ಕಣ್ಣೀರೂ ಒಂದು ಭಾಷೆ ಗೊತ್ತಿಲ್ವಾ ನಿನಗೆ?  


Team Udayavani, Jul 17, 2018, 6:00 AM IST

10.jpg

ದೇವರು ತುಂಬಾ ಆಟ ಆಡ್ತಾನೆ. ಹೆಚ್ಚಿನ ಸಂದರ್ಭದಲ್ಲಿ, ಒಬ್ಬರ ಪ್ರೀತಿ ಇನ್ನೊಬ್ಬರಿಗೆ ದಕ್ಕದ ಹಾಗೆ ಮಾಡಿಬಿಡ್ತಾನೆ. ಯಾರು ಯಾರಿಗೆ ಜೋಡಿ ಎಂದು ಹಣೆಬರಹ ಬರೆಯೋ ಆ ದೇವರು, ಅವರವರ ಜೊತೆಯಲ್ಲೇ ಪ್ರೀತಿ ಹುಟ್ಟುವ ಹಾಗೂ ಮಾಡಿಬಿಟ್ಟಿದ್ರೆ ಈ ಭೂಮಿ ಮೇಲೆ ಯಾರ ಪ್ರೀತಿಯೂ ಸೋಲ್ತಾ ಇರ್ಲಿಲ್ಲ, ಯಾವ ಪ್ರೇಮಿನೂ ಸಾಯ್ತಾ ಇರ್ಲಿಲ್ಲ, ಅಲ್ವಾ?  

ಕೆಲವೊಂದು ಭಾವನೆಗಳನ್ನ ಮಾತಿನಲ್ಲಿ ವ್ಯಕ್ತಪಡಿಸೋಕಾಗಲ್ಲ. ಮಾತಿಗೆ ಒಂದು ಅರ್ಥ ಇದ್ದರೆ ಮೌನಕ್ಕೆ ಸಾವಿರ ಅರ್ಥ ಇರುತ್ತೆ. ನಾವು ಯಾರನ್ನಾದರೂ ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಬೇಕಾದರೆ ಮೊದಲು ಅವರ ಮೌನವನ್ನು ಅರ್ಥ ಮಾಡಿಕೊಳ್ಳಬೇಕು ಕಣೊ. ಹೀಗಂತ ಅಂದುಕೊಂಡೇ ಬದುಕಿದವಳು ನಾನು. ಅದೇ ಕಾರಣಕ್ಕೆ, ಅದೆಷ್ಟೋ ಮನದಾಳದ ಮಾತುಗಳನ್ನು ಮನಸ್ಸಿನ ಗರ್ಭದಲ್ಲಿಯೆ ಕರಗಿಸಿ ಮೌನದ ಮೊರೆ ಹೋದೆ. ಆದರೆ ಕೊನೆಗೂ ನನ್ನ ಮೌನವನ್ನು ಅರ್ಥ ಮಾಡಿಕೊಳ್ಳುವುದರಲ್ಲಿ ನೀ ಸೋತೆ. ನಿನೆY ಗೊತ್ತಾ? ಕಣ್ಣೀರು ಕೂಡ ಒಂದು ಭಾಷೆ. ಅತ್ತವರಿಗೆ ಮಾತ್ರ ಅದರ ಅರ್ಥ ತಿಳಿಯುತ್ತೆ.  

ಮೊನ್ನೆ ಜಾತ್ರೆಗೆಂದು ಹೋದಾಗ ನಿನಗಾಗಿ ಪುಟ್ಟದೊಂದು ಉಡುಗೊರೆ ತಂದಿ¨ªೆ. ತುಂಬಾ ಪ್ರೀತಿಯಿಂದ, ಮು¨ªಾದ ಮಾತುಗಳನ್ನಾಡುತ್ತಾ, ಅದನ್ನು ನಿನಗೆ ಉಡುಗೊರೆಯಾಗಿ ನೀಡಲು ಇಷ್ಟು ದಿನ ಆಸೆಯಿಂದ ಕಾದೆ. ಆದರೆ, ತಿಂಗಳುಗಳು ಕಳೆದರೂ ನೀನು ಬರಲೇ ಇಲ್ಲ. ಮುಂದೊಂದು ದಿನ ನೀನು ಬರಬಹುದು ಎನ್ನುವ ಭರವಸೆಯೂ ನನ್ನಲ್ಲಿ ಉಳಿದಿಲ್ಲ ಕಣೊ.  ನನ್ನೆಲ್ಲಾ ಆಸೆಗಳು,ಹೇಳದೇ ಉಳಿದ ಮಾತುಗಳು,ಕಣ್ಣೀರಿನಲ್ಲಿ ಕರಗಿ ಮೌನದ ಸಾಗರ ಸೇರಿವೆ. ಕೊರಗಿ ಕೊರಗಿ ಕಂಗಾಲಾಗಿ, ಅತ್ತು ಅತ್ತು, ಸುಸ್ತಾಗಿ ಯೋಚಿಸಿ ಯೋಚಿಸಿ ಕಲ್ಲಾಗಿ ಈ ನನ್ನ ಪುಟ್ಟ ಹೃದಯ ಮಂಜುಗಡ್ಡೆಯಂತೆ ಹೆಪ್ಪುಗಟ್ಟಿದೆ. ನನ್ನ ಕಣ್ಣೀರು ಬತ್ತಿ, ಮನದಲ್ಲಿ ಬರಗಾಲ ಮೂಡಿದೆ.  

ಇಷ್ಟೆಲ್ಲಾ ರಾಮಾಯಣವಾದ ನಂತರ ನನಗೆ ಅರ್ಥವಾದ ಸತ್ಯ ಏನು ಗೊತ್ತಾ? ನಿಜವಾದ ಪ್ರೀತಿಗೆ ಆ ದೇವರು ಕೊಡೊ ಉಡುಗೊರೆಯೆಂದರೆ ಈ ಕಣ್ಣೀರೇ  ಕಣೊ. ಪ್ರೇಮಿಗಳ ಮಧ್ಯ ಆ ದೇವರು ತುಂಬಾ ಆಟ ಆಡ್ತಾನೆ. ಹೆಚ್ಚಿನ ಸಂದರ್ಭದಲ್ಲಿ ಒಬ್ಬರ ಪ್ರೀತಿ ಇನ್ನೊಬ್ಬರಿಗೆ ದಕ್ಕದ ಹಾಗೆ ಮಾಡಿಬಿಡ್ತಾನೆ. ಯಾರು ಯಾರಿಗೆ ಜೋಡಿ ಎಂದು ಹಣೆಬರಹ ಬರೆಯೋ ಆ ದೇವರು ಅವರವರ ಜೊತೆಯಲ್ಲೇ ಪ್ರೀತಿ ಹುಟ್ಟುವ ಹಾಗೆ ಮಾಡಿಬಿಟ್ಟಿದ್ರೆ ಈ ಭೂಮಿ ಮೇಲೆ ಯಾರ ಪ್ರೀತೀನೂ ಸೋಲ್ತಾ ಇರ್ಲಿಲ್ಲ, ಯಾವ ಪ್ರೇಮಿನೂ ಸಾಯ್ತಾ ಇರ್ಲಿಲ್ಲ, ಅಲ್ವಾ? ಹೋಗ್ಲಿ ಬಿಡು.  

ಆ ದೇವರು ನಮ್ಮಿಬ್ಬರ ಪ್ರೇಮ ಜೀವನದಲ್ಲಿ ಟ್ವೆಂಟಿ-ಟ್ವೆಂಟಿ ಮ್ಯಾಚ್‌ ಆಡ್ತಿದಾನೆ. ಅವನು ನಮ್ಮಿಬ್ಬರ ಪ್ರೀತಿ ಗ್ರೌಂಡ್‌ನ‌ಲ್ಲಿ ಅದೆಷ್ಟೇ ಆಡಿದ್ರೂ ಗೆಲುವು ನಮ್ದೇ ಆಗುತ್ತೆ ಅಂತ ಈ ಕ್ಷಣಕ್ಕೂ ಅಂದುಕೊಂಡೇ ಬದುಕಿದ್ದೀನಿ. ಯಾಕಂದ್ರೆ, ಅವನು ನನ್ನ ಹಣೆಯಲಿ ಬರೆಯದ ನಿನ್ನ ಹೆಸರ, ಹೃದಯದೀ ನಾನೇ ಕೊರೆದಿರುವೆ… ಪ್ರಪಂಚವೆಂಬ ಊರಲ್ಲಿ ನೀನೊಂದು ಚಿಕ್ಕ ಜೀವ ಕಣೋ. ನಿನ್ನನ್ನು ಪ್ರೀತಿಸುವ ಈ ಜೀವಕ್ಕೆ ನೀನೆ ದೊಡ್ಡ ಪ್ರಪಂಚ. ವಿಳಾಸವಿಲ್ಲದ ಪಯಣವಿದು. ಆದರೂ, ನಿನ್ನನ್ನು ಕಾಣಬೇಕು ಎಂಬ ಒಂದೇ ಆಸೆಯಿಂದ ಪ್ರಯಾಣ ಆರಂಭಿಸಿಬಿಟ್ಟಿದ್ದೇನೆ. ನನಗೆ ಏನಾದರೂ ಆಗಿಬಿಡುವ ಮುನ್ನ ಸಿಕ್ತೀಯ ಅಲ್ವ?  

ನಿನ್ನ ನಿರೀಕ್ಷೆಯಲ್ಲಿರುವ ಶಬರಿ.
 ಉಮ್ಮೆ ಅಸ್ಮ ಕೆ. ಎಸ್‌.  

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.