ಮುಂದೆ ಬನ್ನಿ… ಬೇಗ ಬನ್ನಿ…


Team Udayavani, Mar 27, 2018, 5:45 PM IST

6.jpg

ದೇಶದಲ್ಲೇ ಅತ್ಯುತ್ತಮ ಸಾರಿಗೆ ವ್ಯವಸ್ಥೆ ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ್ದು. ಡ್ರೈವರ್‌, ಕಂಡಕ್ಟರ್‌, ಚೆಕಿಂಗ್‌ ಇನ್ಸ್‌ಪೆಕ್ಟರ್‌, ಮೆನೇಜರ್‌, ಮೆಕ್ಯಾನಿಕ್‌, ಅಕೌಂಟೆಂಟ್‌… ಹೀಗೆ ಹಲವಾರು ನೌಕರಿಗಳ ಮೂಲಕ ಲಕ್ಷಾಂತರ ಮಂದಿಯ ಬದುಕಿಗೆ ಭದ್ರತೆ ನೀಡಿರುವುದು ಕೆಎಸ್ಸಾರ್‌ಟಿಸಿಯ ಹೆಚ್ಚುಗಾರಿಕೆ. ಇಲ್ಲಿ ನೌಕರಿ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಒಂದು ಅವಕಾಶ. ಕರ್ನಾಟಕ ರಸ್ತೆ ಸಾರಿಗೆ ನಿಗಮವು ಗ್ರೂಪ್‌ “ಸಿ’ಯ 720 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಕರೆದಿದೆ…

“ಅಯ್ಯೋ ಟ್ರೆçನ್‌ ಮಿಸ್ಸಾಯ್ತು ಏನ್ಮಾಡೋದು? ಕೆಎಸ್ಸಾರ್ಟಿಸಿ ಬಸ್‌ ಇದೆಯಲ್ಲಾ, ಹೋಗೋಣ…’ ಇದು ಸಾಮಾನ್ಯವಾಗಿ ಎಲ್ಲ ಪ್ರಯಾಣಿಕರು ಹೇಳುವ ಮಾತು. ದೇಶಾದ್ಯಂತ ಸಂಚರಿಸುವವರಂತೂ ಕರ್ನಾಟಕದಲ್ಲಿರುವಂಥ ಚಂದದ ಸಾರಿಗೆ ವ್ಯವಸ್ಥೆಯನ್ನು ನೋಡಿಯೇ ಇಲ್ಲ ಎನ್ನುತ್ತಾರೆ. ಅಷ್ಟು ಸುವ್ಯವಸ್ಥಿತವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರಿಗೆ ಬಸ್‌ ಸೌಕರ್ಯಗಳನ್ನು ಕಲ್ಪಿಸಿದೆ. ಹೀಗಾಗಿ ರಾಜ್ಯ ರಸ್ತೆ ಸಾರಿಗೆಗೆ ಕೇಂದ್ರ ಸರ್ಕಾರದಿಂದ ಅನೇಕ ಪ್ರಶಸ್ತಿಗಳು ದೊರಕಿವೆ. 

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲೂ ಕೆಎಸ್ಸಾರ್‌ಟಿಸಿ ಬಸ್‌ಗಳು ಕಾರ್ಯನಿರ್ವಹಿಸುತ್ತಿದ್ದು, ತಾಂತ್ರಿಕ ತೊಂದರೆ ನಿವಾರಿಸಲು ಜಿಲ್ಲಾ, ತಾಲ್ಲೂಕುಗಳಲ್ಲೂ ಡಿಪೋಗಳನ್ನು ನಿರ್ಮಿಸಲಾಗಿದೆ. ಇಂತಹ ರಸ್ತೆ ಸಾರಿಗೆ ನಿಗಮದಲ್ಲಿ 726 ತಾಂತ್ರಿಕ ಸಹಾಯಕ: ದರ್ಜೆ 3ರ ಮೇಲ್ವಿಚಾರಕೇತರ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ ಹುದ್ದೆಗಳನ್ನು ಹೊಂದಬೇಕೆಂದರೆ…

ಹುದ್ದೆ ವರ್ಗೀಕರಣ
ತಾಂತ್ರಿಕ ಸಹಾಯಕ ಹುದ್ದೆಯನ್ನು ಸಾಮಾನ್ಯ ವರ್ಗ, ಮಳೆ, ಗ್ರಾಮೀಣ, ಅಂಗವಿಕಲ ಹೀಗೆ ವಿಭಾಗಿಸಿದ್ದು, ಪರಿಶಿಷ್ಟ ಜಾತಿ/ಪಂಗಡಗಳಿಗೆ ಅನುಗುಣವಾಗಿ ವರ್ಗೀಕರಣ ಮಾಡಲಾಗಿದೆ. ಜೊತೆಗೆ ಗ್ರಾಮೀಣ ಮೀಸಲಾತಿ, ಯೋಜನಾ ನಿರಾಶ್ರಿತ, ಸೈನಿಕ, ಕನ್ನಡ ಮಾಧ್ಯಮ ಮೀಸಲಾತಿಗೂ ಅವಕಾಶ ಕಲ್ಪಿಸಲಾಗಿದೆ.

ವಯೋಮಿತಿ, ವಿದ್ಯಾರ್ಹತೆ, ವೇತನ
ತಾಂತ್ರಿಕ ಸಹಾಯಕ ಹುದ್ದೆಗೆ ಸರ್ಕಾರದಿಂದ ಅಂಗೀಕೃತ ಸಂಸ್ಥೆಯಲ್ಲಿ ಐಟಿಐ, ಎನ್‌ಎಸಿ ಮೆಕ್ಯಾನಿಕಲ್‌, ಡೀಸೆಲ್‌ ಮೆಕ್ಯಾನಿಕಲ್‌, ಆಟೋ ಎಲೆಕ್ಟ್ರಿಷಿಯನ್‌, ವೆಲ್ಡರ್‌, ಫಿಟ್ಟರ್‌, ಪೈಂಟಿಂಗ್‌, ಆಟೋಮೊಬೈಲ್‌ ವಿಷಯಗಳ ವಿದ್ಯಾರ್ಹತೆ ಹೊಂದಿರಬೇಕು.

ಹುದ್ದೆಗೆ ಅಭ್ಯರ್ಥಿಗಳು ಕನಿಷ್ಠ ದೇಹದಾಡ್ಯìತೆಯನ್ನು ಹೊಂದಿರಬೇಕು. ಪುರುಷರು ಎತ್ತರ 163 ಸೆಂ.ಮೀ, ತೂಕ 55 ಕೆಜಿ. ಮಹಿಳೆಯರು 153 ಸೆ.ಮೀ ಎತ್ತರ, ತೂಕ 50 ಕೆ.ಜಿ ಇರಬೇಕು.

ವಯೋಮಿತಿಯನ್ನು ಕನಿಷ್ಠ 18 ವರ್ಷಗಳಿಂದ ಗರಿಷ್ಠ 30 ವರ್ಷದವರೆಗೆ ನಿಗದಿ ಮಾಡಲಾಗಿದೆ. ಪ್ರವರ್ಗ 2ಎ,ಬಿ, 3ಎ,ಬಿ ಗಳಿಗೆ 38 ವರ್ಷ ಮತ್ತು ಪರಿಶಿಷ್ಟರಿಗೆ 40 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಆಯ್ಕೆಗೊಂಡ ಅಭ್ಯರ್ಥಿಗಳಿಗೆ ತರಬೇತಿ ಹಂತದಲ್ಲಿ 9,100 ರೂ. ಭತ್ಯೆ ನೀಡಲಾಗುತ್ತದೆ. 2 ವರ್ಷ ತರಬೇತಿ ಬಳಿಕ ವೇತನವನ್ನು 11,640 ರೂ. 15,700 ರೂ. ವೇತನ ಪಾವತಿ ಮಾಡಲಾಗುತ್ತದೆ. 

ಆಯ್ಕೆ ಹೇಗೆ?
ಹುದ್ದೆಗೆ ಅಭ್ಯರ್ಥಿಗಳನ್ನು ಸಾಮಾನ್ಯ ಸಾಮರ್ಥ್ಯ ಪರೀಕ್ಷೆ(ಸಿಎಟಿ) ಮೂಲಕ ಆಯ್ಕೆ ಮಾಡಲಾಗುತ್ತದೆ. 
ಸಂವಹನ ನೈಪುಣ್ಯತೆ, ವಿಶ್ಲೇಷಣೆ, ಗಣಿತ, ಸಾಮಾನ್ಯಜ್ಞಾನ, ಗಣಕ ಜ್ಞಾನ ಒಳಗೊಂಡಿರುತ್ತದೆ. 

ಪರೀಕ್ಷೆಯಲ್ಲಿ ಕನಿಷ್ಠ 30ಅಂಕಗಳು ಬರಬೇಕು ಅದಕ್ಕಿಂತ ಕಡಿಮೆ ಅಂಕಗಳು ಬಂದವರನ್ನು ಅನರ್ಹಗೊಳಿಸಲಾಗುತ್ತದೆ. 
ವಿದ್ಯಾರ್ಹತೆ ಅಂಕಗಳನ್ನು ಶೇ.25, ಸಾಮಾನ್ಯ ಸಾಮರ್ಥ್ಯ ಪರೀಕ್ಷೆ ಅಂಕಗಳನ್ನು ಶೇ.75 ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ದಾಖಲಾತಿ ಪರಿಶೀಲನೆ, ದೈಹಿಕ ಪರೀಕ್ಷೆ ಕಡ್ಡಾಯ.

ಬೆಂಗಳೂರು,ದಾವಣಗೆರೆ, ಶಿವಮೊಗ್ಗ, ಮೈಸೂರು, ಮಂಗಳೂರು, ಹಾಸನ, ಕಲಬುರ್ಗಿ, ಹುಬ್ಬಳ್ಳಿ, ಬಿಜಾಪುರ, ಗುಲ್ಬರ್ಗಾ, ಬಳ್ಳಾರಿಯಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಅರ್ಜಿ ಸಲ್ಲಿಕೆ
ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಕೆಗೆ ಮೊದಲು ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಯನ್ನು ಹೊಂದಿಸಿಕೊಳ್ಳುವುದು ಒಳಿತು. ಏ.5ರಿಂದ 25ರ ವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. www.ksrtcjobs.com  ಮೂಲಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಬಳಿಕ ಚಲನ್‌ ಪ್ರತಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳ ತಕ್ಕದ್ದು. ಬಳಿಕ ಯಾವುದೇ ಅಂಚೆ ಕಚೇರಿಯಲ್ಲಿ ಇ-ಪೇಮೆಂಟ್‌ ಮೂಲಕ ಶುಲ್ಕ ಪಾವತಿಸಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 800 ರೂ. ಮತ್ತು ಪರಿಶಿಷ್ಟರಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ www.ksrtcjobs.com   ಸಂಪರ್ಕಿಸಿ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.