ಸರಳತೆಯೇ ಸಂತೋಷದ ದಾರಿ


Team Udayavani, Sep 3, 2018, 2:16 PM IST

clothes-shopping.jpg

ಬೇರೆಯವರ ಮುಂದೆ ಪ್ರತಿಷ್ಠೆ ತೋರಿಸಿಕೊಳ್ಳುವ ಉದ್ದೇಶದಿಂದಲೇ ದುಬಾರಿ ಬೆಲೆಯ ವಸ್ತುಗಳನ್ನು ಖರೀದಿಸುತ್ತೇವೆ. ಎಷ್ಟೇ ಬಾರಿ ಆ ವಸ್ತು ನಮಗೆ ಅಷ್ಟಾಗಿ ಅಗತ್ಯವಿಲ್ಲದಿದ್ದರೂ ಖರೀದಿಸುತ್ತೇವೆ. ಇದರಿಂದ ನಮ್ಮ ಪ್ರತಿಷ್ಠೆ ಖಂಡಿತ ಹೆಚ್ಚಾಗುವುದಿಲ್ಲ. ಆದರೆ ಉಳಿತಾಯ ಆಗಬಹುದಾದ ಹಣವಂತೂ ವಿನಾಕಾರಣ ಖರ್ಚಾಗಿ ಹೋಗಿರುತ್ತದೆ. 

ಸಂಪತ್ತು ಎಂದರೆ ಹಣ. ಒಡವೆ, ವಸ್ತ್ರ, ಆಸ್ತಿ ಇವಷ್ಟೇ ಅಲ್ಲ. ಸಂತೋಷವೇ ಸಂಪತ್ತು ಎನ್ನುವುದು ಈಗ ಎಲ್ಲರ ಬಾಯಲ್ಲೂ ಬರುವ ಮಾತು. ಯಾವ ರಾಷ್ಟ್ರ ಸಂತೊಷದ ದೃಷ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ ಎಂದು ನೋಡಿದರೆ ಫಿನ್ಲಂಡ್‌ಗೆ ಮೊದಲ ಸ್ಥಾನ. ನಮ್ಮ ದೇಶ 133 ನೇ ಸ್ಥಾನದಲ್ಲಿದೆ. ಒಟ್ಟೂ 156 ರಾಷ್ಟ್ರಗಳ ಸಮೀಕ್ಷೆ ನಡೆಸಿ ಈ ಪಟ್ಟಿ ಸಿದ್ದಪಡಿಸಲಾಗಿತ್ತು. ಎಲ್ಲರೂ ಮೊದಲಿಗಿಂತ ಅನುಕೂಲವಂತರಾಗುತ್ತಿದ್ದಾರೆ. ಆದರೆ ಅನುಕೂಲವಂತರಾಗಿರುವ ಜನರೆಲ್ಲ ಮೊದಲಿಗಿಂತ ಸುಖೀಗಳಾ ಎಂದು ಯೋಚಿಸಿದರೆ ಖಂಡಿತಾ ಇಲ್ಲ ಎನ್ನಬೇಕು.

ಉದ್ಯೋಗಸ್ಥ ಮಹಿಳೆಯರ ಒಂದು ಗುಂಪು ಅಲ್ಲಿತ್ತು. ಅವರೆಲ್ಲರೂ ಮೊಬೈಲ್‌ ನಲ್ಲೇ ಮುಳುಗಿದ್ದರು. ಮೊಬೈಲ್‌ ಕುರಿತೇ ಚರ್ಚೆ ನಡೆಯುತ್ತಿತ್ತು.  ಒಬ್ಬಳು ಹೇಳಿದಳು, ಇದು 15 ಸಾವಿರದ ಮೊಬೈಲ್‌. ಇನ್ನೊಬ್ಬಳು ಅಂದಳು 22 ಸಾವಿರದ ಮೊಬೈಲ್‌. ಮತ್ತೂಬ್ಬಳು ಕೇಳಿದಳು: ಇನ್‌ಸ್ಟಾಲ್‌ಮೆಂಟ್‌  ಎಷ್ಟು ? ಈ ಕಡೆಯ ಮಾತಿನಿಂದ ಗೊತ್ತಾಗಿದ್ದು ಏನೆಂದರೆ ಇವರೆಲ್ಲಾ ಸಾಲ ಮಾಡಿ ಮೊಬೈಲ್‌ ಕೊಂಡಿದ್ದಾರೆ. 

ಪದೇ ಪದೇ ಹೇಳುತ್ತಿರುತ್ತೇನೆ ನಮಗೆ ಅಗತ್ಯ ಮತ್ತು ಅನಗತ್ಯ ಖರ್ಚುಗಳ ಅರಿವು ಇರದಿದ್ದರೆ ಜೀವನದಲ್ಲಿ ಯಶಸ್ಸು ಸಾಧ್ಯವೇ ಇಲ್ಲ. ಅಂಗಡಿಗೆ ಹೋಗುತ್ತಾರೆ. ಕೆಲವರಿಗೆ ಕಂಡಿದ್ದೆಲ್ಲ ಬೇಕು ಅನ್ನಿಸುತ್ತಿರುತ್ತದೆ. ಬೇಕು ನಿಜ, ಆದರೆ ಅದು ಎಷ್ಟರಮಟ್ಟಿಗೆ ಅನಿವಾರ್ಯ? ಒಂದು ಕ್ಷಣ ಯೋಚಿಸಿ ನೋಡಿ. ದುಬಾರಿ ಮೊಬೈಲ್‌ ನಮ್ಮ ಸಂಪಾದನೆಗೆ, ಗುಣಮಟ್ಟದ ಜೀವನಕ್ಕೆ ಸಹಕಾರಿ ಆಗಬಹುದಾ? ಆಗುವುದಿಲ್ಲ ಎಂದಾದರೆ ಅದನ್ನು ಖರೀದಿಸುವುದು ಯಾಕೆ? ಈಗ ಎಷ್ಟೋ ಜನರು ಬೇರೆಯವರಿಗಾಗಿ, ಅವರೆದುರು ತಾನೇನೂ ಕಡಿಮೆ ಇಲ್ಲ ಎಂದು ತೋರಿಸಿಕೊಳ್ಳುವ ಉದ್ದೇಶದಿಂದಲೇ ದುಬಾರಿ ಬೆಲೆಯ ಮೊಬೈಲ್‌ ಕೊಳ್ಳುತ್ತಿದ್ದಾರೆ. ಖರ್ಚು ಮಾಡುತ್ತಾರೆ. ವಾಸ್ತವವನ್ನು ತೆರೆದು ತೋರಲಾರರು. 

ಹಾಗೆಯೇ ಪಾರದರ್ಶಕವಾಗಿಯೂ ಇವರು ಇರುವುದು ಕಷ್ಟ. ಹೀಗೆ, ತಮಗೆ ತಾವೇ ಸರಳವಾಗಿ ಇರಲು ಆಗದೇ ಅನಗತ್ಯ ಒತ್ತಡ ಅನುಭವಿಸುತ್ತಾರೆ. ಈ ಒತ್ತಡವೇ ಅನೇಕ ರೀತಿಯ ಸಮಸ್ಯೆಗಳಿಗೂ ಕಾರಣ ಆಗುತ್ತದೆ. ಸಂಬಂಧಗಳಿಂದ ಹಿಡಿದು ಆರೋಗ್ಯದ ವರೆಗೆ ಇದು ಒಂದು ಸರಪಳಿಯ ಹಾಗೆ ಪರಿಣಾಮ ಬೀರುತ್ತದೆ.  ಒಮ್ಮೆ ನಾವು ಸರಳವಾಗಿ ಬದುಕತೊಡಗಿದರೆ, ಬಾಹ್ಯ ಆಡಂಬರಗಳೆಲ್ಲವೂ ನಿಲ್ಲುತ್ತವೆ. ಸರಳತೆ ಅಂದರೆ ಆಲೋಚನೆಯ ಮೂಲಕವೇ ಹೊರ ಹೊಮ್ಮುವುದು. ಮೊದಲು ಸರಳವಾಗಿ ಆಲೋಚಿಸೋಣ, ಸರಳವಾಗಿ ಬದುಕೋಣ. ಸಂತೋಷ ಆಗ ತನ್ನಿಂದ ತಾನೇ ಬರುತ್ತದೆ. ಸರಳತೆಯ ಉಪ ಉತ್ಪನ್ನದ ಹಾಗೆ ಉಳಿತಾಯ ಇದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.