ಹೃದಯದಲಿ ಇದೇನಿದೂ ನದಿಯೊಂದು ಓಡಿದೆ…


Team Udayavani, Jan 23, 2018, 3:06 PM IST

23-30.jpg

ನಿನ್ನ ಹರವಾದ ಎದೆಯ ಮೇಲೆ ತಲೆಯಿಟ್ಟು ಗಳಿಗೆ ಮಲಗುವಾಸೆ. ಆ ಮೂಲಕ ಮನದ ನೋವನ್ನೆಲ್ಲ ಹೊರಹಾಕಿ ನಿಟ್ಟುಸಿರಾಗುವಾಸೆ.

ನೀನು ಹೀಗೆ ನನ್ನೊಳಗೆ ಪ್ರವೇಶಿಸಿ, ನನ್ನ ಅಸ್ತಿತ್ವವೇ ಮರೆಯಾಗುವಂತೆ ಮಾಡ್ತೀಯಾ ಅಂದುಕೊಂಡಿರಲಿಲ್ಲ ಗೆಳೆಯಾ. ಈ ಪ್ರೀತಿ ಹೀಗೆ ಹೇಳದೆ ಕೇಳದೆ ಒಳ ನುಗ್ಗತ್ತೆ ಅಂತ ಕಲ್ಪನೆ ಕೂಡ ಇರಲಿಲ್ಲ. ಅದ್ಯಾವ ಗಳಿಗೆಯಲಿ ನಿನ್ನ ನೋಡಿದೆನೋ, ಅವತ್ತಿನಿಂದ ನನ್ನಲಿ ನೀನೇ ತುಂಬಿಕೊಂಡಿದೀಯಾ. ನಿನ್ನ ಕಣ್ಣನೋಟ ಮರೆಯಲಾಗುತ್ತಿಲ್ಲ. ನೀನಿಲ್ಲದಾಗ ಎಷ್ಟು ಹಾಯಾಗಿತ್ತು  ಈ ಮನಸ್ಸು. ನೀ ಬಂದ ಮೇಲೆ ಬರೀ ನಿನ್ನ ಸುತ್ತಲೇ ಗಿರಕಿ ಹೊಡೆಯುತ್ತಿದೆ. ಕಾಲೇಜು, ಫ್ರೆಂಡ್ಸ್‌ ಅಂತ ಅಲೆಯುತ್ತಿದ್ದ ನನಗೀಗ ನಿನ್ನನ್ನು ಬಿಟ್ಟರೆ ಎಲ್ಲವೂ ಶೂನ್ಯವೆನಿಸುತ್ತಿದೆ. 

ನನ್ನ ಮುಂಗುರುಳ ಮುದ್ದಿಸಿ, ಕಣ್ಣಲಿ ಕಣ್ಣಿಟ್ಟು ನೋಡುತ್ತ, ಎಡಗೆನ್ನೆಯ ಸುಂದರ ಸಮ್ಮೊàಹಕ ಗುಳಿಕೆನ್ನೆಗೆ ಬೆರಗಾಗಿ ನಿನ್ನ ನೀ ಮರೆತದ್ದನ್ನು ನಾ ಅದ್ಹೇಗೆ ಮರೆಯಲಿ? ಗೊತ್ತೇನೇ ಹುಡುಗಿ, ನಿನ್ನ ನೋಡದೆ ಅದೆಷ್ಟು ಚಡಪಡಿಸುತ್ತಿದೆ ನನ್ನ ಮನ ಎಂದು ಫೋನಾಯಿಸಿದಾಗ ಆಕಾಶಕ್ಕೆ ಲಗ್ಗೆ ಹಾಕಿದಷ್ಟು ಸಂಭ್ರಮದಲ್ಲಿ ಮನ ಹಿಗ್ಗುತ್ತದೆ. ಈ ಒಲವಿಗೆ, ಈ ಸಾಂಗತ್ಯಕ್ಕೆ, ಈ ಸಿಹಿಸಂಕಟಕ್ಕೆ ಮುನ್ನುಡಿ ಬರೆದ ಮಾಯಗಾರ ನೀನು. ನೀನಿಲ್ಲದೆ ಊಟ ರುಚಿಸುತ್ತಿಲ್ಲ, ನೀನಿಲ್ಲದೆ ನಿದಿರೆ ಹತ್ತಿರ ಸುಳಿಯುತ್ತಿಲ್ಲ. ನನಗೇನಾಗಿದೆ ಅಂತ ನನ್ನನ್ನೇ ನಾನು ಕೇಳುವಂತಾಗಿದೆ. ಇದಕ್ಕೆಲ್ಲ ದಿವ್ಯಔಷಧ ನೀನೇ ಅಂತಲೂ ಗೊತ್ತು. ನೀನಿಲ್ಲದೆ ಈ ಸಂಜೆ, ಈ ಏಕಾಂತ, ಈ ಕುಳಿರ್ಗಾಳಿ ನನ್ನನ್ನು ಅಣಕಿಸಿದಂತೆ ಭಾಸವಾಗ್ತಿದೆ ಕಣೋ. ಎಂದಿಗೂ ನೀ ನನ್ನವಳೇ ಕೂಸೆ, ನೀನೇ ನನ್ನುಸಿರು ಎನ್ನುತ ಓಲೈಸುವ ನಿನ್ನ ಪ್ರೀತಿಯ ಪರಿಗೆ ಬೆರಗಾದೆ.

    ನೀನಿಲ್ಲದೆ ನಿಲ್ಲಲ್ಲ ಈ ಜೀವ. ಅರಳಲ್ಲ ಯಾವ ಭಾವ. ಗೊತ್ತೆ ಇದೆಯಲ್ಲ ನಿನಗ ನನ್ನ ಸ್ವಭಾವ? ಹೂಮುತ್ತಿಗಾಗಿ ಕಾದಿದೆ ಹಣೆ. ನಿನ್ನ ಇಂಪಾದ ದನಿಯ ಕೇಳುವ ತವಕದಲ್ಲಿರುವೆ. ಅಗಲುವಿಕೆಗೆ ಪೂರ್ಣವಿರಾಮ ನೀಡು. ನಿನ್ನ ಕೋಪ ತಾಪಗಳೇನೇ ಇದ್ದರೂ ಮರೆತು ಬಿಡು. ನಮ್ಮಿಬ್ಬರ ಕನಸುಗಳು ಒಂದೇ, ಒಲವ ದಾರಿಯೂ ಒಂದೇ. ಸೇರುವ ಗುರಿಯೂ ಒಂದೇ ಇರುವಾಗ ಮತ್ತೇಕೆ ತಡ ಕೂಸೆ? ನಿನ್ನ ಹರವಾದ ಎದೆಯ ಮೇಲೆ ತಲೆಯಿಟ್ಟು ಗಳಿಗೆ ಮಲಗುವಾಸೆ. ಆ ಮೂಲಕ ಮನದ ನೋವನ್ನೆಲ್ಲ ಹೊರಹಾಕಿ ನಿಟ್ಟುಸಿರಾಗುವಾಸೆ. ನೀನಾಡದ ಮಾತು ಮಾತಲ್ಲ, ನಿನ್ನ ನೋಡದ ಕಂಗಳು ಕಂಗಳಲ್ಲ. ನೀನಿಲ್ಲದ ಯಾವ ಸಿರಿ ಬೇಡ.ನಿಜವಾದ ಸಿರಿ ನನಗೆ ನೀನು ಕಣೋ. ನೀನೇ ವೇದ್ಯ, ನೀನೇ ನೈವೇದ್ಯ ಈ ಹೃದಯಕೆ. ಕಾರಣ ಹೇಳದೆ ಬಂದು ಸೇರು ನಿನ್ನ ರಾಣಿಯ ಒಲವ ತೋಟಕೆ. ವಿರಹ ಸಾಕಿನ್ನು ವಿಲಾಸ ಬೇಕಿನ್ನು. ಯಾವ ಹೂವು ಯಾರ ಮುಡಿಗೊ ಅಂತ ನನ್ನ ಕಂಡಾಗಲೆಲ್ಲ ಹಾಡುತ್ತಿದ್ದೆಯಲ್ಲವೆ? ಈಗ ಈ ಹೂವು ನಿನಗಾಗಿ ಕಾಯುತ್ತಿದೆ ಬಾ ಒಲವೆ.

ನಿನ್ನೊಲವಿನ ಪೂಜೆಯ ಆರಾಧಕಿ,
ಜಯಶ್ರೀ ಭ. ಭಂಡಾರಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.