ತಮಾಷೆ ಹೋಗಿ ಅಮಾವಾಸ್ಯೆ ಆಗಿತ್ತು!


Team Udayavani, Mar 13, 2018, 11:50 AM IST

amase.jpg

ಕಲಬುರಗಿಯ ಸರ್ಕಾರಿ ಶಿಕ್ಷಕರ ತರಬೇತಿ ಕಾಲೇಜಿನಲ್ಲಿ ಆಗ ತಾನೇ ನನ್ನ ಬಿ.ಎಡ್‌ ದಿನಗಳು ಆರಂಭವಾಗಿದ್ದವು. ಆ ಸಮಯದಲ್ಲಿ ನಮ್ಮ ಕಾಲೇಜಿಗೆ ಹನುಮಂತರಾಯ ಎಂಬ ಪ್ರವಚಕರೊಬ್ಬರು ಮಂಗಳೂರಿನಿಂದ ವರ್ಗವಾಗಿ ಬಂದಿದ್ದರು. ಅವರು ಮೂಲತಃ ನೆಲಮಂಗಲದವರು. ಅವರು ಕ್ಲಾಸ್‌ರೂಮಿಗೆ ಬರುವುದೇ ಬಲು ಅಪರೂಪವಾಗಿತ್ತು.

ಯಾರಾದರೂ ಉಪನ್ಯಾಸಕರು ರಜೆ ಇದ್ದಾಗ ಮಾತ್ರ ಅವರ ಆಗಮನವಾಗುತ್ತಿತ್ತು. ಅವರೊಬ್ಬ ಮಹಾನ್‌ ವಿದೂಷಕ. ಪ್ರತಿ ಮಾತಿನಲ್ಲೂ ನಗು ತರಿಸುವ ತಾಕತ್ತು ಅವರಲ್ಲಿತ್ತು. ಅವರು ಕ್ಲಾಸಿನಲ್ಲಿದ್ದಷ್ಟು ಹೊತ್ತು ನಮಗೆಲ್ಲಾ ಅನಿಯಮಿತ ಖುಷಿ ಸಿಗುತ್ತಿತ್ತು. ನಾವೆಲ್ಲರೂ ಉತ್ತರ ಕರ್ನಾಟಕದವರಾಗಿದ್ದರಿಂದ ಅವರ ಬೆಂಗಳೂರು ಮತ್ತು ಮಂಗಳೂರು ಶೈಲಿಯ ಕನ್ನಡ ನಮ್ಮನ್ನು ಆಕರ್ಷಿಸಿತ್ತು. ಅವರು ಬರೀ ಪಠ್ಯದ ವಿಷಯವನ್ನು ಹೇಳದೆ ಪಠ್ಯೇತರ ವಿಷಯದ ಬಗ್ಗೆಯೂ ನಮ್ಮೆಲ್ಲರ ಜೊತೆ ನೇರ ಚರ್ಚೆ ಮಾಡುತ್ತಿದ್ದರು. ಚಿತ್ರ ವಿಚಿತ್ರವಾದ ಹಾವಭಾವದೊಂದಿಗೆ ಸಿನಿಮಾ, ಜನಪದ ಗೀತೆಗಳನ್ನು ಹಾಡುತ್ತಾ ಹಾಸ್ಯ ಮಿಶ್ರಿತ ಪ್ರಶ್ನೆಗಳನ್ನು ಕೇಳಿ ನಮ್ಮನ್ನು ನಗೆಗಡಲಿನಲ್ಲಿ ತೇಲಿಸುತ್ತಿದ್ದರು. ಈ ಕಾರಣದಿಂದಲೇ ಅವರನ್ನು ನಾವೆಲ್ಲಾ ಸ್ವಲ್ಪ ಜಾಸ್ತಿಯೇ ಹಚ್ಚಿಕೊಂಡಿದ್ದೆವು. ವಾರಕ್ಕೆ ಎರಡು ಬಾರಿಯಾದರೂ ಅವರ ಕ್ಲಾಸ್‌ ಇರಲಿ ಎಂದು ಪ್ರಾರ್ಥಿಸುತ್ತಿದ್ದೆವು.

ಅದೊಂದು ದಿನ ನಾವು ಕ್ಲಾಸಿನೊಳಗೆ ಬಂದು ಹದಿನೈದು ನಿಮಿಷ ಕಳೆದರೂ ನಮ್ಮ ಮೊದಲನೇ ಅವಧಿಯ ಉಪನ್ಯಾಸಕರು ಬರಲಿಲ್ಲ. ಆಗ ನಾನೂ ಸೇರಿದಂತೆ ಗೆಳೆಯರ ಬಳಗವೆಲ್ಲ ಚೇಷ್ಟೆ, ಕುಚೇಷ್ಟೆ ಮಾಡುತ್ತಾ ಸಂತೋಷದಲ್ಲಿ ಮುಳುಗಿಹೋಗಿದ್ದೆವು. ನಾವು ತರ್ಲೆ ಕೆಲಸ ಮಾಡುವ ಭರದಲ್ಲಿದ್ದಾಗಲೇ ಹನುಮಂತರಾಯ ಸರ್‌ ಬಂದುಬಿಟ್ಟಿದ್ದರು.

ನಾನು ಎಷ್ಟೊಂದು ಮೈ ಮರೆತಿದ್ದೆ ಎಂದರೆ, ಸರ್‌ ಬಂದಿದ್ದು ಗೊತ್ತಾಗದೆ ಅವರಿಗೆ ಎದ್ದು ನಿಂತು ಗೌರವ ಸೂಚಿಸುವುದನ್ನೂ ಮರೆತುಬಿಟ್ಟಿದ್ದೆ. ಅವರು ನನ್ನನ್ನು ನೋಡಿ, ನೇರವಾಗಿ ನನ್ನ ಹತ್ತಿರ ಬಂದೇಬಿಟ್ಟರು. ಅವರ ಬಿರುನೋಟ, ಡಯಾಸ್‌ ಮೇಲೆ ನಿಲ್ಲು ಎಂಬ ಆಜ್ಞೆ ನೀಡಿತ್ತು. ಮರುಕ್ಷಣವೇ- “ಯಾವ ಮುಟ್ಟಾಳನೋ ನಿಂಗೆ ಡಿಗ್ರಿ ಕೊಟ್ಟೋನು?’ ಅಂತ ಗುಡುಗಿದರು. ಆ ಸರ್‌ ಜೊತೆ ಸ್ವಲ್ಪ ಸಲುಗೆ ಇತ್ತು ಅಂದೆನಲ್ಲವೆ? ಅವರು ತಮಾಷೆಯಾಗಿ ಪಾಠ ಮಾಡುತ್ತಿದ್ದರು ಅಂದಿದ್ದೆನಲ್ಲವೆ? ಅದನ್ನೇ ನೆನಪು ಮಾಡಿಕೊಂಡು, ನನ್ನ ಉತ್ತರದಿಂದ ಅವರನ್ನು ನಗಿಸಬೇಕು ಎಂದುಕೊಂಡು ಮರುಕ್ಷಣವೇ- “ಗುಲ್ಬರ್ಗಾ ಯೂನಿವರ್ಸಿಟಿ ಸರ್‌’ ಎಂದು ಹೇಳಿಬಿಟ್ಟೆ! ಈ ಮಾತು ಕೇಳಿ ಅವರ ಕೋಪ ನೆತ್ತಿಗೇರಿ ಕೆಂಡಾಮಂಡಲರಾದರು. “ಹೋಗಲೋ ಮುಟ್ಟಾಳ, ಈ ಕ್ಷಣದಿಂದ ನೀನು ನಮ್ಮ ಕಾಲೇಜಿನ ವಿದ್ಯಾರ್ಥಿಯೇ ಅಲ್ಲ.ಇವತ್ತೇ ನಿನ್‌ ಟಿ.ಸಿ ತೆಗೆದುಹಾಕ್ತಿನಿ’ ಎಂದು ರೇಗಾಡಿ ನಮ್ಮ ಪ್ರಾಂಶುಪಾಲರು, ಸೇರಿದಂತೆ ಉಳಿದೆಲ್ಲಾ ಉಪನ್ಯಾಸಕರನ್ನು ಕರೆಸಿ ದೊಡ್ಡ ರಾದ್ಧಾಂತ ಮಾಡಿದರು.

ಈ ವಿಷಯ ತುಂಬಾ ಗಂಭೀರವಾಗುತ್ತಾ ಹೋಯಿತು. ದಿಗಿಲು ತುಂಬಿದ ಮನಸ್ಸಿನಿಂದ ಕಂಗಾಲಾಗಿ ಗೆಳೆಯ ಗೆಳತಿಯರ ಕಡೆ ನೋಡಿದೆ. ಎಲ್ಲರ ಮೊಗದಲ್ಲಿ ಮೌನ ಆವರಿಸಿತ್ತು. ಆಗ ಬೇರೇನೂ ತೋಚದೆ ಹನುಮಂತರಾಯ ಸರ್‌ ಮತ್ತು ಪ್ರಾಂಶುಪಾಲರ ಹತ್ತಿರ ಹೋಗಿ ಕ್ಷಮೆ ಕೇಳಿದೆ. ಆದರೂ ಆ ಸರ್‌ ಸಮಾಧಾನಗೊಳ್ಳದೆ ನನ್ನನ್ನು ಕಾಲೇಜಿನಿಂದ ಹೊರ ಹಾಕಲೇಬೇಕೆಂಬ ಹಠ ಹಿಡಿದರು. ಕೊನೆಗೆ ನಮ್ಮ ದೈಹಿಕ ಉಪನ್ಯಾಸಕರು ಹನುಮಂತರಾಯ ಸರ್‌ ಮನವೊಲಿಸಿ ನನ್ನನ್ನು ಕ್ಲಾಸಿನೊಳಗೆ ಕಳುಹಿಸಿದರು. ಹನುಮಂತರ ರಾಯ ಸರ್‌ನ ಹಾಸ್ಯಸ್ವಭಾವವನ್ನು ತಪ್ಪಾಗಿ ಭಾವಿಸಿ ಬೆಪ್ಪನಾದ ಆ ಘಳಿಗೆ ಸಂದು ಒಂಬತ್ತು ವರ್ಷಗಳಾದರೂ ನೆನಪಿನ ಬುತ್ತಿಯಲ್ಲಿ ಹಾಗೆಯೇ ಉಳಿದುಕೊಂಡಿದೆ.

-ಶಿವರಾಜ್‌ ಬಿ.ಎಲ್. ದೇವದುರ್ಗ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.