲ. ಹೀಗಾಗಿಯೇ ಹಲವು ಅವಕಾಶಗಳಿಂದಲೂ ಇವರು ವಂಚಿತರಾಗುತ್ತಾರೆ. 

ಅದೇಕೋ ಕೆಲವರು, ಇನ್ನೂ ನಮ್ಮ ಮಾತು ಆರಂಭವೇ ಆಗಿರುವುದಿಲ್ಲ.ಆಗಲೇ ತಮ್ಮ ಅಭಿಪ್ರಾಯ ಹೇಳ ತೊಡಗುತ್ತಾರೆ. ತೀರಾ ಇತ್ತೀಚೆಗೆ ಒಬ್ಬರನ್ನು ಭೇಟಿ ಆದಾಗ ಲೋಕಾರೂಢಿ ಮಾತು ಬಂದಾಗ ಹೂಡಿಕೆಯ ಬಗೆಗೆ ಮಾತು ಎತ್ತಬೇಕು ಎನ್ನುವಷ್ಟರಲ್ಲಿ ಅವರು-” ನನಗೆ ಇದೆಲ್ಲ ಅರ್ಥ ಆಗುವುದೇ ಇಲ್ಲ. ಇದರಲ್ಲಿ ಆಸಕ್ತಿ ಇಲ್ಲ. ನಾನು ಎಂದೂ ಇದರ ಬಗೆಗೆ ಮಾತನಾಡಲೇ ಇಲ್ಲ’ ಎಂದೆಲ್ಲ ಹೇಳಿ ಬಿಟ್ಟರು. ನನಗೋ ಕುತೂಹಲ ಆಗಿ ಯಾಕೆ ನೀವು ಇದುವರೆಗೂ ಒಬ್ಬರ ಹತ್ತಿರವೂ ಇದರ ಬಗೆಗೆ ಮಾತನಾಡಲಿಲ್ಲವಾ? ಎಂದು ಕೇಳಿದೆ. ಅದಕ್ಕವರು  ನೀವು ಇಷ್ಟು ಕೇಳಿದ ಮೇಲೆ ಅನ್ನಿಸುತ್ತಿದೆ. ನನಗೆ ಅಂತಹ ಅವಕಾಶವೇ ಬರಲಿಲ್ಲ ಅಂದು ಮೌನವಾದರು. ಆಗ,  ಸ್ವಲ್ಪ ಹಾಸ್ಯ ಬೆರೆಸಿದ ಆಪ್ತತೆಯಲ್ಲಿ ಹೇಳಿದೆ -ನೀವು ಇದಕ್ಕೆ ಅವಕಾಶವನ್ನೇ ಮಾಡಿ ಕೊಡಲಿಲ್ಲ. ಯಾರಾದರೂ “ಹೂಡಿಕೆ’ ಎಂಬ ಮಾತು ಹೇಳಿದ ತಕ್ಷಣವೇ ಮಧ್ಯೆಯೇ ಬಾಯಿ ಹಾಕಿ ಅದರಿಂದ ಏನುಪ್ರಯೋಗ? ಅದರಲ್ಲಿ ನನಗಂತೂ, ಆಸಕ್ತಿಯಿಲ್ಲ. ಅದರಿಂದ ಲಾಭ ಮಾಡಿಕೊಂಡವರನ್ನು ನಾನಂತೂ ನೋಡಲಿಲ್ಲ’ ಎಂಬಂಥ ಮಾತುಗಳನ್ನು ಹೇಳುತ್ತಿದ್ದಾರೆ. ಹೀಗಾದರೆ, ಉಳಿತಾಯದ ಬಗ್ಗೆ, ಹೂಡಿಕೆಯ ಬಗ್ಗೆ ನಿಮ್ಮೊಂದಿಗೆ ಮಾತಾಡಲು ಯಾರಿಗೆ ತಾನೆ ಇಷ್ಟವಿರುತ್ತೆ ಹೇಳಿ, ಅಂದೆ.  ಅವರು ಮತ್ತೆ ಮಾತನಾಡಲಿಲ್ಲ. 

ನಮ್ಮ ಜೀವನದಲ್ಲಿ ಎಷ್ಟೋ ವೇಳೆ ನಾವು ಬಹುತೇಕ ವಿಷಯಗಳ ಬಗೆಗೆ ನಮ್ಮದೇ ತೀರ್ಮಾನದ ಸಿಕ್ಕುಗಳಲ್ಲಿ ಸಿಲುಕಿರುತ್ತೇವೆ. ಗೊತ್ತಿಧ್ದೋ, ಗೊತ್ತಿಲ್ಲದೆಯೋ ಹೊಸ ವಿಷಯಗಳನ್ನು ಅರಿಯುವ, ಅಳವಡಿಸಿಕೊಳ್ಳುವ ಗೋಜಿಗೇ ಹೋಗುವುದಿಲ್ಲ. ಪ್ರತಿಯೊಂದಕ್ಕೂ ನಾವು ಮೊದಲೇ ಫಿಕ್ಸ್‌ ಆಗಿರುತ್ತೇವೆ. ಉದಾಹರಣೆಗೆ ಷೇರಿನಲ್ಲಿ ಹಣ ಹಾಕಿದರೆ ನಷ್ಟ ಆಗುತ್ತದೆ ಎಂದು ನಮ್ಮ ಮನಸ್ಸು ನಂಬಿರುತ್ತದೆ. ಹಾಗಾಗಿ ಷೇರಿನ ಬದಲು ನಮಗೆ ಚೀಟಿಯಲ್ಲಿ ಹಣ ಹಾಕುವುದು ಸುಲಭ. ಮೊದಲಿನಿಂದಲೂ ಚಿನ್ನ ಕೊಳ್ಳುತ್ತಿದ್ದೇವೆ, ಈಗಲೂ ಖರೀದಿಸಿದರಾಯಿತು. ಹೀಗೆ ನಮ್ಮ ಮನಸ್ಸು ಹೊಸದನ್ನು ಸ್ವೀಕರಿಸುವುದಕ್ಕೆ ಸಿದ್ಧವಿರುವುದಿಲ್ಲ. ಹೊಸದನ್ನು ಆಲಿಸುವಷ್ಟೂ ನಮ್ಮಲ್ಲಿ ತಾಳ್ಮೆ ಇಲ್ಲವಾಗಿರುತ್ತದೆ. ಇಂತಹ ಮನಸ್ಥಿತಿಯೇ ಫಿಕ್ಸೆಡ್‌ ಮೈಂಡ್‌ ಸೆಟ್‌. 

ಇದಕ್ಕೆ ವಿರುದ್ಧವಾದದ್ದೇ ಗ್ರೋಥ್‌ ಮೈಂಡ್‌ ಸೆಟ್‌. ಈ ಮನೋಭಾವ ಹೊಂದಿದವರು  ಹೊಸ ವಿಷಯಗಳಿಗೆ ಕಿವಿಗೊಟ್ಟು  ಕೇಳುತ್ತಾರೆ. ಹೊಸದನ್ನು ಕಲಿಯುವ ಉತ್ಸಾಹ ಇರುತ್ತದೆ. ಮುಖ್ಯವಾಗಿ ಹೆಚ್ಚು ಹೆಚ್ಚು ಸಕಾರಾತ್ಮಕವಾಗಿ ಇರುತ್ತಾರೆ. 

ಯಾಕೋ ಗೊತ್ತಿಲ್ಲ ಹಣ ಹೂಡಿಕೆಯ ವಿಷಯದಲ್ಲಿ ಇನ್ನೂ ಬಹುತೇಕರು ಫಿಕ್ಸೆಡ್‌ ಮೈಂಡ್‌ ಸೆಟ್‌ ಹೊಂದಿರುವವರೇ. ನಮಗೆ ಇದೆಲ್ಲ ಅರ್ಥ ಆಗುವುದಿಲ್ಲ ಬಿಡಿ ಎನ್ನುತ್ತಾ, ಅರ್ಥ ಮಾಡಿಕೊಳ್ಳುವ ಪ್ರಯತ್ನವನ್ನೂ ಮಾಡುವುದಿಲ್ಲ. ಹೀಗಾಗಿಯೇ ಹಲವು ಅವಕಾಶಗಳಿಂದಲೂ ಇವರು ವಂಚಿತರಾಗುತ್ತಾರೆ. ಅದೇ ಗ್ರೋಥ್‌ ಮೈಂಡ್‌ ಸೆಟ್‌ ಇದ್ದಾಗ ಹೊಸ ವಿಷಯಗಳನ್ನು ಅರಿತು ಅಳವಡಿಸಿಕೊಳ್ಳುತ್ತಾರೆ. 

ಕೇವಲ ಹಣಕಾಸಿನ ವಿಷಯಕ್ಕೆ ಮಾತ್ರ ಅಲ್ಲ. ಯಶಸ್ವಿ ಜೀವನ ನಮ್ಮದಾಗಬೇಕೆಂದರೆ, ನಮ್ಮ ಮೈಂಡ್‌ ಸೆಟ್‌ ನಲ್ಲಿಯೇ ಬದಲಾವಣೆ ಆಗಲೇ ಬೇಕಿದೆ. ಇಂದಿನ ನಿರಂತರ ಬದಲಾವಣೆಯ ಕಾಲದಲ್ಲಿ ಹೊಸ ಹೊಸ ವಿಷಯಗಳು, ಅವಕಾಶಗಳಿಗೆ ತೆರೆದುಕೊಳ್ಳಲೇ ಬೇಕಿದೆ. ನಾವು ಗ್ರೋಥ್‌ ಮೈಂಡ್‌ ಸೆಟ್‌ ಹೊಂದಿದಾಗಲೇ ಗ್ರೋಥ್‌ ಆಗೋದು. ಸಕಾರಾತ್ಮಕತೆಯೇ ಇದಕ್ಕೆ ಅಡಿಗಲ್ಲು.

– ಸುಧಾಶರ್ಮ ಚವತ್ತಿ

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.