ಸೌತೆ ಕೀ ಬಾತ್‌ 


Team Udayavani, Feb 11, 2019, 12:30 AM IST

patil.jpg

ತರಕಾರಿಯಿಂದ ಲಾಭ ಬೇಕು ಅನ್ನುವವರು ಮಂಗಳೂರು ಸೌತೆಯನ್ನು ಬೆಳೆಯಿರಿ. ಹೆಚ್ಚು ಖರ್ಚು ಬೇಡದ, ಕಡಿಮೆ ಸಮಯದಲ್ಲಿ ಹೆಚ್ಚು ಲಾಭ ಕೊಡುವ ಬೆಳೆ ಇದು.  

ಇತರೆ ತರಕಾರಿಗೆ ಹೋಲಿಸಿದರೆ ಸಾಂಬಾರು ಸೌತೆ ಬೆಳೆಯುವುದು ಸಲೀಸು. ಇದಕ್ಕೆ ಕಂಬ ನೆಡಬೇಕಿಲ್ಲ, ದಾರದ ಆಶ್ರಯ ಬೇಕಿಲ್ಲ. ಈ ಸೌತೆ ಬಳ್ಳಿ ನೆಲದಲ್ಲೇಹಬ್ಬುತ್ತಾ ಸುಮಾರು ಒಂದು ಒಂದೂವರೆ ಕೆ.ಜಿ ತೂಗುವ ಕಾಯಿಗಳನ್ನು ನೀಡುತ್ತವೆ.  ಇದು ಎಂಟು-ಹತ್ತು ಕೊಯ್ಲು ಬರುವ ಬಳ್ಳಿ, ಆದ್ದರಿಂದ ಇದಕ್ಕೆ ಅಧಿಕ ಪೋಷಕಾಂಶಗಳು ಬೇಕು. ಬರೀ ರಾಸಾಯನಿಕ ಗೊಬ್ಬರದಿಂದ ಪೋಷಕಾಂಶ ಕೊಟ್ಟರೆ, ಇಳುವರಿ ಕಮ್ಮಿಯಾಗಿ, ಸೈಜ್‌ ಚಿಕ್ಕದಾಗಿ, ರುಚಿ ಕೂಡ ಇರುವುದಿಲ್ಲ.

ಹಾಗಂತ ಬಳ್ಳಿ ಹಾಕುವ ಮೊದಲೇ ಇಡೀ ಹೊಲಕ್ಕೆ ಟನ್‌ ಗಟ್ಟಲೇ ಕೊಟ್ಟಿಗೆ ಗೊಬ್ಬರ ಹಾಕುವುದು ಬೇಡ. ಇದು ಬಹಳ ಅಂತರವಿಟ್ಟು ಬೆಳೆಯುವ ಬೆಳೆಯಾದ್ದರಿಂದ ಜಮೀನಿನ ತುಂಬ ಕೊಟ್ಟಿಗೆ ಗೊಬ್ಬರ ಹಾಕುವ ಬದಲು ಬಳ್ಳಿಯ ಬುಡಗಳಿಗಷ್ಟೇ ಕೊಡಬಹುದು.

ಬೇಸಾಯ ಪದ್ಧತಿ 
ಎರಡುಮೂರು ಸಲ ಉಳುಮೆ ಮಾಡಿ, ಹದ ಮಾಡಿದ ಜಮೀನಿನಲ್ಲಿ ಆರರಿಂದ ಎಂಟು ಅಡಿಗೆ ಒಂದೊಂದು ಸಾಲು ಬಿಟ್ಟುಕೊಳ್ಳಿ. ಆ ಸಾಲಿನಲ್ಲಿ ಸುಮಾರು ಮೂರು ಅಡಿಗೆ ಒಂದರಂತೆ ಗುರುತು ಮಾಡಿಕೊಂಡು ಅಲ್ಲಿ ಚಿಕ್ಕ ಚಿಕ್ಕ ಗುಣಿ ಮಾಡುತ್ತಾ, ಎರಡು ಬೊಗಸೆಯಷ್ಟು ಉತ್ಕೃಷ್ಟ ಕೊಟ್ಟಿಗೆ ಗೊಬ್ಬರ ಹಾಕಿ ಮೇಲೆ ಮಣ್ಣು ಮುಚ್ಚಿ. ಎಂಟತ್ತು ದಿನ ಬಿಟ್ಟು ಆ ಗುಣಿಗಳಲ್ಲಿ ನಾಲ್ಕು ಬೀಜ ಹಾಕಿ ನೀರು ಕೊಡಿ. 

1) ಮಂಗಳೂರು ಸೌತೆ 2) ಎಳವನ್‌ 3 ) ಸುನಾಮಿ ಇವು ಮೂರೂ ಬೇರೆ ಬೇರೆ ಥರ ಬರುತ್ತವಾದರೂ ಬೆಳೆಯುವ ರೀತಿ ಒಂದೇ.

ಈ ಮೂರೂ ಸೌತೆಗಳು ಬಿತ್ತನೆ ಮಾಡಿದ ಐವತ್ತು ದಿನದಿಂದಲೇ ಕಾಯಿ ಕೊಡಲು ಶುರು ಮಾಡುತ್ತವೆ. 

ನಿರ್ವಹಣೆ 
ಬಿತ್ತಿ ಹದಿನೈದು ದಿನದ ನಂತರ ಸದೃಢವಾಗಿರುವ ಎರಡು ಅಥವಾ ಮೂರು ಸಸಿ ಬಿಟ್ಟು ಉಳಿದಿದ್ದು ಕಿತ್ತು ಹಾಕಿ. ಕಸ ತಗೆದು ಸ್ವಚ್ಚಗೊಳಿಸಿ. ನಾಲ್ಕೈದು ದಿನಕ್ಕೊಮ್ಮೆ ತಪ್ಪದೇ ನೀರು ಕೊಡಿ.  ಮಾಮೂಲಾಗಿ ಒಂದು ಎಕರೆ ಸೌತೆ ಬಳ್ಳಿಗೆ 25 ಕೆ.ಜಿ ಯೂರಿಯಾ, 20 ಕೆ.ಜಿ ಡಿಎಪಿ, 30 ಕೆ.ಜಿ ಪೊಟ್ಯಾಷ್‌ ರಾಸಾಯನಿಕ ಗೊಬ್ಬರ ಬೇಕು. ಆದರೆ, ಅಷ್ಟನ್ನೂ ಒಂದೇ ಸಲ ಬೇಡ. ಪ್ರತಿ ಇಪ್ಪತ್ತು ದಿನಕ್ಕೊಮ್ಮೆ ಇಷ್ಟಿಷ್ಟೇ ರಾಸಾಯನಿಕ ಗೊಬ್ಬರ ಕೊಡುತ್ತಿರಿ. ಜೊತೆಗೆ ತಿಂಗಳ ನಂತರ ಒಮ್ಮೆ ಹಾಗೂ ಎರಡು ತಿಂಗಳಾದಾಗ ಮತ್ತೂಮ್ಮೆ ಕುರ್ಚಿಗೆಯ ಸಹಾಯದಿಂದ ಬಳ್ಳಿಯ ಎರಡು ಬದಿ ತಗ್ಗು ಮಾಡಿ ಎರೆಹುಳು ಗೊಬ್ಬರ ಕೊಡಿ. ಎರೆಹುಳು ಗೊಬ್ಬರದಲ್ಲಿ ಸ್ವಲ್ಪ ಬೇವಿನ ಹಿಂಡಿ ಮಿಕ್ಸ್‌ ಮಾಡಿ.  ಎಕರೆಗೆ ಸುಮಾರು ಆರು ಸಾವಿರ ಸಸಿ ನಾಟಿ ಮಾಡಬಹುದು.  ಒಂದು ಕಾಯಿ ಅರ್ಧ ದಿಂದ ಒಂದೂ ಕಾಲು ಕೆ.ಜಿಯಷ್ಟು ತೂಗುತ್ತದೆ. ಇಂಥ ಕಾಯಿಗಳು ಒಂದು ಬಳ್ಳಿಗೆ ನಾಲ್ಕರಿಂದ ಐದು ಸಿಗುತ್ತವೆ.

ಎಳವನ್‌ ತಳಿಯಾದರೆ ಒಂದು ಎಕರೆಗೆ ಅಂದಾಜು ಮೂರೂವರೆ ಸಾವಿರ ಸೌತೆ ಸಸಿ ನಾಟಿ ಮಾಡಬಹುದು. ಒಂದು ಕಾಯಿ 2- 3 ಕೆ.ಜಿ ತೂಗಬಲ್ಲವು. ಒಂದು ಬಳ್ಳಿಗೆ ಎರಡರಿಂದ ಮೂರು ಕಾಯಿ ಸಿಕ್ಕೇಸಿಗುತ್ತದೆ. 

ಸುನಾಮಿ ತಳಿಯಾದರೆ, ಎಕರೆಗೆ ನಾಲ್ಕರಿಂದ ನಾಲ್ಕೂವರೆ ಸಾವಿರ ಬೇಕು. ಕಾಯಿಗಳು ಒಂದೂವರೆಯಿಂದ ಎರಡು ಕೆ.ಜಿ ಇರುತ್ತವೆ. ಒಂದು ಬಳ್ಳಿ ನಾಲ್ಕೈದು ಕಾಯಿ ಬಿಡುತ್ತದೆ.  ಖರ್ಚು ಎಕರೆಗೆ ಸುಮಾರು ಇಪ್ಪತ್ತರಿಂದ ಇಪ್ಪತೈದು ಸಾವಿರ ಅಷ್ಟೇ ಖರ್ಚಾಗಿರುತ್ತದೆ. ಕಾಯಿಗಳು ಹತ್ತು ರೂ. ಕೆ.ಜಿ ಯಂತೆ ಮಾರಾಟವಾದರೆ ಅಂದಾಜು ಒಂದೂ ಕಾಲು ಲಕ್ಷ ಲಾಭ ಗ್ಯಾರಂಟಿ. 

– ಎಸ್‌.ಕೆ. ಪಾಟೀಲ್‌

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.