ಛೇಂಜ್‌ ಮೇಕರ್ ಇನ್‌ ಎಜುಕೇಷನ್‌ ಫೆಲೋಶಿಪ್‌


Team Udayavani, Mar 21, 2017, 3:45 AM IST

lead1.jpg

ಶಿಕ್ಷಣ ರಂಗದಲ್ಲಿ ಯುವ ಶಕ್ತಿಯನ್ನು ಆಕರ್ಷಿಸಲೆಂದೇ ದೆಹಲಿ ಸರ್ಕಾರ ಒಂದು ನೂತನ ಫೆಲೋಶಿಪ್‌ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅದೇ “ಛೇಂಜ್‌ ಮೇಕರ್ ಇನ್‌ ಎಜುಕೇಷನ್‌ ಫೆಲೋಶಿಪ್‌’ (CMIE-Change Makers in Education Fellowship).ಈ ಫೆಲೋಶಿಪ್‌ ಮೂಲಕ ಆಯ್ಕೆಯಾದ ಅಭ್ಯರ್ಥಿಗಳು ದೆಹಲಿಯಲ್ಲಿನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಾರೆ. ಆಭ್ಯರ್ಥಿಗಳು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಮಂತ್ರಿಗಳ ಜೊತೆಗೆ, ಹಿರಿಯ ಅಧಿಕಾರಿಗಳ ಜೊತೆಗೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಮಾಡಿದ ಕೆಲವು ಸರ್ಕಾರೇತರ ಸಂಸ್ಥೆಗಳ ಜೊತೆಗೆ ಕೆಲಸ ಮಾಡುವ ಅವಕಾಶವನ್ನು ಪಡೆಯುತ್ತಾರೆ.
  
ಆಯ್ಕೆಯಾದ ಅಭ್ಯರ್ಥಿಗಳು ವಿವಿಧ ಭಾಗಗಳಲ್ಲಿ ಕೆಲಸ ಮಾಡುತ್ತಾರೆ. ಉದಾಹರಣೆಗೆ ಪ್ರಿನ್ಸಿಪಲ್‌ ಲೀಡರ್‌ಶಿಪ್‌ ಡೆವಲಪ್‌ಮೆಂಟ್‌ ಪ್ರೋಗ್ರಾಂ (Principal Leadership Development Program),ಸ್ಕೂಲ್‌ ಮ್ಯಾನೇಜ್‌ಮೆಂಟ್‌ ಕಮಿಟಿ (School Management Committee)ಮೆಂಟರ್‌ ಟೀಚರ್‌ ಪ್ರೋಗ್ರಾಂ (Mentor Teacher Program), ಕೌನ್ಸೆಲಿಂಗ್‌  ಗೈಡೆನ್ಸ್‌ ((Counselling and Guidance) ಇತ್ಯಾದಿ.

22-35 ವರ್ಷದ ವಯೋಮಿತಿಯ ಪದವೀಧರ ಅಭ್ಯರ್ಥಿಗಳು ಈ ಕಾರ್ಯಕ್ರಮಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಅಭ್ಯರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಿದ ಕನಿಷ್ಠ ಎರಡು ವರ್ಷದ ಅನುಭವ ಅಪೇಕ್ಷಣೀಯ. ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯ ಜೊತೆಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಹುಮ್ಮಸ್ಸು ಮತ್ತು ನಾಯಕತ್ವ ಗುಣಗಳನ್ನು ಹೊಂದಿರಬೇಕು. ಸರ್ಕಾರಿ ಶಾಲೆಗಳಲ್ಲಿನ ಟೀಚರ್‌ಗಳ ಜೊತೆ ಮತ್ತು ಮಕ್ಕಳ ಜೊತೆಗೆ ಉತ್ತಮ ಒಡನಾಟವನ್ನು ಬೆಳೆಸಿಕೊಂಡು ಕೆಲಸ ಮಾಡುವ ಲಕ್ಷಣಗಳನ್ನು ಹೊಂದಿರಬೇಕು. ಈ ಎಲ್ಲಾ ಗುಣಗಳನ್ನು ಆಯ್ಕೆ ಪ್ರಕ್ರಿಯೆಯ ಸಮಯದಲ್ಲಿ ಪರೀಕ್ಷಿಸಲಾಗುತ್ತದೆ. 

ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸಲು ಕಡೆಯ ದಿನಾಂಕ:
ಈ ಫೆಲೋಶಿಪ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಅಭ್ಯರ್ಥಿಗಳು ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಏಪ್ರಿಲ್‌ 5, 2017. 

ಆಯ್ಕೆ ನಂತರ ಏನು?
ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವಾರದ ತರಬೇತಿಯನ್ನು ನೀಡಲಾಗುತ್ತದೆ. ಶಿಕ್ಷಣ ಕ್ಷೇತ್ರದ ಬಗೆಗೆ ತರಬೇತಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಿದ ವಿವಿಧ ಸಂಸ್ಥೆಗಳು ಮತ್ತು ಪ್ರಖ್ಯಾತ ವ್ಯಕ್ತಿಗಳ ಜೊತೆಗೆ ಸಂವಾದಗಳನ್ನು ಈ ತರಬೇತಿಯ ಸಮಯದಲ್ಲಿ ಒದಗಿಸಲಾಗುತ್ತದೆ. ಅಭ್ಯರ್ಥಿಗಳಿಗೆ ಹಲವಾರು ಲೀಡರ್‌ಶಿಪ್‌ ಕಾಂಕ್ಲೇವ್‌ (Ihbghwkt Asqeobñh)ಗಳಲ್ಲಿ ಭಾಗವಹಿಸುವ ಅವಕಾಶವನ್ನು ನೀಡಲಾಗುತ್ತದೆ. ನಂತರದಲ್ಲಿ ಜೀವನ್‌ ವಿದ್ಯಾ ಕ್ಯಾಂಪ್‌ನಲ್ಲಿ ಒಂದು ವಾರದ ತರಬೇತಿಯನ್ನು ನೀಡಲಾಗುತ್ತದೆ. ಈ ಎಲ್ಲ ತರಬೇತಿಗಳ ನಂತರದಲ್ಲಿ ಕಡೆಯದಾಗಿ ಅಭ್ಯರ್ಥಿಗಳನ್ನು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಲು ಕಳಿಸಲಾಗುತ್ತದೆ. 

ಫೆಲೋಶಿಪ್‌ ಕಾರ್ಯಕ್ರಮವು ಒಂದು ವರ್ಷದ ಅವಧಿಯದ್ದಾಗಿದೆ. ಅಭ್ಯರ್ಥಿಗಳ ಕೆಲಸದ ಶೈಲಿ ನೋಡಿ ಅವಧಿಯನ್ನು ಎರಡು ವರ್ಷಕ್ಕೆ ಏರಿಸುವ ಸಂಭವವಿದೆ. ಫೆಲೋಶಿಪ್‌ ಸಮಯದಲ್ಲಿ ಪ್ರತಿಯೊಬ್ಬ ಅಭ್ಯರ್ಥಿಯೂ ಮಾಸಿಕ ರು. 40,000/- ವೇತನವನ್ನು ಪಡೆಯುತ್ತಾರೆ. 

ಈ ಫೆಲೋಶಿಪ್‌ ಕಾರ್ಯಕ್ರಮವು ನವಯುವಕರಿಗೆ ಲಾಭದಾಯಕ. ತಮ್ಮ ವೈಯಕ್ತಿಕ ಅಭಿವೃದ್ಧಿಯ ಜೊತೆಜೊತೆಗೆ ಸಮಾಜಕ್ಕೆ ಮತ್ತು ದೇಶಕ್ಕೆ ತಮ್ಮ ಅಮೂಲ್ಯ ಸೇವೆಯನ್ನು ಸಲ್ಲಿಸುವ ಸದಾವಕಾಶವನ್ನು ಈ ಫೆಲೋಶಿಪ್‌ ಒದಗಿಸುತ್ತದೆ. 

– ಪ್ರಶಾಂತ್‌ ಎಸ್‌. ಚಿನ್ನಪ್ಪನವರ್‌, ಚಿತ್ರದುರ್ಗ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.