ಸೌತೆ ಕೀ ಬಾತ್‌ 


Team Udayavani, Feb 11, 2019, 12:30 AM IST

patil.jpg

ತರಕಾರಿಯಿಂದ ಲಾಭ ಬೇಕು ಅನ್ನುವವರು ಮಂಗಳೂರು ಸೌತೆಯನ್ನು ಬೆಳೆಯಿರಿ. ಹೆಚ್ಚು ಖರ್ಚು ಬೇಡದ, ಕಡಿಮೆ ಸಮಯದಲ್ಲಿ ಹೆಚ್ಚು ಲಾಭ ಕೊಡುವ ಬೆಳೆ ಇದು.  

ಇತರೆ ತರಕಾರಿಗೆ ಹೋಲಿಸಿದರೆ ಸಾಂಬಾರು ಸೌತೆ ಬೆಳೆಯುವುದು ಸಲೀಸು. ಇದಕ್ಕೆ ಕಂಬ ನೆಡಬೇಕಿಲ್ಲ, ದಾರದ ಆಶ್ರಯ ಬೇಕಿಲ್ಲ. ಈ ಸೌತೆ ಬಳ್ಳಿ ನೆಲದಲ್ಲೇಹಬ್ಬುತ್ತಾ ಸುಮಾರು ಒಂದು ಒಂದೂವರೆ ಕೆ.ಜಿ ತೂಗುವ ಕಾಯಿಗಳನ್ನು ನೀಡುತ್ತವೆ.  ಇದು ಎಂಟು-ಹತ್ತು ಕೊಯ್ಲು ಬರುವ ಬಳ್ಳಿ, ಆದ್ದರಿಂದ ಇದಕ್ಕೆ ಅಧಿಕ ಪೋಷಕಾಂಶಗಳು ಬೇಕು. ಬರೀ ರಾಸಾಯನಿಕ ಗೊಬ್ಬರದಿಂದ ಪೋಷಕಾಂಶ ಕೊಟ್ಟರೆ, ಇಳುವರಿ ಕಮ್ಮಿಯಾಗಿ, ಸೈಜ್‌ ಚಿಕ್ಕದಾಗಿ, ರುಚಿ ಕೂಡ ಇರುವುದಿಲ್ಲ.

ಹಾಗಂತ ಬಳ್ಳಿ ಹಾಕುವ ಮೊದಲೇ ಇಡೀ ಹೊಲಕ್ಕೆ ಟನ್‌ ಗಟ್ಟಲೇ ಕೊಟ್ಟಿಗೆ ಗೊಬ್ಬರ ಹಾಕುವುದು ಬೇಡ. ಇದು ಬಹಳ ಅಂತರವಿಟ್ಟು ಬೆಳೆಯುವ ಬೆಳೆಯಾದ್ದರಿಂದ ಜಮೀನಿನ ತುಂಬ ಕೊಟ್ಟಿಗೆ ಗೊಬ್ಬರ ಹಾಕುವ ಬದಲು ಬಳ್ಳಿಯ ಬುಡಗಳಿಗಷ್ಟೇ ಕೊಡಬಹುದು.

ಬೇಸಾಯ ಪದ್ಧತಿ 
ಎರಡುಮೂರು ಸಲ ಉಳುಮೆ ಮಾಡಿ, ಹದ ಮಾಡಿದ ಜಮೀನಿನಲ್ಲಿ ಆರರಿಂದ ಎಂಟು ಅಡಿಗೆ ಒಂದೊಂದು ಸಾಲು ಬಿಟ್ಟುಕೊಳ್ಳಿ. ಆ ಸಾಲಿನಲ್ಲಿ ಸುಮಾರು ಮೂರು ಅಡಿಗೆ ಒಂದರಂತೆ ಗುರುತು ಮಾಡಿಕೊಂಡು ಅಲ್ಲಿ ಚಿಕ್ಕ ಚಿಕ್ಕ ಗುಣಿ ಮಾಡುತ್ತಾ, ಎರಡು ಬೊಗಸೆಯಷ್ಟು ಉತ್ಕೃಷ್ಟ ಕೊಟ್ಟಿಗೆ ಗೊಬ್ಬರ ಹಾಕಿ ಮೇಲೆ ಮಣ್ಣು ಮುಚ್ಚಿ. ಎಂಟತ್ತು ದಿನ ಬಿಟ್ಟು ಆ ಗುಣಿಗಳಲ್ಲಿ ನಾಲ್ಕು ಬೀಜ ಹಾಕಿ ನೀರು ಕೊಡಿ. 

1) ಮಂಗಳೂರು ಸೌತೆ 2) ಎಳವನ್‌ 3 ) ಸುನಾಮಿ ಇವು ಮೂರೂ ಬೇರೆ ಬೇರೆ ಥರ ಬರುತ್ತವಾದರೂ ಬೆಳೆಯುವ ರೀತಿ ಒಂದೇ.

ಈ ಮೂರೂ ಸೌತೆಗಳು ಬಿತ್ತನೆ ಮಾಡಿದ ಐವತ್ತು ದಿನದಿಂದಲೇ ಕಾಯಿ ಕೊಡಲು ಶುರು ಮಾಡುತ್ತವೆ. 

ನಿರ್ವಹಣೆ 
ಬಿತ್ತಿ ಹದಿನೈದು ದಿನದ ನಂತರ ಸದೃಢವಾಗಿರುವ ಎರಡು ಅಥವಾ ಮೂರು ಸಸಿ ಬಿಟ್ಟು ಉಳಿದಿದ್ದು ಕಿತ್ತು ಹಾಕಿ. ಕಸ ತಗೆದು ಸ್ವಚ್ಚಗೊಳಿಸಿ. ನಾಲ್ಕೈದು ದಿನಕ್ಕೊಮ್ಮೆ ತಪ್ಪದೇ ನೀರು ಕೊಡಿ.  ಮಾಮೂಲಾಗಿ ಒಂದು ಎಕರೆ ಸೌತೆ ಬಳ್ಳಿಗೆ 25 ಕೆ.ಜಿ ಯೂರಿಯಾ, 20 ಕೆ.ಜಿ ಡಿಎಪಿ, 30 ಕೆ.ಜಿ ಪೊಟ್ಯಾಷ್‌ ರಾಸಾಯನಿಕ ಗೊಬ್ಬರ ಬೇಕು. ಆದರೆ, ಅಷ್ಟನ್ನೂ ಒಂದೇ ಸಲ ಬೇಡ. ಪ್ರತಿ ಇಪ್ಪತ್ತು ದಿನಕ್ಕೊಮ್ಮೆ ಇಷ್ಟಿಷ್ಟೇ ರಾಸಾಯನಿಕ ಗೊಬ್ಬರ ಕೊಡುತ್ತಿರಿ. ಜೊತೆಗೆ ತಿಂಗಳ ನಂತರ ಒಮ್ಮೆ ಹಾಗೂ ಎರಡು ತಿಂಗಳಾದಾಗ ಮತ್ತೂಮ್ಮೆ ಕುರ್ಚಿಗೆಯ ಸಹಾಯದಿಂದ ಬಳ್ಳಿಯ ಎರಡು ಬದಿ ತಗ್ಗು ಮಾಡಿ ಎರೆಹುಳು ಗೊಬ್ಬರ ಕೊಡಿ. ಎರೆಹುಳು ಗೊಬ್ಬರದಲ್ಲಿ ಸ್ವಲ್ಪ ಬೇವಿನ ಹಿಂಡಿ ಮಿಕ್ಸ್‌ ಮಾಡಿ.  ಎಕರೆಗೆ ಸುಮಾರು ಆರು ಸಾವಿರ ಸಸಿ ನಾಟಿ ಮಾಡಬಹುದು.  ಒಂದು ಕಾಯಿ ಅರ್ಧ ದಿಂದ ಒಂದೂ ಕಾಲು ಕೆ.ಜಿಯಷ್ಟು ತೂಗುತ್ತದೆ. ಇಂಥ ಕಾಯಿಗಳು ಒಂದು ಬಳ್ಳಿಗೆ ನಾಲ್ಕರಿಂದ ಐದು ಸಿಗುತ್ತವೆ.

ಎಳವನ್‌ ತಳಿಯಾದರೆ ಒಂದು ಎಕರೆಗೆ ಅಂದಾಜು ಮೂರೂವರೆ ಸಾವಿರ ಸೌತೆ ಸಸಿ ನಾಟಿ ಮಾಡಬಹುದು. ಒಂದು ಕಾಯಿ 2- 3 ಕೆ.ಜಿ ತೂಗಬಲ್ಲವು. ಒಂದು ಬಳ್ಳಿಗೆ ಎರಡರಿಂದ ಮೂರು ಕಾಯಿ ಸಿಕ್ಕೇಸಿಗುತ್ತದೆ. 

ಸುನಾಮಿ ತಳಿಯಾದರೆ, ಎಕರೆಗೆ ನಾಲ್ಕರಿಂದ ನಾಲ್ಕೂವರೆ ಸಾವಿರ ಬೇಕು. ಕಾಯಿಗಳು ಒಂದೂವರೆಯಿಂದ ಎರಡು ಕೆ.ಜಿ ಇರುತ್ತವೆ. ಒಂದು ಬಳ್ಳಿ ನಾಲ್ಕೈದು ಕಾಯಿ ಬಿಡುತ್ತದೆ.  ಖರ್ಚು ಎಕರೆಗೆ ಸುಮಾರು ಇಪ್ಪತ್ತರಿಂದ ಇಪ್ಪತೈದು ಸಾವಿರ ಅಷ್ಟೇ ಖರ್ಚಾಗಿರುತ್ತದೆ. ಕಾಯಿಗಳು ಹತ್ತು ರೂ. ಕೆ.ಜಿ ಯಂತೆ ಮಾರಾಟವಾದರೆ ಅಂದಾಜು ಒಂದೂ ಕಾಲು ಲಕ್ಷ ಲಾಭ ಗ್ಯಾರಂಟಿ. 

– ಎಸ್‌.ಕೆ. ಪಾಟೀಲ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.