ಬಾಳೆಯಿಂದ ಬಾಳು ಬಂಗಾರ


Team Udayavani, Sep 3, 2018, 12:30 PM IST

bale-1-copy.jpg

ಹದಿಮೂರು ಹೆಕ್ಟೇರ್‌ ಜಮೀನಿನಲ್ಲಿ ಬಾಳೆ ಕೃಷಿ ಮಾಡಿರುವ ಪ್ರಕಾಶ್‌, ಅದರಿಂದ ಲಕ್ಷಾಂತರ ರೂಪಾಯಿ ಲಾಭ ಪಡೆದಿದ್ದಾರೆ. ಅವರು ಸಾವಯವ ಕೃಷಿ ಪದ್ಧತಿ ಅನುಸರಿಸಿ ಗೆದಿದ್ದಾರೆ ಎಂಬುದು ಹೇಳಲೇಬೇಕಾದ ಸಂಗತಿ. 

ಬೆಳಗಾವಿಯ ಗೋಕಾಕ್‌ ತಾಲೂಕಿನ ಕುಲಗೋಡದ ಪ್ರಕಾಶ್‌ ಬಿಸ್ನೆಕೊಪ್ಪ ತಮ್ಮ ಹೊಲದ ತುಂಬೆಲ್ಲಾ ಬಾಳೆ ಬೆಳೆದು ಸಾಕಷ್ಟು ಆದಾಯ ಪಡೆಯುತ್ತಿದ್ದಾರೆ. ಪ್ರಕಾಶ್‌ ಅವರಿಗೆ ಹದಿಮೂರು ಹೆಕ್ಟೇರ್‌ ಜಮೀನಿದೆ. ಐದು ವರ್ಷದಿಂದ ಅಷ್ಟೂ ಜಮೀನಿನಲ್ಲಿ ಬಾಳೆ ಹಾಕಿದ್ದಾರೆ. ಮೊದಲಿಗೆ ನಾಲ್ಕೂವರೆ ಹೆಕ್ಟೇರ್‌ನಲ್ಲಿ ಮಣ್ಣನ್ನು ಸಾಕಷ್ಟು ಹದಮಾಡಿಕೊಂಡು, ಹಸಿರೆಲೆ ಗೊಬ್ಬರ, ಸೆಣಬು, ಕುರಿ ಮತ್ತು ಕೊಟ್ಟಿಗೆ ಗೊಬ್ಬರವನ್ನು ಹಾಕಿದರು. ನಂತರ ಆರು ಅಡಿಗೆ ಒಂದರಂತೆ ಸಾಲುಗಳನ್ನು ಮಾಡಿ, ಸಾಲಿನಲ್ಲಿ ಪ್ರತಿ ಐದು ಅಡಿಗೊಂದಂತೆ ಕೊಯಮತ್ತೂರಿನ ಜೈನ್‌ ಕಂಪೆ ತಳಿಯ ಸುಮಾರು 6000 ಬಾಳೆ ಸಸಿಗಳನ್ನು ನಾಟಿ ಮಾಡಿದರು.

ನಾಟಿ ಮತ್ತು ಪೋಷಣೆ
ಪ್ರಾರಂಭದಲ್ಲಿ ಎರಡು ದಿನಕ್ಕೊಮ್ಮೆ ಡ್ರಿಪ್‌ ಮೂಲಕ ನೀರನ್ನು ಅರ್ಧ ಗಂಟೆಗಳಷ್ಟು ಕಾಲ ಹರಿಬಿಟ್ಟರು. ನಾಲ್ಕು ದಿನಕ್ಕೊಮ್ಮೆ ಅದರಲ್ಲಿಯೇ ಫಾಸ್ಪರಸ್‌, 12-61 ಮುಂತಾದ ರಾಸಾಯನಿಕ ಗೊಬ್ಬರವನ್ನು ನೀರಿನಲ್ಲಿ ಕರಗಿಸಿ ಗಿಡಕ್ಕೆ ತಲುಪಿಸಿದ್ದಾರೆ. 

ಮಿಶ್ರಬೆಳೆಯಿಂದಲೂ ಲಾಭ
ನಾಟಿ ಮಾಡಿದ ಸುಮಾರು ಹತ್ತು ತಿಂಗಳಿಗೆ ಬಾಳೆ ಕಟಾವಿಗೆ  ಸಿದ್ದವಾಗುತ್ತದೆ.  ಅಲ್ಲಿಯವರೆಗೂ ಬಾಳೆ ಬೆಳೆಯ ಮಧ್ಯೆ ಉಳಿದಿದ್ದ ಜಾಗದಲ್ಲಿ  ಮಿಶ್ರಬೆಳೆಯಾಗಿ ಕಲ್ಲಂಗಡಿ ಬೆಳೆದು ಅದರಿಂದ ಸುಮಾರು ಹತ್ತು ಲಕ್ಷದಷ್ಟು ಆದಾಯ ಪಡೆದಿದ್ದಾರೆ. 

ಬಾಳೆಯಿಂದ ಸುಮಾರು 12ಲಕ್ಷ ಆದಾಯ ಬಂದಿದೆ. ಅಲ್ಲಿಂದ ಮುಂದೆ ಸುಮಾರು ಎರಡು ಹೆಕ್ಟೇರ್‌ನಲ್ಲಿ ಮೂರು ಸಾವಿರ ಬಾಳೆ ಸಸಿ ನೆಟ್ಟು, ಅದರೊಟ್ಟಿಗೆ ಮೆಣಸಿನಗಿಡವನ್ನು ಮಿಶ್ರಬೆಳೆಯಾಗಿ ಬೆಳೆದಿದ್ದಾರೆ.  ಇವೆರಡರಿಂದ ಒಟ್ಟಾರೆ ಹತ್ತು ಲಕ್ಷಕ್ಕೂ ಅಧಿಕ ಆದಾಯವನ್ನು ಗಳಿಸಿದ್ದಾರೆ ಪ್ರಕಾಶ್‌.  ಆರಂಭದಲ್ಲಿ ನಾಲ್ಕೂವರೆ ಹೆಕ್ಟೇರ್‌ನಲ್ಲಿ ನೆಟ್ಟ ಬಾಳೆಯು ಇಂದು ಅದಾಗಲೇ ಆರನೇ ಕಟಾವಿಗೆ ಸಿದ್ಧವಾಗಿದೆ. ಆನಂತರ ಎರಡು ಹೆಕ್ಟೇರ್‌ನಲ್ಲಿ ನೆಟ್ಟ ಬಾಳೆ ಇನ್ನು ಕೆಲವೇ ದಿನಗಳಲ್ಲಿ ನಾಲ್ಕನೇ ಕಟಾವಿಗೆ ಬರಲಿದೆ.  ಐದು ಹೆಕ್ಟೇರ್‌ನಲ್ಲಿ ನಾಟಿ ಮಾಡಿದ್ದ ಬಾಳೆಯಿಂದ 250 ಟನ್‌ ಇಳುವರಿ ದೊರೆತಿದ್ದು, 25.50 ಲಕ್ಷ ರೂ. ಗಳಷ್ಟು ಆದಾಯ ತಂದುಕೊಟ್ಟಿದೆ. 

ಲಾಭ ಹೀಗೆ
ಪ್ರಕಾಶ್‌ ಹೇಳುವಂತೆ, ಒಮ್ಮೆ ನಾಟಿ ಮಾಡಿದ ಬಾಳೆ ಕಟಾವಿಗೆ ಬಂದ ನಂತರ ಅದರ ಬುಡದಲ್ಲೇ ಮತ್ತಷ್ಟು  ಸಸಿಗಳು ಬೆಳೆಯುತ್ತವೆ. ಅದರಲ್ಲಿ ಯೋಗ್ಯವಾದ ಒಂದನ್ನು ಮಾತ್ರ ಉಳಿಸಿಕೊಂಡು, ಉಳಿದದ್ದೆಲ್ಲವನ್ನೂ ಕಡಿದುಹಾಕಿ ಎರೆಹುಳು ಬಿಟ್ಟು ಕೊಳೆಸುತ್ತಾರಂತೆ. ರಾಸಾಯನಿಕ ಗೊಬ್ಬರದ ಅವಶ್ಯಕತೆ ಬರದಂತೆ ಹೆಚ್ಚು ಸಾವಯವ ಗೊಬ್ಬರ ಉಪಯೋಗಿಸಿ, ಉತ್ತಮ ಇಳುವರಿ ಪಡೆಯಬಹುದು ಎಂದು ಇವರು ಸಾಧಿಸಿ ತೋರಿಸಿದ್ದಾರೆ.  ಮೊದಲ ಕಟಾವಿನಲ್ಲಿ ಅಷ್ಟೊಂದು ಉತ್ತಮ ಇಳುವರಿ ಪಡೆಯಲಾಗದಿದ್ದರೂ ತದನಂತರದ ಎರಡು ಕಟಾವುಗಳಲ್ಲಿ ಸಾಕಷ್ಟು ಇಳುವರಿ ದೊರೆಯುತ್ತದಂತೆ. 

 ಪ್ರಾರಂಭದ ಮೂರು-ನಾಲ್ಕು ತಿಂಗಳವರೆವಿಗೂ ಮಿಶ್ರಬೆಳೆಯಾಗಿ ಚೆಂಡು ಹೂ, ಕಲ್ಲಂಗಡಿ, ಹಸಿಮೆಣಸಿನ ಕಾಯಿ ಹೀಗೆ ಹಲವಾರು ಬೆಳೆಗಳನ್ನು ಬೆಳೆದು ಹಣ ಮಾಡಿದ್ದಾರೆ. ತದನಂತರ ಬಾಳೆ ಗಿಡಗಳು ದೊಡ್ಡದಾಗುವುದರಿಂದ ನೆರಳು ಹೆಚ್ಚಿ ಮಿಶ್ರಬೆಳೆ ಬೆಳೆಯಲು ಸಾಧ್ಯವಾಗಿಲ್ಲವಂತೆ. ಬಾಳೆ ಬೆಳೆಗೆ  ಹೆಕ್ಟೇರ್‌ಗೆ ಒಂದು ಲಕ್ಷದವರೆಗೂ ಖರ್ಚು ತಗುಲುತ್ತದೆ.  ಮೊದಲ ಕಟಾವಿನ ನಂತರ ಮುಂದಿನ ಕಟಾವುಗಳವರೆಗೆ ಹೆಕ್ಟೇರ್‌ಗೆ ಕೇವಲ 25ಸಾವಿರವಷ್ಟೇ ಖರ್ಚು. ಮುತುವರ್ಜಿ ವಹಿಸಿ ಕೃಷಿ ಮಾಡಿದರೆ, ಎಂಟರಿಂದ ಹತ್ತು ಕಟಾವುಗಳನ್ನು ಮಾಡಲು ಅವಕಾಶರುತ್ತದೆ ಎನ್ನುತ್ತಾರೆ ಪ್ರಕಾಶ್‌. ಇವರ ಸಾಧನೆಗೆ ಬೆಳಗಾವಿಯ ಕೃಷಿ ತಂತ್ರಜಾnನ ನಿರ್ವಹಣಾ ಸಂಸ್ಥೆಯು 2017-18ನೇ ಸಾಲಿನ ‘ಶ್ರೇಷ್ಠ ಕೃಷಿಕ ‘ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. 

ಪ.ನಾ.ಹಳ್ಳಿ.ಹರೀಶ್‌ ಕುಮಾರ್‌

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.