ಹಸಿದ ಮಕ್ಕಳ ಹಸಿವು ನೀಗಿಸುವ “ಅವಧೂತ’  


Team Udayavani, Jan 21, 2019, 12:30 AM IST

hotel1.jpg

ನಾವಂತೂ ಓದಲು ಆಗಲಿಲ್ಲ. ಈಗಿನ ಮಕ್ಕಳಾದ್ರೂ ಚೆನ್ನಾಗಿ ಓದಿ ಶಾಲೆಗೆ, ಊರಿಗೆ ಕೀರ್ತಿ ತರಲಿ, ಹಳ್ಳಿಯಿಂದ ಬರುವ ಮಕ್ಕಳು ಬೆಳಗ್ಗಿನಿಂದ ಸಂಜೆಯವರಿಗೆ ಹಸಕೊಂಡಿದ್ರೆ ಮೇಸ್ಟ್ರೆ ಮಾಡಿದ ಪಾಠ ತಲೆಗೆ ಹೋಗಬೇಕಲ್ಲ. ಹಿಂದೆಲ್ಲ ಹೊಟ್ಟೆಗೆ ಬಟ್ಟೆ ಕಟ್ಟಿಕೊಂಡು ಓದುತ್ತಿದ್ದರು. ಆದರೆ, ಕಾಲ ಬದಲಾಗಿದೆ, ಹಸವುಕೊಂಡಿದ್ರೆ ಗ್ಯಾಸ್ಟ್ರಿಕ್‌ ನಂತಹ ಹಲವು ಸಮಸ್ಯೆಗಳು ಬರುತ್ತವೆ…ಹೀಗೆನ್ನುವ ಮುರಳಿ ಮಂದಾರ್ತಿ, ಈ ವಿದ್ಯಾರ್ಥಿಗಳಿಗೆ 10 ರೂ.ಗೆ ಊಟ, ತಿಂಡಿ ಕೊಡ್ತಾರೆ.

ಮೂಲತಃ ಅರ್ಚಕರಾದ ಇವರು ಅರಸೀಕೆರೆ ನಗರದಲ್ಲಿ “ಅವಧೂತ ಹೋಟೆಲ್‌’ ಅನ್ನೂ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳಿಗಷ್ಟೇ ಅಲ್ಲ, ಸಾಮಾನ್ಯ ಗ್ರಾಹಕರಿಗೂ ಕಡಿಮೆ ದರದಲ್ಲಿ ರುಚಿಯಾದ ಊಟ ಕೊಡುತ್ತಾರೆ. ಉಡುಪಿ ಜಿಲ್ಲೆಯ ಮಂದಾರ್ತಿಯವರಾದ ಮುರಳಿ, 1999ರಲ್ಲಿ ಕೆಲಸ ಅರಸಿ ಅರಸೀಕೆರೆಗೆ ಬಂದರು. ಚಕ್ಲಿ, ನಿಪ್ಪಟ್ಟು, ಕೊಡುಬಳೆ, ಪುಳಿಯೋಗರೆ ಪುಡಿ ಹೀಗೆ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ, ನಿರೀಕ್ಷಿತ ಲಾಭ ಸಿಗದೇ ಹೋದಾಗ, ವ್ಯಾಪಾರ ಬಿಟ್ಟು ಅರ್ಚಕ ವೃತ್ತಿಯನ್ನು ಆರಂಭಿಸಿದರು. 2001ರಲ್ಲಿ ಆನೆಘಟ್ಟ ಸುಬ್ರಹ್ಮಣ್ಯ ಸ್ವಾಮಿ, 2003ರಿಂದ ಕಂಟೇನಹಳ್ಳಿ ಶನೇಶ್ವರ ಸ್ವಾಮಿ ದೇವಾಲಯದ ಅರ್ಚಕರಾಗಿದ್ದಾರೆ. 

ಮಾರುತಿ ಸಚ್ಚಿದಾನಂದ ಆಶ್ರಮದ ಆಡಳಿತಾಧಿಕಾರಿಯೂ ಆದ ಮುರಳಿಯವರು ಬ್ರಹ್ಮಚಾರಿಗಳು. ಹಣಕ್ಕಿಂತ ಆಧ್ಯಾತ್ಮದ  ಕಡೆಗೆ ಹೆಚ್ಚು ಒಲವು ಹೊಂದಿರುವ ಇವರಿಗೆ ಓದುವ ಮಕ್ಕಳನ್ನು ಕಂಡ್ರೆ ಬಲು ಪ್ರೀತಿ. ಮೂವರು ವೃದ್ಧರಿಗೆ ಪ್ರತಿ ದಿನ ಉಚಿತ ಊಟ, ತಿಂಡಿ ಕೊಡ್ತಾರೆ. ಪ್ರತಿ ವರ್ಷ ಸಮೀಪದ ರಾಂಪುರ ಅಂಧರ ಶಾಲೆಗೆ ಪಠ್ಯ ಪುಸ್ತಕ, ಕಲಿಕಾ ಸಾಮಗ್ರಿ ಮುಂದಾವುಗಳನ್ನು ಕೊಡುಗೆಯಾಗಿ ಕೊಡುತ್ತಾರೆ. 

ಮುಂಜಾನೆ ದೇವರ ಪೂಜಾ ಕೈಂಕರ್ಯ ಮುಗಿಸಿಕೊಂಡು 7 ಗಂಟೆ ನಂತರ ಹೋಟೆಲ್‌ ವ್ಯಾಪಾರ ಆರಂಭಿಸುತ್ತಾರೆ. ಹೋಟೆಲ್‌ನಲ್ಲಿ 8 ಮಂದಿ ಕೆಲಸಗಾರರಿದ್ದು, ಇವರಿಗೆ ಸಾಥ್‌ ನೀಡುತ್ತಿದ್ದಾರೆ.

ಶಾಲೆ, ಕಾಲೇಜು ಮಕ್ಕಳು ಬರ್ತಾರೆ:
ಅರಸೀಕೆರೆಯಲ್ಲಿನ ಹೊಯ್ಸಳೇಶ್ವರ, ಪ್ರತಿಭಾ ಕಾಲೇಜು, ವಿದ್ಯಾರಣ್ಯ ಐಟಿಐ ಕಾಲೇಜು, ಕನ್ನಿಕಾ, ಸರ್ಕಾರಿ ಶಾಲೆಗೆ ಸೇರಿದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಸಾಮಾನ್ಯ ನಾಗರಿಕರು ಮಧ್ಯಾಹ್ನದ ಊಟಕ್ಕೆಂದು ಇಲ್ಲಿಗೆ ಬರುತ್ತಾರೆ.

ಫ‌ುಲ್‌ ಊಟಕ್ಕೆ 30 ರೂ.:
ಸಾಮಾನ್ಯ ಗ್ರಾಹಕರಿಗೆ ಫ‌ುಲ್‌ ಊಟಕ್ಕೆ 30 ರೂ. ತೆಗೆದುಕೊಳ್ಳಲಾಗುತ್ತದೆ. ಅನ್ನ, ತಿಳಿ ಸಾರು, ಸಾಂಬಾರು, ಹಪ್ಪಳ, ಉಪ್ಪಿನಕಾಯಿ, ಚಪಾತಿ ಅಥವಾ ರಾಗಿ ಮುದ್ದೆ ಕೊಡುತ್ತಾರೆ. ವಿದ್ಯಾರ್ಥಿಗಳಿಗೆ 10 ರೂ.ಗೆ ಅನ್ನ, ಸಾಂಬಾರು, ಹಪ್ಪಳ, ಉಪ್ಪಿನಕಾಯಿ ಕೊಡ್ತಾರೆ.

20 ರೂ.ಗೆ ತಿಂಡಿ: 
ಚಿತ್ರಾನ್ನ, ರೈಸ್‌ಬಾತ್‌, ತಟ್ಟೆ ಇಡ್ಲಿ (ಎರಡು), ಗುಂಡು ಇಡ್ಲಿ (ಮೂರು) 20 ರೂ.ಗೆ ಸಿಗುತ್ತದೆ. ವಿದ್ಯಾರ್ಥಿಗಳಿಗಾದ್ರೆ 10 ರೂ.
ಇಷ್ಟು ಕಡಿಮೆ ದರಕ್ಕೆ ಊಟ ತಿಂಡಿ ಕೊಡುತ್ತಿರುವ ಬಗ್ಗೆ ವಿವರ ನೀಡುವ ಮುರಳಿಯವರು, ಸಾಂಬಾರ್‌ ಪೌಡರ್‌, ಗೋಧಿ ಹಿಟ್ಟು ಹೀಗೆ ಹೋಟೆಲ್‌ಗೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಮನೆಯಲ್ಲಿ ತಯಾರಿಸುತ್ತೇವೆ. ಹೀಗಾಗಿ ಖರ್ಚು ಸ್ವಲ್ಪ ಕಡಿಮೆಯಾಗುತ್ತದೆ. ಅಲ್ಲದೆ, ಗ್ರಾಹಕರಿಗೂ ಇದರಿಂದ ಶುಚಿಯಾದ ಊಟ ಸಿಗುತ್ತದೆ ಎನ್ನುತ್ತಾರೆ ಹೋಟೆಲ್‌ ಮಾಲಿಕ ಮುರಳಿ ಮಂದಾರ್ತಿ.

ಹೋಟೆಲ್‌ ಸಮಯ:
ಬೆಳಗ್ಗೆ 7 ರಿಂದ ರಾತ್ರಿ 7ರವರೆಗೆ, ಭಾನುವಾರ ರಜೆ.

ಹೋಟೆಲ್‌ ವಿಳಾಸ:
ಬಿ.ಎಚ್‌.ರಸ್ತೆ, ಕೆಇಬಿ ಎದುರು, ಅರಸೀಕೆರೆ ನಗರ.
 
– ಭೋಗೇಶ ಆರ್‌. ಮೇಲುಕುಂಟೆ

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.